Homeಕರ್ನಾಟಕಬೆಂಗಳೂರು: ಹೈಕೋರ್ಟ್‌‌ ಆದೇಶದ ನಂತರ ತನ್ನ ಕನಿಷ್ಠ ಆಟೋ ದರವನ್ನು ರೂ. 35 ಕ್ಕೆ ಇಳಿಸಿದ...

ಬೆಂಗಳೂರು: ಹೈಕೋರ್ಟ್‌‌ ಆದೇಶದ ನಂತರ ತನ್ನ ಕನಿಷ್ಠ ಆಟೋ ದರವನ್ನು ರೂ. 35 ಕ್ಕೆ ಇಳಿಸಿದ ಉಬರ್‌‌

- Advertisement -
- Advertisement -

ಹೈಕೋರ್ಟ್‌ ಆದೇಶದ ನಂತರ ಶನಿವಾರ ಆ್ಯಪ್ ಆಧಾರಿತ ಅಗ್ರಿಗೇಟರ್ ಉಬರ್‌ ಬೆಂಗಳೂರಿನಲ್ಲಿ ತನ್ನ ಕನಿಷ್ಠ ಆಟೋ ದರವನ್ನು ರೂ. 35 ಕ್ಕೆ ಇಳಿಸಿದೆ. ಸರ್ಕಾರ ನಿಗದಿಪಡಿಸಿದ ಮೂಲ ದರಗಳು ಮತ್ತು ಅನ್ವಯವಾಗುವ ಜಿಎಸ್‌ಟಿಗಿಂತ 10% ಹೆಚ್ಚು ಶುಲ್ಕ ವಿಧಿಸುವ ಮೂಲಕ ಆಟೋ ರಿಕ್ಷಾಗಳನ್ನು ಚಲಾಯಿಸಲು ಕರ್ನಾಟಕ ಹೈಕೋರ್ಟ್ ಅಗ್ರಿಗೇಟರ್‌ಗಳಿಗೆ ಹೈಕೋರ್ಟ್‌‌ ಅನುಮತಿ ನೀಡಿತ್ತು.

“ಆಟೋ ಚಾಲಕರು ಅಗ್ರಿಗೇಟರ್ ಪ್ಲಾಟ್‌ಫಾರ್ಮ್‌ಗಳನ್ನು ಬಳಸಿಕೊಂಡು ಕಾರ್ಯನಿರ್ವಹಿಸುವ ಹಕ್ಕನ್ನು ಹೊಂದಿದ್ದಾರೆಂದು ಗುರುತಿಸುವ ನ್ಯಾಯಾಲಯದ ಆದೇಶವನ್ನು ನಾವು ಸ್ವಾಗತಿಸುತ್ತೇವೆ. ಅವರ ವೆಚ್ಚವನ್ನು ಭರಿಸಲು ಮತ್ತು ಅವರ ಸೇವೆಗಳನ್ನು ಒದಗಿಸುವುದನ್ನು ಮುಂದುವರಿಸಲು ಅನುವು ಮಾಡುವ ಉಬರ್‌‌ನಂತಹ ಪ್ಲಾಟ್‌ಫಾರ್ಮ್‌ಗಳು ಬುಕಿಂಗ್ ಶುಲ್ಕವನ್ನು ವಿಧಿಸಬಹುದು ಎಂಬುದನ್ನು ಕೂಡಾ ಅದು ಹೇಳಿದೆ” ಎಂದು ಹೈಕೋರ್ಟ್ ಆದೇಶಕ್ಕೆ ಪ್ರತಿಕ್ರಿಯಿಸಿ ಉಬರ್ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರಿನಲ್ಲಿ ಓಲಾ-ಉಬರ್‌ಗೆ ಸಾರಿಗೆ ಇಲಾಖೆ ನಿಷೇಧಿಸಿ ಹೊರಡಿದ್ದ ಆದೇಶಕ್ಕೆ ರಾಜ್ಯ ಹೈಕೋರ್ಟ್‌ ಶುಕ್ರವಾರ ಮಧ್ಯಂತರ ತಡೆ ನೀಡಿ ಆದೇಶಿಸಿದೆ. ಸರ್ಕಾರ ಯಾವುದೇ ಬಲವಂತದ ಕ್ರಮಕೈಗೊಳ್ಳದಂತೆ ಅದು ಹೇಳಿದ್ದು, ಓಲಾ-ಉಬರ್‌ ಕಂಪೆನಿಗಳು ಕೂಡಾ ಅನುಕೂಲಕರ ದರವನ್ನು ವಿಧಿಸಬೇಕು ಎಂದು ಹೇಳಿದೆ.

ಇದನ್ನೂ ಓದಿ: ಬೆಂಗಳೂರು: ಓಲಾ-ಉಬರ್‌‌ ನಿಷೇಧಕ್ಕೆ ಮಧ್ಯಂತರ ತಡೆ; ಸರ್ಕಾರದ ಆದೇಶಕ್ಕೆ ಹಿನ್ನಡೆ

2 ಕಿಲೋಮೀಟರ್‌ಗಿಂತ ಕಡಿಮೆ ದೂರಕ್ಕೂ 100 ರೂ. ಶುಲ್ಕ ವಿಧಿಸುತ್ತಿದೆ ಎಂದು ಆರೋಪಿಸಿ ಸಾರಿಗೆ ಇಲಾಖೆಯು ಓಲಾ, ಉಬರ್ ಮತ್ತು ರಾಪಿಡೋ ಆಟೋ ಸೇವೆಗಳನ್ನು ನಿಲ್ಲಿಸುವಂತೆ ಸೆಪ್ಟೆಂಬರ್‌ 6 ರಂದು ನೋಟಿಸ್ ಜಾರಿ ಮಾಡಿತ್ತು.

ಪ್ರಸ್ತುತ, ಬೆಂಗಳೂರಿನಲ್ಲಿ ಮೊದಲ 2 ಕಿ.ಮೀಗೆ ಕನಿಷ್ಠ ಆಟೋ ದರವನ್ನು 30 ರೂ.ಗೆ ನಿಗದಿಪಡಿಸಲಾಗಿದೆ. ನಂತರ ಪ್ರತಿ ಕಿಲೋಮೀಟರ್‌ಗೆ 15 ರೂ. ಶುಲ್ಕ ವಿಧಿಸಲಾಗುತ್ತದೆ.

ಸರ್ಕಾರ ಹೊರಡಿಸಿದ್ದ ಆದೇಶದಲ್ಲಿ, “ಈ ಕಂಪನಿಗಳು ತಮ್ಮ ಆಟೋ ಸೇವೆಗಳನ್ನು ಆದಷ್ಟು ಬೇಗನೆ ನಿಲ್ಲಿಸಬೇಕು ಮತ್ತು ಟ್ಯಾಕ್ಸಿಗಳಲ್ಲಿ ಪ್ರಯಾಣಿಕರಿಗೆ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಶುಲ್ಕವನ್ನು ವಿಧಿಸಬಾರದು. ಆದೇಶವನ್ನು ಅನುಸರಿಸಲು ವಿಫಲವಾದರೆ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ಎಚ್ಚರಿಕೆ ನೀಡಿತ್ತು.

ಇಂದು ನೀಡಿದ ಮಧ್ಯಂತರ ಆದೇಶದಲ್ಲಿ, ಈ ಹಿಂದೆ ನೀಡಿದ್ದ ಪರವಾನಿಗೆ ಕಾಲಾವಕಾಶ ವಿಸ್ತರಿಸುವಂತೆ ಕೇಳಿಕೊಂಡಿದ್ದು, 2021 ರ ಸಾರಿಗೆ ಇಲಾಖೆ ನಿಗದಿ ಪಡಿಸಿದ ದರವನ್ನು ಪಾಲಿಸಬೇಕು ಎಂದು ಹೇಳಿದೆ. ಸಾರಿಗೆ ಇಲಾಖೆ ಹೊರಡಿಸಿದ ಆದೇಶ ಪಾಲನೆ ಮಾಡಬೇಕು ಮತ್ತು ಹೆಚ್ಚುವರಿ ಸರ್ವಿಸ್ ಚಾರ್ಜ್ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಬೇಕು ಎಂದು ಹೇಳಿದೆ.

ಇದನ್ನೂ ಓದಿ: ಹಿಂದೆ 600 ಕೋಟಿ ಡಾಲರ್ ಬಜೆಟ್‌ ಮಂಡಿಸಿದ್ದ ಅಫ್ಘಾನ್‌ ಸಚಿವ, ಈಗ ಅಮೆರಿಕಾದಲ್ಲಿ ‘ಉಬರ್‌’ ಡ್ರೈವರ್‌‌!

ಪ್ರಕರಣದ ಕುರಿತು 15 ದಿನ ಒಳಗೆ ವರದಿ ವರದಿ ಸಲ್ಲಿಸುವಂತೆ ಹೈಕೋರ್ಟ್‌ ಸರ್ಕಾರಕ್ಕೆ ಸೂಚನೆ ನೀಡಿದ್ದು, ಮುಂದಿನ ವಿಚಾರಣೆಯನ್ನು ನವೆಂಬರ್ 07 ವಿಚಾರಣೆ ಮುಂದೂಡಿಕೆ. ವಿಚಾರಣೆ ವೇಳೆ ಸರ್ಕಾರ ನಿಗಧಿ ಮಾಡಿದ ಬೆಲೆಗಿಂತ 20% ಮತ್ತು ಜಿಎಸ್‌ಟಿಗೆ ಓಲಾ-ಉಬರ್ ಪರ ವಕೀಲರು ಮನವಿ ಮಾಡಿದ್ದಾರೆ. ಸರ್ಕಾರದ ಆದೇಶಕ್ಕೆ ಆಟೋ ಚಾಲಕರು ಅಕ್ಷೇಪಣೆ ಮಾಡಿದ ಹಿನ್ನೆಲೆಯಲ್ಲಿ, ಮುಂದಿನ ಸಭೆಗೆ ಆಟೋ ಚಾಲಕರು, ಯೂನಿಯನ್‌ಗಳು ಹಾಗೂ ಸಾರ್ವಜನಿಕರನ್ನು ಕರೆಯಬೇಕು ಎಂದು ನ್ಯಾಯಾಲಯ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...