Homeಕರ್ನಾಟಕಬೆಂಗಳೂರು | ಹಲ್ಲೆಯ ಸುಳ್ಳು ಕಥೆ ಕಟ್ಟಿದ ವಿಂಗ್ ಕಮಾಂಡರ್ ಮೇಲೆ ಕೊಲೆ ಯತ್ನ ಕೇಸ್

ಬೆಂಗಳೂರು | ಹಲ್ಲೆಯ ಸುಳ್ಳು ಕಥೆ ಕಟ್ಟಿದ ವಿಂಗ್ ಕಮಾಂಡರ್ ಮೇಲೆ ಕೊಲೆ ಯತ್ನ ಕೇಸ್

- Advertisement -
- Advertisement -

ಸಾಫ್ಟ್‌ವೇರ್‌ ಉದ್ಯೋಗಿಗೆ ಹಲ್ಲೆ ನಡೆಸಿ ತನ್ನ ಮೇಲೆಯೇ ಹಲ್ಲೆಯಾಗಿದೆ ಎಂದು ಸುಳ್ಳು ಆರೋಪ ಮಾಡಿದ್ದ ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಅವರ ವಿರುದ್ದ ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.

ಭಾರತೀಯ ನ್ಯಾಯ ಸಂಹಿತೆ (ಬಿಎಸ್‌ಎಸ್‌) ಸೆಕ್ಷನ್‌ 109 (ಕೊಲೆಯತ್ನ), 115(2) (ಮಾರಣಾಂತಿಕ ಹಲ್ಲೆ), 304 (ಬಲವಂತವಾಗಿ ಮೈ ಮೇಲೆ ಇರುವ ವಸ್ತು ಕಿತ್ತುಕೊಳ್ಳುವುದು), 324 (ಅರಿವಿಗೆ ಇದ್ದರೂ ವಸ್ತುಗಳನ್ನು ಉದ್ದೇಶಪೂರ್ವಕವಾಗಿ ಹಾಳು ಮಾಡುವುದು), 352 (ಶಾಂತಿಭಂಗ) ರ ಅಡಿ ಶಿಲಾದಿತ್ಯ ಬೋಸ್ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗಿದೆ ಎಂದು ವರದಿಗಳು ಹೇಳಿವೆ.

ಶಿಲಾದಿತ್ಯ ಬೋಸ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ, ಅವರ ಪತ್ನಿ ಮಧುಮಿತಾ ದತ್ತ ಅವರು ದೂರು‌ ನೀಡಿದ್ದರು. ದೂರು ಆಧರಿಸಿ ಸಾಫ್ಟ್‌ವೇರ್ ಇಂಜಿನಿಯರ್‌ ವಿಕಾಸ್ ಕುಮಾರ್ ಅವರನ್ನು ಸೋಮವಾರ (ಏ.21) ರಾತ್ರಿ ಪೊಲೀಸರು ಬಂಧಿಸಿದ್ದರು.

ಆದರೆ, ಶಿಲಾದಿತ್ಯ ಬೋಸ್ ಅವರೇ ವಿಕಾಸ್ ಮೇಲೆ ಹಲ್ಲೆ ನಡೆಸಿರುವುದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಅದನ್ನು ಆಧರಿಸಿ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಗಳು ಹೇಳಿವೆ.

“ಸೋಮವಾರ ಬೆಳಿಗ್ಗೆ ಸ್ನೇಹಿತನ ಬೈಕ್ ವಾಪಸ್ ನೀಡಲು ನಾನು ಹೋಗುತ್ತಿದ್ದೆ. ಟಿನ್‌ ಫ್ಯಾಕ್ಟರಿ ಬಳಿ ಬೈಕ್‌ಗೆ ಕಾರು ತಾಗಿದೆ. ಕಾರನ್ನು ಅಡ್ಡಹಾಕಿ ಏಕೆ ಗುದ್ದಿದ್ದು? ಎಂದು ಪ್ರಶ್ನಿಸಿದ್ದಕ್ಕೆ ಕಾರಿನಲ್ಲಿದ್ದ ವ್ಯಕ್ತಿ ಕಾಲಿನಿಂದ ಒದ್ದು ಬೈಕನ್ನು ಕೆಳಗೆ ಬೀಳಿಸಿದ್ದಾರೆ” ಎಂದು ಹಲ್ಲೆಗೊಳಗಾದ ವಿಕಾಸ್ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ ಎಂದು ವರದಿಗಳು ಹೇಳಿವೆ.

“ನಾನು ಆಕ್ಷೇಪ ವ್ಯಕ್ತಪಡಿಸಿದಾಗ ಅವರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ನಾನು ಸ್ನೇಹಿತನಿಗೆ ಕರೆ ಮಾಡಲು ಮುಂದಾದಾಗ ಮೊಬೈಲ್ ಮತ್ತು ಬೈಕ್ ಕೀ ಕಿತ್ತು ಎಸೆದಿದ್ದಾರೆ. ನನ್ನ ಕುತ್ತಿಗೆ ಹಿಡಿದು ಸಾಯಿಸಲು ಯತ್ನಿಸಿದ್ದಾರೆ” ಎಂದು ಹೇಳಿದ್ದಾರೆ ಎಂದಿವೆ.

ಸುಳ್ಳು ಹೇಳಿದ ವಿಂಗ್ ಕಮಾಂಡರ್

ನನ್ನ ಮೇಲೆ ಹಲ್ಲೆಯಾಗಿದೆ ಎಂದು ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಅವರು ವಿಡಿಯೋ ಮೂಲಕ ಆರೋಪಿಸಿದ್ದರು. ಈ ವೇಳೆ ಅವರ ಹಣೆಯಿಂದ ರಕ್ತ ಸೋರುತ್ತಿತ್ತು. “ಕನ್ನಡ ಭಾಷೆಯ ಕಾರಣಕ್ಕೆ ನನ್ನ ಮೇಲೆ ಹಲ್ಲೆಯಾಗಿದೆ. ಡಿಆರ್‌ಡಿವೋ ಸ್ಟಿಕರ್ ನೋಡಿ ಹಲ್ಲೆ ಮಾಡಿದ್ದಾರೆ. ಇದು ಕರ್ನಾಟಕದ ಪರಿಸ್ಥಿತಿ” ಎಂಬಿತ್ಯಾದಿ ಆರೋಪಗಳನ್ನು ಶಿಲಾದಿತ್ಯ ಬೋಸ್ ಮಾಡಿದ್ದರು.

ಆದರೆ, ಪೊಲೀಸರು ಸಿಸಿಟಿವಿ ವಿಡಿಯೋಗಳನ್ನು ಪರಿಶೀಲಿಸಿದಾಗ, ಶಿಲಾದಿತ್ಯ ಬೋಸ್ ಅವರೇ ಟೆಕಿ ವಿಕಾಸ್ ಅವರನ್ನು ಅಟ್ಟಾಡಿಸಿ ಹಲ್ಲೆ ಮಾಡಿರುವುದು ಕಂಡು ಬಂದಿದೆ. ಅವರ ಪತ್ನಿ ಮಧುಮಿತಾ ಅವರೂ ವಾಗ್ವಾದ ನಡೆಸಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ವರದಿಗಳ ಪ್ರಕಾರ, ವಿಕಾಸ್ ಅವರಿಗೆ ಹಲ್ಲೆ ನಡೆಸುವ ವೇಳೆ ಡಿಚ್ಚಿ ಹೊಡೆಯಲು ವಿಂಗ್ ಕಮಾಂಡರ್ ಯತ್ನಿಸಿದ್ದರು. ಈ ವೇಳೆ ಅವರ ಹಣೆಗೆ ಗಾಯವಾಗಿ ರಕ್ತ ಬಂದಿದೆ.

ಗಲಾಟೆ ನಡೆದ ಸಂದರ್ಭ ವಿಂಗ್ ಕಮಾಂಡರ್ ವಿಕಾಸ್ ಅವರ ಬೈಕ್‌ ಅನ್ನು ಬೀಳಿಸಿದ್ದಾರೆ. ಈ ವೇಳೆ ವಿಕಾಸ್ ಬೈಕ್ ಕೀ ತೆಗೆದು ಕೈಯಲ್ಲಿ ಹಿಡಿದುಕೊಂಡಿದ್ದರು. ರೊಚ್ಚಿಗೆದ್ದ ವಿಂಗ್ ಕಮಾಂಡರ್ ವಿಕಾಸ್‌ಗೆ ಡಿಚ್ಚಿ ಹೊಡೆಯಲು ಮುಂದಾಗಿದ್ದಾರೆ. ಈ ವೇಳೆ ವಿಕಾಸ್ ಕೈ ಅಡ್ಡ ಹಿಡಿದಿದ್ದಾರೆ. ಆಗ ಕೈಯಲ್ಲಿದ್ದ ಬೈಕ್ ಕೀ ವಿಂಗ್ ಕಮಾಂಡರ್ ಹಣೆಗೆ ತಾಗಿ ರಕ್ತ ಬಂದಿದೆ. ಇದನ್ನೇ ಸಿಂಪತಿ ವಿಡಿಯೋಗೆ ಬಳಸಿಕೊಂಡ ವಿಂಗ್ ಕಮಾಂಡರ್, “ದೇವರು ನನಗೆ ಪವರ್ ಕೊಟ್ಟಿರೋದು ಸೇಡು ತೀರಿಸಿಕೊಳ್ಳಲು ಅಲ್ಲ” ಎಂದು ಸುಳ್ಳು ಹೇಳಿದ್ದಾರೆ.

ಕನ್ನಡ ಭಾಷೆಯ ವಿಚಾರ ಹಾಗೂ ತನ್ನ ಮೇಲೆ ಹಲ್ಲೆ ನಡೆಯುವಾಗ ಸ್ಥಳೀಯರು ಯಾರೂ ನೆರವಿಗೆ ಬರಲಿಲ್ಲ ಎಂದು ವಿಂಗ್ ಕಮಾಂಡರ್ ವಿಡಿಯೋ ಮಾಡಿ ಸಿಂಪತಿ ಗಿಟ್ಟಿಸಿಕೊಳ್ಳಲು ಯತ್ನಿಸಿದ್ದಾರೆ. ಅವರ ಕಾರಿನ ಡ್ಯಾಶ್‌ ಕ್ಯಾಮರಾ ವಿಡಿಯೋ ಬಿಡುಗಡೆ ಮಾಡದೆ ಹಲ್ಲೆ ನಡೆದಿದೆ ಎಂಬ ವಿಡಿಯೋ ಅಷ್ಟೇ ಅಪ್ಲೋಡ್‌ ಮಾಡಿದ್ದರು. ಸಿಸಿಟಿವಿ ವಿಡಿಯೋಗಳು ಹೊರ ಬರುತ್ತಿದ್ದಂತೆ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಮುಖವಾಡ ಕಳಚಿದೆ.

ವಿಕಾಸ್ ಪಕ್ಕೆಲುಬುಗಳಿಗೆ ವಿಂಗ್ ಕಮಾಂಡರ್ ಕಾಲಿನಿಂದ ಒದ್ದಿರುವ ಹಿನ್ನೆಲೆ, ಅವರು ಪಕ್ಕೆಲುವು ನೋವಿನಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಹಲ್ಲೆಗೊಳಗಾದ ವಿಕಾಸ್ ಪರ ಕನ್ನಡಪರ ಸಂಘಟನೆಗಳು ನಿಂತಿವೆ. ಸೋಮವಾರ ಸಂಜೆಯಿಂದಲೇ ವಿಂಗ್‌ ಕಮಾಂಡರ್ ಶಿಲಾದಿತ್ಯ ಬೋಸ್ ಬಂಧನಕ್ಕೆ ಆಗ್ರಹ ವ್ಯಕ್ತವಾಗಿತ್ತು.

ವಿಕಾಸ್‌ಗೆ ಕಾನೂನಿನ ನೆರವು ನೀಡಲು ಸಂಘಟನೆಗಳು ಮುಂದಾಗಿವೆ. ಕನ್ನಡ ಸಂಘಟನೆಗಳ ಒತ್ತಡದ ಬಳಿಕ ವಿಕಾಸ್ ನೀಡಿದ ದೂರು ಸ್ವೀಕರಿಸಿರುವ ಬೈಯಪ್ಪನಹಳ್ಳಿ ಪೊಲೀಸರು ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ವಿರುದ್ದ ಕೊಲೆಯ್ನ ಮತ್ತು ಇತರ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಆಟೋ ಚಾಲಕನೊಂದಿಗಿನ ‘ಹಿಂದಿ ಜಗಳ’ಕ್ಕೆ ಕನ್ನಡದಲ್ಲಿ ಕ್ಷಮೆಯಾಚಿಸಿದ ಉತ್ತರ ಭಾರತೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...