Homeಕರ್ನಾಟಕಅನ್ಯಧರ್ಮೀಯ ಯುವತಿಯನ್ನು ಡ್ರಾಪ್ ಮಾಡುತ್ತಿದ್ದ ಯುವಕನ ಮೇಲೆ ಹಲ್ಲೆ: ಆರೋಪಿಗಳ ಬಂಧನ

ಅನ್ಯಧರ್ಮೀಯ ಯುವತಿಯನ್ನು ಡ್ರಾಪ್ ಮಾಡುತ್ತಿದ್ದ ಯುವಕನ ಮೇಲೆ ಹಲ್ಲೆ: ಆರೋಪಿಗಳ ಬಂಧನ

ಕೆಲವು ಮುಸ್ಲಿಂ ಸಮುದಾಯದ ವ್ಯಕ್ತಿಗಳು ಗಾಡಿಗೆ ಅಡ್ಡಗಟ್ಟಿ ನೈತಿಕ ಪೊಲೀಸ್‌ಗಿರಿ ನಡೆಸಿ, ಗಲಾಟೆ ನಡೆಸಿರುವ ವಿಡಿಯೋ ವೈರಲ್ ಆಗಿತ್ತು.

- Advertisement -
- Advertisement -

ಬೆಂಗಳೂರಿನಲ್ಲಿ ತನ್ನ ಸಹೋದ್ಯೋಗಿ ಮುಸ್ಲಿಂ ಯುವತಿಯನ್ನು ಬೈಕ್‌ನಲ್ಲಿ ಮನೆಗೆ ಡ್ರಾಪ್ ಮಾಡುತ್ತಿದ್ದ ಹಿಂದೂ ಯುವಕನ ಮೇಲೆ ಹಲ್ಲೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬೆಂಗಳೂರು ಪೊಲೀಸರು ತಕ್ಷಣ ಬಂಧಿಸಿದ್ದಾರೆ.

ಆರೋಪಿಗಳನ್ನು ಸುದ್ದುಗುಂಟೆಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಹೊಸೂರು ರಸ್ತೆಯ ಡೇರಿ ವೃತ್ತದ ಬಳಿ ಶನಿವಾರ ರಾತ್ರಿ ನಡೆದಿದ್ದ ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಟೈಮ್ಸ್ ನೌ ವರದಿಗಾರ ಇಮ್ರಾನ್ ಖಾನ್ ತಮ್ಮ ವಾಲ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದರು.

ತನ್ನ ಸಹೋದ್ಯೋಗಿ ಯುವತಿಯನ್ನು ಮನೆಗೆ ಡ್ರಾಪ್ ಮಾಡಲು ತೆರಳುತ್ತಿದ್ದ ವೇಳೆ, ಕೆಲವು ಮುಸ್ಲಿಂ ಸಮುದಾಯದ ವ್ಯಕ್ತಿಗಳು ಗಾಡಿಗೆ ಅಡ್ಡಗಟ್ಟಿ ನೈತಿಕ ಪೊಲೀಸ್‌ಗಿರಿ ನಡೆಸಿ, ಗಲಾಟೆ ನಡೆಸಿದ್ದರು. ಅನ್ಯಧರ್ಮದ ಯುವಕನ ಜೊತೆಗೆ ತೆರಳುತ್ತಿದ್ದಕ್ಕಾಗಿ ಯುವತಿಯನ್ನು ನಿಂದಿಸಿದ್ದರು. ಆ ಸಂದರ್ಭದಲ್ಲಿ ಯುವತಿ ತನ್ನ ಗಂಡನ ದೂರವಾಣಿ ಸಂಖ್ಯೆ ನೀಡಿದ್ದರು. ಬೇರೆ ಯುವಕನ ಜೊತೆಗೆ ಹೆಂಡತಿಯನ್ನು ಕಳುಹಿಸಿದಕ್ಕಾಗಿ ಯುವತಿಯ ಪತಿಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಿದ್ದರು.

ಇದನ್ನೂ ಓದಿ: ಗುಬ್ಬಿ: ದಲಿತ ಕುಟುಂಬದ ಗುಡಿಸಲಿಗೆ ಬೆಂಕಿ ಹಚ್ಚಿದ ಸವರ್ಣಿಯರು

ಯುವತಿಯನ್ನು ನಿಂದಿಸಿ, ಬೈಕ್‌ನಿಂದ ಇಳಿಸಿ ಆಟೋಗೆ ಹತ್ತಿಸಿ ಕಳುಹಿಸಿದ್ದರು. ಯುವಕನ ಮೇಲೆ ಹಲ್ಲೆ ನಡೆಸಿದ್ದರು. ಮತ್ತೊಮ್ಮೆ ಮುಸ್ಲಿಂ ಯುವತಿಯರನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಹೋಗದಂತೆ ಎಚ್ಚರಿಕೆ ನೀಡಿದ್ದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ವಿಡಿಯೋ ಆಧರಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ಅನ್ಯ ಧರ್ಮದ ಯುವತಿ ಜೊತೆ ಪ್ರಯಾಣ ಮಾಡುತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬೆಂಗಳೂರು ಪೊಲೀಸರು ತಕ್ಷಣ ಬಂಧಿಸಿದ್ದಾರೆ. ಇಂತಹ ಘಟನೆಯನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತದೆ” ಎಂದಿದ್ದಾರೆ.

 

ಮಹಿಳೆಯೊಂದಿಗೆ ಪ್ರಯಾಣಿಸುತ್ತಿದ್ದ ಬೈಕ್ ಸವಾರನ ಮೇಲೆ ಹಲ್ಲೆ ಮಾಡಿ, ಅನುಚಿತವಾಗಿ ವರ್ತಿಸಿದ ಇಬ್ಬರು ಆರೋಪಿಗಳನ್ನು ಬೆಂಗಳೂರು ಸಿಟಿ ಪೊಲೀಸ್ ತಕ್ಷಣವೇ ಕಾರ್ಯಪ್ರವೃತ್ತರಾಗಿ ಪತ್ತೆಹಚ್ಚಿ ವಶಕ್ಕೆ ಪಡೆದಿದ್ದು, ಪ್ರಕರಣವನ್ನು ದಾಖಲಿಸಲಾಗಿದೆ. ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್‌ ತಿಳಿಸಿದ್ದಾರೆ.


ಇದನ್ನೂ ಓದಿ: ಮೈಸೂರು – ಮುಸ್ಲಿಂ ಪತ್ರಕರ್ತನಿಗೆ ಥಳಿಸಿದ ಹಿಂದೂ ಜಾಗರಣೆ ವೇದಿಕೆಯ ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...