Homeಕರ್ನಾಟಕಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: 24 ಕೋಟಿ ರೂಪಾಯಿ ವೆಚ್ಚ ಮಾಡಿದ ಬಿಬಿಎಂಪಿ

ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: 24 ಕೋಟಿ ರೂಪಾಯಿ ವೆಚ್ಚ ಮಾಡಿದ ಬಿಬಿಎಂಪಿ

- Advertisement -
- Advertisement -

ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಮತ್ತು ಭೇಟಿ ಹಿನ್ನೆಲೆ ಪ್ರಮುಖ ಮೂಲಸೌಕರ್ಯಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 24 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ.

ಈ 24 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆಗಳಿಗೆ ಟಾರ್ ಹಾಕುವುದು, ರಸ್ತೆ ಗುಂಡಿಗಳನ್ನು ಮುಚ್ಚುವುದು, ಹೊಸದಾಗಿ ಟಾರ್‍ ಹಾಕಿರುವ ರಸ್ತೆಗಳಿಗೆ ಬಿಳಿ ಪಟ್ಟಿಗಳನ್ನು ಎಳೆಯುವುದು, ಚರಂಡಿ ಸರಿಪಡಿಸುವುದು ಸೇರಿದಂತೆ ಬಹಳ ವರ್ಷಗಳಿಂದ ಹಾಗೆ ಉಳಿದಿದ್ದ ಇನ್ನಿತರ ಕೆಲಸಗಳು ಸೇರಿವೆ.

ಈ ಬಗ್ಗೆ ಮಾಹಿತಿ ನೀಡಿರುವ ಬಿಬಿಎಂಪಿ ವಿಶೇಷ ಆಯುಕ್ತ ರವೀಂದ್ರ ಮಾತನಾಡಿ, ‘ಕೋಮಘಟ್ಟ ಮತ್ತು ಹೆಬ್ಬಾಳ ಸುತ್ತಮುತ್ತಲಿನ ರಸ್ತೆಗಳನ್ನು ಸರಿಪಡಿಸಲು 14 ಕೋಟಿ ರೂಪಾಯಿ ವೆಚ್ಚವಾಗಿದೆ’ ಎಂದಿದ್ದಾರೆ.

ಇದನ್ನೂ ಓದಿ: ‘ಎಷ್ಟು ಮಾಜಿ ಸೈನಿಕರಿಗೆ ಕೆಲಸ ಕೊಟ್ಟಿದ್ದೀರಿ?’: ಅನಂದ್‌ ಮಹೀಂದ್ರಾಗೆ ಮಾಜಿ ಸೈನಿಕರ ಗಂಭೀರ ಪ್ರಶ್ನೆ

ಈಗಿರುವ ಬೀದಿ ದೀಪಗಳನ್ನು ಸರಿಪಡಿಸಲು, ಹೊಸದಾಗಿ ಬೀದಿ ದೀಪಗಳನ್ನು ಅಳವಡಿಸಲು, ಪಾದಚಾರಿ ಮಾರ್ಗಗಳನ್ನು ನಿರ್ಮಿಸಲು ಮತ್ತು ಕಾಂಕ್ರೀಟ್ ಚಪ್ಪಡಿಗಳನ್ನು ಹಾಕಿ ಚರಂಡಿಗಳನ್ನು ಸರಿಪಡಿಸಲು 10 ಕೋಟಿ ರೂಪಾಯ ವೆಚ್ಚವಾಗಿ ಎಂದು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಾಹಿತಿಯ ಪ್ರಕಾರ ತುರ್ತು ಸಂದರ್ಭದಲ್ಲಿ ಅನುದಾನ ಬಳಸಬಹುದಾದ ʻವಿವೇಚನ ಅನುದಾನದಡಿʼ ಈ ವೆಚ್ಚವನ್ನು ಭರಿಸಲಾಗಿದೆ. ಆದರೆ, ಕಳೆದ 1.5 ವರ್ಷಗಳಿಂದ ನಾಗರಿಕ ಸಂಸ್ಥೆಗಳು ಇಲ್ಲಿನ ರಸ್ತೆಗಳು, ರಸ್ತೆ ಗುಂಡಿಗಳು, ಚರಂಡಿಯನ್ನ ಸರಿಪಡಿಸಲು ಹಲವು ಬಾರಿ ಮನವಿ ಮಾಡಿದ್ದರೂ ಏನಾಗಿರಲಿಲ್ಲ. ಆದರೆ, ಪ್ರಧಾನಿಯವರ ಭೇಟಿ ಹಿನ್ನೆಲೆ ಕೇವಲ 4 ದಿನಗಳಲ್ಲಿ ಎಲ್ಲಾ ಕೆಲಸವಾಗಿದೆ.

PC: Murali Kumar K.

ಇನ್ನು ತಮ್ಮ ಭೇಟಿಯ ಸಮಯದಲ್ಲಿ, ಪ್ರಧಾನಮಂತ್ರಿಯವರು ಐಐಎಸ್‌ಸಿಯಲ್ಲಿ ಬ್ರೈನ್ ಸೆಲ್ ರಿಸರ್ಚ್ ಸೆಂಟರ್ ಮತ್ತು 800ಕ್ಕೂ ಹೆಚ್ಚು ಹಾಸಿಗೆ ಸಾಮರ್ಥ್ಯವಿರುವ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯನ್ನು ಉದ್ಘಾಟಿಸಿದ್ದಾರೆ. 15 ಸಾವಿರ ಕೋಟಿ ವೆಚ್ಚದ ಸಬ್ ಅರ್ಬನ್ ರೈಲು ಯೋಜನೆ ಮತ್ತು 35 ಸಾವಿರ ಕೋಟಿ ವೆಚ್ಚದ ಬೆಂಗಳೂರು ಮತ್ತು ಹೊರ ವರ್ತುಲ ರಸ್ತೆ (ರಿಂಗ್ ರೋಡ್) ಅಭಿವೃದ್ಧಿ ಯೋಜನೆಗೆ ಅಡಿಪಾಯ ಹಾಕಿದ್ದಾರೆ.


ಇದನ್ನೂ ಓದಿ: ಹಿಂದೆ ಇದ್ದಂತೆ ಎಲ್ಲ ಕನ್ನಡ ಸಿನಿಮಾಗಳಿಗೂ ತೆರಿಗೆ ವಿನಾಯಿತಿ ನೀಡಿ: ಸಿಎಂಗೆ ನಿರ್ದೇಶಕ ಮಂಸೋರೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...