Homeಕರ್ನಾಟಕಬೆಂಗಳೂರು: ಚಲಿಸುತ್ತಿದ್ದ ರೈಲಿನ ಅಡಿ ಮಲಗಿ ಪ್ರಾಣ ಉಳಿಸಿಕೊಂಡ ಮಹಿಳೆ!

ಬೆಂಗಳೂರು: ಚಲಿಸುತ್ತಿದ್ದ ರೈಲಿನ ಅಡಿ ಮಲಗಿ ಪ್ರಾಣ ಉಳಿಸಿಕೊಂಡ ಮಹಿಳೆ!

- Advertisement -
- Advertisement -

ಚಲಿಸುತ್ತಿದ್ದ ರೈಲಿನ ಅಡಿಯಲ್ಲಿ ಅಂಗಾತ ಮಲಗಿ ಮಹಿಳೆಯೊಬ್ಬರು ಜೀವ ಉಳಿಸಿಕೊಂಡಿರುವ ಘಟನೆ ರಾಜಾನುಕುಂಟೆ ಬಳಿ ನಡೆದಿದೆ, ಸದ್ಯ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ರೈಲಿನಡಿ ನುಗ್ಗಿ ಹಳಿ ದಾಟುವ ಯತ್ನದಲ್ಲಿದ್ದಾಗ ದಿಢೀರನೇ ರೈಲು ಚಲಿಸಿದ ಹಿನ್ನೆಲೆಯಲ್ಲಿ ಮಹಿಳೆ ಹಳಿ ಮಧ್ಯೆ ಮಲಗಿ ಪ್ರಾಣ ಉಳಿಸಿಕೊಂಡಿದ್ದಾರೆ.

ಪಾರ್ವತಿಪುರ, ಅದ್ದಿಗಾನಹಳ್ಳಿ, ತರಹುಣಸೆ ಸುತ್ತಮುತ್ತಲಿನ ಹತ್ತಾರು ಹಳ್ಳಿಗಳ ಜನರು, ಕಾರ್ಮಿಕರು, ವಿದ್ಯಾರ್ಥಿಗಳು ರಾಜಾನುಕುಂಟೆ ತಲುಪಲು ರೈಲು ಹಳಿ ದಾಟಿ ಸಾಗಬೇಕಿದೆ. ರೈಲ್ವೆ ಕ್ರಾಸಿಂಗ್‌ ಸಮಯದಲ್ಲಿ ಗೂಡ್ಸ್‌ ರೈಲುಗಳು ಇಲ್ಲಿ ನಿಂತಿರುತ್ತವೆ. ಕೆಲವರು ಗೂಡ್ಸ್‌ ರೈಲುಗಳನ್ನು ಹಾರಿ ಹೋದರೆ, ಇನ್ನು ಕೆಲವರು ರೈಲಿನಡಿ ನುಗ್ಗಿ ದಾಟುತ್ತಾರೆ. ಅದೇ ರೀತಿ ಅದ್ದಿಗಾನಹಳ್ಳಿ ನಿವಾಸಿ ಮಹಿಳೆಯೊಬ್ಬರು ರಾಜಾನುಕುಂಟೆಯತ್ತ ತೆರಳಲು ರೈಲಿನ ಅಡಿ ನುಗ್ಗಿದ್ದರು. ಅಷ್ಟರಲ್ಲೇ ರೈಲು ಚಲಿಸಲು ಆರಂಭಿಸಿದೆ. ಇನ್ನೊಂದು ಭಾಗಕ್ಕೆ ತೆರಳುವುದು ಅಪಾಯಕಾರಿ ಎಂದು ಅರಿತ ಮಹಿಳೆ ಹಳಿಯ ಮಧ್ಯೆಯೇ ಬೋರಲಾಗಿ ಮಲಗಿಕೊಂಡಿದ್ದಾರೆ. ರೈಲು ಹೋದ ನಂತರ ಎದ್ದು ಬಂದಿದ್ದಾರೆ. ಸಂಪೂರ್ಣ ದೃಶ್ಯಾವಳಿಯನ್ನು ಸ್ಥಳೀಯರು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಜಾಲತಾಣದಲ್ಲಿ ಬಿಟ್ಟಿದ್ದಾರೆ.

ಅಪಾಯ ತಪ್ಪಿಸಲು ಕೆಳಸೇತುವೆ ನಿರ್ಮಾಣಕ್ಕೆ ಸ್ಥಳೀಯ ನಿವಾಸಿಗಳ ಒತ್ತಾಯ

ಈ ಬಗ್ಗೆ ಸ್ಥಳೀಯ ನಿವಾಸಿಯೊಬ್ಬರು ಮಾತನಾಡಿದ್ದು, ”ಇದೇ ಪ್ರದೇಶದಲ್ಲಿ ಆರು ತಿಂಗಳ ಹಿಂದೆ ವ್ಯಕ್ತಿಯೊಬ್ಬರು ರೈಲು ಹತ್ತಿ ಇಳಿಯುವಾಗ ಕಾಲು ಮುರಿದುಕೊಂಡು ಆಸ್ಪತ್ರೆ ಸೇರಿದ್ದರು. ಎರಡು ವರ್ಷಗಳ ಹಿಂದೆ ಹಳಿ ಕೆಳಗೆ ನುಗ್ಗಲು ಹೋಗಿ ಆಂಧ್ರದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಪ್ರತಿದಿನ ಸಾವಿರಾರು ಜನರು ಅಪಾಯಕಾರಿಯಾಗಿ ರೈಲು ಹಳಿ ದಾಟುತ್ತಾರೆ. ಈ ಹಿನ್ನೆಲೆಯಲ್ಲಿ ಕೆಳಸೇತುವೆ ನಿರ್ಮಾಣ ಮಾಡಿ ಈ ಅವ್ಯವಸ್ಥೆಗೆ ಮುಕ್ತಿಕೊಡಿ” ಎಂದು ಸರಕಾರಕ್ಕೆ ಒತ್ತಾಯ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...