Homeಮುಖಪುಟಬೆಂಗಳೂರು: ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದ ನಂತರ ಗೋಮೂತ್ರ ಸಿಂಪಡಿಸಿ ಕಚೇರಿ ಶುದ್ಧೀಕರಿಸಿದ ಎಎಪಿ

ಬೆಂಗಳೂರು: ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದ ನಂತರ ಗೋಮೂತ್ರ ಸಿಂಪಡಿಸಿ ಕಚೇರಿ ಶುದ್ಧೀಕರಿಸಿದ ಎಎಪಿ

“ಎಎಪಿ ಮೃದು  ಹಿಂದುತ್ವ ರಾಜಕಾರಣ ಮಾಡುತ್ತಿದೆ” ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಎಎಪಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ, “ಅದರಲ್ಲೇನು ತಪ್ಪಿಲ್ಲ ಅಲ್ಲವೇ? ಮೃದು ಹಿಂದುತ್ವ, ಕಠಿಣ ಹಿಂದುತ್ವ ಕುರಿತು ಅಷ್ಟಾಗಿ ಐಡಿಯಾಸ್‌ ಇಲ್ಲ” ಎಂದರು.

- Advertisement -
- Advertisement -

ಬೆಂಗಳೂರು: ರಾಜ್ಯ ಆಮ್‌ ಆದ್ಮಿ ಪಾರ್ಟಿ (ಎಎಪಿ) ಕಚೇರಿ ಎದುರಿಗೆ ಪ್ರತಿಭಟನೆ ನೆಪದಲ್ಲಿ ಆಗಮಿಸಿದ ಬಿಜೆಪಿ ಕಾರ್ಯಕರ್ತರು ಗೂಂಡಾ ವರ್ತನೆ ತೋರಿದ್ದಾರೆ ಎಂದು ಆರೋಪಿಸಿರುವ ಎಎಪಿ, ಘಟನೆ ಬಳಿಕ ಗೋಮೂತ್ರ ಸಿಂಪಡಿಸಿ ಕಚೇರಿಯನ್ನು ಶುದ್ಧೀಕರಣಗೊಳಿಸಿದೆ.

ಮಾಧ್ಯಮಗಳ ಜೊತೆ ಮಾತನಾಡಿದ ಎಎಪಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ, “ಕಳೆದ ತಿಂಗಳು ಸಂಸದ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್‌ ನಿವಾಸದ ಮೇಲೆ ದಾಳಿ ಮಾಡಿದ ಮಾದರಿಯಲ್ಲೇ ಕರ್ನಾಟಕದ ಎಎಪಿ ಕಚೇರಿ ಮೇಲೂ ದಾಳಿ ಮಾಡಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದಾರೆ. ಕಚೇರಿ ಮುಂದಿದ್ದ ಬೈಕ್‌ಗಳನ್ನೆಲ್ಲ ಬೀಳಿಸಿದ್ದಲ್ಲದೇ, ಕಚೇರಿಯ ಒಳಗೆ ನುಗ್ಗಲು ಮುಂದಾಗಿದ್ದಾರೆ” ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪ್ರಚೋದನಾಕಾರಿ ಭಾಷಣ ಮಾಡಿ, ಕೋಮುಗಲಭೆ ಸೃಷ್ಟಿಸಲು ಯತ್ನಿಸಿದ ಬಿಜೆಪಿ ಮುಖಂಡ ತಜಿಂದರ್‌ ಪಾಲ್‌ ಬಗ್ಗಾರವರನ್ನು ಪಂಜಾಬ್‌ ಪೊಲೀಸರು ಬಂಧಿಸಿರುವುದು ಒಳ್ಳೆಯ ಬೆಳವಣಿಗೆ. ದೇಶದಲ್ಲಿ ಶಾಂತಿ ಕದಡುವವರಿಗೆ ಕಾನೂನಿನನ್ವಯ ಶಿಕ್ಷೆಯಾಗಬೇಕು. ಬೆಂಗಳೂರಿನ ಬಿಜೆಪಿ ಕಾರ್ಯಕರ್ತರಿಗೆ ಎಎಪಿ ಕಚೇರಿ ಮೇಲೆ ದಾಳಿ ಮಾಡಲು ಬಗ್ಗಾರವರ ಬಂಧನ ಒಂದು ನೆಪ ಅಷ್ಟೇ. ರಾಜ್ಯದಲ್ಲಿ ಎಎಪಿಗೆ ಜನಬೆಂಬಲ ಹೆಚ್ಚಾಗುತ್ತಿರುವುದರಿಂದ ಬಿಜೆಪಿ ಹತಾಶವಾಗಿರುವುದೇ ಈ ದಾಳಿಗೆ ಪ್ರಮುಖ ಕಾರಣ” ಎಂದು ಜಗದೀಶ್‌ ವಿ ಸದಂ ಹೇಳಿದ್ದಾರೆ.

“ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಎಎಪಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಮುಂದಾದರೂ ಪೊಲೀಸರು ತಡೆಯುತ್ತಾರೆ. ನಮ್ಮ ಮೆರವಣಿಗೆಯನ್ನು ಆರಂಭದಲ್ಲೇ ತಡೆದು ಬಂಧಿಸುತ್ತಾರೆ. ಆದರೆ ಬಿಜೆಪಿ ಕಾರ್ಯಕರ್ತರು ಎಎಪಿ ಕಚೇರಿಗೆ ಬಂದು ಗೂಂಡಾ ವರ್ತನೆ ತೋರಿದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ರಾಜ್ಯ ಗೃಹ ಸಚಿವಾಲಯವು ಈ ರೀತಿ ಪಕ್ಷಪಾತ ಮಾಡುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಪಾಯಕಾರಿ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ರಾಜ್ಯದ ಅತ್ಯಂತ ಭ್ರಷ್ಟ ಪಕ್ಷ ಹಾಗೂ ಗಲಭೆಪ್ರಿಯ ಪಕ್ಷವಾದ ಬಿಜೆಪಿಯ ಕಾರ್ಯಕರ್ತರ ಪ್ರತಿಭಟನೆಯಿಂದ ಆಮ್‌ ಆದ್ಮಿ ಪಾರ್ಟಿ ಕಚೇರಿ ಅಪವಿತ್ರಗೊಂಡಿತ್ತು. ಗೋಮೂತ್ರ ಸಿಂಪಡಿಸುವ ಮೂಲಕ ಕಚೇರಿಯನ್ನು ಶುದ್ಧೀಕರಣ ಮಾಡಲಾಗಿದೆ. ರಾಜ್ಯದ ಆಡಳಿತ ಕೂಡ ಬಿಜೆಪಿಯಿಂದ ಅಪವಿತ್ರಗೊಂಡಿದ್ದು, ಮುಂದಿನ ದಿನಗಳಲ್ಲಿ ಅಧಿಕಾರ ಸಿಕ್ಕೊಡನೆ ಆಡಳಿತವನ್ನೂ ಆಮ್‌ ಆದ್ಮಿ ಪಾರ್ಟಿಯು ಶುದ್ಧೀಕರಣ ಮಾಡಲಿದೆ” ಎಂದು ತಿಳಿಸಿದ್ದಾರೆ.

‘ಎಎಪಿ ಕೂಡ ಮೃದು ಹಿಂದುತ್ವ ರಾಜಕಾರಣ ಮಾಡುತ್ತದೆ’ ಎಂಬ ಆರೋಪ ಮೊದಲಿನಿಂದಲೂ ಇದೆ. ಗೋವಿನ ಮೂತ್ರವನ್ನು ತಂದು ಶುದ್ಧೀಕರಣ ಮಾಡುವುದು ಇದನ್ನೇ ಸೂಚ್ಯವಾಗಿ ಹೇಳುತ್ತದೆ. ಗೋವಿನ ಮೂತ್ರ ಬಳಸಿ ಶುದ್ಧೀಕರಣ ಮಾಡಿದ ಘಟನೆಗಳನ್ನು ಮೆಲುಕು ಹಾಕಿದರೆ ಒಂದು ರೀತಿಯ ಅಸ್ಪೃಶ್ಯತೆ ಆಚರಣೆಯ ಧೋರಣೆಯೂ ಇಲ್ಲಿ ಇಣುಕುತ್ತದೆ. ಬಲ ಪಂಥೀಯ ರಾಜಕಾರಣ ಹಾದಿಯಲ್ಲೇ ಎಎಪಿ ಸಾಗುತ್ತಿದೆ ಎಂದು ದೂರಲಾಗುತ್ತಿದೆ. ಈ ಪ್ರಶ್ನೆಯನ್ನಿಟ್ಟುಕೊಂಡು ಜಗದೀಶ್‌ ವಿ.ಸದಂ ಅವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿದಾಗ, “ಗೋವಿನ ಮೂತ್ರ ಬಳಸಿ ಶುದ್ಧೀಕರಣ ಮಾಡುವುದು ಮೊದಲಿನಿಂದಲೂ ನಮ್ಮಲ್ಲಿರುವ ಸಂಪ್ರದಾಯ. ಇದರಲ್ಲಿ ಎಡ ಪಂಥ- ಬಲ ಪಂಥ ಎಂಬುದಿಲ್ಲ. ನಮ್ಮ ಮನೆಗಳನ್ನು ತೊಳೆಯುವ ಗೋಮೂತ್ರವನ್ನೇ ಬಳಸಲಾಗುತ್ತದೆ. ಎಎಪಿಗೆ ಯಾವ ಪಂಥದ ಹಂಗೂ ಇಲ್ಲ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿರಿ: ಬಿಜೆಪಿಯ ಬುಲ್ಡೋಜರ್‌ ರಾಜಕೀಯದಿಂದ ಇಡೀ ದೆಹಲಿಯೇ ಧ್ವಂಸವಾಗಲಿದೆ: ಎಎಪಿ

“ಗೃಹಪ್ರವೇಶ ಮಾಡುವಾಗ ನಮ್ಮ ಮನೆಗಳಿಗೆ ಮೊದಲು ಗೋ ಮಾತೆಯನ್ನು ಕರೆದುಕೊಂಡು ಬರುತ್ತೇವೆ. ಯಾವುದನ್ನಾದರೂ ಶುದ್ಧೀಕರಣ ಮಾಡಬೇಕೆಂದರೂ ಗೋ ಮೂತ್ರವನ್ನು ಸಿಂಪಡಣೆ ಮಾಡುವುದು ಸಂಪ್ರದಾಯವಾಗಿದೆ. ಪೀಡೆಗಳು ತೊಲಗಲೆಂಬುದು ಇದರ ಉದ್ದೇಶ. ಪಂಥೀಯ ವಾದಗಳೆಲ್ಲ ಕೆಲಸಕ್ಕೆ ಬರುವುದಿಲ್ಲ. ಅವುಗಳಲ್ಲಿ ನಮಗೆ ನಂಬಿಕೆ ಇಲ್ಲ” ಎಂದರು.

“ಭ್ರಷ್ಟರೆಲ್ಲ, ನೈತಿಕತೆ ಇಲ್ಲದವರೆಲ್ಲ ನಮ್ಮ ಕಚೇರಿಗೆ ನುಗ್ಗಿದಾಗ ಶುದ್ಧೀಕರಣ ಮಾಡಲೇಬೇಕು. ನಾವು ಶುದ್ಧ ರಾಜಕಾರಣ ಮಾಡಲು ಬಂದಿದ್ದೇವೆ. ಹೀಗಾಗಿ ಗೋವಿನ ಮೂತ್ರ ತಂದು ಶುದ್ಧೀಕರಣ ಮಾಡಿದ್ದೇವೆ” ಎಂದು ಹೇಳಿದರು.

“ಎಎಪಿ ಮೃದು  ಹಿಂದುತ್ವ ರಾಜಕಾರಣ ಮಾಡುತ್ತಿದೆ” ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, “ಅದರಲ್ಲೇನು ತಪ್ಪಿಲ್ಲ ಅಲ್ಲವೇ? ಮೃದು ಹಿಂದುತ್ವ, ಕಠಿಣ ಹಿಂದುತ್ವ ಇಂಥವುಗಳ ಕುರಿತು ಅಷ್ಟಾಗಿ ಐಡಿಯಾಸ್‌ ಇಲ್ಲ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...