Homeಸಿನಿಮಾಕ್ರೀಡೆರೋಚಕ ಗೆಲುವಿನ ಮೂಲಕ ಪ್ರೊ ಕಬ್ಬಡ್ಡಿಯಲ್ಲಿ ಶುಭಾರಂಭ ಮಾಡಿದ ಬೆಂಗಳೂರು ಬುಲ್ಸ್

ರೋಚಕ ಗೆಲುವಿನ ಮೂಲಕ ಪ್ರೊ ಕಬ್ಬಡ್ಡಿಯಲ್ಲಿ ಶುಭಾರಂಭ ಮಾಡಿದ ಬೆಂಗಳೂರು ಬುಲ್ಸ್

- Advertisement -
- Advertisement -

ಇಂದು ನಡೆದ ಪ್ರೊ.ಕಬ್ಬಡ್ಡಿ ಸೀಸನ್ 7ರ ಎರಡನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಬೆಂಗಳೂರು ಬುಲ್ಸ್ ಮೂರು ಬಾರಿ ಚಾಂಪಿಯನ್ ಆಗಿರುವ ಪಟ್ನಾ ಪೈರೇಟ್ಸ್ ತಂಡವನ್ನು 34-32 ಅಂಕಗಳಿಂದ ಬಗ್ಗು ಬಡಿಯುವ ಮೂಲಕ ಶುಭಾರಂಭ ಮಾಡಿತು.

ಹೈದರಾಬಾದ್ ಗಚಿಬೌಲಿ ಕ್ರೀಡಾಂಗಣದಲ್ಲಿ ನಡೆದ ಕಬ್ಬಡ್ಡಿ ಪಂದ್ಯದಲ್ಲಿ ಆರಂಭದಲ್ಲಿ ಬೆಂಗಳೂರು 5 ಪಾಯಿಂಟ್ ಮುನ್ನಡೆ ಇತ್ತು. ಆದರೆ ನಂತರ ಪಟ್ನಾ ಚೆನ್ನಾಗಿ ಆಟವಾಡಿ ಮುನ್ನಡೆ ಸಾಧಿಸಿತು. ಪವನ್ ಕುಮಾರ್ ಶೆಹ್ರಾವತ್ ಎರಡು ಬಾರಿ ಔಟಾಗಿ 15 ನಿಮಿಷಕ್ಕೂ ಹೆಚ್ಚು ನಿಮಿಷ ಬೆಂಚ್ ಕಾಯಬೇಕಾಗಿ ಬಂದಿತ್ತು. ಆ ಸಂದರ್ಭದಲ್ಲಿ ಡು ಆರ್ ಡೈ ರೈಡ್ ಮಾಡಿದ ಬೆಂಗಳೂರು ಬುಲ್ಸ್ ತಂಡದ ನಾಯಕ ರೋಹಿತ್ ಕುಮಾರ್ ಯಶಸ್ವಿಯಾಗಿ ಬೋನಸ್ ಮಾಡಿದರೂ ಔಟಾದರು ಮತ್ತು ರಿವ್ಯೂ ಕೇಳಿ ತಂಡದ ರಿವ್ಯೂ ಕೂಡ ಕಳೆದುಕೊಂಡರು.

ಪಂದ್ಯದ ಮೊದಲಾರ್ಧ ಮುಗಿದಾಗ ಪಟ್ನಾ 17-13 ಅಂಕಗಳಿಮದ ನಾಲ್ಕು ಪಾಯಿಂಟ್ ಗಳಿಂದ ಮುನ್ನಡೆ ಗಳಿಸಿತ್ತು. ದ್ವಿತೀಯಾರ್ಧದಲ್ಲಿಯೂ ಪಟ್ನಾ ಸತತವಾಗಿ ಪಾಯಿಂಟ್ಸ್ ಗಳನ್ನು ಏರಿಸಿಕೊಳ್ಳತೊಡಗಿದಾಗ ಸತತ ನಾಲ್ಕು ಸೂಪರ್ ಟ್ಯಾಕಲ್ ಮೂಲಕ ಬೆಂಗಳೂರು ಯಶಸ್ವಿಯಾಗಿ ಕಮ್ ಬ್ಯಾಕ್ ಮಾಡಿತು.

ಪಂದ್ಯ ಮುಗಿಯಲು ಕೊನೆಯ ಆರು ನಿಮಿಷವಿದ್ದಾಗ ಅಂಕ 24-24 ಇದ್ದು ಎರಡು ತಂಡಗಳು ಸಮಬಲ ಸಾಧಿಸಿದ್ದವು. ಆಗ ಪವನ್ ಕುಮಾರ್ ಆಕರ್ಷಕ ರೈಡಿಂಗ್ ನಿಂದಾಗಿ ಕೊನೆಯ ನಾಲ್ಕು ನಿಮಿಷ ಬರುವ ವೇಳೆಗೆ 30-36 ಕ್ಕೆ ಬಂದಿತು. ಬೆಂಗಳೂರು 04 ಪಾಯಿಂಟ್ ಗಳ ಮುನ್ನಡೆ ಸಾಧಿಸಿತು. ಅಂತಿಮವಾಗಿ ರಕ್ಷಣಾತ್ಮಕ ಆಟವಾಡಿದ ಬೆಂಗಳೂರು 34-32 ಅಂದರೆ 02 ಅಂಕಗಳಿಂದ ಜಯಗಳಿಸಿ ಗೆಲುವಿನ ಖಾತೆ ತೆರೆಯಿತು.

ಆಶೀಸ್ ಸಾಂಗ್ವಾನ್

ಬೆಂಗಳೂರು ತಂಡದ ಪರವಾಗಿ ಅದ್ಭುತ ಡಿಫೆಂಡಿಗ್ ಮಾಡಿ ಅಮಿತ್ ಶೇರಾನ್ 05 ಮತ್ತು ಆಶೀಸ್ ಸಾಂಗ್ವಾನ್ 04 ಅಂಕಗಳಿಸಿ ಗಮನ ಸೆಳೆದರು. ರೈಡಿಂಗ್ ವಿಭಾಗದಲ್ಲಿ ಪವನ್ ಕುಮಾರ್ ಶೆಹ್ರಾವತ್ 09 ಪಾಯಿಂಟ್ ಗಳಿಸಿ ತಂಡಕ್ಕೆ ಆಸರೆಯಾದರು. ಪಟ್ನಾ ತಂಡದ ಪರವಾಗಿ ಪರ್ದೀಪ್ ನರ್ವಾಲ್ 10 ರೈಡಿಂಗ್ ಪಾಯಿಂಟ್ ಗಳಿಸಿ ಹೋರಾಡಿದರೂ ಗೆಲುವು ಸಾಧ್ಯವಾಗಲಿಲ್ಲ.

ಪರ್ದೀಪ್ ನರ್ವಾಲ್
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...