Homeಕರ್ನಾಟಕಬೆಂಗಳೂರು: ಅಕ್ರಮ ಕಟ್ಟಡದ ಪಟ್ಟಿಯಲ್ಲಿ ವಿಪ್ರೊ, ಕೊಲಂಬಿಯಾ ಆಸ್ಪತ್ರೆ, ಪ್ರೆಸ್ಟೀಜ್‌ ಕಂಪೆನಿಗಳು; ಈ ವರೆಗೆ ಮುಟ್ಟದ...

ಬೆಂಗಳೂರು: ಅಕ್ರಮ ಕಟ್ಟಡದ ಪಟ್ಟಿಯಲ್ಲಿ ವಿಪ್ರೊ, ಕೊಲಂಬಿಯಾ ಆಸ್ಪತ್ರೆ, ಪ್ರೆಸ್ಟೀಜ್‌ ಕಂಪೆನಿಗಳು; ಈ ವರೆಗೆ ಮುಟ್ಟದ ಬಿಬಿಎಂಪಿ

- Advertisement -
- Advertisement -

ಬೆಂಗಳೂರಿನಲ್ಲಿ ಕಳೆದ ವಾರ ಉಂಟಾದ ನೆರೆಗೆ ಕಾರಣವಾದ ಸುಮಾರು 700 ಮಳೆ ನೀರಿನ ಚರಂಡಿಗಳನ್ನು ಮುಚ್ಚಿದ ಅತಿಕ್ರಮಣದಾರರ ಪಟ್ಟಿಯಲ್ಲಿ ಹೈ-ಪ್ರೊಫೈಲ್ ಬಿಲ್ಡರ್‌ಗಳು, ಡೆವಲಪರ್‌ಗಳು ಮತ್ತು ಟೆಕ್ ಪಾರ್ಕ್‌ಗಳು ಸೇರಿವೆ ಎಂದು ಎನ್‌ಡಿಟಿವಿ ವರದಿ ಹೇಳಿದೆ. ಈ ಪಟ್ಟಿಯಲ್ಲಿ ವಿಪ್ರೋ, ಪ್ರೆಸ್ಟೀಜ್, ಇಕೋ ಸ್ಪೇಸ್, ​​ಬಾಗ್‌ಮನೆ ಟೆಕ್ ಪಾರ್ಕ್, ಕೊಲಂಬಿಯಾ ಏಷ್ಯಾ ಆಸ್ಪತ್ರೆ ಮತ್ತು ದಿವ್ಯಶ್ರೀ ವಿಲ್ಲಾಸ್ ಸೇರಿದಂತೆ ಹಲವು ದೊಡ್ಡ ಕಂಪೆನಿಗಳ ಹೆಸರು ಇವೆ ಅದು ಉಲ್ಲೇಖಿಸಿದೆ.

ಬಿಬಿಎಂಪಿ ಕಳೆದ ಎರಡು ದಿನಗಳಿಂದ ಅತಿಕ್ರಮಣಕಾರರು ಎಂದು ಆರೋಪಿಸಿ ಜನ ಸಾಮಾನ್ಯರ ಆಸ್ತಿಗಳನ್ನು ಬುಲ್ಡೋಝರ್‌ ಮೂಲಕ ಕೆಡವಲಾಗುತ್ತಿದೆ. ಅದಾಗ್ಯೂ ಈ ವೇಳೆ ಈ ಯಾವುದೆ ದೊಡ್ಡ ಕಂಪೆನಿಗಳ ಆಸ್ತಿಗಳನ್ನು ಕೆಡವಿದ್ದು ಈ ವರೆಗೆ ವರದಿಯಾಗಿಲ್ಲ ಎಂದು ಎನ್‌ಡಿಟವಿ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಾಮಾನ್ಯ ಮನುಷ್ಯರ ಆಸ್ತಿಗಳನ್ನು ನೆಲಸಮಗೊಳಿಸುವ ಕಾರ್ಯಗಳು ಭರದಿಂದ ಸಾಗುತ್ತಿರುವಾಗ, ಬೃಹತ್‌ ಕಂಪನಿಗಳು ಇನ್ನೂ ಮುಟ್ಟಿಲ್ಲ” ಎಂದು ತನ್ನ ವರದಿಯಲ್ಲಿ ಎನ್‌ಡಿಟಿವಿ ಹೇಳಿದೆ.

ಇದನ್ನೂ ಓದಿ: ‘ನೋಯ್ಡಾ ಟ್ವಿನ್ ಟವರ್ ಶೈಲಿಯಲ್ಲಿ ಕೆಡವುತ್ತೇವೆ’: ಬೆಂಗಳೂರು ಕಟ್ಟಡಗಳ ಬಗ್ಗೆ ಸಚಿವ ಆರ್‌‌. ಅಶೋಕ್‌

“ಅತಿಕ್ರಮ ಮಾಡಿರುವ ಯಾವುದೆ ಕಂಪೆನಿಗಳನ್ನು ಬಿಡುವುದಿಲ್ಲ ಎಂದು ಹೆಸರು ಹೇಳಲು ಇಚ್ಛಿಸದ ಬಿಬಿಎಂಪಿ ಇಂಜಿನಿಯರ್‌ ಹೇಳಿದ್ದಾರಾದರೂ, ಯಾವುದೆ ದೊಡ್ಡ ಕಂಪೆನಿಗಳ ಮೇಲೆ ಇನ್ನೂ ಕ್ರಮ ಪ್ರಾರಂಭವಾಗಿಲ್ಲ” ಎಂದು ಎನ್‌ಡಿಟಿವಿ ವರದಿ ಹೇಳಿದೆ.

ಈ ನಡುವೆ ಬೆಂಗಳೂರಿನಲ್ಲಿ ನೆರೆ ಬಂದಿದ್ದರ ಬಗ್ಗೆ ರಾಜ್ಯ ಬಿಜೆಪಿ ಸರ್ಕಾರದ ಬಗ್ಗೆ ತೀವ್ರ ಟೀಕೆ ಮಾಡಿದ್ದ ಯುವ ಕಾಂಗ್ರೆಸ್‌‌ ಅಧ್ಯಕ್ಷ ಮಹಮ್ಮದ್ ನಲಪಾಡ್ ಸೇರಿದ ಪೂರ್ವ ಬೆಂಗಳೂರಿನ ನಲಪಾಡ್ ಅಕಾಡೆಮಿ ಆಫ್ ಇಂಟರ್‌ನ್ಯಾಶನಲ್ ಸ್ಕೂಲ್ ಆವರಣದಲ್ಲಿ ಧ್ವಂಸ ಕಾರ್ಯಾಚರಣೆಯನ್ನು ನಡೆಸಲಾಗಿದೆ.

ಶಾಲೆಯು ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿದ್ದು ಗಮನಕ್ಕೆ ಬಾರದೆ ಹೋದದ್ದು ಹೇಗೆ ಎಂಬ ಪ್ರಶ್ನೆಗೆ, ಕಟ್ಟಡ ನಿರ್ವಣದ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಮುಖ್ಯ ಎಂಜಿನಿಯರ್ ಮಾಲತಿ ಅವರು ಕಂದಾಯ ಇಲಾಖೆಯನ್ನು ದೂಷಿಸಿದ್ದಾರೆ. “ಈ ಬಗ್ಗೆ ನಮಗೆ ತಿಳಿದಿರಲಿಲ್ಲ, ಇದು ಕಂದಾಯ ಇಲಾಖೆಯ ಅಡಿಯಲ್ಲಿ ಬರುತ್ತದೆ. ಅವರು ಪರಿಶೀಲಿಸಬೇಕಿತ್ತು. ಈಗ ನಾವು ಅತಿಕ್ರಮಣವನ್ನು ಕೆಡವುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಹಾ ಮಳೆಗೆ ಜಲಾವೃತಗೊಂಡ ಬೆಂಗಳೂರಿನ ರಸ್ತೆಗಳು; ದಿಕ್ಕು ತಪ್ಪಿದ ಗೂಗಲ್ ಮ್ಯಾಪ್!

ಕೆಲವು ದಿನಗಳಿಂದ ಬೆಂಗಳೂರಿನ ಹಲವು ವಸತಿ ಪ್ರದೇಶದಲ್ಲಿ ಕಟ್ಟಡಗಳನ್ನು ಕೆಡವಲಾಗುತ್ತಿದೆ. ಆದರೆ ಯಾವುದೇ ಅಧಿಕೃತ ಅಂಕಿಅಂಶಗಳು ಇನ್ನೂ ಬಂದಿಲ್ಲ ಎಂದು ವರದಿಯಾಗಿದೆ. ಬೆಂಗಳೂರಿನ ಪೂರ್ವ ಭಾಗದಲ್ಲಿ ಮಂಗಳವಾರ ನಾಲ್ಕು ಅಂತಸ್ತಿನ ಕಟ್ಟಡದ ಗೋಡೆಯನ್ನು ನಿವಾಸಿಗಳು ತಮ್ಮ ಮನೆಗಳಲ್ಲಿದ್ದಾಗ ನೆಲಸಮಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ.

ಕಟ್ಟಡದ ಮಾಲೀಕ ದಿನೇಶ್ ರೆಡ್ಡಿ ಅವರು, “ಕಟ್ಟಡದ ನಿರ್ಮಾಣಕ್ಕೆ ಮುಂದಾದಾಗಲೆ ಎಲ್ಲಾ ಅಗತ್ಯ ಅನುಮತಿಗಳನ್ನು ತೆಗೆದುಕೊಂಡಿದ್ದೇವೆ. ಈ ಮಳೆನೀರು ಚರಂಡಿ ಬಹಳ ದಿನಗಳಿಂದ ಇದೆ, ಈ ವಿಚಾರ ಗೊತ್ತಿದ್ದರೂ ಅಧಿಕಾರಿಗಳು ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಿದ್ದಾರೆ. ನಾನು ಯಾವುದೇ ನಿಯಮ ಉಲ್ಲಂಘಿಸಿಲ್ಲ.ಯಾವುದೇ ಸೂಚನೆ ನೀಡದೆ ಬಂದು ಕಾಂಪೌಂಡ್ ಗೋಡೆ ಕೆಡವಿದ್ದಾರೆ” ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ, ಕಟ್ಟಡ ಧ್ವಂಸವನ್ನು ಮೇಲ್ವಿಚಾರಣೆ ನಡೆಸುತ್ತಿರುವ ಕಾರ್ಯನಿರ್ವಾಹಕ ಇಂಜಿನಿಯರ್, ಕಟ್ಟಡ ನಿರ್ಮಾಣಕ್ಕೆ ಯಾವುದೇ ಅನುಮತಿಯನ್ನು ನೀಡಿಲ್ಲ ಎಂದು ಹೇಳಿದ್ದಾರೆ. “ಈ ಕಟ್ಟಡಕ್ಕೆ ಯಾವುದೇ ಮಂಜೂರಾತಿ ಯೋಜನೆ ನೀಡಲಾಗಿಲ್ಲ. ಅವರು ಕಾನೂನು ಉಲ್ಲಂಘಿಸಿ ಮಳೆನೀರು ಹರಿಯುವ ಚರಂಡಿಯಲ್ಲಿ ಕಟ್ಟಡ ನಿರ್ಮಿಸಿದ್ದಾರೆ” ಎಂದು ಕಾರ್ಯಪಾಲಕ ಎಂಜಿನಿಯರ್ ಮುನಿರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ: ದೇವಾಲಯ ನಿರ್ಮಾಣ ವಿವಾದದ ಬಳಿಕ ಬೆಂಗಳೂರು ವಿವಿಯಲ್ಲಿ ದಿಢೀರನೆ ಗಣಪತಿ ಪ್ರತಿಷ್ಟಾಪನೆ; ಆರೋಪ

ಆದಾಗ್ಯೂ, ಕಟ್ಟಡ ಧ್ವಂಸದ ಬಗ್ಗೆ ಯಾವುದೇ ಸೂಚನೆಯನ್ನು ನೀಡಿಲ್ಲ ಎಂದು ಅನೇಕ ನಿವಾಸಿಗಳು ದೂರಿದ್ದಾರೆ. “ಸರ್ಕಾರ ನಮಗೆ ಯಾವುದೆ ಮಾಹಿತಿ ನೀಡಿಲ್ಲ. ಕಟ್ಟಡಗಳನ್ನು ಕೆಡವಲು ಆರಂಭಿಸಿದಾಗ ನಾವು ನಮ್ಮ ಮನೆಯೊಳಗಿದ್ದೆವು” ಎಂದು ಕೆಡವಲಾಗುತ್ತಿರುವ ನಾಲ್ಕು ಅಂತಸ್ತಿನ ಕಟ್ಟಡದ ನಿವಾಸಿ ಅಲೋಕ್ ಹೇಳಿದ್ದಾರೆ.

“ನಾನು ರಾತ್ರಿ ಪಾಳಿ ಕೆಲಸದಲ್ಲಿದ್ದು, ಅದನ್ನು ಮುಗಿಸಿ ಗಾಢ ನಿದ್ದೆಯಲ್ಲಿದ್ದೆ. ಕೆಡವುವಿಕೆಯ ದೊಡ್ಡ ಶಬ್ದಕ್ಕೆ ನಾನು ಇದ್ದಕ್ಕಿದ್ದಂತೆ ಎಚ್ಚರವಾಯಿತು” ಎಂದು ಮತ್ತೊಬ್ಬ ನಿವಾಸಿ ಪ್ರವೀಣ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...