Homeಮುಖಪುಟಬೆಂಗಳೂರು: ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದ ನಂತರ ಗೋಮೂತ್ರ ಸಿಂಪಡಿಸಿ ಕಚೇರಿ ಶುದ್ಧೀಕರಿಸಿದ ಎಎಪಿ

ಬೆಂಗಳೂರು: ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದ ನಂತರ ಗೋಮೂತ್ರ ಸಿಂಪಡಿಸಿ ಕಚೇರಿ ಶುದ್ಧೀಕರಿಸಿದ ಎಎಪಿ

“ಎಎಪಿ ಮೃದು  ಹಿಂದುತ್ವ ರಾಜಕಾರಣ ಮಾಡುತ್ತಿದೆ” ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಎಎಪಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ, “ಅದರಲ್ಲೇನು ತಪ್ಪಿಲ್ಲ ಅಲ್ಲವೇ? ಮೃದು ಹಿಂದುತ್ವ, ಕಠಿಣ ಹಿಂದುತ್ವ ಕುರಿತು ಅಷ್ಟಾಗಿ ಐಡಿಯಾಸ್‌ ಇಲ್ಲ” ಎಂದರು.

- Advertisement -
- Advertisement -

ಬೆಂಗಳೂರು: ರಾಜ್ಯ ಆಮ್‌ ಆದ್ಮಿ ಪಾರ್ಟಿ (ಎಎಪಿ) ಕಚೇರಿ ಎದುರಿಗೆ ಪ್ರತಿಭಟನೆ ನೆಪದಲ್ಲಿ ಆಗಮಿಸಿದ ಬಿಜೆಪಿ ಕಾರ್ಯಕರ್ತರು ಗೂಂಡಾ ವರ್ತನೆ ತೋರಿದ್ದಾರೆ ಎಂದು ಆರೋಪಿಸಿರುವ ಎಎಪಿ, ಘಟನೆ ಬಳಿಕ ಗೋಮೂತ್ರ ಸಿಂಪಡಿಸಿ ಕಚೇರಿಯನ್ನು ಶುದ್ಧೀಕರಣಗೊಳಿಸಿದೆ.

ಮಾಧ್ಯಮಗಳ ಜೊತೆ ಮಾತನಾಡಿದ ಎಎಪಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ, “ಕಳೆದ ತಿಂಗಳು ಸಂಸದ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್‌ ನಿವಾಸದ ಮೇಲೆ ದಾಳಿ ಮಾಡಿದ ಮಾದರಿಯಲ್ಲೇ ಕರ್ನಾಟಕದ ಎಎಪಿ ಕಚೇರಿ ಮೇಲೂ ದಾಳಿ ಮಾಡಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದಾರೆ. ಕಚೇರಿ ಮುಂದಿದ್ದ ಬೈಕ್‌ಗಳನ್ನೆಲ್ಲ ಬೀಳಿಸಿದ್ದಲ್ಲದೇ, ಕಚೇರಿಯ ಒಳಗೆ ನುಗ್ಗಲು ಮುಂದಾಗಿದ್ದಾರೆ” ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪ್ರಚೋದನಾಕಾರಿ ಭಾಷಣ ಮಾಡಿ, ಕೋಮುಗಲಭೆ ಸೃಷ್ಟಿಸಲು ಯತ್ನಿಸಿದ ಬಿಜೆಪಿ ಮುಖಂಡ ತಜಿಂದರ್‌ ಪಾಲ್‌ ಬಗ್ಗಾರವರನ್ನು ಪಂಜಾಬ್‌ ಪೊಲೀಸರು ಬಂಧಿಸಿರುವುದು ಒಳ್ಳೆಯ ಬೆಳವಣಿಗೆ. ದೇಶದಲ್ಲಿ ಶಾಂತಿ ಕದಡುವವರಿಗೆ ಕಾನೂನಿನನ್ವಯ ಶಿಕ್ಷೆಯಾಗಬೇಕು. ಬೆಂಗಳೂರಿನ ಬಿಜೆಪಿ ಕಾರ್ಯಕರ್ತರಿಗೆ ಎಎಪಿ ಕಚೇರಿ ಮೇಲೆ ದಾಳಿ ಮಾಡಲು ಬಗ್ಗಾರವರ ಬಂಧನ ಒಂದು ನೆಪ ಅಷ್ಟೇ. ರಾಜ್ಯದಲ್ಲಿ ಎಎಪಿಗೆ ಜನಬೆಂಬಲ ಹೆಚ್ಚಾಗುತ್ತಿರುವುದರಿಂದ ಬಿಜೆಪಿ ಹತಾಶವಾಗಿರುವುದೇ ಈ ದಾಳಿಗೆ ಪ್ರಮುಖ ಕಾರಣ” ಎಂದು ಜಗದೀಶ್‌ ವಿ ಸದಂ ಹೇಳಿದ್ದಾರೆ.

“ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಎಎಪಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಮುಂದಾದರೂ ಪೊಲೀಸರು ತಡೆಯುತ್ತಾರೆ. ನಮ್ಮ ಮೆರವಣಿಗೆಯನ್ನು ಆರಂಭದಲ್ಲೇ ತಡೆದು ಬಂಧಿಸುತ್ತಾರೆ. ಆದರೆ ಬಿಜೆಪಿ ಕಾರ್ಯಕರ್ತರು ಎಎಪಿ ಕಚೇರಿಗೆ ಬಂದು ಗೂಂಡಾ ವರ್ತನೆ ತೋರಿದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ರಾಜ್ಯ ಗೃಹ ಸಚಿವಾಲಯವು ಈ ರೀತಿ ಪಕ್ಷಪಾತ ಮಾಡುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಪಾಯಕಾರಿ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ರಾಜ್ಯದ ಅತ್ಯಂತ ಭ್ರಷ್ಟ ಪಕ್ಷ ಹಾಗೂ ಗಲಭೆಪ್ರಿಯ ಪಕ್ಷವಾದ ಬಿಜೆಪಿಯ ಕಾರ್ಯಕರ್ತರ ಪ್ರತಿಭಟನೆಯಿಂದ ಆಮ್‌ ಆದ್ಮಿ ಪಾರ್ಟಿ ಕಚೇರಿ ಅಪವಿತ್ರಗೊಂಡಿತ್ತು. ಗೋಮೂತ್ರ ಸಿಂಪಡಿಸುವ ಮೂಲಕ ಕಚೇರಿಯನ್ನು ಶುದ್ಧೀಕರಣ ಮಾಡಲಾಗಿದೆ. ರಾಜ್ಯದ ಆಡಳಿತ ಕೂಡ ಬಿಜೆಪಿಯಿಂದ ಅಪವಿತ್ರಗೊಂಡಿದ್ದು, ಮುಂದಿನ ದಿನಗಳಲ್ಲಿ ಅಧಿಕಾರ ಸಿಕ್ಕೊಡನೆ ಆಡಳಿತವನ್ನೂ ಆಮ್‌ ಆದ್ಮಿ ಪಾರ್ಟಿಯು ಶುದ್ಧೀಕರಣ ಮಾಡಲಿದೆ” ಎಂದು ತಿಳಿಸಿದ್ದಾರೆ.

‘ಎಎಪಿ ಕೂಡ ಮೃದು ಹಿಂದುತ್ವ ರಾಜಕಾರಣ ಮಾಡುತ್ತದೆ’ ಎಂಬ ಆರೋಪ ಮೊದಲಿನಿಂದಲೂ ಇದೆ. ಗೋವಿನ ಮೂತ್ರವನ್ನು ತಂದು ಶುದ್ಧೀಕರಣ ಮಾಡುವುದು ಇದನ್ನೇ ಸೂಚ್ಯವಾಗಿ ಹೇಳುತ್ತದೆ. ಗೋವಿನ ಮೂತ್ರ ಬಳಸಿ ಶುದ್ಧೀಕರಣ ಮಾಡಿದ ಘಟನೆಗಳನ್ನು ಮೆಲುಕು ಹಾಕಿದರೆ ಒಂದು ರೀತಿಯ ಅಸ್ಪೃಶ್ಯತೆ ಆಚರಣೆಯ ಧೋರಣೆಯೂ ಇಲ್ಲಿ ಇಣುಕುತ್ತದೆ. ಬಲ ಪಂಥೀಯ ರಾಜಕಾರಣ ಹಾದಿಯಲ್ಲೇ ಎಎಪಿ ಸಾಗುತ್ತಿದೆ ಎಂದು ದೂರಲಾಗುತ್ತಿದೆ. ಈ ಪ್ರಶ್ನೆಯನ್ನಿಟ್ಟುಕೊಂಡು ಜಗದೀಶ್‌ ವಿ.ಸದಂ ಅವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿದಾಗ, “ಗೋವಿನ ಮೂತ್ರ ಬಳಸಿ ಶುದ್ಧೀಕರಣ ಮಾಡುವುದು ಮೊದಲಿನಿಂದಲೂ ನಮ್ಮಲ್ಲಿರುವ ಸಂಪ್ರದಾಯ. ಇದರಲ್ಲಿ ಎಡ ಪಂಥ- ಬಲ ಪಂಥ ಎಂಬುದಿಲ್ಲ. ನಮ್ಮ ಮನೆಗಳನ್ನು ತೊಳೆಯುವ ಗೋಮೂತ್ರವನ್ನೇ ಬಳಸಲಾಗುತ್ತದೆ. ಎಎಪಿಗೆ ಯಾವ ಪಂಥದ ಹಂಗೂ ಇಲ್ಲ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿರಿ: ಬಿಜೆಪಿಯ ಬುಲ್ಡೋಜರ್‌ ರಾಜಕೀಯದಿಂದ ಇಡೀ ದೆಹಲಿಯೇ ಧ್ವಂಸವಾಗಲಿದೆ: ಎಎಪಿ

“ಗೃಹಪ್ರವೇಶ ಮಾಡುವಾಗ ನಮ್ಮ ಮನೆಗಳಿಗೆ ಮೊದಲು ಗೋ ಮಾತೆಯನ್ನು ಕರೆದುಕೊಂಡು ಬರುತ್ತೇವೆ. ಯಾವುದನ್ನಾದರೂ ಶುದ್ಧೀಕರಣ ಮಾಡಬೇಕೆಂದರೂ ಗೋ ಮೂತ್ರವನ್ನು ಸಿಂಪಡಣೆ ಮಾಡುವುದು ಸಂಪ್ರದಾಯವಾಗಿದೆ. ಪೀಡೆಗಳು ತೊಲಗಲೆಂಬುದು ಇದರ ಉದ್ದೇಶ. ಪಂಥೀಯ ವಾದಗಳೆಲ್ಲ ಕೆಲಸಕ್ಕೆ ಬರುವುದಿಲ್ಲ. ಅವುಗಳಲ್ಲಿ ನಮಗೆ ನಂಬಿಕೆ ಇಲ್ಲ” ಎಂದರು.

“ಭ್ರಷ್ಟರೆಲ್ಲ, ನೈತಿಕತೆ ಇಲ್ಲದವರೆಲ್ಲ ನಮ್ಮ ಕಚೇರಿಗೆ ನುಗ್ಗಿದಾಗ ಶುದ್ಧೀಕರಣ ಮಾಡಲೇಬೇಕು. ನಾವು ಶುದ್ಧ ರಾಜಕಾರಣ ಮಾಡಲು ಬಂದಿದ್ದೇವೆ. ಹೀಗಾಗಿ ಗೋವಿನ ಮೂತ್ರ ತಂದು ಶುದ್ಧೀಕರಣ ಮಾಡಿದ್ದೇವೆ” ಎಂದು ಹೇಳಿದರು.

“ಎಎಪಿ ಮೃದು  ಹಿಂದುತ್ವ ರಾಜಕಾರಣ ಮಾಡುತ್ತಿದೆ” ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, “ಅದರಲ್ಲೇನು ತಪ್ಪಿಲ್ಲ ಅಲ್ಲವೇ? ಮೃದು ಹಿಂದುತ್ವ, ಕಠಿಣ ಹಿಂದುತ್ವ ಇಂಥವುಗಳ ಕುರಿತು ಅಷ್ಟಾಗಿ ಐಡಿಯಾಸ್‌ ಇಲ್ಲ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...