Homeಕರ್ನಾಟಕಬೆಂಗಳೂರು: ಅಕ್ರಮ ಕಟ್ಟಡದ ಪಟ್ಟಿಯಲ್ಲಿ ವಿಪ್ರೊ, ಕೊಲಂಬಿಯಾ ಆಸ್ಪತ್ರೆ, ಪ್ರೆಸ್ಟೀಜ್‌ ಕಂಪೆನಿಗಳು; ಈ ವರೆಗೆ ಮುಟ್ಟದ...

ಬೆಂಗಳೂರು: ಅಕ್ರಮ ಕಟ್ಟಡದ ಪಟ್ಟಿಯಲ್ಲಿ ವಿಪ್ರೊ, ಕೊಲಂಬಿಯಾ ಆಸ್ಪತ್ರೆ, ಪ್ರೆಸ್ಟೀಜ್‌ ಕಂಪೆನಿಗಳು; ಈ ವರೆಗೆ ಮುಟ್ಟದ ಬಿಬಿಎಂಪಿ

- Advertisement -
- Advertisement -

ಬೆಂಗಳೂರಿನಲ್ಲಿ ಕಳೆದ ವಾರ ಉಂಟಾದ ನೆರೆಗೆ ಕಾರಣವಾದ ಸುಮಾರು 700 ಮಳೆ ನೀರಿನ ಚರಂಡಿಗಳನ್ನು ಮುಚ್ಚಿದ ಅತಿಕ್ರಮಣದಾರರ ಪಟ್ಟಿಯಲ್ಲಿ ಹೈ-ಪ್ರೊಫೈಲ್ ಬಿಲ್ಡರ್‌ಗಳು, ಡೆವಲಪರ್‌ಗಳು ಮತ್ತು ಟೆಕ್ ಪಾರ್ಕ್‌ಗಳು ಸೇರಿವೆ ಎಂದು ಎನ್‌ಡಿಟಿವಿ ವರದಿ ಹೇಳಿದೆ. ಈ ಪಟ್ಟಿಯಲ್ಲಿ ವಿಪ್ರೋ, ಪ್ರೆಸ್ಟೀಜ್, ಇಕೋ ಸ್ಪೇಸ್, ​​ಬಾಗ್‌ಮನೆ ಟೆಕ್ ಪಾರ್ಕ್, ಕೊಲಂಬಿಯಾ ಏಷ್ಯಾ ಆಸ್ಪತ್ರೆ ಮತ್ತು ದಿವ್ಯಶ್ರೀ ವಿಲ್ಲಾಸ್ ಸೇರಿದಂತೆ ಹಲವು ದೊಡ್ಡ ಕಂಪೆನಿಗಳ ಹೆಸರು ಇವೆ ಅದು ಉಲ್ಲೇಖಿಸಿದೆ.

ಬಿಬಿಎಂಪಿ ಕಳೆದ ಎರಡು ದಿನಗಳಿಂದ ಅತಿಕ್ರಮಣಕಾರರು ಎಂದು ಆರೋಪಿಸಿ ಜನ ಸಾಮಾನ್ಯರ ಆಸ್ತಿಗಳನ್ನು ಬುಲ್ಡೋಝರ್‌ ಮೂಲಕ ಕೆಡವಲಾಗುತ್ತಿದೆ. ಅದಾಗ್ಯೂ ಈ ವೇಳೆ ಈ ಯಾವುದೆ ದೊಡ್ಡ ಕಂಪೆನಿಗಳ ಆಸ್ತಿಗಳನ್ನು ಕೆಡವಿದ್ದು ಈ ವರೆಗೆ ವರದಿಯಾಗಿಲ್ಲ ಎಂದು ಎನ್‌ಡಿಟವಿ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಾಮಾನ್ಯ ಮನುಷ್ಯರ ಆಸ್ತಿಗಳನ್ನು ನೆಲಸಮಗೊಳಿಸುವ ಕಾರ್ಯಗಳು ಭರದಿಂದ ಸಾಗುತ್ತಿರುವಾಗ, ಬೃಹತ್‌ ಕಂಪನಿಗಳು ಇನ್ನೂ ಮುಟ್ಟಿಲ್ಲ” ಎಂದು ತನ್ನ ವರದಿಯಲ್ಲಿ ಎನ್‌ಡಿಟಿವಿ ಹೇಳಿದೆ.

ಇದನ್ನೂ ಓದಿ: ‘ನೋಯ್ಡಾ ಟ್ವಿನ್ ಟವರ್ ಶೈಲಿಯಲ್ಲಿ ಕೆಡವುತ್ತೇವೆ’: ಬೆಂಗಳೂರು ಕಟ್ಟಡಗಳ ಬಗ್ಗೆ ಸಚಿವ ಆರ್‌‌. ಅಶೋಕ್‌

“ಅತಿಕ್ರಮ ಮಾಡಿರುವ ಯಾವುದೆ ಕಂಪೆನಿಗಳನ್ನು ಬಿಡುವುದಿಲ್ಲ ಎಂದು ಹೆಸರು ಹೇಳಲು ಇಚ್ಛಿಸದ ಬಿಬಿಎಂಪಿ ಇಂಜಿನಿಯರ್‌ ಹೇಳಿದ್ದಾರಾದರೂ, ಯಾವುದೆ ದೊಡ್ಡ ಕಂಪೆನಿಗಳ ಮೇಲೆ ಇನ್ನೂ ಕ್ರಮ ಪ್ರಾರಂಭವಾಗಿಲ್ಲ” ಎಂದು ಎನ್‌ಡಿಟಿವಿ ವರದಿ ಹೇಳಿದೆ.

ಈ ನಡುವೆ ಬೆಂಗಳೂರಿನಲ್ಲಿ ನೆರೆ ಬಂದಿದ್ದರ ಬಗ್ಗೆ ರಾಜ್ಯ ಬಿಜೆಪಿ ಸರ್ಕಾರದ ಬಗ್ಗೆ ತೀವ್ರ ಟೀಕೆ ಮಾಡಿದ್ದ ಯುವ ಕಾಂಗ್ರೆಸ್‌‌ ಅಧ್ಯಕ್ಷ ಮಹಮ್ಮದ್ ನಲಪಾಡ್ ಸೇರಿದ ಪೂರ್ವ ಬೆಂಗಳೂರಿನ ನಲಪಾಡ್ ಅಕಾಡೆಮಿ ಆಫ್ ಇಂಟರ್‌ನ್ಯಾಶನಲ್ ಸ್ಕೂಲ್ ಆವರಣದಲ್ಲಿ ಧ್ವಂಸ ಕಾರ್ಯಾಚರಣೆಯನ್ನು ನಡೆಸಲಾಗಿದೆ.

ಶಾಲೆಯು ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿದ್ದು ಗಮನಕ್ಕೆ ಬಾರದೆ ಹೋದದ್ದು ಹೇಗೆ ಎಂಬ ಪ್ರಶ್ನೆಗೆ, ಕಟ್ಟಡ ನಿರ್ವಣದ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಮುಖ್ಯ ಎಂಜಿನಿಯರ್ ಮಾಲತಿ ಅವರು ಕಂದಾಯ ಇಲಾಖೆಯನ್ನು ದೂಷಿಸಿದ್ದಾರೆ. “ಈ ಬಗ್ಗೆ ನಮಗೆ ತಿಳಿದಿರಲಿಲ್ಲ, ಇದು ಕಂದಾಯ ಇಲಾಖೆಯ ಅಡಿಯಲ್ಲಿ ಬರುತ್ತದೆ. ಅವರು ಪರಿಶೀಲಿಸಬೇಕಿತ್ತು. ಈಗ ನಾವು ಅತಿಕ್ರಮಣವನ್ನು ಕೆಡವುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಹಾ ಮಳೆಗೆ ಜಲಾವೃತಗೊಂಡ ಬೆಂಗಳೂರಿನ ರಸ್ತೆಗಳು; ದಿಕ್ಕು ತಪ್ಪಿದ ಗೂಗಲ್ ಮ್ಯಾಪ್!

ಕೆಲವು ದಿನಗಳಿಂದ ಬೆಂಗಳೂರಿನ ಹಲವು ವಸತಿ ಪ್ರದೇಶದಲ್ಲಿ ಕಟ್ಟಡಗಳನ್ನು ಕೆಡವಲಾಗುತ್ತಿದೆ. ಆದರೆ ಯಾವುದೇ ಅಧಿಕೃತ ಅಂಕಿಅಂಶಗಳು ಇನ್ನೂ ಬಂದಿಲ್ಲ ಎಂದು ವರದಿಯಾಗಿದೆ. ಬೆಂಗಳೂರಿನ ಪೂರ್ವ ಭಾಗದಲ್ಲಿ ಮಂಗಳವಾರ ನಾಲ್ಕು ಅಂತಸ್ತಿನ ಕಟ್ಟಡದ ಗೋಡೆಯನ್ನು ನಿವಾಸಿಗಳು ತಮ್ಮ ಮನೆಗಳಲ್ಲಿದ್ದಾಗ ನೆಲಸಮಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ.

ಕಟ್ಟಡದ ಮಾಲೀಕ ದಿನೇಶ್ ರೆಡ್ಡಿ ಅವರು, “ಕಟ್ಟಡದ ನಿರ್ಮಾಣಕ್ಕೆ ಮುಂದಾದಾಗಲೆ ಎಲ್ಲಾ ಅಗತ್ಯ ಅನುಮತಿಗಳನ್ನು ತೆಗೆದುಕೊಂಡಿದ್ದೇವೆ. ಈ ಮಳೆನೀರು ಚರಂಡಿ ಬಹಳ ದಿನಗಳಿಂದ ಇದೆ, ಈ ವಿಚಾರ ಗೊತ್ತಿದ್ದರೂ ಅಧಿಕಾರಿಗಳು ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಿದ್ದಾರೆ. ನಾನು ಯಾವುದೇ ನಿಯಮ ಉಲ್ಲಂಘಿಸಿಲ್ಲ.ಯಾವುದೇ ಸೂಚನೆ ನೀಡದೆ ಬಂದು ಕಾಂಪೌಂಡ್ ಗೋಡೆ ಕೆಡವಿದ್ದಾರೆ” ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ, ಕಟ್ಟಡ ಧ್ವಂಸವನ್ನು ಮೇಲ್ವಿಚಾರಣೆ ನಡೆಸುತ್ತಿರುವ ಕಾರ್ಯನಿರ್ವಾಹಕ ಇಂಜಿನಿಯರ್, ಕಟ್ಟಡ ನಿರ್ಮಾಣಕ್ಕೆ ಯಾವುದೇ ಅನುಮತಿಯನ್ನು ನೀಡಿಲ್ಲ ಎಂದು ಹೇಳಿದ್ದಾರೆ. “ಈ ಕಟ್ಟಡಕ್ಕೆ ಯಾವುದೇ ಮಂಜೂರಾತಿ ಯೋಜನೆ ನೀಡಲಾಗಿಲ್ಲ. ಅವರು ಕಾನೂನು ಉಲ್ಲಂಘಿಸಿ ಮಳೆನೀರು ಹರಿಯುವ ಚರಂಡಿಯಲ್ಲಿ ಕಟ್ಟಡ ನಿರ್ಮಿಸಿದ್ದಾರೆ” ಎಂದು ಕಾರ್ಯಪಾಲಕ ಎಂಜಿನಿಯರ್ ಮುನಿರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ: ದೇವಾಲಯ ನಿರ್ಮಾಣ ವಿವಾದದ ಬಳಿಕ ಬೆಂಗಳೂರು ವಿವಿಯಲ್ಲಿ ದಿಢೀರನೆ ಗಣಪತಿ ಪ್ರತಿಷ್ಟಾಪನೆ; ಆರೋಪ

ಆದಾಗ್ಯೂ, ಕಟ್ಟಡ ಧ್ವಂಸದ ಬಗ್ಗೆ ಯಾವುದೇ ಸೂಚನೆಯನ್ನು ನೀಡಿಲ್ಲ ಎಂದು ಅನೇಕ ನಿವಾಸಿಗಳು ದೂರಿದ್ದಾರೆ. “ಸರ್ಕಾರ ನಮಗೆ ಯಾವುದೆ ಮಾಹಿತಿ ನೀಡಿಲ್ಲ. ಕಟ್ಟಡಗಳನ್ನು ಕೆಡವಲು ಆರಂಭಿಸಿದಾಗ ನಾವು ನಮ್ಮ ಮನೆಯೊಳಗಿದ್ದೆವು” ಎಂದು ಕೆಡವಲಾಗುತ್ತಿರುವ ನಾಲ್ಕು ಅಂತಸ್ತಿನ ಕಟ್ಟಡದ ನಿವಾಸಿ ಅಲೋಕ್ ಹೇಳಿದ್ದಾರೆ.

“ನಾನು ರಾತ್ರಿ ಪಾಳಿ ಕೆಲಸದಲ್ಲಿದ್ದು, ಅದನ್ನು ಮುಗಿಸಿ ಗಾಢ ನಿದ್ದೆಯಲ್ಲಿದ್ದೆ. ಕೆಡವುವಿಕೆಯ ದೊಡ್ಡ ಶಬ್ದಕ್ಕೆ ನಾನು ಇದ್ದಕ್ಕಿದ್ದಂತೆ ಎಚ್ಚರವಾಯಿತು” ಎಂದು ಮತ್ತೊಬ್ಬ ನಿವಾಸಿ ಪ್ರವೀಣ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...