Homeಕರ್ನಾಟಕನಾಳೆ ಬೆಂಗಳೂರು, ಶುಕ್ರವಾರ ಅಖಂಡ ಕರ್ನಾಟಕ ಬಂದ್‌ಗೆ ಕರೆ: ಯಾವ ಸೌಲಭ್ಯ ಇರಲಿದೆ, ಏನಿರಲ್ಲ- ಮಾಹಿತಿ...

ನಾಳೆ ಬೆಂಗಳೂರು, ಶುಕ್ರವಾರ ಅಖಂಡ ಕರ್ನಾಟಕ ಬಂದ್‌ಗೆ ಕರೆ: ಯಾವ ಸೌಲಭ್ಯ ಇರಲಿದೆ, ಏನಿರಲ್ಲ- ಮಾಹಿತಿ ಇಲ್ಲಿದೆ…

- Advertisement -
- Advertisement -

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕರುನಾಡಿನಲ್ಲಿ ಹೋರಾಟಗಳು ತೀವ್ರ ಸ್ವರೂಪಕ್ಕೆ ತಿರುಗಿದೆ. ಈಗಾಗಲೇ ಮಂಡ್ಯ ಮದ್ದೂರು ಬಂದ್ ಸಕ್ಸಸ್ ಆಗಿದ್ದು, ನಾಳೆ(ಸೆಪ್ಟೆಂಬರ್ 26) ರಾಜಧಾನಿ ಬೆಂಗಳೂರು ಬಂದ್​ಗೆ ಕರೆ ನೀಡಲಾಗಿದೆ. ಈ ಮಧ್ಯೆ ಸೆಪ್ಟೆಂಬರ್ 29 ರಂದು ಅಖಂಡ ಕರ್ನಾಟಕ ಬಂದ್  ಮಾಡಲು ತೀರ್ಮಾನಿಸಲಾಗಿದೆ.

ರವಿವಾರ ವಾಟಾಳ್ ನಾಗರಾಜ್ ಹಾಗೂ ಕರವೇ ಪ್ರವೀಣ್ ಶೆಟ್ಟಿ ಬಣದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯ್ತು. ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್​ನಲ್ಲಿ ಕಪ್ಪು ಬಟ್ಟೆ ಪ್ರದರ್ಶನ ಮಾಡಿ ಕರಾಳ ದಿನ ಅಂತಾ ಆಕ್ರೋಶ ಹೊರಹಾಕಲಾಯ್ತು. ಇದೇ ಪ್ರತಿಭಟನೆ ವೇಳೆಯೇ ವಾಟಾಳ್ ನಾಗರಾಜ್, ಶುಕ್ರವಾರ ಅಖಂಡ ಕರ್ನಾಟಕ ಬಂದ್ ಮಾಡಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.

ಸೆಪ್ಟೆಂಬರ್ 29ಕ್ಕೆ ಕರೆ ನೀಡಲಾಗಿರುವ ಅಖಂಡ ಕರ್ನಾಟಕ ಬಂದ್ ಸಂಬಂಧ ಇಂದು(ಸೆ.25) ವಾಟಾಳ್ ನಾಗರಾಜ್ ಮತ್ತು ಕನ್ನಡ ಸಂಘಟನೆಗಳು ಮತ್ತೊಂದು ಸುತ್ತಿನ ಸಭೆ ನಡೆಸಿದವು. ಈ ಸಭೆಯಲ್ಲಿ ಹೋರಾಟದ ರೂಪುರೇಷೆ ನಿರ್ಧಾರ ಮಾಡಲಾಗಿದೆ.

ಇನ್ನು ಮಂಗಳವಾರ ನಡೆಯುವ ಬೆಂಗಳೂರು ಬಂದ್ ವಿಚಾರವಾಗಿ ರವಿವಾರ ಪ್ರತಿಕ್ರಿಯೆ ನೀಡಿದ್ದ ವಾಟಾಳ್ ನಾಗಾರಾಜ್, ”ಅವರಿಗೆ ಬಂದ್ ಮಾಡಿ ಅಂತಾನೂ ಹೇಳಲ್ಲ, ಬಿಡಿ ಅಂತಾನೂ ಹೇಳಲ್ಲ. ಒಟ್ಟಿನಲ್ಲಿ ಶುಕ್ರವಾರ ಕರ್ನಾಟಕ ಬಂದ್ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಕಾವೇರಿ ನದಿ ನೀರು ಹಂಚಿಕೆ ವಿವಾದ: ಸೆ.26ಕ್ಕೆ ಬೆಂಗಳೂರು ಬಂದ್‌

ಮಂಗಳವಾರ ಬೆಂಗಳೂರು ಬಂದ್; ಯಾವ ಸೇವೆ ಇರತ್ತೆ, ಯಾವುದು ಇರಲ್ಲ…

ಸುಪ್ರೀಂ ಕೋರ್ಟ್‌ ಆದೇಶದಂತೆ ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ಸ್‌ ನೀರು ಹರಿಸುವುದನ್ನು ಖಂಡಿಸಿ ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಸೇರಿದಂತೆ ಹಲವು ಸಂಘ ಸಂಸ್ಥೆಗಳು ಮಂಗಳವಾರದಂದು ಬೆಂಗಳೂರು ಬಂದ್‌ಗೆ ಕರೆ ನೀಡಿವೆ.

ನಾಳೆ ನಗರದ ಹಲವು ಕಾರ್ಯಕ್ರಮಗಳು ಸ್ಥಗಿತಗೊಳ್ಳುವ ನಿರೀಕ್ಷೆಯಿದೆ. ರಾಜ್ಯಾದ್ಯಂತ 175 ಕ್ಕೂ ಹೆಚ್ಚು ಗುಂಪುಗಳು ಬಂದ್‌ಗೆ ಬೆಂಬಲ ನೀಡಿದ್ದು, ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸುವ ರೈತ ಸಂಘಟನೆಗಳನ್ನು ಬೆಂಬಲಿಸುವುದಾಗಿ ಹೇಳಿಕೊಂಡಿವೆ.

1. ಕ್ಯಾಬ್ ಸೇವೆಗಳು (ಓಲಾ, ಉಬರ್) ಇರಲ್ಲ: ಓಲಾ ಉಬರ್ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ತನ್ವೀರ್ ಪಾಷಾ ಅವರು ಕಾವೇರಿ ಪರ ಪ್ರತಿಭಟನೆಗೆ ತಮ್ಮ ಬೆಂಬಲವನ್ನು ಘೋಷಿಸಿದ್ದಾರೆ.

2. ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ ಸೇವೆ ವ್ಯತ್ಯಯ: ಬೆಂಗಳೂರು ಬಂದ್‌ಗೆ ಕೆಎಸ್‌ಆರ್‌ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಶನ್ ಬೆಂಬಲ ನೀಡಿದ್ದು, ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಎರಡೂ ಸೇವೆಗಳು ಇರಲ್ಲ ಎಂದು ತಿಳಿದು ಬಂದಿದೆ.

3. ವಿಮಾನ ನಿಲ್ದಾಣ ಟ್ಯಾಕ್ಸಿ ಸೇವೆಗಳು ಇರುವುದಿಲ್ಲ ಎನ್ನಲಾಗಿದ್ದು, ಆದರೆ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ನಿಯಮಿತವಾದ ನಮ್ಮ ಮೆಟ್ರೋ ಸೇವೆಗಳನ್ನು ಒದಗಿಸುವುದನ್ನು ಮುಂದುವರಿಸುವುದಾಗಿ ತಿಳಿಸಿದೆ.

4. ಶಾಲಾ-ಕಾಲೇಜುಗಳಿಗೆ ರಜೆ: ಕಾವೇರಿ ಪರ ಕಪ್ಪು ಪಟ್ಟಿ ಕಟ್ಟಿಕೊಂಡು ಬೆಂಬಲ ಸೂಚಿಸುವುದಾಗಿ ಖಾಸಗಿ ಶಾಲಾ-ಕಾಲೇಜುಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಹೇಳಿದ್ದು, ಹಲವು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿವೆ.

5. ರೆಸ್ಟೋರೆಂಟ್‌ಗಳು: ಹೋಟೆಲ್ ಮತ್ತು ರೆಸ್ಟೋರೆಂಟ್ ಸಂಘಗಳು ಬಂದ್‌ಗೆ ತಮ್ಮ ಬೆಂಬಲವನ್ನು ನೀಡಿವೆ ಮತ್ತು ಅವರು ತಮ್ಮ ಔಟ್‌ಲೆಟ್ ಅನ್ನು ಮುಚ್ಚುವುದಾಗಿ ಹೇಳಿವೆ. 6. ಆಸ್ಪತ್ರೆಗಳು: ಆಸ್ಪತ್ರೆಗಳು, ನರ್ಸಿಂಗ್ ಹೋಮ್‌ಗಳು, ಫಾರ್ಮಸಿಗಳು ಮತ್ತು ಸರ್ಕಾರಿ ಕಚೇರಿಗಳು ಅಗತ್ಯ ಸೇವೆಗಳಲ್ಲಿ ಲಭ್ಯವಿರುತ್ತವೆ. 7. ಚಿತ್ರಮಂದಿರಗಳು: ನಗರದಲ್ಲಿ ಚಿತ್ರಮಂದಿರಗಳು ಮುಚ್ಚುತ್ತವೆ.

ಯಾವ ಯಾವ ಸೇವೆ/ಸೌಲಭ್ಯ ಇರಲಿದೆ..

1 ಆಸ್ಪತ್ರೆ

2 ಮೆಡಿಕಲ್‌ ಶಾಪ್‌ಗಳು

3 ತರಕಾರಿ ಅಂಗಡಿಗಳು

4 ದಿನಸಿ ಅಂಗಡಿಗಳು

5 ಮೆಟ್ರೋ

6 ಅಂಚೆ ಕಚೇರಿ

ಲಭ್ಯವಿಲ್ಲದಿರುವ ಸೇವೆಗಳು:

1 ಸರ್ಕಾರಿ ಬಸ್‌, ಖಾಸಗಿ ಬಸ್‌

2 ಬಿಎಂಟಿಸಿ ಬಸ್‌

3 ಹೋಟೆಲ್‌ಗಳು

4 ಕೆಲವು ಕೈಗಾರಿಕೆಗಳು

5 ಶಾಲೆ, ಕಾಲೇಜು

6 ಐಟಿ ಕಂಪೆನಿಗಳು (ವರ್ಕ್‌ ಫ್ರಮ್‌ ಹೋಂ ಸಾಧ್ಯತೆ)

7 ಆಟೋ ರಿಕ್ಷಾ

8 ಕ್ಯಾಬ್‌ (ಓಲಾ, ಉಬರ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...