Homeಕರ್ನಾಟಕಬೆಂಗಳೂರು | ಹಲ್ಲೆಯ ಸುಳ್ಳು ಕಥೆ ಕಟ್ಟಿದ ವಿಂಗ್ ಕಮಾಂಡರ್ ಮೇಲೆ ಕೊಲೆ ಯತ್ನ ಕೇಸ್

ಬೆಂಗಳೂರು | ಹಲ್ಲೆಯ ಸುಳ್ಳು ಕಥೆ ಕಟ್ಟಿದ ವಿಂಗ್ ಕಮಾಂಡರ್ ಮೇಲೆ ಕೊಲೆ ಯತ್ನ ಕೇಸ್

- Advertisement -
- Advertisement -

ಸಾಫ್ಟ್‌ವೇರ್‌ ಉದ್ಯೋಗಿಗೆ ಹಲ್ಲೆ ನಡೆಸಿ ತನ್ನ ಮೇಲೆಯೇ ಹಲ್ಲೆಯಾಗಿದೆ ಎಂದು ಸುಳ್ಳು ಆರೋಪ ಮಾಡಿದ್ದ ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಅವರ ವಿರುದ್ದ ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.

ಭಾರತೀಯ ನ್ಯಾಯ ಸಂಹಿತೆ (ಬಿಎಸ್‌ಎಸ್‌) ಸೆಕ್ಷನ್‌ 109 (ಕೊಲೆಯತ್ನ), 115(2) (ಮಾರಣಾಂತಿಕ ಹಲ್ಲೆ), 304 (ಬಲವಂತವಾಗಿ ಮೈ ಮೇಲೆ ಇರುವ ವಸ್ತು ಕಿತ್ತುಕೊಳ್ಳುವುದು), 324 (ಅರಿವಿಗೆ ಇದ್ದರೂ ವಸ್ತುಗಳನ್ನು ಉದ್ದೇಶಪೂರ್ವಕವಾಗಿ ಹಾಳು ಮಾಡುವುದು), 352 (ಶಾಂತಿಭಂಗ) ರ ಅಡಿ ಶಿಲಾದಿತ್ಯ ಬೋಸ್ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗಿದೆ ಎಂದು ವರದಿಗಳು ಹೇಳಿವೆ.

ಶಿಲಾದಿತ್ಯ ಬೋಸ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ, ಅವರ ಪತ್ನಿ ಮಧುಮಿತಾ ದತ್ತ ಅವರು ದೂರು‌ ನೀಡಿದ್ದರು. ದೂರು ಆಧರಿಸಿ ಸಾಫ್ಟ್‌ವೇರ್ ಇಂಜಿನಿಯರ್‌ ವಿಕಾಸ್ ಕುಮಾರ್ ಅವರನ್ನು ಸೋಮವಾರ (ಏ.21) ರಾತ್ರಿ ಪೊಲೀಸರು ಬಂಧಿಸಿದ್ದರು.

ಆದರೆ, ಶಿಲಾದಿತ್ಯ ಬೋಸ್ ಅವರೇ ವಿಕಾಸ್ ಮೇಲೆ ಹಲ್ಲೆ ನಡೆಸಿರುವುದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಅದನ್ನು ಆಧರಿಸಿ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಗಳು ಹೇಳಿವೆ.

“ಸೋಮವಾರ ಬೆಳಿಗ್ಗೆ ಸ್ನೇಹಿತನ ಬೈಕ್ ವಾಪಸ್ ನೀಡಲು ನಾನು ಹೋಗುತ್ತಿದ್ದೆ. ಟಿನ್‌ ಫ್ಯಾಕ್ಟರಿ ಬಳಿ ಬೈಕ್‌ಗೆ ಕಾರು ತಾಗಿದೆ. ಕಾರನ್ನು ಅಡ್ಡಹಾಕಿ ಏಕೆ ಗುದ್ದಿದ್ದು? ಎಂದು ಪ್ರಶ್ನಿಸಿದ್ದಕ್ಕೆ ಕಾರಿನಲ್ಲಿದ್ದ ವ್ಯಕ್ತಿ ಕಾಲಿನಿಂದ ಒದ್ದು ಬೈಕನ್ನು ಕೆಳಗೆ ಬೀಳಿಸಿದ್ದಾರೆ” ಎಂದು ಹಲ್ಲೆಗೊಳಗಾದ ವಿಕಾಸ್ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ ಎಂದು ವರದಿಗಳು ಹೇಳಿವೆ.

“ನಾನು ಆಕ್ಷೇಪ ವ್ಯಕ್ತಪಡಿಸಿದಾಗ ಅವರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ನಾನು ಸ್ನೇಹಿತನಿಗೆ ಕರೆ ಮಾಡಲು ಮುಂದಾದಾಗ ಮೊಬೈಲ್ ಮತ್ತು ಬೈಕ್ ಕೀ ಕಿತ್ತು ಎಸೆದಿದ್ದಾರೆ. ನನ್ನ ಕುತ್ತಿಗೆ ಹಿಡಿದು ಸಾಯಿಸಲು ಯತ್ನಿಸಿದ್ದಾರೆ” ಎಂದು ಹೇಳಿದ್ದಾರೆ ಎಂದಿವೆ.

ಸುಳ್ಳು ಹೇಳಿದ ವಿಂಗ್ ಕಮಾಂಡರ್

ನನ್ನ ಮೇಲೆ ಹಲ್ಲೆಯಾಗಿದೆ ಎಂದು ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಅವರು ವಿಡಿಯೋ ಮೂಲಕ ಆರೋಪಿಸಿದ್ದರು. ಈ ವೇಳೆ ಅವರ ಹಣೆಯಿಂದ ರಕ್ತ ಸೋರುತ್ತಿತ್ತು. “ಕನ್ನಡ ಭಾಷೆಯ ಕಾರಣಕ್ಕೆ ನನ್ನ ಮೇಲೆ ಹಲ್ಲೆಯಾಗಿದೆ. ಡಿಆರ್‌ಡಿವೋ ಸ್ಟಿಕರ್ ನೋಡಿ ಹಲ್ಲೆ ಮಾಡಿದ್ದಾರೆ. ಇದು ಕರ್ನಾಟಕದ ಪರಿಸ್ಥಿತಿ” ಎಂಬಿತ್ಯಾದಿ ಆರೋಪಗಳನ್ನು ಶಿಲಾದಿತ್ಯ ಬೋಸ್ ಮಾಡಿದ್ದರು.

ಆದರೆ, ಪೊಲೀಸರು ಸಿಸಿಟಿವಿ ವಿಡಿಯೋಗಳನ್ನು ಪರಿಶೀಲಿಸಿದಾಗ, ಶಿಲಾದಿತ್ಯ ಬೋಸ್ ಅವರೇ ಟೆಕಿ ವಿಕಾಸ್ ಅವರನ್ನು ಅಟ್ಟಾಡಿಸಿ ಹಲ್ಲೆ ಮಾಡಿರುವುದು ಕಂಡು ಬಂದಿದೆ. ಅವರ ಪತ್ನಿ ಮಧುಮಿತಾ ಅವರೂ ವಾಗ್ವಾದ ನಡೆಸಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ವರದಿಗಳ ಪ್ರಕಾರ, ವಿಕಾಸ್ ಅವರಿಗೆ ಹಲ್ಲೆ ನಡೆಸುವ ವೇಳೆ ಡಿಚ್ಚಿ ಹೊಡೆಯಲು ವಿಂಗ್ ಕಮಾಂಡರ್ ಯತ್ನಿಸಿದ್ದರು. ಈ ವೇಳೆ ಅವರ ಹಣೆಗೆ ಗಾಯವಾಗಿ ರಕ್ತ ಬಂದಿದೆ.

ಗಲಾಟೆ ನಡೆದ ಸಂದರ್ಭ ವಿಂಗ್ ಕಮಾಂಡರ್ ವಿಕಾಸ್ ಅವರ ಬೈಕ್‌ ಅನ್ನು ಬೀಳಿಸಿದ್ದಾರೆ. ಈ ವೇಳೆ ವಿಕಾಸ್ ಬೈಕ್ ಕೀ ತೆಗೆದು ಕೈಯಲ್ಲಿ ಹಿಡಿದುಕೊಂಡಿದ್ದರು. ರೊಚ್ಚಿಗೆದ್ದ ವಿಂಗ್ ಕಮಾಂಡರ್ ವಿಕಾಸ್‌ಗೆ ಡಿಚ್ಚಿ ಹೊಡೆಯಲು ಮುಂದಾಗಿದ್ದಾರೆ. ಈ ವೇಳೆ ವಿಕಾಸ್ ಕೈ ಅಡ್ಡ ಹಿಡಿದಿದ್ದಾರೆ. ಆಗ ಕೈಯಲ್ಲಿದ್ದ ಬೈಕ್ ಕೀ ವಿಂಗ್ ಕಮಾಂಡರ್ ಹಣೆಗೆ ತಾಗಿ ರಕ್ತ ಬಂದಿದೆ. ಇದನ್ನೇ ಸಿಂಪತಿ ವಿಡಿಯೋಗೆ ಬಳಸಿಕೊಂಡ ವಿಂಗ್ ಕಮಾಂಡರ್, “ದೇವರು ನನಗೆ ಪವರ್ ಕೊಟ್ಟಿರೋದು ಸೇಡು ತೀರಿಸಿಕೊಳ್ಳಲು ಅಲ್ಲ” ಎಂದು ಸುಳ್ಳು ಹೇಳಿದ್ದಾರೆ.

ಕನ್ನಡ ಭಾಷೆಯ ವಿಚಾರ ಹಾಗೂ ತನ್ನ ಮೇಲೆ ಹಲ್ಲೆ ನಡೆಯುವಾಗ ಸ್ಥಳೀಯರು ಯಾರೂ ನೆರವಿಗೆ ಬರಲಿಲ್ಲ ಎಂದು ವಿಂಗ್ ಕಮಾಂಡರ್ ವಿಡಿಯೋ ಮಾಡಿ ಸಿಂಪತಿ ಗಿಟ್ಟಿಸಿಕೊಳ್ಳಲು ಯತ್ನಿಸಿದ್ದಾರೆ. ಅವರ ಕಾರಿನ ಡ್ಯಾಶ್‌ ಕ್ಯಾಮರಾ ವಿಡಿಯೋ ಬಿಡುಗಡೆ ಮಾಡದೆ ಹಲ್ಲೆ ನಡೆದಿದೆ ಎಂಬ ವಿಡಿಯೋ ಅಷ್ಟೇ ಅಪ್ಲೋಡ್‌ ಮಾಡಿದ್ದರು. ಸಿಸಿಟಿವಿ ವಿಡಿಯೋಗಳು ಹೊರ ಬರುತ್ತಿದ್ದಂತೆ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಮುಖವಾಡ ಕಳಚಿದೆ.

ವಿಕಾಸ್ ಪಕ್ಕೆಲುಬುಗಳಿಗೆ ವಿಂಗ್ ಕಮಾಂಡರ್ ಕಾಲಿನಿಂದ ಒದ್ದಿರುವ ಹಿನ್ನೆಲೆ, ಅವರು ಪಕ್ಕೆಲುವು ನೋವಿನಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಹಲ್ಲೆಗೊಳಗಾದ ವಿಕಾಸ್ ಪರ ಕನ್ನಡಪರ ಸಂಘಟನೆಗಳು ನಿಂತಿವೆ. ಸೋಮವಾರ ಸಂಜೆಯಿಂದಲೇ ವಿಂಗ್‌ ಕಮಾಂಡರ್ ಶಿಲಾದಿತ್ಯ ಬೋಸ್ ಬಂಧನಕ್ಕೆ ಆಗ್ರಹ ವ್ಯಕ್ತವಾಗಿತ್ತು.

ವಿಕಾಸ್‌ಗೆ ಕಾನೂನಿನ ನೆರವು ನೀಡಲು ಸಂಘಟನೆಗಳು ಮುಂದಾಗಿವೆ. ಕನ್ನಡ ಸಂಘಟನೆಗಳ ಒತ್ತಡದ ಬಳಿಕ ವಿಕಾಸ್ ನೀಡಿದ ದೂರು ಸ್ವೀಕರಿಸಿರುವ ಬೈಯಪ್ಪನಹಳ್ಳಿ ಪೊಲೀಸರು ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ವಿರುದ್ದ ಕೊಲೆಯ್ನ ಮತ್ತು ಇತರ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಆಟೋ ಚಾಲಕನೊಂದಿಗಿನ ‘ಹಿಂದಿ ಜಗಳ’ಕ್ಕೆ ಕನ್ನಡದಲ್ಲಿ ಕ್ಷಮೆಯಾಚಿಸಿದ ಉತ್ತರ ಭಾರತೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...

‘ಲ್ಯಾಂಡ್ ಲಾರ್ಡ್’ ತೆರಿಗೆ ವಿನಾಯಿತಿಗೆ ಡಿಎಸ್ಎಸ್ ಮನವಿ: ಒಪ್ಪಿದ ಸಿಎಂ ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಪ್ರತಿಪಾದಿಸುವ 'ಲ್ಯಾಂಡ್ ಲಾರ್ಡ್' ಕನ್ನಡ ಸಿನಿಮಾಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುವಂತೆ ಡಿಎಸ್ಎಸ್ ಅಂಬೇಡ್ಕರ್ ವಾದ ಮತ್ತು ದಲಿತ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...

‘ಮೋದಿ ಅಂತಿಮವಾಗಿ ಶರಣಾಗಿದ್ದಾರೆ’: ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಎಲ್ಲಾ ಒಪ್ಪಂದಗಳ ಪಿತಾಮಹನಾಗಲು ಸಾಧ್ಯವಿಲ್ಲ: ಕಾಂಗ್ರೆಸ್

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ "ಅಂತಿಮವಾಗಿ ಶರಣಾಗಿದ್ದಾರೆ" ಮತ್ತು ಈ...