Homeಕರ್ನಾಟಕನಾಳೆ ಬೆಂಗಳೂರು, ಶುಕ್ರವಾರ ಅಖಂಡ ಕರ್ನಾಟಕ ಬಂದ್‌ಗೆ ಕರೆ: ಯಾವ ಸೌಲಭ್ಯ ಇರಲಿದೆ, ಏನಿರಲ್ಲ- ಮಾಹಿತಿ...

ನಾಳೆ ಬೆಂಗಳೂರು, ಶುಕ್ರವಾರ ಅಖಂಡ ಕರ್ನಾಟಕ ಬಂದ್‌ಗೆ ಕರೆ: ಯಾವ ಸೌಲಭ್ಯ ಇರಲಿದೆ, ಏನಿರಲ್ಲ- ಮಾಹಿತಿ ಇಲ್ಲಿದೆ…

- Advertisement -
- Advertisement -

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕರುನಾಡಿನಲ್ಲಿ ಹೋರಾಟಗಳು ತೀವ್ರ ಸ್ವರೂಪಕ್ಕೆ ತಿರುಗಿದೆ. ಈಗಾಗಲೇ ಮಂಡ್ಯ ಮದ್ದೂರು ಬಂದ್ ಸಕ್ಸಸ್ ಆಗಿದ್ದು, ನಾಳೆ(ಸೆಪ್ಟೆಂಬರ್ 26) ರಾಜಧಾನಿ ಬೆಂಗಳೂರು ಬಂದ್​ಗೆ ಕರೆ ನೀಡಲಾಗಿದೆ. ಈ ಮಧ್ಯೆ ಸೆಪ್ಟೆಂಬರ್ 29 ರಂದು ಅಖಂಡ ಕರ್ನಾಟಕ ಬಂದ್  ಮಾಡಲು ತೀರ್ಮಾನಿಸಲಾಗಿದೆ.

ರವಿವಾರ ವಾಟಾಳ್ ನಾಗರಾಜ್ ಹಾಗೂ ಕರವೇ ಪ್ರವೀಣ್ ಶೆಟ್ಟಿ ಬಣದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯ್ತು. ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್​ನಲ್ಲಿ ಕಪ್ಪು ಬಟ್ಟೆ ಪ್ರದರ್ಶನ ಮಾಡಿ ಕರಾಳ ದಿನ ಅಂತಾ ಆಕ್ರೋಶ ಹೊರಹಾಕಲಾಯ್ತು. ಇದೇ ಪ್ರತಿಭಟನೆ ವೇಳೆಯೇ ವಾಟಾಳ್ ನಾಗರಾಜ್, ಶುಕ್ರವಾರ ಅಖಂಡ ಕರ್ನಾಟಕ ಬಂದ್ ಮಾಡಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.

ಸೆಪ್ಟೆಂಬರ್ 29ಕ್ಕೆ ಕರೆ ನೀಡಲಾಗಿರುವ ಅಖಂಡ ಕರ್ನಾಟಕ ಬಂದ್ ಸಂಬಂಧ ಇಂದು(ಸೆ.25) ವಾಟಾಳ್ ನಾಗರಾಜ್ ಮತ್ತು ಕನ್ನಡ ಸಂಘಟನೆಗಳು ಮತ್ತೊಂದು ಸುತ್ತಿನ ಸಭೆ ನಡೆಸಿದವು. ಈ ಸಭೆಯಲ್ಲಿ ಹೋರಾಟದ ರೂಪುರೇಷೆ ನಿರ್ಧಾರ ಮಾಡಲಾಗಿದೆ.

ಇನ್ನು ಮಂಗಳವಾರ ನಡೆಯುವ ಬೆಂಗಳೂರು ಬಂದ್ ವಿಚಾರವಾಗಿ ರವಿವಾರ ಪ್ರತಿಕ್ರಿಯೆ ನೀಡಿದ್ದ ವಾಟಾಳ್ ನಾಗಾರಾಜ್, ”ಅವರಿಗೆ ಬಂದ್ ಮಾಡಿ ಅಂತಾನೂ ಹೇಳಲ್ಲ, ಬಿಡಿ ಅಂತಾನೂ ಹೇಳಲ್ಲ. ಒಟ್ಟಿನಲ್ಲಿ ಶುಕ್ರವಾರ ಕರ್ನಾಟಕ ಬಂದ್ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಕಾವೇರಿ ನದಿ ನೀರು ಹಂಚಿಕೆ ವಿವಾದ: ಸೆ.26ಕ್ಕೆ ಬೆಂಗಳೂರು ಬಂದ್‌

ಮಂಗಳವಾರ ಬೆಂಗಳೂರು ಬಂದ್; ಯಾವ ಸೇವೆ ಇರತ್ತೆ, ಯಾವುದು ಇರಲ್ಲ…

ಸುಪ್ರೀಂ ಕೋರ್ಟ್‌ ಆದೇಶದಂತೆ ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ಸ್‌ ನೀರು ಹರಿಸುವುದನ್ನು ಖಂಡಿಸಿ ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಸೇರಿದಂತೆ ಹಲವು ಸಂಘ ಸಂಸ್ಥೆಗಳು ಮಂಗಳವಾರದಂದು ಬೆಂಗಳೂರು ಬಂದ್‌ಗೆ ಕರೆ ನೀಡಿವೆ.

ನಾಳೆ ನಗರದ ಹಲವು ಕಾರ್ಯಕ್ರಮಗಳು ಸ್ಥಗಿತಗೊಳ್ಳುವ ನಿರೀಕ್ಷೆಯಿದೆ. ರಾಜ್ಯಾದ್ಯಂತ 175 ಕ್ಕೂ ಹೆಚ್ಚು ಗುಂಪುಗಳು ಬಂದ್‌ಗೆ ಬೆಂಬಲ ನೀಡಿದ್ದು, ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸುವ ರೈತ ಸಂಘಟನೆಗಳನ್ನು ಬೆಂಬಲಿಸುವುದಾಗಿ ಹೇಳಿಕೊಂಡಿವೆ.

1. ಕ್ಯಾಬ್ ಸೇವೆಗಳು (ಓಲಾ, ಉಬರ್) ಇರಲ್ಲ: ಓಲಾ ಉಬರ್ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ತನ್ವೀರ್ ಪಾಷಾ ಅವರು ಕಾವೇರಿ ಪರ ಪ್ರತಿಭಟನೆಗೆ ತಮ್ಮ ಬೆಂಬಲವನ್ನು ಘೋಷಿಸಿದ್ದಾರೆ.

2. ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ ಸೇವೆ ವ್ಯತ್ಯಯ: ಬೆಂಗಳೂರು ಬಂದ್‌ಗೆ ಕೆಎಸ್‌ಆರ್‌ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಶನ್ ಬೆಂಬಲ ನೀಡಿದ್ದು, ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಎರಡೂ ಸೇವೆಗಳು ಇರಲ್ಲ ಎಂದು ತಿಳಿದು ಬಂದಿದೆ.

3. ವಿಮಾನ ನಿಲ್ದಾಣ ಟ್ಯಾಕ್ಸಿ ಸೇವೆಗಳು ಇರುವುದಿಲ್ಲ ಎನ್ನಲಾಗಿದ್ದು, ಆದರೆ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ನಿಯಮಿತವಾದ ನಮ್ಮ ಮೆಟ್ರೋ ಸೇವೆಗಳನ್ನು ಒದಗಿಸುವುದನ್ನು ಮುಂದುವರಿಸುವುದಾಗಿ ತಿಳಿಸಿದೆ.

4. ಶಾಲಾ-ಕಾಲೇಜುಗಳಿಗೆ ರಜೆ: ಕಾವೇರಿ ಪರ ಕಪ್ಪು ಪಟ್ಟಿ ಕಟ್ಟಿಕೊಂಡು ಬೆಂಬಲ ಸೂಚಿಸುವುದಾಗಿ ಖಾಸಗಿ ಶಾಲಾ-ಕಾಲೇಜುಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಹೇಳಿದ್ದು, ಹಲವು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿವೆ.

5. ರೆಸ್ಟೋರೆಂಟ್‌ಗಳು: ಹೋಟೆಲ್ ಮತ್ತು ರೆಸ್ಟೋರೆಂಟ್ ಸಂಘಗಳು ಬಂದ್‌ಗೆ ತಮ್ಮ ಬೆಂಬಲವನ್ನು ನೀಡಿವೆ ಮತ್ತು ಅವರು ತಮ್ಮ ಔಟ್‌ಲೆಟ್ ಅನ್ನು ಮುಚ್ಚುವುದಾಗಿ ಹೇಳಿವೆ. 6. ಆಸ್ಪತ್ರೆಗಳು: ಆಸ್ಪತ್ರೆಗಳು, ನರ್ಸಿಂಗ್ ಹೋಮ್‌ಗಳು, ಫಾರ್ಮಸಿಗಳು ಮತ್ತು ಸರ್ಕಾರಿ ಕಚೇರಿಗಳು ಅಗತ್ಯ ಸೇವೆಗಳಲ್ಲಿ ಲಭ್ಯವಿರುತ್ತವೆ. 7. ಚಿತ್ರಮಂದಿರಗಳು: ನಗರದಲ್ಲಿ ಚಿತ್ರಮಂದಿರಗಳು ಮುಚ್ಚುತ್ತವೆ.

ಯಾವ ಯಾವ ಸೇವೆ/ಸೌಲಭ್ಯ ಇರಲಿದೆ..

1 ಆಸ್ಪತ್ರೆ

2 ಮೆಡಿಕಲ್‌ ಶಾಪ್‌ಗಳು

3 ತರಕಾರಿ ಅಂಗಡಿಗಳು

4 ದಿನಸಿ ಅಂಗಡಿಗಳು

5 ಮೆಟ್ರೋ

6 ಅಂಚೆ ಕಚೇರಿ

ಲಭ್ಯವಿಲ್ಲದಿರುವ ಸೇವೆಗಳು:

1 ಸರ್ಕಾರಿ ಬಸ್‌, ಖಾಸಗಿ ಬಸ್‌

2 ಬಿಎಂಟಿಸಿ ಬಸ್‌

3 ಹೋಟೆಲ್‌ಗಳು

4 ಕೆಲವು ಕೈಗಾರಿಕೆಗಳು

5 ಶಾಲೆ, ಕಾಲೇಜು

6 ಐಟಿ ಕಂಪೆನಿಗಳು (ವರ್ಕ್‌ ಫ್ರಮ್‌ ಹೋಂ ಸಾಧ್ಯತೆ)

7 ಆಟೋ ರಿಕ್ಷಾ

8 ಕ್ಯಾಬ್‌ (ಓಲಾ, ಉಬರ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...