Homeಕರ್ನಾಟಕಬೆಂಗಳೂರು | ಹಲ್ಲೆಯ ಸುಳ್ಳು ಕಥೆ ಕಟ್ಟಿದ ವಿಂಗ್ ಕಮಾಂಡರ್ ಮೇಲೆ ಕೊಲೆ ಯತ್ನ ಕೇಸ್

ಬೆಂಗಳೂರು | ಹಲ್ಲೆಯ ಸುಳ್ಳು ಕಥೆ ಕಟ್ಟಿದ ವಿಂಗ್ ಕಮಾಂಡರ್ ಮೇಲೆ ಕೊಲೆ ಯತ್ನ ಕೇಸ್

- Advertisement -
- Advertisement -

ಸಾಫ್ಟ್‌ವೇರ್‌ ಉದ್ಯೋಗಿಗೆ ಹಲ್ಲೆ ನಡೆಸಿ ತನ್ನ ಮೇಲೆಯೇ ಹಲ್ಲೆಯಾಗಿದೆ ಎಂದು ಸುಳ್ಳು ಆರೋಪ ಮಾಡಿದ್ದ ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಅವರ ವಿರುದ್ದ ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.

ಭಾರತೀಯ ನ್ಯಾಯ ಸಂಹಿತೆ (ಬಿಎಸ್‌ಎಸ್‌) ಸೆಕ್ಷನ್‌ 109 (ಕೊಲೆಯತ್ನ), 115(2) (ಮಾರಣಾಂತಿಕ ಹಲ್ಲೆ), 304 (ಬಲವಂತವಾಗಿ ಮೈ ಮೇಲೆ ಇರುವ ವಸ್ತು ಕಿತ್ತುಕೊಳ್ಳುವುದು), 324 (ಅರಿವಿಗೆ ಇದ್ದರೂ ವಸ್ತುಗಳನ್ನು ಉದ್ದೇಶಪೂರ್ವಕವಾಗಿ ಹಾಳು ಮಾಡುವುದು), 352 (ಶಾಂತಿಭಂಗ) ರ ಅಡಿ ಶಿಲಾದಿತ್ಯ ಬೋಸ್ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗಿದೆ ಎಂದು ವರದಿಗಳು ಹೇಳಿವೆ.

ಶಿಲಾದಿತ್ಯ ಬೋಸ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ, ಅವರ ಪತ್ನಿ ಮಧುಮಿತಾ ದತ್ತ ಅವರು ದೂರು‌ ನೀಡಿದ್ದರು. ದೂರು ಆಧರಿಸಿ ಸಾಫ್ಟ್‌ವೇರ್ ಇಂಜಿನಿಯರ್‌ ವಿಕಾಸ್ ಕುಮಾರ್ ಅವರನ್ನು ಸೋಮವಾರ (ಏ.21) ರಾತ್ರಿ ಪೊಲೀಸರು ಬಂಧಿಸಿದ್ದರು.

ಆದರೆ, ಶಿಲಾದಿತ್ಯ ಬೋಸ್ ಅವರೇ ವಿಕಾಸ್ ಮೇಲೆ ಹಲ್ಲೆ ನಡೆಸಿರುವುದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಅದನ್ನು ಆಧರಿಸಿ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಗಳು ಹೇಳಿವೆ.

“ಸೋಮವಾರ ಬೆಳಿಗ್ಗೆ ಸ್ನೇಹಿತನ ಬೈಕ್ ವಾಪಸ್ ನೀಡಲು ನಾನು ಹೋಗುತ್ತಿದ್ದೆ. ಟಿನ್‌ ಫ್ಯಾಕ್ಟರಿ ಬಳಿ ಬೈಕ್‌ಗೆ ಕಾರು ತಾಗಿದೆ. ಕಾರನ್ನು ಅಡ್ಡಹಾಕಿ ಏಕೆ ಗುದ್ದಿದ್ದು? ಎಂದು ಪ್ರಶ್ನಿಸಿದ್ದಕ್ಕೆ ಕಾರಿನಲ್ಲಿದ್ದ ವ್ಯಕ್ತಿ ಕಾಲಿನಿಂದ ಒದ್ದು ಬೈಕನ್ನು ಕೆಳಗೆ ಬೀಳಿಸಿದ್ದಾರೆ” ಎಂದು ಹಲ್ಲೆಗೊಳಗಾದ ವಿಕಾಸ್ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ ಎಂದು ವರದಿಗಳು ಹೇಳಿವೆ.

“ನಾನು ಆಕ್ಷೇಪ ವ್ಯಕ್ತಪಡಿಸಿದಾಗ ಅವರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ನಾನು ಸ್ನೇಹಿತನಿಗೆ ಕರೆ ಮಾಡಲು ಮುಂದಾದಾಗ ಮೊಬೈಲ್ ಮತ್ತು ಬೈಕ್ ಕೀ ಕಿತ್ತು ಎಸೆದಿದ್ದಾರೆ. ನನ್ನ ಕುತ್ತಿಗೆ ಹಿಡಿದು ಸಾಯಿಸಲು ಯತ್ನಿಸಿದ್ದಾರೆ” ಎಂದು ಹೇಳಿದ್ದಾರೆ ಎಂದಿವೆ.

ಸುಳ್ಳು ಹೇಳಿದ ವಿಂಗ್ ಕಮಾಂಡರ್

ನನ್ನ ಮೇಲೆ ಹಲ್ಲೆಯಾಗಿದೆ ಎಂದು ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಅವರು ವಿಡಿಯೋ ಮೂಲಕ ಆರೋಪಿಸಿದ್ದರು. ಈ ವೇಳೆ ಅವರ ಹಣೆಯಿಂದ ರಕ್ತ ಸೋರುತ್ತಿತ್ತು. “ಕನ್ನಡ ಭಾಷೆಯ ಕಾರಣಕ್ಕೆ ನನ್ನ ಮೇಲೆ ಹಲ್ಲೆಯಾಗಿದೆ. ಡಿಆರ್‌ಡಿವೋ ಸ್ಟಿಕರ್ ನೋಡಿ ಹಲ್ಲೆ ಮಾಡಿದ್ದಾರೆ. ಇದು ಕರ್ನಾಟಕದ ಪರಿಸ್ಥಿತಿ” ಎಂಬಿತ್ಯಾದಿ ಆರೋಪಗಳನ್ನು ಶಿಲಾದಿತ್ಯ ಬೋಸ್ ಮಾಡಿದ್ದರು.

ಆದರೆ, ಪೊಲೀಸರು ಸಿಸಿಟಿವಿ ವಿಡಿಯೋಗಳನ್ನು ಪರಿಶೀಲಿಸಿದಾಗ, ಶಿಲಾದಿತ್ಯ ಬೋಸ್ ಅವರೇ ಟೆಕಿ ವಿಕಾಸ್ ಅವರನ್ನು ಅಟ್ಟಾಡಿಸಿ ಹಲ್ಲೆ ಮಾಡಿರುವುದು ಕಂಡು ಬಂದಿದೆ. ಅವರ ಪತ್ನಿ ಮಧುಮಿತಾ ಅವರೂ ವಾಗ್ವಾದ ನಡೆಸಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ವರದಿಗಳ ಪ್ರಕಾರ, ವಿಕಾಸ್ ಅವರಿಗೆ ಹಲ್ಲೆ ನಡೆಸುವ ವೇಳೆ ಡಿಚ್ಚಿ ಹೊಡೆಯಲು ವಿಂಗ್ ಕಮಾಂಡರ್ ಯತ್ನಿಸಿದ್ದರು. ಈ ವೇಳೆ ಅವರ ಹಣೆಗೆ ಗಾಯವಾಗಿ ರಕ್ತ ಬಂದಿದೆ.

ಗಲಾಟೆ ನಡೆದ ಸಂದರ್ಭ ವಿಂಗ್ ಕಮಾಂಡರ್ ವಿಕಾಸ್ ಅವರ ಬೈಕ್‌ ಅನ್ನು ಬೀಳಿಸಿದ್ದಾರೆ. ಈ ವೇಳೆ ವಿಕಾಸ್ ಬೈಕ್ ಕೀ ತೆಗೆದು ಕೈಯಲ್ಲಿ ಹಿಡಿದುಕೊಂಡಿದ್ದರು. ರೊಚ್ಚಿಗೆದ್ದ ವಿಂಗ್ ಕಮಾಂಡರ್ ವಿಕಾಸ್‌ಗೆ ಡಿಚ್ಚಿ ಹೊಡೆಯಲು ಮುಂದಾಗಿದ್ದಾರೆ. ಈ ವೇಳೆ ವಿಕಾಸ್ ಕೈ ಅಡ್ಡ ಹಿಡಿದಿದ್ದಾರೆ. ಆಗ ಕೈಯಲ್ಲಿದ್ದ ಬೈಕ್ ಕೀ ವಿಂಗ್ ಕಮಾಂಡರ್ ಹಣೆಗೆ ತಾಗಿ ರಕ್ತ ಬಂದಿದೆ. ಇದನ್ನೇ ಸಿಂಪತಿ ವಿಡಿಯೋಗೆ ಬಳಸಿಕೊಂಡ ವಿಂಗ್ ಕಮಾಂಡರ್, “ದೇವರು ನನಗೆ ಪವರ್ ಕೊಟ್ಟಿರೋದು ಸೇಡು ತೀರಿಸಿಕೊಳ್ಳಲು ಅಲ್ಲ” ಎಂದು ಸುಳ್ಳು ಹೇಳಿದ್ದಾರೆ.

ಕನ್ನಡ ಭಾಷೆಯ ವಿಚಾರ ಹಾಗೂ ತನ್ನ ಮೇಲೆ ಹಲ್ಲೆ ನಡೆಯುವಾಗ ಸ್ಥಳೀಯರು ಯಾರೂ ನೆರವಿಗೆ ಬರಲಿಲ್ಲ ಎಂದು ವಿಂಗ್ ಕಮಾಂಡರ್ ವಿಡಿಯೋ ಮಾಡಿ ಸಿಂಪತಿ ಗಿಟ್ಟಿಸಿಕೊಳ್ಳಲು ಯತ್ನಿಸಿದ್ದಾರೆ. ಅವರ ಕಾರಿನ ಡ್ಯಾಶ್‌ ಕ್ಯಾಮರಾ ವಿಡಿಯೋ ಬಿಡುಗಡೆ ಮಾಡದೆ ಹಲ್ಲೆ ನಡೆದಿದೆ ಎಂಬ ವಿಡಿಯೋ ಅಷ್ಟೇ ಅಪ್ಲೋಡ್‌ ಮಾಡಿದ್ದರು. ಸಿಸಿಟಿವಿ ವಿಡಿಯೋಗಳು ಹೊರ ಬರುತ್ತಿದ್ದಂತೆ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಮುಖವಾಡ ಕಳಚಿದೆ.

ವಿಕಾಸ್ ಪಕ್ಕೆಲುಬುಗಳಿಗೆ ವಿಂಗ್ ಕಮಾಂಡರ್ ಕಾಲಿನಿಂದ ಒದ್ದಿರುವ ಹಿನ್ನೆಲೆ, ಅವರು ಪಕ್ಕೆಲುವು ನೋವಿನಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಹಲ್ಲೆಗೊಳಗಾದ ವಿಕಾಸ್ ಪರ ಕನ್ನಡಪರ ಸಂಘಟನೆಗಳು ನಿಂತಿವೆ. ಸೋಮವಾರ ಸಂಜೆಯಿಂದಲೇ ವಿಂಗ್‌ ಕಮಾಂಡರ್ ಶಿಲಾದಿತ್ಯ ಬೋಸ್ ಬಂಧನಕ್ಕೆ ಆಗ್ರಹ ವ್ಯಕ್ತವಾಗಿತ್ತು.

ವಿಕಾಸ್‌ಗೆ ಕಾನೂನಿನ ನೆರವು ನೀಡಲು ಸಂಘಟನೆಗಳು ಮುಂದಾಗಿವೆ. ಕನ್ನಡ ಸಂಘಟನೆಗಳ ಒತ್ತಡದ ಬಳಿಕ ವಿಕಾಸ್ ನೀಡಿದ ದೂರು ಸ್ವೀಕರಿಸಿರುವ ಬೈಯಪ್ಪನಹಳ್ಳಿ ಪೊಲೀಸರು ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ವಿರುದ್ದ ಕೊಲೆಯ್ನ ಮತ್ತು ಇತರ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಆಟೋ ಚಾಲಕನೊಂದಿಗಿನ ‘ಹಿಂದಿ ಜಗಳ’ಕ್ಕೆ ಕನ್ನಡದಲ್ಲಿ ಕ್ಷಮೆಯಾಚಿಸಿದ ಉತ್ತರ ಭಾರತೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...