Homeಮುಖಪುಟಬೆಂಗಳೂರು: ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದ ನಂತರ ಗೋಮೂತ್ರ ಸಿಂಪಡಿಸಿ ಕಚೇರಿ ಶುದ್ಧೀಕರಿಸಿದ ಎಎಪಿ

ಬೆಂಗಳೂರು: ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದ ನಂತರ ಗೋಮೂತ್ರ ಸಿಂಪಡಿಸಿ ಕಚೇರಿ ಶುದ್ಧೀಕರಿಸಿದ ಎಎಪಿ

“ಎಎಪಿ ಮೃದು  ಹಿಂದುತ್ವ ರಾಜಕಾರಣ ಮಾಡುತ್ತಿದೆ” ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಎಎಪಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ, “ಅದರಲ್ಲೇನು ತಪ್ಪಿಲ್ಲ ಅಲ್ಲವೇ? ಮೃದು ಹಿಂದುತ್ವ, ಕಠಿಣ ಹಿಂದುತ್ವ ಕುರಿತು ಅಷ್ಟಾಗಿ ಐಡಿಯಾಸ್‌ ಇಲ್ಲ” ಎಂದರು.

- Advertisement -
- Advertisement -

ಬೆಂಗಳೂರು: ರಾಜ್ಯ ಆಮ್‌ ಆದ್ಮಿ ಪಾರ್ಟಿ (ಎಎಪಿ) ಕಚೇರಿ ಎದುರಿಗೆ ಪ್ರತಿಭಟನೆ ನೆಪದಲ್ಲಿ ಆಗಮಿಸಿದ ಬಿಜೆಪಿ ಕಾರ್ಯಕರ್ತರು ಗೂಂಡಾ ವರ್ತನೆ ತೋರಿದ್ದಾರೆ ಎಂದು ಆರೋಪಿಸಿರುವ ಎಎಪಿ, ಘಟನೆ ಬಳಿಕ ಗೋಮೂತ್ರ ಸಿಂಪಡಿಸಿ ಕಚೇರಿಯನ್ನು ಶುದ್ಧೀಕರಣಗೊಳಿಸಿದೆ.

ಮಾಧ್ಯಮಗಳ ಜೊತೆ ಮಾತನಾಡಿದ ಎಎಪಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ, “ಕಳೆದ ತಿಂಗಳು ಸಂಸದ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್‌ ನಿವಾಸದ ಮೇಲೆ ದಾಳಿ ಮಾಡಿದ ಮಾದರಿಯಲ್ಲೇ ಕರ್ನಾಟಕದ ಎಎಪಿ ಕಚೇರಿ ಮೇಲೂ ದಾಳಿ ಮಾಡಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದಾರೆ. ಕಚೇರಿ ಮುಂದಿದ್ದ ಬೈಕ್‌ಗಳನ್ನೆಲ್ಲ ಬೀಳಿಸಿದ್ದಲ್ಲದೇ, ಕಚೇರಿಯ ಒಳಗೆ ನುಗ್ಗಲು ಮುಂದಾಗಿದ್ದಾರೆ” ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪ್ರಚೋದನಾಕಾರಿ ಭಾಷಣ ಮಾಡಿ, ಕೋಮುಗಲಭೆ ಸೃಷ್ಟಿಸಲು ಯತ್ನಿಸಿದ ಬಿಜೆಪಿ ಮುಖಂಡ ತಜಿಂದರ್‌ ಪಾಲ್‌ ಬಗ್ಗಾರವರನ್ನು ಪಂಜಾಬ್‌ ಪೊಲೀಸರು ಬಂಧಿಸಿರುವುದು ಒಳ್ಳೆಯ ಬೆಳವಣಿಗೆ. ದೇಶದಲ್ಲಿ ಶಾಂತಿ ಕದಡುವವರಿಗೆ ಕಾನೂನಿನನ್ವಯ ಶಿಕ್ಷೆಯಾಗಬೇಕು. ಬೆಂಗಳೂರಿನ ಬಿಜೆಪಿ ಕಾರ್ಯಕರ್ತರಿಗೆ ಎಎಪಿ ಕಚೇರಿ ಮೇಲೆ ದಾಳಿ ಮಾಡಲು ಬಗ್ಗಾರವರ ಬಂಧನ ಒಂದು ನೆಪ ಅಷ್ಟೇ. ರಾಜ್ಯದಲ್ಲಿ ಎಎಪಿಗೆ ಜನಬೆಂಬಲ ಹೆಚ್ಚಾಗುತ್ತಿರುವುದರಿಂದ ಬಿಜೆಪಿ ಹತಾಶವಾಗಿರುವುದೇ ಈ ದಾಳಿಗೆ ಪ್ರಮುಖ ಕಾರಣ” ಎಂದು ಜಗದೀಶ್‌ ವಿ ಸದಂ ಹೇಳಿದ್ದಾರೆ.

“ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಎಎಪಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಮುಂದಾದರೂ ಪೊಲೀಸರು ತಡೆಯುತ್ತಾರೆ. ನಮ್ಮ ಮೆರವಣಿಗೆಯನ್ನು ಆರಂಭದಲ್ಲೇ ತಡೆದು ಬಂಧಿಸುತ್ತಾರೆ. ಆದರೆ ಬಿಜೆಪಿ ಕಾರ್ಯಕರ್ತರು ಎಎಪಿ ಕಚೇರಿಗೆ ಬಂದು ಗೂಂಡಾ ವರ್ತನೆ ತೋರಿದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ರಾಜ್ಯ ಗೃಹ ಸಚಿವಾಲಯವು ಈ ರೀತಿ ಪಕ್ಷಪಾತ ಮಾಡುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಪಾಯಕಾರಿ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ರಾಜ್ಯದ ಅತ್ಯಂತ ಭ್ರಷ್ಟ ಪಕ್ಷ ಹಾಗೂ ಗಲಭೆಪ್ರಿಯ ಪಕ್ಷವಾದ ಬಿಜೆಪಿಯ ಕಾರ್ಯಕರ್ತರ ಪ್ರತಿಭಟನೆಯಿಂದ ಆಮ್‌ ಆದ್ಮಿ ಪಾರ್ಟಿ ಕಚೇರಿ ಅಪವಿತ್ರಗೊಂಡಿತ್ತು. ಗೋಮೂತ್ರ ಸಿಂಪಡಿಸುವ ಮೂಲಕ ಕಚೇರಿಯನ್ನು ಶುದ್ಧೀಕರಣ ಮಾಡಲಾಗಿದೆ. ರಾಜ್ಯದ ಆಡಳಿತ ಕೂಡ ಬಿಜೆಪಿಯಿಂದ ಅಪವಿತ್ರಗೊಂಡಿದ್ದು, ಮುಂದಿನ ದಿನಗಳಲ್ಲಿ ಅಧಿಕಾರ ಸಿಕ್ಕೊಡನೆ ಆಡಳಿತವನ್ನೂ ಆಮ್‌ ಆದ್ಮಿ ಪಾರ್ಟಿಯು ಶುದ್ಧೀಕರಣ ಮಾಡಲಿದೆ” ಎಂದು ತಿಳಿಸಿದ್ದಾರೆ.

‘ಎಎಪಿ ಕೂಡ ಮೃದು ಹಿಂದುತ್ವ ರಾಜಕಾರಣ ಮಾಡುತ್ತದೆ’ ಎಂಬ ಆರೋಪ ಮೊದಲಿನಿಂದಲೂ ಇದೆ. ಗೋವಿನ ಮೂತ್ರವನ್ನು ತಂದು ಶುದ್ಧೀಕರಣ ಮಾಡುವುದು ಇದನ್ನೇ ಸೂಚ್ಯವಾಗಿ ಹೇಳುತ್ತದೆ. ಗೋವಿನ ಮೂತ್ರ ಬಳಸಿ ಶುದ್ಧೀಕರಣ ಮಾಡಿದ ಘಟನೆಗಳನ್ನು ಮೆಲುಕು ಹಾಕಿದರೆ ಒಂದು ರೀತಿಯ ಅಸ್ಪೃಶ್ಯತೆ ಆಚರಣೆಯ ಧೋರಣೆಯೂ ಇಲ್ಲಿ ಇಣುಕುತ್ತದೆ. ಬಲ ಪಂಥೀಯ ರಾಜಕಾರಣ ಹಾದಿಯಲ್ಲೇ ಎಎಪಿ ಸಾಗುತ್ತಿದೆ ಎಂದು ದೂರಲಾಗುತ್ತಿದೆ. ಈ ಪ್ರಶ್ನೆಯನ್ನಿಟ್ಟುಕೊಂಡು ಜಗದೀಶ್‌ ವಿ.ಸದಂ ಅವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿದಾಗ, “ಗೋವಿನ ಮೂತ್ರ ಬಳಸಿ ಶುದ್ಧೀಕರಣ ಮಾಡುವುದು ಮೊದಲಿನಿಂದಲೂ ನಮ್ಮಲ್ಲಿರುವ ಸಂಪ್ರದಾಯ. ಇದರಲ್ಲಿ ಎಡ ಪಂಥ- ಬಲ ಪಂಥ ಎಂಬುದಿಲ್ಲ. ನಮ್ಮ ಮನೆಗಳನ್ನು ತೊಳೆಯುವ ಗೋಮೂತ್ರವನ್ನೇ ಬಳಸಲಾಗುತ್ತದೆ. ಎಎಪಿಗೆ ಯಾವ ಪಂಥದ ಹಂಗೂ ಇಲ್ಲ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿರಿ: ಬಿಜೆಪಿಯ ಬುಲ್ಡೋಜರ್‌ ರಾಜಕೀಯದಿಂದ ಇಡೀ ದೆಹಲಿಯೇ ಧ್ವಂಸವಾಗಲಿದೆ: ಎಎಪಿ

“ಗೃಹಪ್ರವೇಶ ಮಾಡುವಾಗ ನಮ್ಮ ಮನೆಗಳಿಗೆ ಮೊದಲು ಗೋ ಮಾತೆಯನ್ನು ಕರೆದುಕೊಂಡು ಬರುತ್ತೇವೆ. ಯಾವುದನ್ನಾದರೂ ಶುದ್ಧೀಕರಣ ಮಾಡಬೇಕೆಂದರೂ ಗೋ ಮೂತ್ರವನ್ನು ಸಿಂಪಡಣೆ ಮಾಡುವುದು ಸಂಪ್ರದಾಯವಾಗಿದೆ. ಪೀಡೆಗಳು ತೊಲಗಲೆಂಬುದು ಇದರ ಉದ್ದೇಶ. ಪಂಥೀಯ ವಾದಗಳೆಲ್ಲ ಕೆಲಸಕ್ಕೆ ಬರುವುದಿಲ್ಲ. ಅವುಗಳಲ್ಲಿ ನಮಗೆ ನಂಬಿಕೆ ಇಲ್ಲ” ಎಂದರು.

“ಭ್ರಷ್ಟರೆಲ್ಲ, ನೈತಿಕತೆ ಇಲ್ಲದವರೆಲ್ಲ ನಮ್ಮ ಕಚೇರಿಗೆ ನುಗ್ಗಿದಾಗ ಶುದ್ಧೀಕರಣ ಮಾಡಲೇಬೇಕು. ನಾವು ಶುದ್ಧ ರಾಜಕಾರಣ ಮಾಡಲು ಬಂದಿದ್ದೇವೆ. ಹೀಗಾಗಿ ಗೋವಿನ ಮೂತ್ರ ತಂದು ಶುದ್ಧೀಕರಣ ಮಾಡಿದ್ದೇವೆ” ಎಂದು ಹೇಳಿದರು.

“ಎಎಪಿ ಮೃದು  ಹಿಂದುತ್ವ ರಾಜಕಾರಣ ಮಾಡುತ್ತಿದೆ” ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, “ಅದರಲ್ಲೇನು ತಪ್ಪಿಲ್ಲ ಅಲ್ಲವೇ? ಮೃದು ಹಿಂದುತ್ವ, ಕಠಿಣ ಹಿಂದುತ್ವ ಇಂಥವುಗಳ ಕುರಿತು ಅಷ್ಟಾಗಿ ಐಡಿಯಾಸ್‌ ಇಲ್ಲ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...