Homeಕರ್ನಾಟಕಬೆಂಗಳೂರು | ಹಲ್ಲೆಯ ಸುಳ್ಳು ಕಥೆ ಕಟ್ಟಿದ ವಿಂಗ್ ಕಮಾಂಡರ್ ಮೇಲೆ ಕೊಲೆ ಯತ್ನ ಕೇಸ್

ಬೆಂಗಳೂರು | ಹಲ್ಲೆಯ ಸುಳ್ಳು ಕಥೆ ಕಟ್ಟಿದ ವಿಂಗ್ ಕಮಾಂಡರ್ ಮೇಲೆ ಕೊಲೆ ಯತ್ನ ಕೇಸ್

- Advertisement -
- Advertisement -

ಸಾಫ್ಟ್‌ವೇರ್‌ ಉದ್ಯೋಗಿಗೆ ಹಲ್ಲೆ ನಡೆಸಿ ತನ್ನ ಮೇಲೆಯೇ ಹಲ್ಲೆಯಾಗಿದೆ ಎಂದು ಸುಳ್ಳು ಆರೋಪ ಮಾಡಿದ್ದ ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಅವರ ವಿರುದ್ದ ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.

ಭಾರತೀಯ ನ್ಯಾಯ ಸಂಹಿತೆ (ಬಿಎಸ್‌ಎಸ್‌) ಸೆಕ್ಷನ್‌ 109 (ಕೊಲೆಯತ್ನ), 115(2) (ಮಾರಣಾಂತಿಕ ಹಲ್ಲೆ), 304 (ಬಲವಂತವಾಗಿ ಮೈ ಮೇಲೆ ಇರುವ ವಸ್ತು ಕಿತ್ತುಕೊಳ್ಳುವುದು), 324 (ಅರಿವಿಗೆ ಇದ್ದರೂ ವಸ್ತುಗಳನ್ನು ಉದ್ದೇಶಪೂರ್ವಕವಾಗಿ ಹಾಳು ಮಾಡುವುದು), 352 (ಶಾಂತಿಭಂಗ) ರ ಅಡಿ ಶಿಲಾದಿತ್ಯ ಬೋಸ್ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗಿದೆ ಎಂದು ವರದಿಗಳು ಹೇಳಿವೆ.

ಶಿಲಾದಿತ್ಯ ಬೋಸ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ, ಅವರ ಪತ್ನಿ ಮಧುಮಿತಾ ದತ್ತ ಅವರು ದೂರು‌ ನೀಡಿದ್ದರು. ದೂರು ಆಧರಿಸಿ ಸಾಫ್ಟ್‌ವೇರ್ ಇಂಜಿನಿಯರ್‌ ವಿಕಾಸ್ ಕುಮಾರ್ ಅವರನ್ನು ಸೋಮವಾರ (ಏ.21) ರಾತ್ರಿ ಪೊಲೀಸರು ಬಂಧಿಸಿದ್ದರು.

ಆದರೆ, ಶಿಲಾದಿತ್ಯ ಬೋಸ್ ಅವರೇ ವಿಕಾಸ್ ಮೇಲೆ ಹಲ್ಲೆ ನಡೆಸಿರುವುದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಅದನ್ನು ಆಧರಿಸಿ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಗಳು ಹೇಳಿವೆ.

“ಸೋಮವಾರ ಬೆಳಿಗ್ಗೆ ಸ್ನೇಹಿತನ ಬೈಕ್ ವಾಪಸ್ ನೀಡಲು ನಾನು ಹೋಗುತ್ತಿದ್ದೆ. ಟಿನ್‌ ಫ್ಯಾಕ್ಟರಿ ಬಳಿ ಬೈಕ್‌ಗೆ ಕಾರು ತಾಗಿದೆ. ಕಾರನ್ನು ಅಡ್ಡಹಾಕಿ ಏಕೆ ಗುದ್ದಿದ್ದು? ಎಂದು ಪ್ರಶ್ನಿಸಿದ್ದಕ್ಕೆ ಕಾರಿನಲ್ಲಿದ್ದ ವ್ಯಕ್ತಿ ಕಾಲಿನಿಂದ ಒದ್ದು ಬೈಕನ್ನು ಕೆಳಗೆ ಬೀಳಿಸಿದ್ದಾರೆ” ಎಂದು ಹಲ್ಲೆಗೊಳಗಾದ ವಿಕಾಸ್ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ ಎಂದು ವರದಿಗಳು ಹೇಳಿವೆ.

“ನಾನು ಆಕ್ಷೇಪ ವ್ಯಕ್ತಪಡಿಸಿದಾಗ ಅವರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ನಾನು ಸ್ನೇಹಿತನಿಗೆ ಕರೆ ಮಾಡಲು ಮುಂದಾದಾಗ ಮೊಬೈಲ್ ಮತ್ತು ಬೈಕ್ ಕೀ ಕಿತ್ತು ಎಸೆದಿದ್ದಾರೆ. ನನ್ನ ಕುತ್ತಿಗೆ ಹಿಡಿದು ಸಾಯಿಸಲು ಯತ್ನಿಸಿದ್ದಾರೆ” ಎಂದು ಹೇಳಿದ್ದಾರೆ ಎಂದಿವೆ.

ಸುಳ್ಳು ಹೇಳಿದ ವಿಂಗ್ ಕಮಾಂಡರ್

ನನ್ನ ಮೇಲೆ ಹಲ್ಲೆಯಾಗಿದೆ ಎಂದು ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಅವರು ವಿಡಿಯೋ ಮೂಲಕ ಆರೋಪಿಸಿದ್ದರು. ಈ ವೇಳೆ ಅವರ ಹಣೆಯಿಂದ ರಕ್ತ ಸೋರುತ್ತಿತ್ತು. “ಕನ್ನಡ ಭಾಷೆಯ ಕಾರಣಕ್ಕೆ ನನ್ನ ಮೇಲೆ ಹಲ್ಲೆಯಾಗಿದೆ. ಡಿಆರ್‌ಡಿವೋ ಸ್ಟಿಕರ್ ನೋಡಿ ಹಲ್ಲೆ ಮಾಡಿದ್ದಾರೆ. ಇದು ಕರ್ನಾಟಕದ ಪರಿಸ್ಥಿತಿ” ಎಂಬಿತ್ಯಾದಿ ಆರೋಪಗಳನ್ನು ಶಿಲಾದಿತ್ಯ ಬೋಸ್ ಮಾಡಿದ್ದರು.

ಆದರೆ, ಪೊಲೀಸರು ಸಿಸಿಟಿವಿ ವಿಡಿಯೋಗಳನ್ನು ಪರಿಶೀಲಿಸಿದಾಗ, ಶಿಲಾದಿತ್ಯ ಬೋಸ್ ಅವರೇ ಟೆಕಿ ವಿಕಾಸ್ ಅವರನ್ನು ಅಟ್ಟಾಡಿಸಿ ಹಲ್ಲೆ ಮಾಡಿರುವುದು ಕಂಡು ಬಂದಿದೆ. ಅವರ ಪತ್ನಿ ಮಧುಮಿತಾ ಅವರೂ ವಾಗ್ವಾದ ನಡೆಸಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ವರದಿಗಳ ಪ್ರಕಾರ, ವಿಕಾಸ್ ಅವರಿಗೆ ಹಲ್ಲೆ ನಡೆಸುವ ವೇಳೆ ಡಿಚ್ಚಿ ಹೊಡೆಯಲು ವಿಂಗ್ ಕಮಾಂಡರ್ ಯತ್ನಿಸಿದ್ದರು. ಈ ವೇಳೆ ಅವರ ಹಣೆಗೆ ಗಾಯವಾಗಿ ರಕ್ತ ಬಂದಿದೆ.

ಗಲಾಟೆ ನಡೆದ ಸಂದರ್ಭ ವಿಂಗ್ ಕಮಾಂಡರ್ ವಿಕಾಸ್ ಅವರ ಬೈಕ್‌ ಅನ್ನು ಬೀಳಿಸಿದ್ದಾರೆ. ಈ ವೇಳೆ ವಿಕಾಸ್ ಬೈಕ್ ಕೀ ತೆಗೆದು ಕೈಯಲ್ಲಿ ಹಿಡಿದುಕೊಂಡಿದ್ದರು. ರೊಚ್ಚಿಗೆದ್ದ ವಿಂಗ್ ಕಮಾಂಡರ್ ವಿಕಾಸ್‌ಗೆ ಡಿಚ್ಚಿ ಹೊಡೆಯಲು ಮುಂದಾಗಿದ್ದಾರೆ. ಈ ವೇಳೆ ವಿಕಾಸ್ ಕೈ ಅಡ್ಡ ಹಿಡಿದಿದ್ದಾರೆ. ಆಗ ಕೈಯಲ್ಲಿದ್ದ ಬೈಕ್ ಕೀ ವಿಂಗ್ ಕಮಾಂಡರ್ ಹಣೆಗೆ ತಾಗಿ ರಕ್ತ ಬಂದಿದೆ. ಇದನ್ನೇ ಸಿಂಪತಿ ವಿಡಿಯೋಗೆ ಬಳಸಿಕೊಂಡ ವಿಂಗ್ ಕಮಾಂಡರ್, “ದೇವರು ನನಗೆ ಪವರ್ ಕೊಟ್ಟಿರೋದು ಸೇಡು ತೀರಿಸಿಕೊಳ್ಳಲು ಅಲ್ಲ” ಎಂದು ಸುಳ್ಳು ಹೇಳಿದ್ದಾರೆ.

ಕನ್ನಡ ಭಾಷೆಯ ವಿಚಾರ ಹಾಗೂ ತನ್ನ ಮೇಲೆ ಹಲ್ಲೆ ನಡೆಯುವಾಗ ಸ್ಥಳೀಯರು ಯಾರೂ ನೆರವಿಗೆ ಬರಲಿಲ್ಲ ಎಂದು ವಿಂಗ್ ಕಮಾಂಡರ್ ವಿಡಿಯೋ ಮಾಡಿ ಸಿಂಪತಿ ಗಿಟ್ಟಿಸಿಕೊಳ್ಳಲು ಯತ್ನಿಸಿದ್ದಾರೆ. ಅವರ ಕಾರಿನ ಡ್ಯಾಶ್‌ ಕ್ಯಾಮರಾ ವಿಡಿಯೋ ಬಿಡುಗಡೆ ಮಾಡದೆ ಹಲ್ಲೆ ನಡೆದಿದೆ ಎಂಬ ವಿಡಿಯೋ ಅಷ್ಟೇ ಅಪ್ಲೋಡ್‌ ಮಾಡಿದ್ದರು. ಸಿಸಿಟಿವಿ ವಿಡಿಯೋಗಳು ಹೊರ ಬರುತ್ತಿದ್ದಂತೆ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಮುಖವಾಡ ಕಳಚಿದೆ.

ವಿಕಾಸ್ ಪಕ್ಕೆಲುಬುಗಳಿಗೆ ವಿಂಗ್ ಕಮಾಂಡರ್ ಕಾಲಿನಿಂದ ಒದ್ದಿರುವ ಹಿನ್ನೆಲೆ, ಅವರು ಪಕ್ಕೆಲುವು ನೋವಿನಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಹಲ್ಲೆಗೊಳಗಾದ ವಿಕಾಸ್ ಪರ ಕನ್ನಡಪರ ಸಂಘಟನೆಗಳು ನಿಂತಿವೆ. ಸೋಮವಾರ ಸಂಜೆಯಿಂದಲೇ ವಿಂಗ್‌ ಕಮಾಂಡರ್ ಶಿಲಾದಿತ್ಯ ಬೋಸ್ ಬಂಧನಕ್ಕೆ ಆಗ್ರಹ ವ್ಯಕ್ತವಾಗಿತ್ತು.

ವಿಕಾಸ್‌ಗೆ ಕಾನೂನಿನ ನೆರವು ನೀಡಲು ಸಂಘಟನೆಗಳು ಮುಂದಾಗಿವೆ. ಕನ್ನಡ ಸಂಘಟನೆಗಳ ಒತ್ತಡದ ಬಳಿಕ ವಿಕಾಸ್ ನೀಡಿದ ದೂರು ಸ್ವೀಕರಿಸಿರುವ ಬೈಯಪ್ಪನಹಳ್ಳಿ ಪೊಲೀಸರು ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ವಿರುದ್ದ ಕೊಲೆಯ್ನ ಮತ್ತು ಇತರ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಆಟೋ ಚಾಲಕನೊಂದಿಗಿನ ‘ಹಿಂದಿ ಜಗಳ’ಕ್ಕೆ ಕನ್ನಡದಲ್ಲಿ ಕ್ಷಮೆಯಾಚಿಸಿದ ಉತ್ತರ ಭಾರತೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...