Homeಕರ್ನಾಟಕಕೊಲೆ ಯತ್ನ ಪ್ರಕರಣ: ವಕೀಲ ಜಗದೀಶ್‌ಗೆ ಜಾಮೀನು, ಇನ್ನೊಂದು ಪ್ರಕರಣದ ವಿಚಾರಣೆ ಮಾ.7ಕ್ಕೆ

ಕೊಲೆ ಯತ್ನ ಪ್ರಕರಣ: ವಕೀಲ ಜಗದೀಶ್‌ಗೆ ಜಾಮೀನು, ಇನ್ನೊಂದು ಪ್ರಕರಣದ ವಿಚಾರಣೆ ಮಾ.7ಕ್ಕೆ

- Advertisement -
- Advertisement -

ಕೊಲೆ ಯತ್ನ ಪ್ರಕರಣ ದಾಖಲಾಗಿ ನ್ಯಾಯಾಂಗ ಬಂಧನದಲ್ಲಿರುವ ವಕೀಲ ಕೆ.ಎಂ. ಜಗದೀಶ್‌ಗೆ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ಈಚೆಗೆ ನಡೆದ ಗಲಭೆ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿತ್ತು.

ನ್ಯಾಯಾಧೀಶರಾದ ಕಾಶಿಂ ಚೂರಿಖಾನ್‌ ಜಾಮೀನು ಮಂಜೂರು ಮಾಡಿದ್ದಾರೆ. ಆದರೆ, ಜಾತಿ ನಿಂದನೆ ಮತ್ತು ಪೊಲೀಸ್‌ ಸಿಬ್ಬಂದಿಗೆ ಬೆದರಿಕೆ ಹಾಕಿರುವ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಜಾಮೀನು ಸಿಕ್ಕಿಲ್ಲವಾದ್ದರಿಂದ ಅವರು ಸದ್ಯಕ್ಕೆ ಜೈಲಿನಿಂದ ಹೊರಬರುವ ಅವಕಾಶವಿಲ್ಲ ಎಂದು ಬಾರ್‌ ಅಂಡ್ ಬೆಂಚ್ ವರದಿ ಮಾಡಿದೆ.

ವಕೀಲರಾದ ಕೆ.ಎನ್.ಜಗದೀಶ್‌ ವಕೀಲರನ್ನು ಅವ್ಯಾಚ್ಯ ಪದಗಳಿಂದ ನಿಂದಿಸಿ ವೃತ್ತಿಗೆ ಚ್ಯುತಿ ತಂದಿದ್ದಾರೆ. ನ್ಯಾಯಾಲಯ ಆವರಣದಲ್ಲಿ ಅಶಾಂತಿ ಉಂಟು ಮಾಡಿದ್ದಾರೆ, ಕೊಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ವಕೀಲರ ಸಂಘದ ಪ್ರತಿನಿಧಿಗಳು ನೀಡಿದ್ದ ದೂರಿನ ಮೇಲೆ ಜಗದೀಶ್ ಅವರನ್ನು ಹಲಸೂರು ಗೇಟ್‌‌ ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ: ಟಾಯ್ಲೆಟ್‌ ಕ್ಲೀನ್‌ ಮಾಡಿದ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತೇವೆ ಎಂದ ರಾಯಭಾರಿ ಕಚೇರಿ: ಆರೋಪ

50 ಸಾವಿರ ರೂಪಾಯಿ ಮೊತ್ತದ ಬಾಂಡ್, ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯದ ಹಾಜರಾಗಬೇಕು. ಪ್ರಾಸಿಕ್ಯೂಷನ್‌ ಸಾಕ್ಷಿಗಳ ಮೇಲೆ ಪ್ರಭಾವ ಬೀರುವಂತಿಲ್ಲ. ಸಾಕ್ಷಿಗಳಿಗೆ ತಮ್ಮ ಫೇಸ್‌ಬುಕ್‌ ಖಾತೆ ಮೂಲಕ ಬೆದರಿಕೆ ಒಡ್ಡಬಾರದು, ಇಂಥದ್ದೇ ಅಪರಾಧಗಳನ್ನು ಮತ್ತೆ ಎಸಗಬಾರದು ಎಂಬ ಷರತ್ತುಗಳನ್ನು ವಿಧಿಸಿದೆ.

ಇನ್ನು, ಕೊಡಿಗೇಹಳ್ಳಿ ಠಾಣೆಯಲ್ಲಿ ದಾಖಲಾಗಿರುವ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಗದೀಶ್‌ ಅವರ ಜಾಮೀನು ಮನವಿಯ ವಿಚಾರಣೆ ನಡೆಸಿದ ಪೀಠವು ಆದೇಶವನ್ನು ಮಾರ್ಚ್‌ 7ಕ್ಕೆ ಕಾಯ್ದಿರಿಸಿದೆ. ಹೀಗಾಗಿ ಅವರು ಇನ್ನು ಬಂಧನದಲ್ಲೇ ಇರಬೇಕಾಗಿದೆ.

ಕೊಲೆ ಯತ್ನ ಪ್ರಕರಣದಲ್ಲಿ ಸಹ ಆರೋಪಿಗಳಾಗಿರುವ ಶರತ್‌ ಖದ್ರಿ, ಪ್ರಶಾಂತಿ ಸುಭಾಷ್‌ ಮತ್ತು ಜಗದೀಶ್‌ ಪುತ್ರ ಆರ್ಯಗೌಡ ಅವರಿಗೆ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.


ಇದನ್ನೂ ಓದಿ: ಲಾಯರ್‌ ಜಗದೀಶ್ ವಿಚಾರದಲ್ಲಿ ವಕೀಲರ ಸಂಘದ ನಡೆ ಸ್ವೀಕಾರಾರ್ಹವೇ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...