Homeಕರ್ನಾಟಕನಾಳೆ ಬೆಂಗಳೂರು, ಶುಕ್ರವಾರ ಅಖಂಡ ಕರ್ನಾಟಕ ಬಂದ್‌ಗೆ ಕರೆ: ಯಾವ ಸೌಲಭ್ಯ ಇರಲಿದೆ, ಏನಿರಲ್ಲ- ಮಾಹಿತಿ...

ನಾಳೆ ಬೆಂಗಳೂರು, ಶುಕ್ರವಾರ ಅಖಂಡ ಕರ್ನಾಟಕ ಬಂದ್‌ಗೆ ಕರೆ: ಯಾವ ಸೌಲಭ್ಯ ಇರಲಿದೆ, ಏನಿರಲ್ಲ- ಮಾಹಿತಿ ಇಲ್ಲಿದೆ…

- Advertisement -
- Advertisement -

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕರುನಾಡಿನಲ್ಲಿ ಹೋರಾಟಗಳು ತೀವ್ರ ಸ್ವರೂಪಕ್ಕೆ ತಿರುಗಿದೆ. ಈಗಾಗಲೇ ಮಂಡ್ಯ ಮದ್ದೂರು ಬಂದ್ ಸಕ್ಸಸ್ ಆಗಿದ್ದು, ನಾಳೆ(ಸೆಪ್ಟೆಂಬರ್ 26) ರಾಜಧಾನಿ ಬೆಂಗಳೂರು ಬಂದ್​ಗೆ ಕರೆ ನೀಡಲಾಗಿದೆ. ಈ ಮಧ್ಯೆ ಸೆಪ್ಟೆಂಬರ್ 29 ರಂದು ಅಖಂಡ ಕರ್ನಾಟಕ ಬಂದ್  ಮಾಡಲು ತೀರ್ಮಾನಿಸಲಾಗಿದೆ.

ರವಿವಾರ ವಾಟಾಳ್ ನಾಗರಾಜ್ ಹಾಗೂ ಕರವೇ ಪ್ರವೀಣ್ ಶೆಟ್ಟಿ ಬಣದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯ್ತು. ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್​ನಲ್ಲಿ ಕಪ್ಪು ಬಟ್ಟೆ ಪ್ರದರ್ಶನ ಮಾಡಿ ಕರಾಳ ದಿನ ಅಂತಾ ಆಕ್ರೋಶ ಹೊರಹಾಕಲಾಯ್ತು. ಇದೇ ಪ್ರತಿಭಟನೆ ವೇಳೆಯೇ ವಾಟಾಳ್ ನಾಗರಾಜ್, ಶುಕ್ರವಾರ ಅಖಂಡ ಕರ್ನಾಟಕ ಬಂದ್ ಮಾಡಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.

ಸೆಪ್ಟೆಂಬರ್ 29ಕ್ಕೆ ಕರೆ ನೀಡಲಾಗಿರುವ ಅಖಂಡ ಕರ್ನಾಟಕ ಬಂದ್ ಸಂಬಂಧ ಇಂದು(ಸೆ.25) ವಾಟಾಳ್ ನಾಗರಾಜ್ ಮತ್ತು ಕನ್ನಡ ಸಂಘಟನೆಗಳು ಮತ್ತೊಂದು ಸುತ್ತಿನ ಸಭೆ ನಡೆಸಿದವು. ಈ ಸಭೆಯಲ್ಲಿ ಹೋರಾಟದ ರೂಪುರೇಷೆ ನಿರ್ಧಾರ ಮಾಡಲಾಗಿದೆ.

ಇನ್ನು ಮಂಗಳವಾರ ನಡೆಯುವ ಬೆಂಗಳೂರು ಬಂದ್ ವಿಚಾರವಾಗಿ ರವಿವಾರ ಪ್ರತಿಕ್ರಿಯೆ ನೀಡಿದ್ದ ವಾಟಾಳ್ ನಾಗಾರಾಜ್, ”ಅವರಿಗೆ ಬಂದ್ ಮಾಡಿ ಅಂತಾನೂ ಹೇಳಲ್ಲ, ಬಿಡಿ ಅಂತಾನೂ ಹೇಳಲ್ಲ. ಒಟ್ಟಿನಲ್ಲಿ ಶುಕ್ರವಾರ ಕರ್ನಾಟಕ ಬಂದ್ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಕಾವೇರಿ ನದಿ ನೀರು ಹಂಚಿಕೆ ವಿವಾದ: ಸೆ.26ಕ್ಕೆ ಬೆಂಗಳೂರು ಬಂದ್‌

ಮಂಗಳವಾರ ಬೆಂಗಳೂರು ಬಂದ್; ಯಾವ ಸೇವೆ ಇರತ್ತೆ, ಯಾವುದು ಇರಲ್ಲ…

ಸುಪ್ರೀಂ ಕೋರ್ಟ್‌ ಆದೇಶದಂತೆ ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ಸ್‌ ನೀರು ಹರಿಸುವುದನ್ನು ಖಂಡಿಸಿ ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಸೇರಿದಂತೆ ಹಲವು ಸಂಘ ಸಂಸ್ಥೆಗಳು ಮಂಗಳವಾರದಂದು ಬೆಂಗಳೂರು ಬಂದ್‌ಗೆ ಕರೆ ನೀಡಿವೆ.

ನಾಳೆ ನಗರದ ಹಲವು ಕಾರ್ಯಕ್ರಮಗಳು ಸ್ಥಗಿತಗೊಳ್ಳುವ ನಿರೀಕ್ಷೆಯಿದೆ. ರಾಜ್ಯಾದ್ಯಂತ 175 ಕ್ಕೂ ಹೆಚ್ಚು ಗುಂಪುಗಳು ಬಂದ್‌ಗೆ ಬೆಂಬಲ ನೀಡಿದ್ದು, ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸುವ ರೈತ ಸಂಘಟನೆಗಳನ್ನು ಬೆಂಬಲಿಸುವುದಾಗಿ ಹೇಳಿಕೊಂಡಿವೆ.

1. ಕ್ಯಾಬ್ ಸೇವೆಗಳು (ಓಲಾ, ಉಬರ್) ಇರಲ್ಲ: ಓಲಾ ಉಬರ್ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ತನ್ವೀರ್ ಪಾಷಾ ಅವರು ಕಾವೇರಿ ಪರ ಪ್ರತಿಭಟನೆಗೆ ತಮ್ಮ ಬೆಂಬಲವನ್ನು ಘೋಷಿಸಿದ್ದಾರೆ.

2. ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ ಸೇವೆ ವ್ಯತ್ಯಯ: ಬೆಂಗಳೂರು ಬಂದ್‌ಗೆ ಕೆಎಸ್‌ಆರ್‌ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಶನ್ ಬೆಂಬಲ ನೀಡಿದ್ದು, ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಎರಡೂ ಸೇವೆಗಳು ಇರಲ್ಲ ಎಂದು ತಿಳಿದು ಬಂದಿದೆ.

3. ವಿಮಾನ ನಿಲ್ದಾಣ ಟ್ಯಾಕ್ಸಿ ಸೇವೆಗಳು ಇರುವುದಿಲ್ಲ ಎನ್ನಲಾಗಿದ್ದು, ಆದರೆ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ನಿಯಮಿತವಾದ ನಮ್ಮ ಮೆಟ್ರೋ ಸೇವೆಗಳನ್ನು ಒದಗಿಸುವುದನ್ನು ಮುಂದುವರಿಸುವುದಾಗಿ ತಿಳಿಸಿದೆ.

4. ಶಾಲಾ-ಕಾಲೇಜುಗಳಿಗೆ ರಜೆ: ಕಾವೇರಿ ಪರ ಕಪ್ಪು ಪಟ್ಟಿ ಕಟ್ಟಿಕೊಂಡು ಬೆಂಬಲ ಸೂಚಿಸುವುದಾಗಿ ಖಾಸಗಿ ಶಾಲಾ-ಕಾಲೇಜುಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಹೇಳಿದ್ದು, ಹಲವು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿವೆ.

5. ರೆಸ್ಟೋರೆಂಟ್‌ಗಳು: ಹೋಟೆಲ್ ಮತ್ತು ರೆಸ್ಟೋರೆಂಟ್ ಸಂಘಗಳು ಬಂದ್‌ಗೆ ತಮ್ಮ ಬೆಂಬಲವನ್ನು ನೀಡಿವೆ ಮತ್ತು ಅವರು ತಮ್ಮ ಔಟ್‌ಲೆಟ್ ಅನ್ನು ಮುಚ್ಚುವುದಾಗಿ ಹೇಳಿವೆ. 6. ಆಸ್ಪತ್ರೆಗಳು: ಆಸ್ಪತ್ರೆಗಳು, ನರ್ಸಿಂಗ್ ಹೋಮ್‌ಗಳು, ಫಾರ್ಮಸಿಗಳು ಮತ್ತು ಸರ್ಕಾರಿ ಕಚೇರಿಗಳು ಅಗತ್ಯ ಸೇವೆಗಳಲ್ಲಿ ಲಭ್ಯವಿರುತ್ತವೆ. 7. ಚಿತ್ರಮಂದಿರಗಳು: ನಗರದಲ್ಲಿ ಚಿತ್ರಮಂದಿರಗಳು ಮುಚ್ಚುತ್ತವೆ.

ಯಾವ ಯಾವ ಸೇವೆ/ಸೌಲಭ್ಯ ಇರಲಿದೆ..

1 ಆಸ್ಪತ್ರೆ

2 ಮೆಡಿಕಲ್‌ ಶಾಪ್‌ಗಳು

3 ತರಕಾರಿ ಅಂಗಡಿಗಳು

4 ದಿನಸಿ ಅಂಗಡಿಗಳು

5 ಮೆಟ್ರೋ

6 ಅಂಚೆ ಕಚೇರಿ

ಲಭ್ಯವಿಲ್ಲದಿರುವ ಸೇವೆಗಳು:

1 ಸರ್ಕಾರಿ ಬಸ್‌, ಖಾಸಗಿ ಬಸ್‌

2 ಬಿಎಂಟಿಸಿ ಬಸ್‌

3 ಹೋಟೆಲ್‌ಗಳು

4 ಕೆಲವು ಕೈಗಾರಿಕೆಗಳು

5 ಶಾಲೆ, ಕಾಲೇಜು

6 ಐಟಿ ಕಂಪೆನಿಗಳು (ವರ್ಕ್‌ ಫ್ರಮ್‌ ಹೋಂ ಸಾಧ್ಯತೆ)

7 ಆಟೋ ರಿಕ್ಷಾ

8 ಕ್ಯಾಬ್‌ (ಓಲಾ, ಉಬರ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...