Homeಕರ್ನಾಟಕಬೆಂಗಳೂರು | ಹಲ್ಲೆಯ ಸುಳ್ಳು ಕಥೆ ಕಟ್ಟಿದ ವಿಂಗ್ ಕಮಾಂಡರ್ ಮೇಲೆ ಕೊಲೆ ಯತ್ನ ಕೇಸ್

ಬೆಂಗಳೂರು | ಹಲ್ಲೆಯ ಸುಳ್ಳು ಕಥೆ ಕಟ್ಟಿದ ವಿಂಗ್ ಕಮಾಂಡರ್ ಮೇಲೆ ಕೊಲೆ ಯತ್ನ ಕೇಸ್

- Advertisement -
- Advertisement -

ಸಾಫ್ಟ್‌ವೇರ್‌ ಉದ್ಯೋಗಿಗೆ ಹಲ್ಲೆ ನಡೆಸಿ ತನ್ನ ಮೇಲೆಯೇ ಹಲ್ಲೆಯಾಗಿದೆ ಎಂದು ಸುಳ್ಳು ಆರೋಪ ಮಾಡಿದ್ದ ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಅವರ ವಿರುದ್ದ ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.

ಭಾರತೀಯ ನ್ಯಾಯ ಸಂಹಿತೆ (ಬಿಎಸ್‌ಎಸ್‌) ಸೆಕ್ಷನ್‌ 109 (ಕೊಲೆಯತ್ನ), 115(2) (ಮಾರಣಾಂತಿಕ ಹಲ್ಲೆ), 304 (ಬಲವಂತವಾಗಿ ಮೈ ಮೇಲೆ ಇರುವ ವಸ್ತು ಕಿತ್ತುಕೊಳ್ಳುವುದು), 324 (ಅರಿವಿಗೆ ಇದ್ದರೂ ವಸ್ತುಗಳನ್ನು ಉದ್ದೇಶಪೂರ್ವಕವಾಗಿ ಹಾಳು ಮಾಡುವುದು), 352 (ಶಾಂತಿಭಂಗ) ರ ಅಡಿ ಶಿಲಾದಿತ್ಯ ಬೋಸ್ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗಿದೆ ಎಂದು ವರದಿಗಳು ಹೇಳಿವೆ.

ಶಿಲಾದಿತ್ಯ ಬೋಸ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ, ಅವರ ಪತ್ನಿ ಮಧುಮಿತಾ ದತ್ತ ಅವರು ದೂರು‌ ನೀಡಿದ್ದರು. ದೂರು ಆಧರಿಸಿ ಸಾಫ್ಟ್‌ವೇರ್ ಇಂಜಿನಿಯರ್‌ ವಿಕಾಸ್ ಕುಮಾರ್ ಅವರನ್ನು ಸೋಮವಾರ (ಏ.21) ರಾತ್ರಿ ಪೊಲೀಸರು ಬಂಧಿಸಿದ್ದರು.

ಆದರೆ, ಶಿಲಾದಿತ್ಯ ಬೋಸ್ ಅವರೇ ವಿಕಾಸ್ ಮೇಲೆ ಹಲ್ಲೆ ನಡೆಸಿರುವುದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಅದನ್ನು ಆಧರಿಸಿ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಗಳು ಹೇಳಿವೆ.

“ಸೋಮವಾರ ಬೆಳಿಗ್ಗೆ ಸ್ನೇಹಿತನ ಬೈಕ್ ವಾಪಸ್ ನೀಡಲು ನಾನು ಹೋಗುತ್ತಿದ್ದೆ. ಟಿನ್‌ ಫ್ಯಾಕ್ಟರಿ ಬಳಿ ಬೈಕ್‌ಗೆ ಕಾರು ತಾಗಿದೆ. ಕಾರನ್ನು ಅಡ್ಡಹಾಕಿ ಏಕೆ ಗುದ್ದಿದ್ದು? ಎಂದು ಪ್ರಶ್ನಿಸಿದ್ದಕ್ಕೆ ಕಾರಿನಲ್ಲಿದ್ದ ವ್ಯಕ್ತಿ ಕಾಲಿನಿಂದ ಒದ್ದು ಬೈಕನ್ನು ಕೆಳಗೆ ಬೀಳಿಸಿದ್ದಾರೆ” ಎಂದು ಹಲ್ಲೆಗೊಳಗಾದ ವಿಕಾಸ್ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ ಎಂದು ವರದಿಗಳು ಹೇಳಿವೆ.

“ನಾನು ಆಕ್ಷೇಪ ವ್ಯಕ್ತಪಡಿಸಿದಾಗ ಅವರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ನಾನು ಸ್ನೇಹಿತನಿಗೆ ಕರೆ ಮಾಡಲು ಮುಂದಾದಾಗ ಮೊಬೈಲ್ ಮತ್ತು ಬೈಕ್ ಕೀ ಕಿತ್ತು ಎಸೆದಿದ್ದಾರೆ. ನನ್ನ ಕುತ್ತಿಗೆ ಹಿಡಿದು ಸಾಯಿಸಲು ಯತ್ನಿಸಿದ್ದಾರೆ” ಎಂದು ಹೇಳಿದ್ದಾರೆ ಎಂದಿವೆ.

ಸುಳ್ಳು ಹೇಳಿದ ವಿಂಗ್ ಕಮಾಂಡರ್

ನನ್ನ ಮೇಲೆ ಹಲ್ಲೆಯಾಗಿದೆ ಎಂದು ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಅವರು ವಿಡಿಯೋ ಮೂಲಕ ಆರೋಪಿಸಿದ್ದರು. ಈ ವೇಳೆ ಅವರ ಹಣೆಯಿಂದ ರಕ್ತ ಸೋರುತ್ತಿತ್ತು. “ಕನ್ನಡ ಭಾಷೆಯ ಕಾರಣಕ್ಕೆ ನನ್ನ ಮೇಲೆ ಹಲ್ಲೆಯಾಗಿದೆ. ಡಿಆರ್‌ಡಿವೋ ಸ್ಟಿಕರ್ ನೋಡಿ ಹಲ್ಲೆ ಮಾಡಿದ್ದಾರೆ. ಇದು ಕರ್ನಾಟಕದ ಪರಿಸ್ಥಿತಿ” ಎಂಬಿತ್ಯಾದಿ ಆರೋಪಗಳನ್ನು ಶಿಲಾದಿತ್ಯ ಬೋಸ್ ಮಾಡಿದ್ದರು.

ಆದರೆ, ಪೊಲೀಸರು ಸಿಸಿಟಿವಿ ವಿಡಿಯೋಗಳನ್ನು ಪರಿಶೀಲಿಸಿದಾಗ, ಶಿಲಾದಿತ್ಯ ಬೋಸ್ ಅವರೇ ಟೆಕಿ ವಿಕಾಸ್ ಅವರನ್ನು ಅಟ್ಟಾಡಿಸಿ ಹಲ್ಲೆ ಮಾಡಿರುವುದು ಕಂಡು ಬಂದಿದೆ. ಅವರ ಪತ್ನಿ ಮಧುಮಿತಾ ಅವರೂ ವಾಗ್ವಾದ ನಡೆಸಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ವರದಿಗಳ ಪ್ರಕಾರ, ವಿಕಾಸ್ ಅವರಿಗೆ ಹಲ್ಲೆ ನಡೆಸುವ ವೇಳೆ ಡಿಚ್ಚಿ ಹೊಡೆಯಲು ವಿಂಗ್ ಕಮಾಂಡರ್ ಯತ್ನಿಸಿದ್ದರು. ಈ ವೇಳೆ ಅವರ ಹಣೆಗೆ ಗಾಯವಾಗಿ ರಕ್ತ ಬಂದಿದೆ.

ಗಲಾಟೆ ನಡೆದ ಸಂದರ್ಭ ವಿಂಗ್ ಕಮಾಂಡರ್ ವಿಕಾಸ್ ಅವರ ಬೈಕ್‌ ಅನ್ನು ಬೀಳಿಸಿದ್ದಾರೆ. ಈ ವೇಳೆ ವಿಕಾಸ್ ಬೈಕ್ ಕೀ ತೆಗೆದು ಕೈಯಲ್ಲಿ ಹಿಡಿದುಕೊಂಡಿದ್ದರು. ರೊಚ್ಚಿಗೆದ್ದ ವಿಂಗ್ ಕಮಾಂಡರ್ ವಿಕಾಸ್‌ಗೆ ಡಿಚ್ಚಿ ಹೊಡೆಯಲು ಮುಂದಾಗಿದ್ದಾರೆ. ಈ ವೇಳೆ ವಿಕಾಸ್ ಕೈ ಅಡ್ಡ ಹಿಡಿದಿದ್ದಾರೆ. ಆಗ ಕೈಯಲ್ಲಿದ್ದ ಬೈಕ್ ಕೀ ವಿಂಗ್ ಕಮಾಂಡರ್ ಹಣೆಗೆ ತಾಗಿ ರಕ್ತ ಬಂದಿದೆ. ಇದನ್ನೇ ಸಿಂಪತಿ ವಿಡಿಯೋಗೆ ಬಳಸಿಕೊಂಡ ವಿಂಗ್ ಕಮಾಂಡರ್, “ದೇವರು ನನಗೆ ಪವರ್ ಕೊಟ್ಟಿರೋದು ಸೇಡು ತೀರಿಸಿಕೊಳ್ಳಲು ಅಲ್ಲ” ಎಂದು ಸುಳ್ಳು ಹೇಳಿದ್ದಾರೆ.

ಕನ್ನಡ ಭಾಷೆಯ ವಿಚಾರ ಹಾಗೂ ತನ್ನ ಮೇಲೆ ಹಲ್ಲೆ ನಡೆಯುವಾಗ ಸ್ಥಳೀಯರು ಯಾರೂ ನೆರವಿಗೆ ಬರಲಿಲ್ಲ ಎಂದು ವಿಂಗ್ ಕಮಾಂಡರ್ ವಿಡಿಯೋ ಮಾಡಿ ಸಿಂಪತಿ ಗಿಟ್ಟಿಸಿಕೊಳ್ಳಲು ಯತ್ನಿಸಿದ್ದಾರೆ. ಅವರ ಕಾರಿನ ಡ್ಯಾಶ್‌ ಕ್ಯಾಮರಾ ವಿಡಿಯೋ ಬಿಡುಗಡೆ ಮಾಡದೆ ಹಲ್ಲೆ ನಡೆದಿದೆ ಎಂಬ ವಿಡಿಯೋ ಅಷ್ಟೇ ಅಪ್ಲೋಡ್‌ ಮಾಡಿದ್ದರು. ಸಿಸಿಟಿವಿ ವಿಡಿಯೋಗಳು ಹೊರ ಬರುತ್ತಿದ್ದಂತೆ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಮುಖವಾಡ ಕಳಚಿದೆ.

ವಿಕಾಸ್ ಪಕ್ಕೆಲುಬುಗಳಿಗೆ ವಿಂಗ್ ಕಮಾಂಡರ್ ಕಾಲಿನಿಂದ ಒದ್ದಿರುವ ಹಿನ್ನೆಲೆ, ಅವರು ಪಕ್ಕೆಲುವು ನೋವಿನಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಹಲ್ಲೆಗೊಳಗಾದ ವಿಕಾಸ್ ಪರ ಕನ್ನಡಪರ ಸಂಘಟನೆಗಳು ನಿಂತಿವೆ. ಸೋಮವಾರ ಸಂಜೆಯಿಂದಲೇ ವಿಂಗ್‌ ಕಮಾಂಡರ್ ಶಿಲಾದಿತ್ಯ ಬೋಸ್ ಬಂಧನಕ್ಕೆ ಆಗ್ರಹ ವ್ಯಕ್ತವಾಗಿತ್ತು.

ವಿಕಾಸ್‌ಗೆ ಕಾನೂನಿನ ನೆರವು ನೀಡಲು ಸಂಘಟನೆಗಳು ಮುಂದಾಗಿವೆ. ಕನ್ನಡ ಸಂಘಟನೆಗಳ ಒತ್ತಡದ ಬಳಿಕ ವಿಕಾಸ್ ನೀಡಿದ ದೂರು ಸ್ವೀಕರಿಸಿರುವ ಬೈಯಪ್ಪನಹಳ್ಳಿ ಪೊಲೀಸರು ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ವಿರುದ್ದ ಕೊಲೆಯ್ನ ಮತ್ತು ಇತರ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಆಟೋ ಚಾಲಕನೊಂದಿಗಿನ ‘ಹಿಂದಿ ಜಗಳ’ಕ್ಕೆ ಕನ್ನಡದಲ್ಲಿ ಕ್ಷಮೆಯಾಚಿಸಿದ ಉತ್ತರ ಭಾರತೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...