Homeಕರ್ನಾಟಕಬೆಂಗಳೂರು: ಪ್ರತಿಭಟನಾ ನಿರತ ಅಂಗನವಾಡಿ ಕಾರ್ಯಕರ್ತೆಯರನ್ನು ಬಂಧಿಸಿ ದೌರ್ಜನ್ಯ ಎಸಗಿದ ಬಿಜೆಪಿ ಸರ್ಕಾರ

ಬೆಂಗಳೂರು: ಪ್ರತಿಭಟನಾ ನಿರತ ಅಂಗನವಾಡಿ ಕಾರ್ಯಕರ್ತೆಯರನ್ನು ಬಂಧಿಸಿ ದೌರ್ಜನ್ಯ ಎಸಗಿದ ಬಿಜೆಪಿ ಸರ್ಕಾರ

ಪೊಲೀಸರು ಮಹಿಳೆಯೊಬ್ಬರ ‘ತಾಳಿ’ಗೆ ಕೈ ಹಾಕಿ ಹಿಡಿದು ಎಳೆದಿದ್ದಾಗಿ ಹೋರಾಟಗಾರರೊಬ್ಬರು ಆರೋಪಿಸಿದ್ದಾರೆ

- Advertisement -
- Advertisement -

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಐದು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ ತಮ್ಮ ಮೇಲೆ ಪೊಲೀಸರನ್ನು ಛೂ ಬಿಟ್ಟು ದೌರ್ಜನ್ಯ ನಡೆಸುತ್ತಿದೆ ಎಂದು ಪ್ರತಿಭಟನಾ ನಿರತ ಅಂಗನವಾಡಿ ಕಾರ್ಯಕರ್ತೆಯರು ಆರೋಪಿಸಿದ್ದಾರೆ.

ಐದು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟು ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಜನವರಿ 18ರ ಬುಧವಾರದಿಂದ ಹಮ್ಮಿಕೊಂಡಿದ್ದರು. ನಗರದ ಚಳಿಗೂ ಜಗ್ಗದೆ ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ಪ್ರತಿಭಟನೆಯನ್ನು ಮುಂದುವರೆಸುತ್ತೇವೆ, ಒಂದು ವೇಳೆ ನಮ್ಮ ಬೇಡಿಕೆ ಈಡೇರದಿದ್ದರೆ ಮುಂಬರುವ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಧರಣಿಯ ಮೂರನೇ ದಿನವಾದ ಇಂದು ಪೊಲೀಸರು ಪ್ರತಿಭಟನಾ ಕಾರ್ಯಕರ್ತೆಯರನ್ನು ವಶಕ್ಕೆ ಪಡೆದಿದ್ದು, ಸುಮಾರು 20 ಬಸ್‌ಗಳಲ್ಲಿ ತುಂಬಿಸಿ ಅಜ್ಞಾತ ಸ್ಥಳಗಳಲ್ಲಿ ಇಟ್ಟಿದ್ದಾಗಿ ಆರೋಪಿಸಿದ್ದಾರೆ. ಪೊಲೀಸರು ವಶಕ್ಕೆ ಪಡೆಯುವ ವೇಳೆ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ್ದಾಗಿ ಹೋರಾಟಗಾರರು ಆರೋಪಿಸಿದ್ದಾರೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ರಾಜ್ಯ ಕಾರ್ಯದರ್ಶಿ ಉಮಾಮಣಿ, “ಕಳೆದ ಮೂರು ದಿನಗಳಿಂದ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. ಸರ್ಕಾರದಿಂದ ಯಾವುದೆ ಪ್ರತಿನಿಧಿಗಳು ನಮ್ಮನ್ನು ಸಂಪರ್ಕಿಸಿಲ್ಲ. ಹೀಗಾಗಿ ಇಂದು ವಿಧಾನಸೌಧ ಮುತ್ತಿಗೆ ಮಾಡುವ ಬಗ್ಗೆ ತೀರ್ಮಾನ ತೆಗೆದುಕೊಂಡಿದ್ದೆವು. ಆದರೆ ಅದಕ್ಕೂ ಮುಂಚೆ ನಮ್ಮನ್ನು ಬಂಧಿಸಿ ದೌರ್ಜನ್ಯ ಎಸಗಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸರು ಬಂಧಿಸುವಾಗ ಮಹಿಳೆಯೊಬ್ಬರ ‘ತಾಳಿ’ಗೆ ಕೈ ಹಾಕಿ ಹಿಡಿದು ಎಳೆದಿದ್ದಾಗಿ ಹೋರಾಟಗಾರರೊಬ್ಬರು ಆರೋಪಿಸಿದ್ದಾರೆ. “ಶುಕ್ರವಾರದ ದಿನವಾಗಿ ನಮ್ಮ ಮಾಂಗಲ್ಯಕ್ಕೆ ಕೈ ಹಾಕಿ ಅದನ್ನು ಕಿತ್ತು ಹಾಕಿದ್ದಾರೆ. ಇದು ಸರ್ಕಾರಕ್ಕೆ ಒಳ್ಳೆಯದೆ? ಅವರ ಮನೆಯ ಹೆಣ್ಣು ಮಕ್ಕಳ ಮೇಲೆ ಅವರು ಈ ರೀತಿಯಾಗಿ ವರ್ತಿಸುತ್ತಿದ್ದರೆ? ನಾವು ನಮ್ಮ ಹಕ್ಕುಗಳನ್ನಷ್ಟೆ ಕೇಳುತ್ತಿದ್ದೇವೆ. ಅದು ತಪ್ಪೆ” ಎಂದು ಅವರು ಕೇಳಿದ್ದಾರೆ.

“ಸೇವೆ ಖಾಯಂ ಮಾಡುವುದು, NEP ಜಾರಿಯಾದರೆ 31 ಸಾವಿರ ವೇತನ ನೀಡುವುದು, ಮಿನಿ ಅಂಗನವಾಡಿಯನ್ನು ಮೇಲ್ದರ್ಜೆಗೆ ಏರಿಸುವುದು, ಸುಪ್ರೀಂಕೋರ್ಟ್ ಆದೇಶದಂತೆ ನಿವೃತ್ತಿಯಾದ ಕಾರ್ಯಕರ್ತರಿಗೆ ಮತ್ತು ಸಹಾಯಕಿಯರಿಗೆ ಗ್ರಾಜ್ಯುಟಿ ಮತ್ತು ಪಿಂಚಣಿ ನೀಡುವುದು, ಇಎಸ್‌ಐ ಜಾರಿ ಮತ್ತು ತೀವ್ರ ಕಾಯಿಲೆಯಿಂದ ಬಳಲುತ್ತಿರುವವರಿಗೆ ಸಂಬಳ ಸಹಿತ ರಜೆ ನೀಡಬೇಕು, ಹೀಗೆ ಐದು ಮುಖ್ಯ ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟಿದ್ದೇವೆ” ಎಂದು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷೆ ನಾನುಗೌರಿ.ಕಾಂಗೆ ಹೇಳಿದ್ದಾರೆ.

ಬುಧವಾರದಂದು ಬೆಂಗಳೂರು ರೈಲು ನಿಲ್ದಾಣದಿಂದ ಬೃಹತ್‌ ಪ್ರತಿಭಟನಾ ರ್‍ಯಾಲಿ ಮೂಲಕ ಫ್ರೀಡಂ ಪಾರ್ಕಿ‌ಗೆ ತೆರಳುವುದಾಗಿ ಹೇಳಿದ್ದರೂ ಪೊಲೀಸರು ಅದಕ್ಕೆ ಅನುಮತಿ ನೀಡಿರಲಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಹೀಗಾಗಿ ಫ್ರೀಡಂ ಪಾರ್ಕ್‌‌ಗೆ ಆಗಮಿಸಿ ನಾವು ಧರಣಿ ಪ್ರಾರಂಭಿಸಿದ್ದೆವು ಎಂದು ಅವರು ಹೇಳಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...