Homeಮುಖಪುಟಬೆಂಗಳೂರು: ಬಾಂಗ್ಲಾ ವಲಸಿಗರೆಂದು ಶಂಕಿಸಿ ಜೈಲಿಗೆ ಹಾಕಲಾಗಿದ್ದ ಪ.ಬಂಗಾಳ ದಂಪತಿ 301 ದಿನಗಳ ಬಳಿಕ ಬಿಡುಗಡೆ

ಬೆಂಗಳೂರು: ಬಾಂಗ್ಲಾ ವಲಸಿಗರೆಂದು ಶಂಕಿಸಿ ಜೈಲಿಗೆ ಹಾಕಲಾಗಿದ್ದ ಪ.ಬಂಗಾಳ ದಂಪತಿ 301 ದಿನಗಳ ಬಳಿಕ ಬಿಡುಗಡೆ

- Advertisement -
- Advertisement -

ಬೆಂಗಳೂರಿಗೆ ಕೂಲಿ ಕೆಲಸಕ್ಕೆ ಬಂದಿದ್ದ ಪಶ್ಚಿಮ ಬಂಗಾಳ ರಾಜ್ಯದ ಬುರ್ದ್ವಾನ್ ಮೂಲದ ದಂಪತಿಗಳನ್ನು ಅಕ್ರಮ ಬಾಂಗ್ಲಾ ವಲಸಿಗರು ಎಂದು ಶಂಕಿಸಿ ಸುಮಾರು 301 ದಿನಗಳ ಕಾಲ ಜೈಲಿಗೆ ತಳ್ಳಿರುವ ಘಟನೆ ಬೆಂಗಳೂರಿಗೆ ನಡೆದಿದೆ. ದಂಪತಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು ಸ್ವಗ್ರಾಮಕ್ಕೆ ತೆರಳಲು ಗುರುವಾರ ರೈಲು ಹತ್ತಿದ್ದಾರೆ.

ಪಲಾಶ್ ಮತ್ತು ಶುಕ್ಲಾ ಅಧಿಕಾರಿ ದಂಪತಿಯ ಹೋರಾಟವು ಜುಲೈ 2022ರಲ್ಲಿ ಪ್ರಾರಂಭವಾಯಿತು. ತಮ್ಮ ಎರಡು ವರ್ಷದ ಮಗುವಿನೊಂದಿಗೆ ಬೆಂಗಳೂರಿನಲ್ಲಿ ದಂಪತಿ ಇದ್ದರು. ಬಾಂಗ್ಲಾದೇಶದಿಂದ ಬಂದವರು ಎಂದು ಶಂಕಿಸಿದ ಪೊಲೀಸರು, ನಂತರ ಅವರನ್ನು ಬಂಧಿಸಿದ್ದರು.

ವಿದೇಶಿಯರ ಕಾಯಿದೆಯಡಿ ಅವರನ್ನು ಅರೆಸ್ಟ್ ಮಾಡಲಾಗಿತ್ತು. “ನಾವು ಪೂರ್ವ ಬುರ್ದ್ವಾನ್‌ನ ಜಮಾಲ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಝೌಗ್ರಾಮ್‌ನ ಟೆಲಿಪುಕೂರ್‌ನಿಂದ ಬಂದವರು” ಎಂದು ಪೊಲೀಸರಿಗೆ ವಿವರಿಸಲು ದಂಪತಿ ಪ್ರಯತ್ನಿಸಿದರು, ಆದರೆ ಯಾವುದೇ ಪ್ರಯೋಜನವಾಗಲಿಲ್ಲ.

ನಂತರ ಬೆಂಗಳೂರು ಪೊಲೀಸರ ತಂಡವು ಪೂರ್ವ ಬುರ್ದ್ವಾನ್‌ನಲ್ಲಿರುವ ಪಲಾಶ್ ಅವರ ಮನೆಯ ಕುರಿತು ತಪಾಸಣೆ ನಡೆಸಿತು. ತಂಡವು ಸ್ಥಳೀಯ ಜಮಾಲಪುರ ಬಿಡಿಒ ಅವರನ್ನು ಭೇಟಿಯಾಗಿ ದಾಖಲೆಗಳನ್ನು ಪರಿಶೀಲಿಸಿತು. ಪಾಲಾಶ್ ಅವರ ಸಂಬಂಧಿಕರು ಬೆಂಗಳೂರಿಗೆ ಆಗಮಿಸಿ ಜಾಮೀನು ಅರ್ಜಿ ಸಲ್ಲಿಸಲು ವಕೀಲರನ್ನು ನೇಮಿಸಿಕೊಂಡರು. ಪೊಲೀಸರು ಅವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದರು.

ಇದನ್ನೂ ಓದಿರಿ: ಲೈಂಗಿಕ ಕಿರುಕುಳದ ಆರೋಪಿ ಬ್ರಿಜ್ ಭೂಷಣ್ ಸಿಂಗ್‌ಗೆ ‘ಮಹಾ ರ್ಯಾಲಿ’ಯ ಅನುಮತಿ ನಿರಾಕರಿಸಿದ ಅಯೋಧ್ಯೆ ಜಿಲ್ಲಾಡಳಿತ

ದಂಪತಿಗೆ ಏಪ್ರಿಲ್ 28 ರಂದು ಜಾಮೀನು ನೀಡಲಾಯಿತು, ಆದರೆ ಜಾಮೀನುದಾರರು ತಮ್ಮ ಜಮೀನು ದಾಖಲೆಗಳನ್ನು ಸಲ್ಲಿಸಲು ಅಗತ್ಯವಿರುವ ಜಾಮೀನು ಬಾಂಡ್‌ಗಳನ್ನು ತಕ್ಷಣವೇ ಸಲ್ಲಿಸಲು ಸಾಧ್ಯವಾಗದ ಕಾರಣ ಅವರನ್ನು ಮೇ 24 ರಂದು ಜೈಲಿನಿಂದ ಬಿಡುಗಡೆ ಮಾಡಲಾಯಿತು ಎಂದು ಪಲಾಶ್ ಅವರ ಸಂಬಂಧಿ ಸುಜೋಯ್ ಹಲ್ದಾರ್ ಹೇಳಿದ್ದಾರೆ. ಹಲ್ದಾರ್ ಅವರು ತಮ್ಮ ಹೆಂಡತಿಯೊಂದಿಗೆ ಗುರುವಾರ ಬೆಳಿಗ್ಗೆ ಹೌರಾಕ್ಕೆ ಹೋಗುವ ಡುರೊಂಟೊ ಎಕ್ಸ್‌ಪ್ರೆಸ್ ಹತ್ತಿದರು. ಶುಕ್ರವಾರ ಮನೆಗೆ ತಲುಪಲಿದ್ದಾರೆ.

ಬ್ಯೂಟಿ ಪಾರ್ಲರ್‌ನಲ್ಲಿ ಕೆಲಸ ಮಾಡುತ್ತಿರುವ ಪಲಾಶ್‌ನ ಸಹೋದರಿ ಸತಿ ಅಧಿಕಾರಿ ತನ್ನ ಸಂಪಾದನೆಯ ಬಹುತೇಕ ಹಣವನ್ನು ಈ ಪ್ರಕರಣಕ್ಕಾಗಿ ಖರ್ಚು ಮಾಡಿದ್ದಾರೆ.

“ಮೇ 24 ರಂದು ರಾತ್ರಿ 9.30 ರ ಸುಮಾರಿಗೆ ನನಗೆ ಕರೆ ಬಂದಿತು, ದಾದಾ (ಹಿರಿಯ ಸಹೋದರ) ಮತ್ತು ಬೌಡಿ (ಅತ್ತಿಗೆ) ಜೈಲಿನಿಂದ ಬಿಡುಗಡೆಯಾಗಿದ್ದರು. ನಾನು ಅವರೊಂದಿಗೆ ವೀಡಿಯೊ ಕರೆ ಮೂಲಕ ಮಾತನಾಡಿದೆ. ವೀಡಿಯೊ ಕರೆ ಸಮಯದಲ್ಲಿ, ನನ್ನ ತಾಯಿಗೆ ತಡೆದುಕೊಳ್ಳಲು ಸಾಧ್ಯವಾಗಲಿಲ್ಲ. ಅವಳ ಕಣ್ಣೀರು ಸುರಿಸಿದರು. ಇಬ್ಬರೂ ದುರ್ಬಲವಾಗಿ ಕಾಣುತ್ತಿದ್ದರು” ಎಂದಿದ್ದಾರೆ ಸತಿ ಅಧಿಕಾರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...