Homeಕರ್ನಾಟಕಬೆಂಗಳೂರು | ಹಲ್ಲೆಯ ಸುಳ್ಳು ಕಥೆ ಕಟ್ಟಿದ ವಿಂಗ್ ಕಮಾಂಡರ್ ಮೇಲೆ ಕೊಲೆ ಯತ್ನ ಕೇಸ್

ಬೆಂಗಳೂರು | ಹಲ್ಲೆಯ ಸುಳ್ಳು ಕಥೆ ಕಟ್ಟಿದ ವಿಂಗ್ ಕಮಾಂಡರ್ ಮೇಲೆ ಕೊಲೆ ಯತ್ನ ಕೇಸ್

- Advertisement -
- Advertisement -

ಸಾಫ್ಟ್‌ವೇರ್‌ ಉದ್ಯೋಗಿಗೆ ಹಲ್ಲೆ ನಡೆಸಿ ತನ್ನ ಮೇಲೆಯೇ ಹಲ್ಲೆಯಾಗಿದೆ ಎಂದು ಸುಳ್ಳು ಆರೋಪ ಮಾಡಿದ್ದ ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಅವರ ವಿರುದ್ದ ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.

ಭಾರತೀಯ ನ್ಯಾಯ ಸಂಹಿತೆ (ಬಿಎಸ್‌ಎಸ್‌) ಸೆಕ್ಷನ್‌ 109 (ಕೊಲೆಯತ್ನ), 115(2) (ಮಾರಣಾಂತಿಕ ಹಲ್ಲೆ), 304 (ಬಲವಂತವಾಗಿ ಮೈ ಮೇಲೆ ಇರುವ ವಸ್ತು ಕಿತ್ತುಕೊಳ್ಳುವುದು), 324 (ಅರಿವಿಗೆ ಇದ್ದರೂ ವಸ್ತುಗಳನ್ನು ಉದ್ದೇಶಪೂರ್ವಕವಾಗಿ ಹಾಳು ಮಾಡುವುದು), 352 (ಶಾಂತಿಭಂಗ) ರ ಅಡಿ ಶಿಲಾದಿತ್ಯ ಬೋಸ್ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗಿದೆ ಎಂದು ವರದಿಗಳು ಹೇಳಿವೆ.

ಶಿಲಾದಿತ್ಯ ಬೋಸ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ, ಅವರ ಪತ್ನಿ ಮಧುಮಿತಾ ದತ್ತ ಅವರು ದೂರು‌ ನೀಡಿದ್ದರು. ದೂರು ಆಧರಿಸಿ ಸಾಫ್ಟ್‌ವೇರ್ ಇಂಜಿನಿಯರ್‌ ವಿಕಾಸ್ ಕುಮಾರ್ ಅವರನ್ನು ಸೋಮವಾರ (ಏ.21) ರಾತ್ರಿ ಪೊಲೀಸರು ಬಂಧಿಸಿದ್ದರು.

ಆದರೆ, ಶಿಲಾದಿತ್ಯ ಬೋಸ್ ಅವರೇ ವಿಕಾಸ್ ಮೇಲೆ ಹಲ್ಲೆ ನಡೆಸಿರುವುದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಅದನ್ನು ಆಧರಿಸಿ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಗಳು ಹೇಳಿವೆ.

“ಸೋಮವಾರ ಬೆಳಿಗ್ಗೆ ಸ್ನೇಹಿತನ ಬೈಕ್ ವಾಪಸ್ ನೀಡಲು ನಾನು ಹೋಗುತ್ತಿದ್ದೆ. ಟಿನ್‌ ಫ್ಯಾಕ್ಟರಿ ಬಳಿ ಬೈಕ್‌ಗೆ ಕಾರು ತಾಗಿದೆ. ಕಾರನ್ನು ಅಡ್ಡಹಾಕಿ ಏಕೆ ಗುದ್ದಿದ್ದು? ಎಂದು ಪ್ರಶ್ನಿಸಿದ್ದಕ್ಕೆ ಕಾರಿನಲ್ಲಿದ್ದ ವ್ಯಕ್ತಿ ಕಾಲಿನಿಂದ ಒದ್ದು ಬೈಕನ್ನು ಕೆಳಗೆ ಬೀಳಿಸಿದ್ದಾರೆ” ಎಂದು ಹಲ್ಲೆಗೊಳಗಾದ ವಿಕಾಸ್ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ ಎಂದು ವರದಿಗಳು ಹೇಳಿವೆ.

“ನಾನು ಆಕ್ಷೇಪ ವ್ಯಕ್ತಪಡಿಸಿದಾಗ ಅವರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ನಾನು ಸ್ನೇಹಿತನಿಗೆ ಕರೆ ಮಾಡಲು ಮುಂದಾದಾಗ ಮೊಬೈಲ್ ಮತ್ತು ಬೈಕ್ ಕೀ ಕಿತ್ತು ಎಸೆದಿದ್ದಾರೆ. ನನ್ನ ಕುತ್ತಿಗೆ ಹಿಡಿದು ಸಾಯಿಸಲು ಯತ್ನಿಸಿದ್ದಾರೆ” ಎಂದು ಹೇಳಿದ್ದಾರೆ ಎಂದಿವೆ.

ಸುಳ್ಳು ಹೇಳಿದ ವಿಂಗ್ ಕಮಾಂಡರ್

ನನ್ನ ಮೇಲೆ ಹಲ್ಲೆಯಾಗಿದೆ ಎಂದು ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಅವರು ವಿಡಿಯೋ ಮೂಲಕ ಆರೋಪಿಸಿದ್ದರು. ಈ ವೇಳೆ ಅವರ ಹಣೆಯಿಂದ ರಕ್ತ ಸೋರುತ್ತಿತ್ತು. “ಕನ್ನಡ ಭಾಷೆಯ ಕಾರಣಕ್ಕೆ ನನ್ನ ಮೇಲೆ ಹಲ್ಲೆಯಾಗಿದೆ. ಡಿಆರ್‌ಡಿವೋ ಸ್ಟಿಕರ್ ನೋಡಿ ಹಲ್ಲೆ ಮಾಡಿದ್ದಾರೆ. ಇದು ಕರ್ನಾಟಕದ ಪರಿಸ್ಥಿತಿ” ಎಂಬಿತ್ಯಾದಿ ಆರೋಪಗಳನ್ನು ಶಿಲಾದಿತ್ಯ ಬೋಸ್ ಮಾಡಿದ್ದರು.

ಆದರೆ, ಪೊಲೀಸರು ಸಿಸಿಟಿವಿ ವಿಡಿಯೋಗಳನ್ನು ಪರಿಶೀಲಿಸಿದಾಗ, ಶಿಲಾದಿತ್ಯ ಬೋಸ್ ಅವರೇ ಟೆಕಿ ವಿಕಾಸ್ ಅವರನ್ನು ಅಟ್ಟಾಡಿಸಿ ಹಲ್ಲೆ ಮಾಡಿರುವುದು ಕಂಡು ಬಂದಿದೆ. ಅವರ ಪತ್ನಿ ಮಧುಮಿತಾ ಅವರೂ ವಾಗ್ವಾದ ನಡೆಸಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ವರದಿಗಳ ಪ್ರಕಾರ, ವಿಕಾಸ್ ಅವರಿಗೆ ಹಲ್ಲೆ ನಡೆಸುವ ವೇಳೆ ಡಿಚ್ಚಿ ಹೊಡೆಯಲು ವಿಂಗ್ ಕಮಾಂಡರ್ ಯತ್ನಿಸಿದ್ದರು. ಈ ವೇಳೆ ಅವರ ಹಣೆಗೆ ಗಾಯವಾಗಿ ರಕ್ತ ಬಂದಿದೆ.

ಗಲಾಟೆ ನಡೆದ ಸಂದರ್ಭ ವಿಂಗ್ ಕಮಾಂಡರ್ ವಿಕಾಸ್ ಅವರ ಬೈಕ್‌ ಅನ್ನು ಬೀಳಿಸಿದ್ದಾರೆ. ಈ ವೇಳೆ ವಿಕಾಸ್ ಬೈಕ್ ಕೀ ತೆಗೆದು ಕೈಯಲ್ಲಿ ಹಿಡಿದುಕೊಂಡಿದ್ದರು. ರೊಚ್ಚಿಗೆದ್ದ ವಿಂಗ್ ಕಮಾಂಡರ್ ವಿಕಾಸ್‌ಗೆ ಡಿಚ್ಚಿ ಹೊಡೆಯಲು ಮುಂದಾಗಿದ್ದಾರೆ. ಈ ವೇಳೆ ವಿಕಾಸ್ ಕೈ ಅಡ್ಡ ಹಿಡಿದಿದ್ದಾರೆ. ಆಗ ಕೈಯಲ್ಲಿದ್ದ ಬೈಕ್ ಕೀ ವಿಂಗ್ ಕಮಾಂಡರ್ ಹಣೆಗೆ ತಾಗಿ ರಕ್ತ ಬಂದಿದೆ. ಇದನ್ನೇ ಸಿಂಪತಿ ವಿಡಿಯೋಗೆ ಬಳಸಿಕೊಂಡ ವಿಂಗ್ ಕಮಾಂಡರ್, “ದೇವರು ನನಗೆ ಪವರ್ ಕೊಟ್ಟಿರೋದು ಸೇಡು ತೀರಿಸಿಕೊಳ್ಳಲು ಅಲ್ಲ” ಎಂದು ಸುಳ್ಳು ಹೇಳಿದ್ದಾರೆ.

ಕನ್ನಡ ಭಾಷೆಯ ವಿಚಾರ ಹಾಗೂ ತನ್ನ ಮೇಲೆ ಹಲ್ಲೆ ನಡೆಯುವಾಗ ಸ್ಥಳೀಯರು ಯಾರೂ ನೆರವಿಗೆ ಬರಲಿಲ್ಲ ಎಂದು ವಿಂಗ್ ಕಮಾಂಡರ್ ವಿಡಿಯೋ ಮಾಡಿ ಸಿಂಪತಿ ಗಿಟ್ಟಿಸಿಕೊಳ್ಳಲು ಯತ್ನಿಸಿದ್ದಾರೆ. ಅವರ ಕಾರಿನ ಡ್ಯಾಶ್‌ ಕ್ಯಾಮರಾ ವಿಡಿಯೋ ಬಿಡುಗಡೆ ಮಾಡದೆ ಹಲ್ಲೆ ನಡೆದಿದೆ ಎಂಬ ವಿಡಿಯೋ ಅಷ್ಟೇ ಅಪ್ಲೋಡ್‌ ಮಾಡಿದ್ದರು. ಸಿಸಿಟಿವಿ ವಿಡಿಯೋಗಳು ಹೊರ ಬರುತ್ತಿದ್ದಂತೆ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಮುಖವಾಡ ಕಳಚಿದೆ.

ವಿಕಾಸ್ ಪಕ್ಕೆಲುಬುಗಳಿಗೆ ವಿಂಗ್ ಕಮಾಂಡರ್ ಕಾಲಿನಿಂದ ಒದ್ದಿರುವ ಹಿನ್ನೆಲೆ, ಅವರು ಪಕ್ಕೆಲುವು ನೋವಿನಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಹಲ್ಲೆಗೊಳಗಾದ ವಿಕಾಸ್ ಪರ ಕನ್ನಡಪರ ಸಂಘಟನೆಗಳು ನಿಂತಿವೆ. ಸೋಮವಾರ ಸಂಜೆಯಿಂದಲೇ ವಿಂಗ್‌ ಕಮಾಂಡರ್ ಶಿಲಾದಿತ್ಯ ಬೋಸ್ ಬಂಧನಕ್ಕೆ ಆಗ್ರಹ ವ್ಯಕ್ತವಾಗಿತ್ತು.

ವಿಕಾಸ್‌ಗೆ ಕಾನೂನಿನ ನೆರವು ನೀಡಲು ಸಂಘಟನೆಗಳು ಮುಂದಾಗಿವೆ. ಕನ್ನಡ ಸಂಘಟನೆಗಳ ಒತ್ತಡದ ಬಳಿಕ ವಿಕಾಸ್ ನೀಡಿದ ದೂರು ಸ್ವೀಕರಿಸಿರುವ ಬೈಯಪ್ಪನಹಳ್ಳಿ ಪೊಲೀಸರು ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ವಿರುದ್ದ ಕೊಲೆಯ್ನ ಮತ್ತು ಇತರ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಆಟೋ ಚಾಲಕನೊಂದಿಗಿನ ‘ಹಿಂದಿ ಜಗಳ’ಕ್ಕೆ ಕನ್ನಡದಲ್ಲಿ ಕ್ಷಮೆಯಾಚಿಸಿದ ಉತ್ತರ ಭಾರತೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...

ಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆದ ಶಿಮ್ಲಾ ಪೊಲೀಸರು

ದೆಹಲಿಯ ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ ವೇಳೆ ಭಾರೀ ಹೈಡ್ರಾಮ ನಡೆದಿದೆ. ಆರೋಪಿಗಳನ್ನು ಬಂಧಿಸಿ ಕರೆತರಲು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಗೆ ತೆರಳಿದ್ದ ದೆಹಲಿ ಪೊಲೀಸರನ್ನು ಅಲ್ಲಿನ...

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...