Homeಮುಖಪುಟಬೆಂಗಳೂರು: ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದ ನಂತರ ಗೋಮೂತ್ರ ಸಿಂಪಡಿಸಿ ಕಚೇರಿ ಶುದ್ಧೀಕರಿಸಿದ ಎಎಪಿ

ಬೆಂಗಳೂರು: ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದ ನಂತರ ಗೋಮೂತ್ರ ಸಿಂಪಡಿಸಿ ಕಚೇರಿ ಶುದ್ಧೀಕರಿಸಿದ ಎಎಪಿ

“ಎಎಪಿ ಮೃದು  ಹಿಂದುತ್ವ ರಾಜಕಾರಣ ಮಾಡುತ್ತಿದೆ” ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಎಎಪಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ, “ಅದರಲ್ಲೇನು ತಪ್ಪಿಲ್ಲ ಅಲ್ಲವೇ? ಮೃದು ಹಿಂದುತ್ವ, ಕಠಿಣ ಹಿಂದುತ್ವ ಕುರಿತು ಅಷ್ಟಾಗಿ ಐಡಿಯಾಸ್‌ ಇಲ್ಲ” ಎಂದರು.

- Advertisement -
- Advertisement -

ಬೆಂಗಳೂರು: ರಾಜ್ಯ ಆಮ್‌ ಆದ್ಮಿ ಪಾರ್ಟಿ (ಎಎಪಿ) ಕಚೇರಿ ಎದುರಿಗೆ ಪ್ರತಿಭಟನೆ ನೆಪದಲ್ಲಿ ಆಗಮಿಸಿದ ಬಿಜೆಪಿ ಕಾರ್ಯಕರ್ತರು ಗೂಂಡಾ ವರ್ತನೆ ತೋರಿದ್ದಾರೆ ಎಂದು ಆರೋಪಿಸಿರುವ ಎಎಪಿ, ಘಟನೆ ಬಳಿಕ ಗೋಮೂತ್ರ ಸಿಂಪಡಿಸಿ ಕಚೇರಿಯನ್ನು ಶುದ್ಧೀಕರಣಗೊಳಿಸಿದೆ.

ಮಾಧ್ಯಮಗಳ ಜೊತೆ ಮಾತನಾಡಿದ ಎಎಪಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ, “ಕಳೆದ ತಿಂಗಳು ಸಂಸದ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್‌ ನಿವಾಸದ ಮೇಲೆ ದಾಳಿ ಮಾಡಿದ ಮಾದರಿಯಲ್ಲೇ ಕರ್ನಾಟಕದ ಎಎಪಿ ಕಚೇರಿ ಮೇಲೂ ದಾಳಿ ಮಾಡಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದಾರೆ. ಕಚೇರಿ ಮುಂದಿದ್ದ ಬೈಕ್‌ಗಳನ್ನೆಲ್ಲ ಬೀಳಿಸಿದ್ದಲ್ಲದೇ, ಕಚೇರಿಯ ಒಳಗೆ ನುಗ್ಗಲು ಮುಂದಾಗಿದ್ದಾರೆ” ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪ್ರಚೋದನಾಕಾರಿ ಭಾಷಣ ಮಾಡಿ, ಕೋಮುಗಲಭೆ ಸೃಷ್ಟಿಸಲು ಯತ್ನಿಸಿದ ಬಿಜೆಪಿ ಮುಖಂಡ ತಜಿಂದರ್‌ ಪಾಲ್‌ ಬಗ್ಗಾರವರನ್ನು ಪಂಜಾಬ್‌ ಪೊಲೀಸರು ಬಂಧಿಸಿರುವುದು ಒಳ್ಳೆಯ ಬೆಳವಣಿಗೆ. ದೇಶದಲ್ಲಿ ಶಾಂತಿ ಕದಡುವವರಿಗೆ ಕಾನೂನಿನನ್ವಯ ಶಿಕ್ಷೆಯಾಗಬೇಕು. ಬೆಂಗಳೂರಿನ ಬಿಜೆಪಿ ಕಾರ್ಯಕರ್ತರಿಗೆ ಎಎಪಿ ಕಚೇರಿ ಮೇಲೆ ದಾಳಿ ಮಾಡಲು ಬಗ್ಗಾರವರ ಬಂಧನ ಒಂದು ನೆಪ ಅಷ್ಟೇ. ರಾಜ್ಯದಲ್ಲಿ ಎಎಪಿಗೆ ಜನಬೆಂಬಲ ಹೆಚ್ಚಾಗುತ್ತಿರುವುದರಿಂದ ಬಿಜೆಪಿ ಹತಾಶವಾಗಿರುವುದೇ ಈ ದಾಳಿಗೆ ಪ್ರಮುಖ ಕಾರಣ” ಎಂದು ಜಗದೀಶ್‌ ವಿ ಸದಂ ಹೇಳಿದ್ದಾರೆ.

“ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಎಎಪಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಮುಂದಾದರೂ ಪೊಲೀಸರು ತಡೆಯುತ್ತಾರೆ. ನಮ್ಮ ಮೆರವಣಿಗೆಯನ್ನು ಆರಂಭದಲ್ಲೇ ತಡೆದು ಬಂಧಿಸುತ್ತಾರೆ. ಆದರೆ ಬಿಜೆಪಿ ಕಾರ್ಯಕರ್ತರು ಎಎಪಿ ಕಚೇರಿಗೆ ಬಂದು ಗೂಂಡಾ ವರ್ತನೆ ತೋರಿದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ರಾಜ್ಯ ಗೃಹ ಸಚಿವಾಲಯವು ಈ ರೀತಿ ಪಕ್ಷಪಾತ ಮಾಡುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಪಾಯಕಾರಿ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ರಾಜ್ಯದ ಅತ್ಯಂತ ಭ್ರಷ್ಟ ಪಕ್ಷ ಹಾಗೂ ಗಲಭೆಪ್ರಿಯ ಪಕ್ಷವಾದ ಬಿಜೆಪಿಯ ಕಾರ್ಯಕರ್ತರ ಪ್ರತಿಭಟನೆಯಿಂದ ಆಮ್‌ ಆದ್ಮಿ ಪಾರ್ಟಿ ಕಚೇರಿ ಅಪವಿತ್ರಗೊಂಡಿತ್ತು. ಗೋಮೂತ್ರ ಸಿಂಪಡಿಸುವ ಮೂಲಕ ಕಚೇರಿಯನ್ನು ಶುದ್ಧೀಕರಣ ಮಾಡಲಾಗಿದೆ. ರಾಜ್ಯದ ಆಡಳಿತ ಕೂಡ ಬಿಜೆಪಿಯಿಂದ ಅಪವಿತ್ರಗೊಂಡಿದ್ದು, ಮುಂದಿನ ದಿನಗಳಲ್ಲಿ ಅಧಿಕಾರ ಸಿಕ್ಕೊಡನೆ ಆಡಳಿತವನ್ನೂ ಆಮ್‌ ಆದ್ಮಿ ಪಾರ್ಟಿಯು ಶುದ್ಧೀಕರಣ ಮಾಡಲಿದೆ” ಎಂದು ತಿಳಿಸಿದ್ದಾರೆ.

‘ಎಎಪಿ ಕೂಡ ಮೃದು ಹಿಂದುತ್ವ ರಾಜಕಾರಣ ಮಾಡುತ್ತದೆ’ ಎಂಬ ಆರೋಪ ಮೊದಲಿನಿಂದಲೂ ಇದೆ. ಗೋವಿನ ಮೂತ್ರವನ್ನು ತಂದು ಶುದ್ಧೀಕರಣ ಮಾಡುವುದು ಇದನ್ನೇ ಸೂಚ್ಯವಾಗಿ ಹೇಳುತ್ತದೆ. ಗೋವಿನ ಮೂತ್ರ ಬಳಸಿ ಶುದ್ಧೀಕರಣ ಮಾಡಿದ ಘಟನೆಗಳನ್ನು ಮೆಲುಕು ಹಾಕಿದರೆ ಒಂದು ರೀತಿಯ ಅಸ್ಪೃಶ್ಯತೆ ಆಚರಣೆಯ ಧೋರಣೆಯೂ ಇಲ್ಲಿ ಇಣುಕುತ್ತದೆ. ಬಲ ಪಂಥೀಯ ರಾಜಕಾರಣ ಹಾದಿಯಲ್ಲೇ ಎಎಪಿ ಸಾಗುತ್ತಿದೆ ಎಂದು ದೂರಲಾಗುತ್ತಿದೆ. ಈ ಪ್ರಶ್ನೆಯನ್ನಿಟ್ಟುಕೊಂಡು ಜಗದೀಶ್‌ ವಿ.ಸದಂ ಅವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿದಾಗ, “ಗೋವಿನ ಮೂತ್ರ ಬಳಸಿ ಶುದ್ಧೀಕರಣ ಮಾಡುವುದು ಮೊದಲಿನಿಂದಲೂ ನಮ್ಮಲ್ಲಿರುವ ಸಂಪ್ರದಾಯ. ಇದರಲ್ಲಿ ಎಡ ಪಂಥ- ಬಲ ಪಂಥ ಎಂಬುದಿಲ್ಲ. ನಮ್ಮ ಮನೆಗಳನ್ನು ತೊಳೆಯುವ ಗೋಮೂತ್ರವನ್ನೇ ಬಳಸಲಾಗುತ್ತದೆ. ಎಎಪಿಗೆ ಯಾವ ಪಂಥದ ಹಂಗೂ ಇಲ್ಲ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿರಿ: ಬಿಜೆಪಿಯ ಬುಲ್ಡೋಜರ್‌ ರಾಜಕೀಯದಿಂದ ಇಡೀ ದೆಹಲಿಯೇ ಧ್ವಂಸವಾಗಲಿದೆ: ಎಎಪಿ

“ಗೃಹಪ್ರವೇಶ ಮಾಡುವಾಗ ನಮ್ಮ ಮನೆಗಳಿಗೆ ಮೊದಲು ಗೋ ಮಾತೆಯನ್ನು ಕರೆದುಕೊಂಡು ಬರುತ್ತೇವೆ. ಯಾವುದನ್ನಾದರೂ ಶುದ್ಧೀಕರಣ ಮಾಡಬೇಕೆಂದರೂ ಗೋ ಮೂತ್ರವನ್ನು ಸಿಂಪಡಣೆ ಮಾಡುವುದು ಸಂಪ್ರದಾಯವಾಗಿದೆ. ಪೀಡೆಗಳು ತೊಲಗಲೆಂಬುದು ಇದರ ಉದ್ದೇಶ. ಪಂಥೀಯ ವಾದಗಳೆಲ್ಲ ಕೆಲಸಕ್ಕೆ ಬರುವುದಿಲ್ಲ. ಅವುಗಳಲ್ಲಿ ನಮಗೆ ನಂಬಿಕೆ ಇಲ್ಲ” ಎಂದರು.

“ಭ್ರಷ್ಟರೆಲ್ಲ, ನೈತಿಕತೆ ಇಲ್ಲದವರೆಲ್ಲ ನಮ್ಮ ಕಚೇರಿಗೆ ನುಗ್ಗಿದಾಗ ಶುದ್ಧೀಕರಣ ಮಾಡಲೇಬೇಕು. ನಾವು ಶುದ್ಧ ರಾಜಕಾರಣ ಮಾಡಲು ಬಂದಿದ್ದೇವೆ. ಹೀಗಾಗಿ ಗೋವಿನ ಮೂತ್ರ ತಂದು ಶುದ್ಧೀಕರಣ ಮಾಡಿದ್ದೇವೆ” ಎಂದು ಹೇಳಿದರು.

“ಎಎಪಿ ಮೃದು  ಹಿಂದುತ್ವ ರಾಜಕಾರಣ ಮಾಡುತ್ತಿದೆ” ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, “ಅದರಲ್ಲೇನು ತಪ್ಪಿಲ್ಲ ಅಲ್ಲವೇ? ಮೃದು ಹಿಂದುತ್ವ, ಕಠಿಣ ಹಿಂದುತ್ವ ಇಂಥವುಗಳ ಕುರಿತು ಅಷ್ಟಾಗಿ ಐಡಿಯಾಸ್‌ ಇಲ್ಲ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....