Homeಮುಖಪುಟಬೆಂಗಳೂರು: ಬಾಂಗ್ಲಾ ವಲಸಿಗರೆಂದು ಶಂಕಿಸಿ ಜೈಲಿಗೆ ಹಾಕಲಾಗಿದ್ದ ಪ.ಬಂಗಾಳ ದಂಪತಿ 301 ದಿನಗಳ ಬಳಿಕ ಬಿಡುಗಡೆ

ಬೆಂಗಳೂರು: ಬಾಂಗ್ಲಾ ವಲಸಿಗರೆಂದು ಶಂಕಿಸಿ ಜೈಲಿಗೆ ಹಾಕಲಾಗಿದ್ದ ಪ.ಬಂಗಾಳ ದಂಪತಿ 301 ದಿನಗಳ ಬಳಿಕ ಬಿಡುಗಡೆ

- Advertisement -
- Advertisement -

ಬೆಂಗಳೂರಿಗೆ ಕೂಲಿ ಕೆಲಸಕ್ಕೆ ಬಂದಿದ್ದ ಪಶ್ಚಿಮ ಬಂಗಾಳ ರಾಜ್ಯದ ಬುರ್ದ್ವಾನ್ ಮೂಲದ ದಂಪತಿಗಳನ್ನು ಅಕ್ರಮ ಬಾಂಗ್ಲಾ ವಲಸಿಗರು ಎಂದು ಶಂಕಿಸಿ ಸುಮಾರು 301 ದಿನಗಳ ಕಾಲ ಜೈಲಿಗೆ ತಳ್ಳಿರುವ ಘಟನೆ ಬೆಂಗಳೂರಿಗೆ ನಡೆದಿದೆ. ದಂಪತಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು ಸ್ವಗ್ರಾಮಕ್ಕೆ ತೆರಳಲು ಗುರುವಾರ ರೈಲು ಹತ್ತಿದ್ದಾರೆ.

ಪಲಾಶ್ ಮತ್ತು ಶುಕ್ಲಾ ಅಧಿಕಾರಿ ದಂಪತಿಯ ಹೋರಾಟವು ಜುಲೈ 2022ರಲ್ಲಿ ಪ್ರಾರಂಭವಾಯಿತು. ತಮ್ಮ ಎರಡು ವರ್ಷದ ಮಗುವಿನೊಂದಿಗೆ ಬೆಂಗಳೂರಿನಲ್ಲಿ ದಂಪತಿ ಇದ್ದರು. ಬಾಂಗ್ಲಾದೇಶದಿಂದ ಬಂದವರು ಎಂದು ಶಂಕಿಸಿದ ಪೊಲೀಸರು, ನಂತರ ಅವರನ್ನು ಬಂಧಿಸಿದ್ದರು.

ವಿದೇಶಿಯರ ಕಾಯಿದೆಯಡಿ ಅವರನ್ನು ಅರೆಸ್ಟ್ ಮಾಡಲಾಗಿತ್ತು. “ನಾವು ಪೂರ್ವ ಬುರ್ದ್ವಾನ್‌ನ ಜಮಾಲ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಝೌಗ್ರಾಮ್‌ನ ಟೆಲಿಪುಕೂರ್‌ನಿಂದ ಬಂದವರು” ಎಂದು ಪೊಲೀಸರಿಗೆ ವಿವರಿಸಲು ದಂಪತಿ ಪ್ರಯತ್ನಿಸಿದರು, ಆದರೆ ಯಾವುದೇ ಪ್ರಯೋಜನವಾಗಲಿಲ್ಲ.

ನಂತರ ಬೆಂಗಳೂರು ಪೊಲೀಸರ ತಂಡವು ಪೂರ್ವ ಬುರ್ದ್ವಾನ್‌ನಲ್ಲಿರುವ ಪಲಾಶ್ ಅವರ ಮನೆಯ ಕುರಿತು ತಪಾಸಣೆ ನಡೆಸಿತು. ತಂಡವು ಸ್ಥಳೀಯ ಜಮಾಲಪುರ ಬಿಡಿಒ ಅವರನ್ನು ಭೇಟಿಯಾಗಿ ದಾಖಲೆಗಳನ್ನು ಪರಿಶೀಲಿಸಿತು. ಪಾಲಾಶ್ ಅವರ ಸಂಬಂಧಿಕರು ಬೆಂಗಳೂರಿಗೆ ಆಗಮಿಸಿ ಜಾಮೀನು ಅರ್ಜಿ ಸಲ್ಲಿಸಲು ವಕೀಲರನ್ನು ನೇಮಿಸಿಕೊಂಡರು. ಪೊಲೀಸರು ಅವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದರು.

ಇದನ್ನೂ ಓದಿರಿ: ಲೈಂಗಿಕ ಕಿರುಕುಳದ ಆರೋಪಿ ಬ್ರಿಜ್ ಭೂಷಣ್ ಸಿಂಗ್‌ಗೆ ‘ಮಹಾ ರ್ಯಾಲಿ’ಯ ಅನುಮತಿ ನಿರಾಕರಿಸಿದ ಅಯೋಧ್ಯೆ ಜಿಲ್ಲಾಡಳಿತ

ದಂಪತಿಗೆ ಏಪ್ರಿಲ್ 28 ರಂದು ಜಾಮೀನು ನೀಡಲಾಯಿತು, ಆದರೆ ಜಾಮೀನುದಾರರು ತಮ್ಮ ಜಮೀನು ದಾಖಲೆಗಳನ್ನು ಸಲ್ಲಿಸಲು ಅಗತ್ಯವಿರುವ ಜಾಮೀನು ಬಾಂಡ್‌ಗಳನ್ನು ತಕ್ಷಣವೇ ಸಲ್ಲಿಸಲು ಸಾಧ್ಯವಾಗದ ಕಾರಣ ಅವರನ್ನು ಮೇ 24 ರಂದು ಜೈಲಿನಿಂದ ಬಿಡುಗಡೆ ಮಾಡಲಾಯಿತು ಎಂದು ಪಲಾಶ್ ಅವರ ಸಂಬಂಧಿ ಸುಜೋಯ್ ಹಲ್ದಾರ್ ಹೇಳಿದ್ದಾರೆ. ಹಲ್ದಾರ್ ಅವರು ತಮ್ಮ ಹೆಂಡತಿಯೊಂದಿಗೆ ಗುರುವಾರ ಬೆಳಿಗ್ಗೆ ಹೌರಾಕ್ಕೆ ಹೋಗುವ ಡುರೊಂಟೊ ಎಕ್ಸ್‌ಪ್ರೆಸ್ ಹತ್ತಿದರು. ಶುಕ್ರವಾರ ಮನೆಗೆ ತಲುಪಲಿದ್ದಾರೆ.

ಬ್ಯೂಟಿ ಪಾರ್ಲರ್‌ನಲ್ಲಿ ಕೆಲಸ ಮಾಡುತ್ತಿರುವ ಪಲಾಶ್‌ನ ಸಹೋದರಿ ಸತಿ ಅಧಿಕಾರಿ ತನ್ನ ಸಂಪಾದನೆಯ ಬಹುತೇಕ ಹಣವನ್ನು ಈ ಪ್ರಕರಣಕ್ಕಾಗಿ ಖರ್ಚು ಮಾಡಿದ್ದಾರೆ.

“ಮೇ 24 ರಂದು ರಾತ್ರಿ 9.30 ರ ಸುಮಾರಿಗೆ ನನಗೆ ಕರೆ ಬಂದಿತು, ದಾದಾ (ಹಿರಿಯ ಸಹೋದರ) ಮತ್ತು ಬೌಡಿ (ಅತ್ತಿಗೆ) ಜೈಲಿನಿಂದ ಬಿಡುಗಡೆಯಾಗಿದ್ದರು. ನಾನು ಅವರೊಂದಿಗೆ ವೀಡಿಯೊ ಕರೆ ಮೂಲಕ ಮಾತನಾಡಿದೆ. ವೀಡಿಯೊ ಕರೆ ಸಮಯದಲ್ಲಿ, ನನ್ನ ತಾಯಿಗೆ ತಡೆದುಕೊಳ್ಳಲು ಸಾಧ್ಯವಾಗಲಿಲ್ಲ. ಅವಳ ಕಣ್ಣೀರು ಸುರಿಸಿದರು. ಇಬ್ಬರೂ ದುರ್ಬಲವಾಗಿ ಕಾಣುತ್ತಿದ್ದರು” ಎಂದಿದ್ದಾರೆ ಸತಿ ಅಧಿಕಾರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...