Homeಕರ್ನಾಟಕಬೆಂಗಳೂರು: ಹೈಕೋರ್ಟ್‌‌ ಆದೇಶದ ನಂತರ ತನ್ನ ಕನಿಷ್ಠ ಆಟೋ ದರವನ್ನು ರೂ. 35 ಕ್ಕೆ ಇಳಿಸಿದ...

ಬೆಂಗಳೂರು: ಹೈಕೋರ್ಟ್‌‌ ಆದೇಶದ ನಂತರ ತನ್ನ ಕನಿಷ್ಠ ಆಟೋ ದರವನ್ನು ರೂ. 35 ಕ್ಕೆ ಇಳಿಸಿದ ಉಬರ್‌‌

- Advertisement -
- Advertisement -

ಹೈಕೋರ್ಟ್‌ ಆದೇಶದ ನಂತರ ಶನಿವಾರ ಆ್ಯಪ್ ಆಧಾರಿತ ಅಗ್ರಿಗೇಟರ್ ಉಬರ್‌ ಬೆಂಗಳೂರಿನಲ್ಲಿ ತನ್ನ ಕನಿಷ್ಠ ಆಟೋ ದರವನ್ನು ರೂ. 35 ಕ್ಕೆ ಇಳಿಸಿದೆ. ಸರ್ಕಾರ ನಿಗದಿಪಡಿಸಿದ ಮೂಲ ದರಗಳು ಮತ್ತು ಅನ್ವಯವಾಗುವ ಜಿಎಸ್‌ಟಿಗಿಂತ 10% ಹೆಚ್ಚು ಶುಲ್ಕ ವಿಧಿಸುವ ಮೂಲಕ ಆಟೋ ರಿಕ್ಷಾಗಳನ್ನು ಚಲಾಯಿಸಲು ಕರ್ನಾಟಕ ಹೈಕೋರ್ಟ್ ಅಗ್ರಿಗೇಟರ್‌ಗಳಿಗೆ ಹೈಕೋರ್ಟ್‌‌ ಅನುಮತಿ ನೀಡಿತ್ತು.

“ಆಟೋ ಚಾಲಕರು ಅಗ್ರಿಗೇಟರ್ ಪ್ಲಾಟ್‌ಫಾರ್ಮ್‌ಗಳನ್ನು ಬಳಸಿಕೊಂಡು ಕಾರ್ಯನಿರ್ವಹಿಸುವ ಹಕ್ಕನ್ನು ಹೊಂದಿದ್ದಾರೆಂದು ಗುರುತಿಸುವ ನ್ಯಾಯಾಲಯದ ಆದೇಶವನ್ನು ನಾವು ಸ್ವಾಗತಿಸುತ್ತೇವೆ. ಅವರ ವೆಚ್ಚವನ್ನು ಭರಿಸಲು ಮತ್ತು ಅವರ ಸೇವೆಗಳನ್ನು ಒದಗಿಸುವುದನ್ನು ಮುಂದುವರಿಸಲು ಅನುವು ಮಾಡುವ ಉಬರ್‌‌ನಂತಹ ಪ್ಲಾಟ್‌ಫಾರ್ಮ್‌ಗಳು ಬುಕಿಂಗ್ ಶುಲ್ಕವನ್ನು ವಿಧಿಸಬಹುದು ಎಂಬುದನ್ನು ಕೂಡಾ ಅದು ಹೇಳಿದೆ” ಎಂದು ಹೈಕೋರ್ಟ್ ಆದೇಶಕ್ಕೆ ಪ್ರತಿಕ್ರಿಯಿಸಿ ಉಬರ್ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರಿನಲ್ಲಿ ಓಲಾ-ಉಬರ್‌ಗೆ ಸಾರಿಗೆ ಇಲಾಖೆ ನಿಷೇಧಿಸಿ ಹೊರಡಿದ್ದ ಆದೇಶಕ್ಕೆ ರಾಜ್ಯ ಹೈಕೋರ್ಟ್‌ ಶುಕ್ರವಾರ ಮಧ್ಯಂತರ ತಡೆ ನೀಡಿ ಆದೇಶಿಸಿದೆ. ಸರ್ಕಾರ ಯಾವುದೇ ಬಲವಂತದ ಕ್ರಮಕೈಗೊಳ್ಳದಂತೆ ಅದು ಹೇಳಿದ್ದು, ಓಲಾ-ಉಬರ್‌ ಕಂಪೆನಿಗಳು ಕೂಡಾ ಅನುಕೂಲಕರ ದರವನ್ನು ವಿಧಿಸಬೇಕು ಎಂದು ಹೇಳಿದೆ.

ಇದನ್ನೂ ಓದಿ: ಬೆಂಗಳೂರು: ಓಲಾ-ಉಬರ್‌‌ ನಿಷೇಧಕ್ಕೆ ಮಧ್ಯಂತರ ತಡೆ; ಸರ್ಕಾರದ ಆದೇಶಕ್ಕೆ ಹಿನ್ನಡೆ

2 ಕಿಲೋಮೀಟರ್‌ಗಿಂತ ಕಡಿಮೆ ದೂರಕ್ಕೂ 100 ರೂ. ಶುಲ್ಕ ವಿಧಿಸುತ್ತಿದೆ ಎಂದು ಆರೋಪಿಸಿ ಸಾರಿಗೆ ಇಲಾಖೆಯು ಓಲಾ, ಉಬರ್ ಮತ್ತು ರಾಪಿಡೋ ಆಟೋ ಸೇವೆಗಳನ್ನು ನಿಲ್ಲಿಸುವಂತೆ ಸೆಪ್ಟೆಂಬರ್‌ 6 ರಂದು ನೋಟಿಸ್ ಜಾರಿ ಮಾಡಿತ್ತು.

ಪ್ರಸ್ತುತ, ಬೆಂಗಳೂರಿನಲ್ಲಿ ಮೊದಲ 2 ಕಿ.ಮೀಗೆ ಕನಿಷ್ಠ ಆಟೋ ದರವನ್ನು 30 ರೂ.ಗೆ ನಿಗದಿಪಡಿಸಲಾಗಿದೆ. ನಂತರ ಪ್ರತಿ ಕಿಲೋಮೀಟರ್‌ಗೆ 15 ರೂ. ಶುಲ್ಕ ವಿಧಿಸಲಾಗುತ್ತದೆ.

ಸರ್ಕಾರ ಹೊರಡಿಸಿದ್ದ ಆದೇಶದಲ್ಲಿ, “ಈ ಕಂಪನಿಗಳು ತಮ್ಮ ಆಟೋ ಸೇವೆಗಳನ್ನು ಆದಷ್ಟು ಬೇಗನೆ ನಿಲ್ಲಿಸಬೇಕು ಮತ್ತು ಟ್ಯಾಕ್ಸಿಗಳಲ್ಲಿ ಪ್ರಯಾಣಿಕರಿಗೆ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಶುಲ್ಕವನ್ನು ವಿಧಿಸಬಾರದು. ಆದೇಶವನ್ನು ಅನುಸರಿಸಲು ವಿಫಲವಾದರೆ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ಎಚ್ಚರಿಕೆ ನೀಡಿತ್ತು.

ಇಂದು ನೀಡಿದ ಮಧ್ಯಂತರ ಆದೇಶದಲ್ಲಿ, ಈ ಹಿಂದೆ ನೀಡಿದ್ದ ಪರವಾನಿಗೆ ಕಾಲಾವಕಾಶ ವಿಸ್ತರಿಸುವಂತೆ ಕೇಳಿಕೊಂಡಿದ್ದು, 2021 ರ ಸಾರಿಗೆ ಇಲಾಖೆ ನಿಗದಿ ಪಡಿಸಿದ ದರವನ್ನು ಪಾಲಿಸಬೇಕು ಎಂದು ಹೇಳಿದೆ. ಸಾರಿಗೆ ಇಲಾಖೆ ಹೊರಡಿಸಿದ ಆದೇಶ ಪಾಲನೆ ಮಾಡಬೇಕು ಮತ್ತು ಹೆಚ್ಚುವರಿ ಸರ್ವಿಸ್ ಚಾರ್ಜ್ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಬೇಕು ಎಂದು ಹೇಳಿದೆ.

ಇದನ್ನೂ ಓದಿ: ಹಿಂದೆ 600 ಕೋಟಿ ಡಾಲರ್ ಬಜೆಟ್‌ ಮಂಡಿಸಿದ್ದ ಅಫ್ಘಾನ್‌ ಸಚಿವ, ಈಗ ಅಮೆರಿಕಾದಲ್ಲಿ ‘ಉಬರ್‌’ ಡ್ರೈವರ್‌‌!

ಪ್ರಕರಣದ ಕುರಿತು 15 ದಿನ ಒಳಗೆ ವರದಿ ವರದಿ ಸಲ್ಲಿಸುವಂತೆ ಹೈಕೋರ್ಟ್‌ ಸರ್ಕಾರಕ್ಕೆ ಸೂಚನೆ ನೀಡಿದ್ದು, ಮುಂದಿನ ವಿಚಾರಣೆಯನ್ನು ನವೆಂಬರ್ 07 ವಿಚಾರಣೆ ಮುಂದೂಡಿಕೆ. ವಿಚಾರಣೆ ವೇಳೆ ಸರ್ಕಾರ ನಿಗಧಿ ಮಾಡಿದ ಬೆಲೆಗಿಂತ 20% ಮತ್ತು ಜಿಎಸ್‌ಟಿಗೆ ಓಲಾ-ಉಬರ್ ಪರ ವಕೀಲರು ಮನವಿ ಮಾಡಿದ್ದಾರೆ. ಸರ್ಕಾರದ ಆದೇಶಕ್ಕೆ ಆಟೋ ಚಾಲಕರು ಅಕ್ಷೇಪಣೆ ಮಾಡಿದ ಹಿನ್ನೆಲೆಯಲ್ಲಿ, ಮುಂದಿನ ಸಭೆಗೆ ಆಟೋ ಚಾಲಕರು, ಯೂನಿಯನ್‌ಗಳು ಹಾಗೂ ಸಾರ್ವಜನಿಕರನ್ನು ಕರೆಯಬೇಕು ಎಂದು ನ್ಯಾಯಾಲಯ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....