Homeಕರ್ನಾಟಕಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: 24 ಕೋಟಿ ರೂಪಾಯಿ ವೆಚ್ಚ ಮಾಡಿದ ಬಿಬಿಎಂಪಿ

ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: 24 ಕೋಟಿ ರೂಪಾಯಿ ವೆಚ್ಚ ಮಾಡಿದ ಬಿಬಿಎಂಪಿ

- Advertisement -
- Advertisement -

ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಮತ್ತು ಭೇಟಿ ಹಿನ್ನೆಲೆ ಪ್ರಮುಖ ಮೂಲಸೌಕರ್ಯಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 24 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ.

ಈ 24 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆಗಳಿಗೆ ಟಾರ್ ಹಾಕುವುದು, ರಸ್ತೆ ಗುಂಡಿಗಳನ್ನು ಮುಚ್ಚುವುದು, ಹೊಸದಾಗಿ ಟಾರ್‍ ಹಾಕಿರುವ ರಸ್ತೆಗಳಿಗೆ ಬಿಳಿ ಪಟ್ಟಿಗಳನ್ನು ಎಳೆಯುವುದು, ಚರಂಡಿ ಸರಿಪಡಿಸುವುದು ಸೇರಿದಂತೆ ಬಹಳ ವರ್ಷಗಳಿಂದ ಹಾಗೆ ಉಳಿದಿದ್ದ ಇನ್ನಿತರ ಕೆಲಸಗಳು ಸೇರಿವೆ.

ಈ ಬಗ್ಗೆ ಮಾಹಿತಿ ನೀಡಿರುವ ಬಿಬಿಎಂಪಿ ವಿಶೇಷ ಆಯುಕ್ತ ರವೀಂದ್ರ ಮಾತನಾಡಿ, ‘ಕೋಮಘಟ್ಟ ಮತ್ತು ಹೆಬ್ಬಾಳ ಸುತ್ತಮುತ್ತಲಿನ ರಸ್ತೆಗಳನ್ನು ಸರಿಪಡಿಸಲು 14 ಕೋಟಿ ರೂಪಾಯಿ ವೆಚ್ಚವಾಗಿದೆ’ ಎಂದಿದ್ದಾರೆ.

ಇದನ್ನೂ ಓದಿ: ‘ಎಷ್ಟು ಮಾಜಿ ಸೈನಿಕರಿಗೆ ಕೆಲಸ ಕೊಟ್ಟಿದ್ದೀರಿ?’: ಅನಂದ್‌ ಮಹೀಂದ್ರಾಗೆ ಮಾಜಿ ಸೈನಿಕರ ಗಂಭೀರ ಪ್ರಶ್ನೆ

ಈಗಿರುವ ಬೀದಿ ದೀಪಗಳನ್ನು ಸರಿಪಡಿಸಲು, ಹೊಸದಾಗಿ ಬೀದಿ ದೀಪಗಳನ್ನು ಅಳವಡಿಸಲು, ಪಾದಚಾರಿ ಮಾರ್ಗಗಳನ್ನು ನಿರ್ಮಿಸಲು ಮತ್ತು ಕಾಂಕ್ರೀಟ್ ಚಪ್ಪಡಿಗಳನ್ನು ಹಾಕಿ ಚರಂಡಿಗಳನ್ನು ಸರಿಪಡಿಸಲು 10 ಕೋಟಿ ರೂಪಾಯ ವೆಚ್ಚವಾಗಿ ಎಂದು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಾಹಿತಿಯ ಪ್ರಕಾರ ತುರ್ತು ಸಂದರ್ಭದಲ್ಲಿ ಅನುದಾನ ಬಳಸಬಹುದಾದ ʻವಿವೇಚನ ಅನುದಾನದಡಿʼ ಈ ವೆಚ್ಚವನ್ನು ಭರಿಸಲಾಗಿದೆ. ಆದರೆ, ಕಳೆದ 1.5 ವರ್ಷಗಳಿಂದ ನಾಗರಿಕ ಸಂಸ್ಥೆಗಳು ಇಲ್ಲಿನ ರಸ್ತೆಗಳು, ರಸ್ತೆ ಗುಂಡಿಗಳು, ಚರಂಡಿಯನ್ನ ಸರಿಪಡಿಸಲು ಹಲವು ಬಾರಿ ಮನವಿ ಮಾಡಿದ್ದರೂ ಏನಾಗಿರಲಿಲ್ಲ. ಆದರೆ, ಪ್ರಧಾನಿಯವರ ಭೇಟಿ ಹಿನ್ನೆಲೆ ಕೇವಲ 4 ದಿನಗಳಲ್ಲಿ ಎಲ್ಲಾ ಕೆಲಸವಾಗಿದೆ.

PC: Murali Kumar K.

ಇನ್ನು ತಮ್ಮ ಭೇಟಿಯ ಸಮಯದಲ್ಲಿ, ಪ್ರಧಾನಮಂತ್ರಿಯವರು ಐಐಎಸ್‌ಸಿಯಲ್ಲಿ ಬ್ರೈನ್ ಸೆಲ್ ರಿಸರ್ಚ್ ಸೆಂಟರ್ ಮತ್ತು 800ಕ್ಕೂ ಹೆಚ್ಚು ಹಾಸಿಗೆ ಸಾಮರ್ಥ್ಯವಿರುವ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯನ್ನು ಉದ್ಘಾಟಿಸಿದ್ದಾರೆ. 15 ಸಾವಿರ ಕೋಟಿ ವೆಚ್ಚದ ಸಬ್ ಅರ್ಬನ್ ರೈಲು ಯೋಜನೆ ಮತ್ತು 35 ಸಾವಿರ ಕೋಟಿ ವೆಚ್ಚದ ಬೆಂಗಳೂರು ಮತ್ತು ಹೊರ ವರ್ತುಲ ರಸ್ತೆ (ರಿಂಗ್ ರೋಡ್) ಅಭಿವೃದ್ಧಿ ಯೋಜನೆಗೆ ಅಡಿಪಾಯ ಹಾಕಿದ್ದಾರೆ.


ಇದನ್ನೂ ಓದಿ: ಹಿಂದೆ ಇದ್ದಂತೆ ಎಲ್ಲ ಕನ್ನಡ ಸಿನಿಮಾಗಳಿಗೂ ತೆರಿಗೆ ವಿನಾಯಿತಿ ನೀಡಿ: ಸಿಎಂಗೆ ನಿರ್ದೇಶಕ ಮಂಸೋರೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...