Homeಸಿನಿಮಾಕ್ರೀಡೆರೋಚಕ ಗೆಲುವಿನ ಮೂಲಕ ಪ್ರೊ ಕಬ್ಬಡ್ಡಿಯಲ್ಲಿ ಶುಭಾರಂಭ ಮಾಡಿದ ಬೆಂಗಳೂರು ಬುಲ್ಸ್

ರೋಚಕ ಗೆಲುವಿನ ಮೂಲಕ ಪ್ರೊ ಕಬ್ಬಡ್ಡಿಯಲ್ಲಿ ಶುಭಾರಂಭ ಮಾಡಿದ ಬೆಂಗಳೂರು ಬುಲ್ಸ್

- Advertisement -
- Advertisement -

ಇಂದು ನಡೆದ ಪ್ರೊ.ಕಬ್ಬಡ್ಡಿ ಸೀಸನ್ 7ರ ಎರಡನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಬೆಂಗಳೂರು ಬುಲ್ಸ್ ಮೂರು ಬಾರಿ ಚಾಂಪಿಯನ್ ಆಗಿರುವ ಪಟ್ನಾ ಪೈರೇಟ್ಸ್ ತಂಡವನ್ನು 34-32 ಅಂಕಗಳಿಂದ ಬಗ್ಗು ಬಡಿಯುವ ಮೂಲಕ ಶುಭಾರಂಭ ಮಾಡಿತು.

ಹೈದರಾಬಾದ್ ಗಚಿಬೌಲಿ ಕ್ರೀಡಾಂಗಣದಲ್ಲಿ ನಡೆದ ಕಬ್ಬಡ್ಡಿ ಪಂದ್ಯದಲ್ಲಿ ಆರಂಭದಲ್ಲಿ ಬೆಂಗಳೂರು 5 ಪಾಯಿಂಟ್ ಮುನ್ನಡೆ ಇತ್ತು. ಆದರೆ ನಂತರ ಪಟ್ನಾ ಚೆನ್ನಾಗಿ ಆಟವಾಡಿ ಮುನ್ನಡೆ ಸಾಧಿಸಿತು. ಪವನ್ ಕುಮಾರ್ ಶೆಹ್ರಾವತ್ ಎರಡು ಬಾರಿ ಔಟಾಗಿ 15 ನಿಮಿಷಕ್ಕೂ ಹೆಚ್ಚು ನಿಮಿಷ ಬೆಂಚ್ ಕಾಯಬೇಕಾಗಿ ಬಂದಿತ್ತು. ಆ ಸಂದರ್ಭದಲ್ಲಿ ಡು ಆರ್ ಡೈ ರೈಡ್ ಮಾಡಿದ ಬೆಂಗಳೂರು ಬುಲ್ಸ್ ತಂಡದ ನಾಯಕ ರೋಹಿತ್ ಕುಮಾರ್ ಯಶಸ್ವಿಯಾಗಿ ಬೋನಸ್ ಮಾಡಿದರೂ ಔಟಾದರು ಮತ್ತು ರಿವ್ಯೂ ಕೇಳಿ ತಂಡದ ರಿವ್ಯೂ ಕೂಡ ಕಳೆದುಕೊಂಡರು.

ಪಂದ್ಯದ ಮೊದಲಾರ್ಧ ಮುಗಿದಾಗ ಪಟ್ನಾ 17-13 ಅಂಕಗಳಿಮದ ನಾಲ್ಕು ಪಾಯಿಂಟ್ ಗಳಿಂದ ಮುನ್ನಡೆ ಗಳಿಸಿತ್ತು. ದ್ವಿತೀಯಾರ್ಧದಲ್ಲಿಯೂ ಪಟ್ನಾ ಸತತವಾಗಿ ಪಾಯಿಂಟ್ಸ್ ಗಳನ್ನು ಏರಿಸಿಕೊಳ್ಳತೊಡಗಿದಾಗ ಸತತ ನಾಲ್ಕು ಸೂಪರ್ ಟ್ಯಾಕಲ್ ಮೂಲಕ ಬೆಂಗಳೂರು ಯಶಸ್ವಿಯಾಗಿ ಕಮ್ ಬ್ಯಾಕ್ ಮಾಡಿತು.

ಪಂದ್ಯ ಮುಗಿಯಲು ಕೊನೆಯ ಆರು ನಿಮಿಷವಿದ್ದಾಗ ಅಂಕ 24-24 ಇದ್ದು ಎರಡು ತಂಡಗಳು ಸಮಬಲ ಸಾಧಿಸಿದ್ದವು. ಆಗ ಪವನ್ ಕುಮಾರ್ ಆಕರ್ಷಕ ರೈಡಿಂಗ್ ನಿಂದಾಗಿ ಕೊನೆಯ ನಾಲ್ಕು ನಿಮಿಷ ಬರುವ ವೇಳೆಗೆ 30-36 ಕ್ಕೆ ಬಂದಿತು. ಬೆಂಗಳೂರು 04 ಪಾಯಿಂಟ್ ಗಳ ಮುನ್ನಡೆ ಸಾಧಿಸಿತು. ಅಂತಿಮವಾಗಿ ರಕ್ಷಣಾತ್ಮಕ ಆಟವಾಡಿದ ಬೆಂಗಳೂರು 34-32 ಅಂದರೆ 02 ಅಂಕಗಳಿಂದ ಜಯಗಳಿಸಿ ಗೆಲುವಿನ ಖಾತೆ ತೆರೆಯಿತು.

ಆಶೀಸ್ ಸಾಂಗ್ವಾನ್

ಬೆಂಗಳೂರು ತಂಡದ ಪರವಾಗಿ ಅದ್ಭುತ ಡಿಫೆಂಡಿಗ್ ಮಾಡಿ ಅಮಿತ್ ಶೇರಾನ್ 05 ಮತ್ತು ಆಶೀಸ್ ಸಾಂಗ್ವಾನ್ 04 ಅಂಕಗಳಿಸಿ ಗಮನ ಸೆಳೆದರು. ರೈಡಿಂಗ್ ವಿಭಾಗದಲ್ಲಿ ಪವನ್ ಕುಮಾರ್ ಶೆಹ್ರಾವತ್ 09 ಪಾಯಿಂಟ್ ಗಳಿಸಿ ತಂಡಕ್ಕೆ ಆಸರೆಯಾದರು. ಪಟ್ನಾ ತಂಡದ ಪರವಾಗಿ ಪರ್ದೀಪ್ ನರ್ವಾಲ್ 10 ರೈಡಿಂಗ್ ಪಾಯಿಂಟ್ ಗಳಿಸಿ ಹೋರಾಡಿದರೂ ಗೆಲುವು ಸಾಧ್ಯವಾಗಲಿಲ್ಲ.

ಪರ್ದೀಪ್ ನರ್ವಾಲ್
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...