Homeಕರ್ನಾಟಕಬೆಂಗಳೂರು: ಅಕ್ರಮ ಕಟ್ಟಡದ ಪಟ್ಟಿಯಲ್ಲಿ ವಿಪ್ರೊ, ಕೊಲಂಬಿಯಾ ಆಸ್ಪತ್ರೆ, ಪ್ರೆಸ್ಟೀಜ್‌ ಕಂಪೆನಿಗಳು; ಈ ವರೆಗೆ ಮುಟ್ಟದ...

ಬೆಂಗಳೂರು: ಅಕ್ರಮ ಕಟ್ಟಡದ ಪಟ್ಟಿಯಲ್ಲಿ ವಿಪ್ರೊ, ಕೊಲಂಬಿಯಾ ಆಸ್ಪತ್ರೆ, ಪ್ರೆಸ್ಟೀಜ್‌ ಕಂಪೆನಿಗಳು; ಈ ವರೆಗೆ ಮುಟ್ಟದ ಬಿಬಿಎಂಪಿ

- Advertisement -
- Advertisement -

ಬೆಂಗಳೂರಿನಲ್ಲಿ ಕಳೆದ ವಾರ ಉಂಟಾದ ನೆರೆಗೆ ಕಾರಣವಾದ ಸುಮಾರು 700 ಮಳೆ ನೀರಿನ ಚರಂಡಿಗಳನ್ನು ಮುಚ್ಚಿದ ಅತಿಕ್ರಮಣದಾರರ ಪಟ್ಟಿಯಲ್ಲಿ ಹೈ-ಪ್ರೊಫೈಲ್ ಬಿಲ್ಡರ್‌ಗಳು, ಡೆವಲಪರ್‌ಗಳು ಮತ್ತು ಟೆಕ್ ಪಾರ್ಕ್‌ಗಳು ಸೇರಿವೆ ಎಂದು ಎನ್‌ಡಿಟಿವಿ ವರದಿ ಹೇಳಿದೆ. ಈ ಪಟ್ಟಿಯಲ್ಲಿ ವಿಪ್ರೋ, ಪ್ರೆಸ್ಟೀಜ್, ಇಕೋ ಸ್ಪೇಸ್, ​​ಬಾಗ್‌ಮನೆ ಟೆಕ್ ಪಾರ್ಕ್, ಕೊಲಂಬಿಯಾ ಏಷ್ಯಾ ಆಸ್ಪತ್ರೆ ಮತ್ತು ದಿವ್ಯಶ್ರೀ ವಿಲ್ಲಾಸ್ ಸೇರಿದಂತೆ ಹಲವು ದೊಡ್ಡ ಕಂಪೆನಿಗಳ ಹೆಸರು ಇವೆ ಅದು ಉಲ್ಲೇಖಿಸಿದೆ.

ಬಿಬಿಎಂಪಿ ಕಳೆದ ಎರಡು ದಿನಗಳಿಂದ ಅತಿಕ್ರಮಣಕಾರರು ಎಂದು ಆರೋಪಿಸಿ ಜನ ಸಾಮಾನ್ಯರ ಆಸ್ತಿಗಳನ್ನು ಬುಲ್ಡೋಝರ್‌ ಮೂಲಕ ಕೆಡವಲಾಗುತ್ತಿದೆ. ಅದಾಗ್ಯೂ ಈ ವೇಳೆ ಈ ಯಾವುದೆ ದೊಡ್ಡ ಕಂಪೆನಿಗಳ ಆಸ್ತಿಗಳನ್ನು ಕೆಡವಿದ್ದು ಈ ವರೆಗೆ ವರದಿಯಾಗಿಲ್ಲ ಎಂದು ಎನ್‌ಡಿಟವಿ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಾಮಾನ್ಯ ಮನುಷ್ಯರ ಆಸ್ತಿಗಳನ್ನು ನೆಲಸಮಗೊಳಿಸುವ ಕಾರ್ಯಗಳು ಭರದಿಂದ ಸಾಗುತ್ತಿರುವಾಗ, ಬೃಹತ್‌ ಕಂಪನಿಗಳು ಇನ್ನೂ ಮುಟ್ಟಿಲ್ಲ” ಎಂದು ತನ್ನ ವರದಿಯಲ್ಲಿ ಎನ್‌ಡಿಟಿವಿ ಹೇಳಿದೆ.

ಇದನ್ನೂ ಓದಿ: ‘ನೋಯ್ಡಾ ಟ್ವಿನ್ ಟವರ್ ಶೈಲಿಯಲ್ಲಿ ಕೆಡವುತ್ತೇವೆ’: ಬೆಂಗಳೂರು ಕಟ್ಟಡಗಳ ಬಗ್ಗೆ ಸಚಿವ ಆರ್‌‌. ಅಶೋಕ್‌

“ಅತಿಕ್ರಮ ಮಾಡಿರುವ ಯಾವುದೆ ಕಂಪೆನಿಗಳನ್ನು ಬಿಡುವುದಿಲ್ಲ ಎಂದು ಹೆಸರು ಹೇಳಲು ಇಚ್ಛಿಸದ ಬಿಬಿಎಂಪಿ ಇಂಜಿನಿಯರ್‌ ಹೇಳಿದ್ದಾರಾದರೂ, ಯಾವುದೆ ದೊಡ್ಡ ಕಂಪೆನಿಗಳ ಮೇಲೆ ಇನ್ನೂ ಕ್ರಮ ಪ್ರಾರಂಭವಾಗಿಲ್ಲ” ಎಂದು ಎನ್‌ಡಿಟಿವಿ ವರದಿ ಹೇಳಿದೆ.

ಈ ನಡುವೆ ಬೆಂಗಳೂರಿನಲ್ಲಿ ನೆರೆ ಬಂದಿದ್ದರ ಬಗ್ಗೆ ರಾಜ್ಯ ಬಿಜೆಪಿ ಸರ್ಕಾರದ ಬಗ್ಗೆ ತೀವ್ರ ಟೀಕೆ ಮಾಡಿದ್ದ ಯುವ ಕಾಂಗ್ರೆಸ್‌‌ ಅಧ್ಯಕ್ಷ ಮಹಮ್ಮದ್ ನಲಪಾಡ್ ಸೇರಿದ ಪೂರ್ವ ಬೆಂಗಳೂರಿನ ನಲಪಾಡ್ ಅಕಾಡೆಮಿ ಆಫ್ ಇಂಟರ್‌ನ್ಯಾಶನಲ್ ಸ್ಕೂಲ್ ಆವರಣದಲ್ಲಿ ಧ್ವಂಸ ಕಾರ್ಯಾಚರಣೆಯನ್ನು ನಡೆಸಲಾಗಿದೆ.

ಶಾಲೆಯು ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿದ್ದು ಗಮನಕ್ಕೆ ಬಾರದೆ ಹೋದದ್ದು ಹೇಗೆ ಎಂಬ ಪ್ರಶ್ನೆಗೆ, ಕಟ್ಟಡ ನಿರ್ವಣದ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಮುಖ್ಯ ಎಂಜಿನಿಯರ್ ಮಾಲತಿ ಅವರು ಕಂದಾಯ ಇಲಾಖೆಯನ್ನು ದೂಷಿಸಿದ್ದಾರೆ. “ಈ ಬಗ್ಗೆ ನಮಗೆ ತಿಳಿದಿರಲಿಲ್ಲ, ಇದು ಕಂದಾಯ ಇಲಾಖೆಯ ಅಡಿಯಲ್ಲಿ ಬರುತ್ತದೆ. ಅವರು ಪರಿಶೀಲಿಸಬೇಕಿತ್ತು. ಈಗ ನಾವು ಅತಿಕ್ರಮಣವನ್ನು ಕೆಡವುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಹಾ ಮಳೆಗೆ ಜಲಾವೃತಗೊಂಡ ಬೆಂಗಳೂರಿನ ರಸ್ತೆಗಳು; ದಿಕ್ಕು ತಪ್ಪಿದ ಗೂಗಲ್ ಮ್ಯಾಪ್!

ಕೆಲವು ದಿನಗಳಿಂದ ಬೆಂಗಳೂರಿನ ಹಲವು ವಸತಿ ಪ್ರದೇಶದಲ್ಲಿ ಕಟ್ಟಡಗಳನ್ನು ಕೆಡವಲಾಗುತ್ತಿದೆ. ಆದರೆ ಯಾವುದೇ ಅಧಿಕೃತ ಅಂಕಿಅಂಶಗಳು ಇನ್ನೂ ಬಂದಿಲ್ಲ ಎಂದು ವರದಿಯಾಗಿದೆ. ಬೆಂಗಳೂರಿನ ಪೂರ್ವ ಭಾಗದಲ್ಲಿ ಮಂಗಳವಾರ ನಾಲ್ಕು ಅಂತಸ್ತಿನ ಕಟ್ಟಡದ ಗೋಡೆಯನ್ನು ನಿವಾಸಿಗಳು ತಮ್ಮ ಮನೆಗಳಲ್ಲಿದ್ದಾಗ ನೆಲಸಮಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ.

ಕಟ್ಟಡದ ಮಾಲೀಕ ದಿನೇಶ್ ರೆಡ್ಡಿ ಅವರು, “ಕಟ್ಟಡದ ನಿರ್ಮಾಣಕ್ಕೆ ಮುಂದಾದಾಗಲೆ ಎಲ್ಲಾ ಅಗತ್ಯ ಅನುಮತಿಗಳನ್ನು ತೆಗೆದುಕೊಂಡಿದ್ದೇವೆ. ಈ ಮಳೆನೀರು ಚರಂಡಿ ಬಹಳ ದಿನಗಳಿಂದ ಇದೆ, ಈ ವಿಚಾರ ಗೊತ್ತಿದ್ದರೂ ಅಧಿಕಾರಿಗಳು ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಿದ್ದಾರೆ. ನಾನು ಯಾವುದೇ ನಿಯಮ ಉಲ್ಲಂಘಿಸಿಲ್ಲ.ಯಾವುದೇ ಸೂಚನೆ ನೀಡದೆ ಬಂದು ಕಾಂಪೌಂಡ್ ಗೋಡೆ ಕೆಡವಿದ್ದಾರೆ” ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ, ಕಟ್ಟಡ ಧ್ವಂಸವನ್ನು ಮೇಲ್ವಿಚಾರಣೆ ನಡೆಸುತ್ತಿರುವ ಕಾರ್ಯನಿರ್ವಾಹಕ ಇಂಜಿನಿಯರ್, ಕಟ್ಟಡ ನಿರ್ಮಾಣಕ್ಕೆ ಯಾವುದೇ ಅನುಮತಿಯನ್ನು ನೀಡಿಲ್ಲ ಎಂದು ಹೇಳಿದ್ದಾರೆ. “ಈ ಕಟ್ಟಡಕ್ಕೆ ಯಾವುದೇ ಮಂಜೂರಾತಿ ಯೋಜನೆ ನೀಡಲಾಗಿಲ್ಲ. ಅವರು ಕಾನೂನು ಉಲ್ಲಂಘಿಸಿ ಮಳೆನೀರು ಹರಿಯುವ ಚರಂಡಿಯಲ್ಲಿ ಕಟ್ಟಡ ನಿರ್ಮಿಸಿದ್ದಾರೆ” ಎಂದು ಕಾರ್ಯಪಾಲಕ ಎಂಜಿನಿಯರ್ ಮುನಿರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ: ದೇವಾಲಯ ನಿರ್ಮಾಣ ವಿವಾದದ ಬಳಿಕ ಬೆಂಗಳೂರು ವಿವಿಯಲ್ಲಿ ದಿಢೀರನೆ ಗಣಪತಿ ಪ್ರತಿಷ್ಟಾಪನೆ; ಆರೋಪ

ಆದಾಗ್ಯೂ, ಕಟ್ಟಡ ಧ್ವಂಸದ ಬಗ್ಗೆ ಯಾವುದೇ ಸೂಚನೆಯನ್ನು ನೀಡಿಲ್ಲ ಎಂದು ಅನೇಕ ನಿವಾಸಿಗಳು ದೂರಿದ್ದಾರೆ. “ಸರ್ಕಾರ ನಮಗೆ ಯಾವುದೆ ಮಾಹಿತಿ ನೀಡಿಲ್ಲ. ಕಟ್ಟಡಗಳನ್ನು ಕೆಡವಲು ಆರಂಭಿಸಿದಾಗ ನಾವು ನಮ್ಮ ಮನೆಯೊಳಗಿದ್ದೆವು” ಎಂದು ಕೆಡವಲಾಗುತ್ತಿರುವ ನಾಲ್ಕು ಅಂತಸ್ತಿನ ಕಟ್ಟಡದ ನಿವಾಸಿ ಅಲೋಕ್ ಹೇಳಿದ್ದಾರೆ.

“ನಾನು ರಾತ್ರಿ ಪಾಳಿ ಕೆಲಸದಲ್ಲಿದ್ದು, ಅದನ್ನು ಮುಗಿಸಿ ಗಾಢ ನಿದ್ದೆಯಲ್ಲಿದ್ದೆ. ಕೆಡವುವಿಕೆಯ ದೊಡ್ಡ ಶಬ್ದಕ್ಕೆ ನಾನು ಇದ್ದಕ್ಕಿದ್ದಂತೆ ಎಚ್ಚರವಾಯಿತು” ಎಂದು ಮತ್ತೊಬ್ಬ ನಿವಾಸಿ ಪ್ರವೀಣ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...