Homeಕರ್ನಾಟಕಬೆಂಗಳೂರು: ರೈಲು ನಿಲ್ದಾಣದ ಪ್ಲಾಸ್ಟಿಕ್ ಡ್ರಮ್‌ನಲ್ಲಿ ಮಹಿಳೆಯ ಶವ ಪತ್ತೆ

ಬೆಂಗಳೂರು: ರೈಲು ನಿಲ್ದಾಣದ ಪ್ಲಾಸ್ಟಿಕ್ ಡ್ರಮ್‌ನಲ್ಲಿ ಮಹಿಳೆಯ ಶವ ಪತ್ತೆ

- Advertisement -
- Advertisement -

ಸೋಮವಾರ ಬೆಂಗಳೂರಿನ ಬೈಯಪ್ಪನಹಳ್ಳಿ ರೈಲು ನಿಲ್ದಾಣದ ಪ್ಲಾಸ್ಟಿಕ್ ಡ್ರಮ್‌ನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಎರಡು ತಿಂಗಳ ಹಿಂದೆ ಯಶವಂತಪುರ ರೈಲು ನಿಲ್ದಾಣದ ಡ್ರಮ್‌ನಲ್ಲಿ ಇದೇ ರೀತಿ ಮಹಿಳೆಯೊಬ್ಬರ ಶವ ಪತ್ತೆಯಾಗಿತ್ತು.

ಸೋಮವಾರ ಬೆಳಗ್ಗೆ 11 ಗಂಟೆಯ ಸುಮಾರಿಗೆ ಮೂವರು ದುಷ್ಕರ್ಮಿಗಳು ಶವವಿರುವ ನೀಲಿ ಡ್ರಮ್ ಅ​ನ್ನು ಆಟೋದಲ್ಲಿ‌ ತಂದು ನಗರದ ಬೈಯಪ್ಪನಹಳ್ಳಿ ರೈಲು ನಿಲ್ದಾಣದ ಪ್ರವೇಶ ದ್ವಾರದ ಬಳಿ ಇಟ್ಟು ಹೋಗಿದ್ದಾರೆ. ಆರೋಪಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶವವನ್ನು ಬಟ್ಟೆಯಲ್ಲಿ ಸುತ್ತಿ ಡ್ರಮ್ ನಲ್ಲಿ ಹಾಕಿ ಮುಚ್ಚಳದಿಂದ ಮುಚ್ಚಲಾಗಿತ್ತು.

ಶವ ಯಾರದು ಎಂಬ ಬಗ್ಗೆ ಗುರುತು ಸಿಕ್ಕಿಲ್ಲ, ಸುಮಾರು 31 ರಿಂದ 35 ವರ್ಷ ವಯಸ್ಸಿನವರೆಂದು ಹೇಳಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ‌ ಮಾತನಾಡಿದ ರೈಲ್ವೇ ಎಸ್ಪಿ ಸೌಮ್ಯಲತಾ, “ನಮಗೆ ನೀಲಿ ಡ್ರಮ್​ನಿಂದ ಕೊಳೆತ ವಾಸನೆ ಬರುತ್ತಿದೆ ಎಂದು ದೂರವಾಣಿ ಕರೆ ಬಂದಿತ್ತು. ಸ್ಥಳಕ್ಕೆ ಬಂದು ಪರಿಶೀಲಿಸಿದಾಗ ಶವ ಇರುವುದು ಗೊತ್ತಾಗಿದೆ” ಎಂದರು.

ಇದನ್ನೂ ಓದಿ: ಯಶವಂತಪುರ ರೈಲ್ವೆ ನಿಲ್ದಾಣ: ಕೊಳೆತ ಸ್ಥಿತಿಯಲ್ಲಿ ಯುವತಿಯ ಶವಪತ್ತೆ

”ಸೋಮವಾರ ಮೂವರು ವ್ಯಕ್ತಿಗಳು ಆಟೋರಿಕ್ಷಾದ ಮೂಲಕ ಡ್ರಮ್‌ನಲ್ಲಿ ಶವ ಇಟ್ಟುಕೊಂಡು ರೈಲು ನಿಲ್ದಾಣದ ಪ್ರವೇಶ ದ್ವಾರದ ಬಳಿ ಎಸೆದಿರುವುದು ತನಿಖೆಯ ವೇಳೆ ಪೊಲೀಸರಿಗೆ ಕಂಡುಬಂದಿದೆ. ಈ ಮೃತದೇಹವನ್ನು ಮಚ್ಲಿಪಟ್ಟಣದಿಂದ ರೈಲಿನಲ್ಲಿ ಸಾಗಿಸಲಾಗಿದೆ” ಎಂದು ಅವರು ತಿಳಿಸಿದ್ದಾರೆ.

”ಆ ಮೃತದೇಹ ಯಾರದು ಎಂದು ತಿಳಿದುಕೊಳ್ಳಲು ನಮ್ಮ ತಂಡವನ್ನು ಮಚ್ಲಿಪಟ್ಟಣಕ್ಕೆ ಕಳುಹಿಸಲಾಗಿದೆ ಆದರೆ ಮೃತದೇಹವನ್ನು ಗುರುತಿಸಲು ಸಾಧ್ಯವಾಗಲಿಲ್ಲ” ಎಂದು ರೈಲ್ವೇ ಎಸ್ಪಿ ಸೌಮಲತಾ ತಿಳಿಸಿದ್ದಾರೆ.

ಎರಡು ತಿಂಗಳ ಹಿಂದೆ ಜನವರಿ 4 ರಂದು ಯಶವಂತಪುರ ರೈಲ್ವೇ ನಿಲ್ದಾಣದ ಗೂಡ್ಸ್ ಪ್ಲಾಟ್ ಫಾರ್ಮ್ ನ ಬಾಕ್ಸ್ ಒಂದರಲ್ಲಿ ಶವ ಪತ್ತೆಯಾಗಿತ್ತು. ಅಂದಾಜು 23 ವರ್ಷದ ಯುವತಿ ಎಂದು ಗುರುತಿಸಲಾಗಿತ್ತು. ಆರೋಪಿಗಳು ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಯುವತಿಯನ್ನು ಕೊಲೆ ಮಾಡಿ ಪ್ಲಾಸ್ಟಿಕ್ ಕವರ್ ಒಂದರಲ್ಲಿ ಸೀಲ್ ಮಾಡಿಟ್ಟಿದ್ದರು. ವಾಸನೆ ಬಂದಾಗ ನೋಡಿಕೊಂಡಿರುವ ರೈಲ್ವೇ ಪೊಲೀಸರು ತೆಗೆದು ನೋಡಿದಾಗ ಮೃತದೇಹ ಪತ್ತೆಯಾಗಿತ್ತು. ಈ ಬಗ್ಗೆ ಯಶವಂತಪುರ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...