Homeಕರ್ನಾಟಕಬೆಂಗಳೂರು: ಸಹೋದ್ಯೋಗಿಗಳಿಂದ ಜಾತಿ ನಿಂದನೆ, ಕಿರುಕುಳ; ದಲಿತ ವ್ಯಕ್ತಿ ಮನನೊಂದು ಆತ್ಮಹತ್ಯೆಗೆ ಶರಣು

ಬೆಂಗಳೂರು: ಸಹೋದ್ಯೋಗಿಗಳಿಂದ ಜಾತಿ ನಿಂದನೆ, ಕಿರುಕುಳ; ದಲಿತ ವ್ಯಕ್ತಿ ಮನನೊಂದು ಆತ್ಮಹತ್ಯೆಗೆ ಶರಣು

- Advertisement -
- Advertisement -

ಸಹೋದ್ಯೋಗಿಗಳಿಂದ ಜಾತಿ ಆಧಾರಿತ ನಿಂದನೆ, ಕಿರುಕುಳ ಅನುಭವಿಸುತ್ತಿದ್ದ ಕಾರಣಕ್ಕೆ ಖಾಸಗಿ ಕಂಪನಿಯ ಉದ್ಯೋಗಿಯೊಬ್ಬರು ಮನನೊಂದು ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ನಗರದ ಎಚ್‌ಎಎಲ್ ನಿವಾಸಿ ವಿವೇಕ್ ಕುಮಾರ್‌ (35) ಮೃತ ದುರ್ದೈವಿ. ಅವರು ಯೆಮಲೂರಿನ ಲೈಫ್ ಸ್ಟೈಲ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದರು. ಜೂನ್ 3, ಶನಿವಾರದಂದು ತನ್ನ ಸಹೋದ್ಯೋಗಿಗಳ ವಿರುದ್ಧ ದೂರು ನೀಡಿದ ಕೆಲವೇ ಗಂಟೆಗಳ ನಂತರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಅದಕ್ಕೂ ಮುನ್ನ ಆತ್ಮಹತ್ಯೆಗೆ ಕಾರಣವೇನೆಂದು ವಿವರಿಸಿ ವಿಡಿಯೋ ಮಾಡಿರುವ ವಿವೇಕ್, ವಿಡಿಯೋವನ್ನು ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಆ ಬಳಿಕ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ವಿವೇಕ್ ರಾಜ್ – NIFT ಬೆಂಗಳೂರಿನ ಹಳೆಯ ವಿದ್ಯಾರ್ಥಿ – ಕಳೆದ ಹತ್ತು ವರ್ಷಗಳಿಂದ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು. ವಿವೇಕ್ ರಾಜ್ ಅವರು ಪರಿಶಿಷ್ಟ ಜಾತಿ (ಎಸ್‌ಸಿ) ಚಾಮರ್ ಸಮುದಾಯಕ್ಕೆ ಸೇರಿದವರು.

ವಿವೇಕ್ ಅವರ ತಂದೆ ರಾಜಕುಮಾರ್ ಅವರು ಜೂನ್ 4 ರಂದು ನೀಡಿದ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ. ವೈಟ್‌ಫೀಲ್ಡ್ ಪೊಲೀಸರು ಇದೀಗ ಸಂಸ್ಥೆಯ ವ್ಯವಸ್ಥಾಪಕಿ ಮಾಲತಿ ಮತ್ತು ಸಹೋದ್ಯೋಗಿಗಳಾದ ಕುಮಾರ್ ಸೂರಜ್ ಮತ್ತು ನಿತೇಶ್ ಕುಮಾರ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಿದ್ದಾರೆ.

ಎಫ್ಐಆರ್ ಪ್ರಕಾರ, ವಿವೇಕ್ ಹಲವಾರು ತಿಂಗಳುಗಳಿಂದ ಮಾನಸಿಕ ಕಿರುಕುಳಕ್ಕೆ ಒಳಗಾಗಿದ್ದರು ಮತ್ತು ಅವರ ಮೇಲೆ ಜಾತಿವಾದಿ ನಿಂದನೆಗಳನ್ನು ಮಾಡಲಾಗಿತ್ತು. ಕಚೇರಿಯಲ್ಲಿನ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ವಿವೇಕ್ ಅವರು ಮಾನೋವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದರು. ಜೂನ್ 3ರಂದು ಅವರು ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಸಾಗರದ ದಲಿತ ವಿದ್ಯಾರ್ಥಿನಿ ಪ್ರಕರಣ; ವಸತಿ ಶಾಲೆ ಮುಖ್ಯಸ್ಥನ ವಿರುದ್ಧ ‘ಪೋಕ್ಸೋ’, ‘ಅಟ್ರಾಸಿಟಿ’ ಕೇಸ್‌ ದಾಖಲು

ತಾನು ಕೆಳಜಾತಿಯವರು ಎಂಬ ಕಾರಣಕ್ಕೆ ತನ್ನ ಸಹೋದ್ಯೋಗಿಗಳಾದ ಮಾಲತಿ ಎಸ್ ಮತ್ತು ನಿತೀಶ್ ಕುಮಾರ್ ಅವರು ಕಿರುಕುಳ ನೀಡುತ್ತಿದ್ದಾರೆ ಮತ್ತು ತಮ್ಮ ವಿರುದ್ಧ ಜಾತಿ ನಿಂದನೆ ಮಾಡಿದ್ದಾರೆ ಎಂದು ವಿವೇಕ್ ರಾಜ್ ಮಾರತ್ತಹಳ್ಳಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಕಂಪನಿಯ ಎಚ್‌ಆರ್‌ ಕುಮಾರ್‌ ಸೂರಜ್‌ ಅವರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರುತ್ತೇನೆ ಎಂದು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಪೊಲೀಸರು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಜೂನ್ 3 ರಂದು ಎಫ್‌ಐಆರ್ ದಾಖಲಿಸಿದ್ದರು.

ಸಹೋದ್ಯೋಗಿಗಳು ಕಿರುಕುಳ ನೀಡುತ್ತಿದ್ದರು ಎಂದು ವಿಡಿಯೋದಲ್ಲಿ ವಿವೇಕ್‌ ಆರೋಪಿಸಿದ್ದಾರೆ. ಅವರ ಕಿರುಕುಳ ತಾಳಲಾರದೆ ಆತ್ಮಹತ್ಯೆಯ ಹಾದಿ ಹಿಡಿದಿರುವುದಾಗಿ ಅವರು ಹೇಳಿಕೊಂಡಿದ್ದಾರೆ.

ಇದೀಗ ವಿಡಿಯೋ ನೋಡಿದ ಎಚ್‌ಎಎಲ್ ಪೊಲೀಸರು ವಿವೇಕ್ ಮನೆಗೆ ಧಾವಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಎಸ್‌ಸಿಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಧ್ಯ ನಿತೀಶ್ ಎಂಬಾತನನ್ನು ಬಂಧಿಸಿದ್ದಾರೆ. ಇನ್ನಿಬ್ಬರಿಗಾಗಿ ಶೋಧ ನಡೆಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...