Homeಅಂಕಣಗಳುಬೆಂಗಳೂರು ಭೇಲ್ - 2:ಲಾಕ್ ಡೌನ್ ನಡುವೆ ಬೆಂಗಳೂರಿನ ಬೀದಿ ವ್ಯಾಪಾರಿಗಳು ಸತ್ಯಾಗ್ರಹಕ್ಕೆ ಕರೆ ಕೊಟ್ಟಿದ್ದು...

ಬೆಂಗಳೂರು ಭೇಲ್ – 2:ಲಾಕ್ ಡೌನ್ ನಡುವೆ ಬೆಂಗಳೂರಿನ ಬೀದಿ ವ್ಯಾಪಾರಿಗಳು ಸತ್ಯಾಗ್ರಹಕ್ಕೆ ಕರೆ ಕೊಟ್ಟಿದ್ದು ಏಕೆ?

- Advertisement -
- Advertisement -

ಶನಿವಾರ, ಜುಲೈ 18ನೇ ತಾರೀಖು , ಬೆಂಗಳೂರು ಜಿಲ್ಲಾ ಬೀದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ಹಾಗು ಕರ್ನಾಟಕ ಪ್ರಗತಿಪರ ಬೀದಿ ವ್ಯಾಪಾರಿ ಸಂಘಟನೆ ಸತ್ಯಾಗ್ರಹಕ್ಕೆ ಕರೆ ಕೊಟ್ಟರು. ಇದಕ್ಕೆ ಸ್ಪಂದಿಸಿ ರಾಜ್ಯದ ಇತರೆ ಬೀದಿ ವ್ಯಾಪಾರಿ ಸಂಘಟನೆಗಳು ಹಾಗು ಅನೇಕ ಜಿಲ್ಲೆಗಳ ಬೀದಿ ವ್ಯಾಪಾರಿಗಳು ಸತ್ಯಾಗ್ರಹದಲ್ಲಿ ಭಾಗವಹಿಸಿದರು. ಅಂದು ಅವರ ಮಾರುಕಟ್ಟೆಗಳಲ್ಲಿ, ಮನೆಗಳಲ್ಲಿ ಫಲಕಗಳನ್ನು ಪ್ರದರ್ಶಿಸುವುದರ ಮೂಲಕ ಸತ್ಯಾಗ್ರಹದಲ್ಲಿ ಪಾಲ್ಗೊಂಡರು.

ಈ ಸತ್ಯಾಗ್ರಹ ನಡೆದದ್ದು ಏತಕ್ಕೆ? ಬೀದಿ ವ್ಯಾಪಾರಿಗಳು ದಿನವೂ ವ್ಯಾಪಾರ ಮಾಡಿ, ಆ ದಿನದ ಆದಾಯದ ಫಲದಿಂದ ಜೀವನ ನಡೆಸುತ್ತಾರೆ.  ಲಾಕ್  ಡೌನ್ ಗು ಮುನ್ನವೇ ಬೀದಿ ವ್ಯಾಪಾರಿಗಳು ಕಷ್ಟದ ಜೀವನ ನಡೆಸುತಿದ್ದರು. ಈಗ ಮಾರ್ಚ್ 3 ನೇ ವಾರದಿಂದ, 4 ತಿಂಗಳ ಕಾಲ ವ್ಯಾಪಾರ ಇಲ್ಲದೆ ಅವರ ಜೀವನ ತತ್ತರಿಸಿ ಹೋಗಿದೆ.

ಬೀದಿಲಿ ವ್ಯಾಪಾರ ಮಾಡುವವರು ಬಹುಪಾಲು ಬಡವರೇ. ಅಂಗಡಿ ಬಾಡಿಗೆ ಕಟ್ಟಲು ಸಾಧ್ಯವಿರುವವರು, ಅಂಗಡಿ ಕೊಳ್ಳಲು  / ಅಂಗಡಿ ವಂಶಪಾರಂಪರ್ಯವಾಗಿ ಪಡೆದವರು ಯಾರು ಬೀದಿಲಿ ವ್ಯಾಪಾರ ಮಾಡೋಲ್ಲ. ನಗರಗಳ ಧೂಳು, ಮಳೆ, ಬಿಸಿಲುಗಳ ನಡುವೆ ವ್ಯಾಪಾರ ಮಾಡುವುದು ಸುಲಭವಲ್ಲ. ಇದರ ಜೊತೆಗೆ ಇರುವ ‘ಎತ್ತಂಗಡಿ’ಯ  ಭೀತಿ . ಇವತ್ತು ವ್ಯಾಪಾರ ಮಾಡುವ ಸ್ಥಳದಲ್ಲಿ ನಾಳೆ ವ್ಯಾಪಾರ ಮಾಡಬಹುದೋ ಇಲ್ಲವೋ ತಿಳಿಯದು. ಸಂಚಾರಿ ಪೊಲೀಸ್, ಬಿಬಿಎಂಪಿ ಅಧಿಕಾರಿಗಳು, ಸ್ಥಳೀಯ ನಿವಾಸಿ ಸಂಘಟನೆಗಳು (ರೆಸಿಡೆಂಟ್ ವೆಲ್ಫೇರ್ ಅಸೋಸಿಯೇಷನ್) ಅವರ ಕಿರುಕುಳ ಯಾವಾಗಲೂ ಇದ್ದೆ ಇರುತ್ತದೆ. ಬೀದಿ ವ್ಯಾಪಾರಿಗಳ  ಜೀವನೋಪಾಯ ರಕ್ಷಣೆಗೆ, ಕೇಂದ್ರ ಸರ್ಕಾರ 2014 ನಲ್ಲಿ ಬೀದಿ ವ್ಯಾಪಾರಿಗಳ ಜೀವನೋಪಾಯ ರಕ್ಷಣೆ ಹಾಗು ನಿಯಂತ್ರಣ ಕಾಯ್ದೆ 2014 ಅನ್ನು ತಂದಿತು. ಇದರ ಪ್ರಕಾರ ಯಾವುದೇ ಬೀದಿ ವ್ಯಾಪಾರಿಗಳನ್ನು ದಿಢೀರ್ ಎತ್ತಂಗಡಿ ಮಾಡುವಂತಿಲ್ಲ. ಆದರೆ ಬಹುಪಾಲು ಅಧಿಕಾರಿಗಳು  ಈ ಕಾನೂನು ಬಗ್ಗೆ ತಿಳಿದುಕೊಳ್ಳದೆ, ಅಥವಾ ಗೊತ್ತಿದ್ದೂ ಗೊತ್ತಿಲ್ಲದಂತೆ ಆಡಿ ಬೀದಿ ವ್ಯಾಪಾರಿಗಳನ್ನು ದಿಡೀರ್ ಓಡಿಸುವುದನ್ನು ಮಾಡುತ್ತಲೇ ಇದ್ದಾರೆ.

ಆಗೀಗ ಎತ್ತಂಗಡಿಗಳನ್ನು ಎದುರಿಸುತ್ತಿದ್ದ ಬೀದಿ ವ್ಯಾಪಾರಿಗಳಿಗೆ ಮೋದಿಯವರ  ಆಯೋಜಿತ , ದಿಢೀರ್ ಲಾಕ್ ಡೌನ್ ಒಂದು ದೇಶವ್ಯಾಪಿ ಎತ್ತಂಗಡಿ ಆಯಿತು. ಬೆಂಗಳೂರಿನಲ್ಲಿ ಲಾಕ್ ಡೌನ್ ಜಾರಿಗೊಳಿಸುವ ಮುನ್ನ ಬಿಬಿಎಂಪಿ ಕಾಲೇರಾ ಹರಡುತ್ತಿದೆ ಎಂದು ಹೇಳುತ್ತಾ ಬೀದಿ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಬಿಟ್ಟಿರಲಿಲ್ಲ.  ಲಾಕ್  ಡೌನ್  ನಲ್ಲಿ ಅಲ್ಲಿ ಇಲ್ಲಿ,  ಮೂಲೆಗಳಲ್ಲಿ  ನಿಂತು ವ್ಯಾಪಾರ ಮಾಡುವ, ಕೆಲವು ತಳ್ಳೋ ಗಾಡಿ ಉಳ್ಳ ಕೇವಲ 10% ಹಣ್ಣು ತರಕಾರಿಯವರಿಗೆ ಸ್ವಲ್ಪ ವ್ಯಾಪಾರ ಆಯಿತು. ಮಿಕ್ಕ 90% ವ್ಯಾಪಾರಿಗಳಿಗೆ ಯಾವುದೇ ವ್ಯಾಪಾರ ಇರಲಿಲ್ಲ.  ಈಗ ಸುಮಾರು  4  ತಿಂಗಳಾಗಿದ್ದರೂ ಅವರ ಕಷ್ಟ ಮುಗಿದಿಲ್ಲ. ಜುಲೈ ತಿಂಗಳಲ್ಲೂ ಸಹ  ಕೆಲವು ಕಡೆ ಇನ್ನು ವ್ಯಾಪಾರ ಪ್ರಾರಂಭವಾಗಿಲ್ಲ. (ಉದಾಹರಣೆ: ಶಿವಾಜಿನಗರ), ಮಿಕ್ಕಿರುವ ಕಡೆ, ವ್ಯಾಪಾರ ನಡೀತಿದೆ ಆದರೆ ತೀರಾ ಕಡಿಮೆ.  ಶಿವಾಜಿನಗರದ ವ್ಯಾಪಾರಿಯಾದ ಬಾಬುರವರು ಜೊಮೆಟೋ ಡೆಲಿವರಿ ಕೆಲಸ ಕೈಗೊಂಡರು “ಅದರಲ್ಲೂ 2 ತಿಂಗಳ ಸ್ವಲ್ಪ ಆದಾಯ ಇತ್ತು , ಈಗ ದಿವಸಕ್ಕೆ  ಎರಡು  ಡೆಲಿವರಿ ಬಂದರೆ ಹೆಚ್ಚು, ಏನು ಮಾಡುವುದೋ ಗೊತ್ತಿಲ್ಲ” ಎನ್ನುತ್ತಾರೆ. ಶಿವಾಜಿನಗರ ಬಸ್ ನಿಲ್ದಾಣ ಸುತ್ತಲೂ 250ಕ್ಕೂ ಹೆಚ್ಚು ವ್ಯಾಪಾರಿಗಳಿದ್ದಾರೆ. ಅವರಲ್ಲಿ ಮಾರ್ಚ್ 15 ರಿಂದ  ಒಬ್ಬರಿಗೂ  ವ್ಯಾಪಾರ ಮಾಡಲು ಬಿಟ್ಟಿಲ್ಲ.  ವಿಜಯನಗರದ ಮಾರುಕಟ್ಟೆಯಲ್ಲಿ ಜೂನ್ ನಲ್ಲಿ ವ್ಯಾಪಾರ ಪ್ರಾರಂಭ ಮಾಡಿದರು. ಆದರೆ ವ್ಯಾಪಾರ ಇಲ್ಲ. ಅಲ್ಲಿ ಬಟ್ಟೆ ವ್ಯಾಪಾರ ಮಾಡುವ ಬೀದಿ ವ್ಯಾಪಾರಿ ಹಾಗು ಸಂಘಟನೆಯ ನಾಯಕರಾದ ಸ್ವಾಮಿ ಅವರು ಹೇಳುವಂತೆ “ಕೆಲವು ದಿವಸ ಬೋಣಿ  ಸಹ ಆಗೋದಿಲ್ಲ. ಒಂದು ಕಡೆ ವ್ಯಾಪಾರ ಆಗೋಲ್ಲ, ಇನ್ನೊಂದು ಕಡೆ ಎಲ್ಲಿ ಕರೋನಾ ತಟ್ಟುತ್ತೇವೆಯೋ ಎಂದು ಭಯ” ಎನ್ನುತ್ತಾರೆ.

ಬಿಬಿಎಂಪಿ ಕಚೇರಿಯಾಚೆ ಜೂನ್ ತಿಂಗಳಲ್ಲಿ ಒಂದು ದಿವಸ  ಲಕ್ಷ್ಮಿಯವರು ಸಿಕ್ಕಿದ್ದರು. ಸುಮಾರು 50 ವಯಸ್ಸಿನ ಅವರು ಬುಟ್ಟಿಯಲ್ಲಿ ಕಡ್ಲೇಕಾಯಿ ವ್ಯಾಪಾರ ಮಾಡುತಿದ್ದರು .  ಅಲ್ಲಿಂದ ಸುಮಾರು 5 ಕಿಲೋಮೀಟರ್ ದೂರದ ಕಸ್ತೂರಿ ಬಾಯಿ ನಗರದಿಂದ ನಡೆದುಕೊಂಡು ಬಂದಿದ್ದರು . “ಬಿಬಿಎಂಪಿ ಕಚೇರಿಯೊಳಗೆ ಬಿಡಲು ಹೇಳಿ ಸರ್, ಅಲ್ಲಿ ಸ್ವಲ್ಪ ವ್ಯಾಪಾರ ಆಗುತ್ತದೆ, ಇಲ್ಲಿ ರಸ್ತೇಲಿ ಏನೂ ವ್ಯಾಪಾರ ಇಲ್ಲ” ಎಂದರು. ಅವರೊಬ್ಬರೇ ಇರುವುದಂತೆ, ಕುಟುಂಬದವರು ಯಾರು ಇಲ್ಲ, ವ್ಯಾಪಾರ  ಇಲ್ಲದೆ ಊಟಕ್ಕೂ ಕಷ್ಟ ಪಡುತ್ತಿದ್ದರು.  ನಗರಗಳಲ್ಲಿ ಸುಮಾರು ಜನ ವಯಸ್ಸಾಗಿರುವವರು, ಬೇರೆ ಕೆಲಸ ಸಿಗದೇ  ಬೀದಿ ವ್ಯಾಪಾರ ಮೇಲೆ ಅವಲಂಬಿತರಾಗಿದ್ದಾರೆ. ಅವರು ತೀವ್ರ ಕಷ್ಟವನ್ನು ಅನುಭವಿಸುತ್ತಿದ್ದಾರೆ.

ಹೀಗೆ ವ್ಯಾಪಾರ ಇಲ್ಲದೆ, ಬೀದಿ ವ್ಯಾಪಾರಿಗಳಿಗೆ ಮನೆ ಬಾಡಿಗೆ ಸಹ ಕಟ್ಟಲು ಆಗುತ್ತಿಲ್ಲ. ಅವರ ಮಕ್ಕಳ ಶಿಕ್ಷಣ ಅಪಾಯದಲ್ಲಿದೆ.  ಜಯನಗರ 9ನೇ ಬ್ಲಾಕ್ ನ ಶಾಂತಿಯವರೊಡನೆ ಮಾತನಾಡುತ್ತಿದ್ದಾಗ “ಸಾರ್, ನನ್ನ ಮಗನ ಸ್ಕೂಲ್ ಫೀಸ್ ಗೆ ಸಾಲ ಮಾಡಿ ಕಟ್ಟಿದ್ದೀನಿ ಸಾರ್” ಎಂದರು.  ಎಷ್ಟೋ ಜನ ಇಲ್ಲಿ ಮನೆ ನಡೆಸಲು ಸಾಧ್ಯವಾಗದೆ ಊರಿಗೆ ಹೋಗಿದ್ದಾರೆ.

ಇದನ್ನೆಲ್ಲ ಗಮನದಲ್ಲಿಟ್ಟುಕೊಂಡು, ಸರ್ಕಾರದಿಂದ ಪರಿಹಾರ ಕೊಡುವಂತೆ ಒತ್ತಾಯ ಮಾಡುವುದು ಸೂಕ್ತ ಎಂದು ಬೀದಿ ವ್ಯಾಪಾರಿ ಸಂಘಟನೆಗಳು ನಿರ್ಧರಿಸಿದವು. ಬೆಂಗಳೂರು ಜಿಲ್ಲಾ ಬೀದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಅಧ್ಯಕ್ಷರು ಎಸ್ ಬಾಬು ಅವರು  – “ನಮಗೆ  ಮಾರ್ಚ್  ಇಂದ ವ್ಯಾಪಾರ ಇಲ್ಲ. ಮುಂದೇನು – ಹೇಗಿರುತ್ತೋ ಗೊತ್ತಿಲ್ಲ.  ಜನರ ಬಳಿ ದುಡಿಲ್ಲ, ಜೊತೆಗೆ  ಈಗಾಗಲೇ  ಹರಡಿರುವ ಫೇಕ್ ನ್ಯೂಸ್ ಇಂದ, ಬೀದಿ ವ್ಯಾಪಾರಿಗಳು ಕೊರೊನಾ ಹಬ್ಬುತ್ತಾರೆ ಎಂದು ಬೇರೆ ಸಾಕಷ್ಟು ಜನ ಭಯ ಪಡುತ್ತಿದ್ದಾರೆ. ಯಾವಾಗ ವ್ಯಾಪಾರ ಮುಂಚೆಯಂತೆ ಆಗುತ್ತದೆಯೋ ಗೊತ್ತಿಲ್ಲ. ನಾವು ನಮ್ಮ ಕಷ್ಟಗಳ ಬಗ್ಗೆ ಮಾನ್ಯ ಮಹಾಪೌರರು ಹಾಗು ಆಯುಕ್ತರನ್ನು ಭೇಟಿ ಆಗಿ ಪರಿಹಾರ ನೀಡಿ ಎಂದು ಮನವಿ ಸಲ್ಲಿಸಿದೆವು. ಅದರೆ ಅವರು ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ. ಮುಖ್ಯಮಂತ್ರಿಗಳಿಗೆ ನಮ್ಮ ಕಷ್ಟ ಹೇಳಿಕೊಳ್ಳೋಣ ಎಂದು ಸಮಯ ಕೋರಿದರೆ ನಮಗೆ ಅಪ್ಪಾಯಿಂಟ್ಮೆಂಟ್ ನೀಡಲಿಲ್ಲ, ಈ-ಮೇಲ್ ಮಾಡಲು ಹೇಳಿದರು, ಆಗ ನಾವು  ಮುಖ್ಯಮಂತ್ರಿಗಳಿಗೆ ಈ-ಮೇಲ್ ಮೂಲಕ ಮನವಿ ಸಲ್ಲಿಸಿದೆವು. ಅದಕ್ಕೆ ಉತ್ತರ ಸಿಕ್ಕಿಲ್ಲ.  ಪ್ರತಿಭಟನೆ ಮಾಡೋಣ ಎಂದರೆ ಸೆಕ್ಷನ್ 144 ಹಾಕಿದ್ದಾರೆ. ಬೇರೆ ದಾರಿ ಇಲ್ಲದೆ ಉಪವಾಸ ಸತ್ಯಾಗ್ರಹ ಮಾಡಿದೆವು” ಎನ್ನುತ್ತಾರೆ.

ಹಾಗಾಗಿ ಸತ್ಯಾಗ್ರಹ ಮಾಡಿದ ಬೀದಿ ವ್ಯಾಪಾರಿಗಳು “ಬೀದಿ ವ್ಯಾಪಾರ ಮಾಡಲು ಅನುಮತಿ ನೀಡಿ”, “ಮಾನ್ಯ ಮುಖ್ಯಮಂತ್ರಿಗಳೇ, ಬೀದಿ ವ್ಯಾಪಾರಿಗಳ ಕಷ್ಟ ನಿಮ್ಮ ಕಣ್ಣಿಗೆ ಏಕೆ ಕಾಣುತ್ತಿಲ್ಲ, ನಮಗೂ ಪರಿಹಾರ ನೀಡಿ”, ” ಮಾನ್ಯ ಪ್ರಧಾನ ಮಂತ್ರಿಗಳೇ, ನಮಗೆ ಸಾಲದ ಬದಲು ಪರಿಹಾರ ನೀಡಿ” ಎಂಬಂತಹ ಸಂದೇಶಗಳನ್ನು ಉಲ್ಲಾ ಭಿತ್ತಿ ಪತ್ರಗಳನ್ನು ಸತ್ಯಾಗ್ರಹದಲ್ಲಿ ಪ್ರದರ್ಶಿಸಿದರು.

ತಿಂಗಳಿಗೆ 15,000 ದಂತೆ ಪರಿಹಾರ ನೀಡಬೇಕೆಂದು ರಾಜ್ಯ ಸರ್ಕಾರದ ಮೇಲೆ  ಬೀದಿ ವ್ಯಾಪಾರಿಗಳ ಒತ್ತಾಯ ಮಾಡಿದ್ದಾರೆ. ಇನ್ನು ಕೇಂದ್ರ ಸರ್ಕಾರ ಬೀದಿ  ವ್ಯಾಪಾರಿಗಳಿಗೆ ಪ್ರಧಾನ್ ಮಂತ್ರೀ ಆತ್ಮನಿರ್ಭರ್ ಯೋಜನೆ ಘೋಷಿಸಿದೆ. ಈ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರ ಬೀದಿ ವ್ಯಾಪಾರಿಗಳಿಗೆ 10,000 ರೂಪಾಯಿಗಳ ಸಾಲ ನೀಡುತ್ತಿದೆ. ನಮಗೆ ವ್ಯಾಪಾರ  ಇಲ್ಲದಿರುವಾಗ ಸಾಲ  ಹೇಗೆ ತೀರಿಸುವುದು, ಹಾಗಾಗಿ ನಮಗೆ ಸಾಲ ಬೇಡ ಪರಿಹಾರ ನೀಡಿ ಎಂದು ಈಗಾಗಲೇ ಸಾಲಗಳಲ್ಲಿ ಮುಳುಗಿರುವ ವ್ಯಾಪಾರಿಗಳ ಒತ್ತಾಯ.  ಇನ್ನು ಬಿಬಿಎಂಪಿಗೆ ಬಂದರೆ, ಮೂರೂ ವರ್ಷದಿಂದಲೂ ಸ್ಥಳೀಯ ಸರ್ಕಾರ ಬೀದಿ ವ್ಯಾಪಾರಿಗಳಿಗೆ ಎಂದು 2 ಕೋಟಿ ಹಣ ಮೀಸಲಿಟ್ಟಿದೆ, ಆದರೆ ಇದುವರೆಗೂ ಒಂದು ರೂಪಾಯಿ ಸಹ ಬಳಸಿಲ್ಲ. ಈಗಲಾದರೂ ಅದನ್ನು ನಮ್ಮ ಕಲ್ಯಾಣಕ್ಕಾಗಿ ಉಪಯೋಗಿಸಿ ಎಂಬುದು ಅವರ ಒತ್ತಾಯ.  ಇಷ್ಟೆಲ್ಲಾ ಅಲ್ಲದೆ, ವ್ಯಾಪಾರಿಗಳದ್ದು ಒಂದು ಮುಖ್ಯ ಹಕ್ಕೊತ್ತಾಯವಿದೆ – ಈ ಮೇಲಿನ ಪರಿಹಾರ ಎಲ್ಲಾ ಬೀದಿ ವ್ಯಾಪಾರಿಗಳಿಗೂ ತಲುಪಬೇಕೆಂಬುದು. ಸರ್ಕಾರ ಸಾಲ ಕೊಡುತ್ತಿರುವುದು ಕೇವಲ ಸಮೀಕ್ಷೆಗೆ ಒಳಗೊಂಡಂತ ವ್ಯಾಪಾರಿಗಳಿಗೆ. ಆದೆರೆ ಒಂದು ಲಕ್ಷಕ್ಕೂ ಹೆಚ್ಚು ವ್ಯಾಪಾರಿಗಳುಳ್ಳ ಬೆಂಗಳೂರು ನಗರದಲ್ಲಿ ಕೇವಲ 25,000 ವ್ಯಾಪಾರಿಗಳು ಸಮೀಕ್ಷೆಗೆ ಒಳಪಟ್ಟಿದ್ದಾರೆ.

ಬೀದಿ ವ್ಯಾಪಾರಿಗಳ ನಮ್ಮ ನಗರಕ್ಕೆ ದೊಡ್ಡ ಸೇವೆ ಸಲ್ಲಿಸಿದವರು. ಜನಸಾಮಾನ್ಯರಿಗೆ ಕಡಿಮೆ ಬೆಲೆಗೆ ಉತ್ತಮ ವಸ್ತುಗಳು ಸಿಗಬೇಕಾದರೆ, ಅದು ಬಿಡಿ ವ್ಯಾಪಾರಿಗಳಿಂದ ಮಾತ್ರ ಸಾಧ್ಯ. ಬೀದಿ ವ್ಯಾಪಾರ ನಮ್ಮ ನಗರಗಳ ಪರಂಪರೆಯ ಮುಖ್ಯ ಭಾಗ. ಅಧಿಕಾರಿಗಳ ಬೈಗುಳ, ಮಳೆ, ಬಿಸಿಲು, ಧೂಳು, ಹೊಗೆ ಮಧ್ಯೆ ನಮಗೆ ದಿನಾ ಸೇವೆ ಸಲ್ಲಿಸುವ ವ್ಯಾಪಾರಿಗಳ ನೆರವಿಗೆ ಸರ್ಕಾರ ಮುಂದೆ ಬರಲೇಬೇಕು.  ಈ ನಗರ ಸೃಷ್ಟಿ ಮಾಡಿದ ಕೆಂಪೇಗೌಡರು ಎಲ್ಲರೂ ಬದುಕುವಂತ ಊರಾಗಬೇಕೆಂದು ಬಯಸಿದವರು. ಅವರ ನೆನಪಿನಲ್ಲಿ ಅತಿ ದೊಡ್ಡ ಪ್ರತಿಮೆ ಕಟ್ಟುತ್ತಿರುವ ರಾಜ್ಯ ಸರ್ಕಾರ ಈಗ ಅವರ ಈ ಉದಾರ ಆದರ್ಶವನ್ನು ತನ್ನದಾಗಿಸಿಕೊಂಡು, ಬೀದಿ ವ್ಯಾಪಾರಿಗಳಿಗೆ ಸಾಥ್ ನೀಡಬೇಕಾಗಿದೆ.

ವಿನಯ್ ಕೂರಗಾಯಲ ಶ್ರೀನಿವಾಸ, ವಕೀಲರು ಮತ್ತು ಬೀದಿ ವ್ಯಾಪಾರಿಗಳ ಸಂಘದ ಮುಖಂಡರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...