Homeಕರ್ನಾಟಕಬೆಂಗಳೂರು: ಸಿಇಒ ಪುತ್ರನ ಕೊಲೆ ಪೂರ್ವ ಯೋಜಿತ?

ಬೆಂಗಳೂರು: ಸಿಇಒ ಪುತ್ರನ ಕೊಲೆ ಪೂರ್ವ ಯೋಜಿತ?

- Advertisement -
- Advertisement -

ಗೋವಾದ ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದ ಸ್ಟಾರ್ಟ್‌ಅಪ್‌ನ ಸಿಇಒ ಸುಚನಾ ಸೇಠ್ ನಿನ್ನೆ ಬ್ಯಾಗ್‌ನಲ್ಲಿ ಮಗನ ಮೃತದೇಹವನ್ನು ಕಾರಿನಲ್ಲಿ ಬೆಂಗಳೂರಿಗೆ ಸಾಗಿಸುತ್ತಿದ್ದಾಗ ಪೊಲೀಸರು ಆಕೆಯನ್ನು ಬಂಧಿಸಿದ್ದರು. ಇದೀಗ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಕೃತ್ಯ ನಡೆದಿದೆ ಎನ್ನಲಾದ ಕೊಠಡಿಯಲ್ಲಿ ಕೆಮ್ಮಿನ ಸಿರಪ್‌ನ ಎರಡು ಖಾಲಿ ಬಾಟಲಿಗಳು ಸಿಕ್ಕಿದೆ. ಮಗುವಿಗೆ ಓವರ್‌ ಡೋಸ್‌ ಕೊಟ್ಟು ಕೊಲೆ ಮಾಡಿರುವ ಶಂಕೆ ಇದ್ದು ಇದೊಂದು ಪೂರ್ವಯೋಜಿತ ಕೃತ್ಯದಂತೆ ತೋರುತ್ತಿದೆ ಎಂದು ಪೊಲೀಸ್‌ ಅಧಿಕಾರಿಯೋರ್ವರು ಹೇಳಿದ್ದಾರೆ.

ಸುಚನಾ ಸೇಠ್ ಬಂಧನದ ನಂತರ ಮಂಗಳವಾರ ಆಕೆಯನ್ನು ಗೋವಾದ ಮಾಪುಸಾ ಪಟ್ಟಣದ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಆಕೆಗೆ ಕೋರ್ಟ್ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಯನ್ನು ವಿಧಿಸಿದೆ.

ಮರಣೋತ್ತರ ಪರೀಕ್ಷೆಯಲ್ಲಿ ಮಗುವನ್ನು ಬಟ್ಟೆ ಅಥವಾ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿರುವ ಬಗ್ಗೆ ಮಾಹಿತಿ ಇದೆ. ಆದರೆ ಮಗು ನರಲಾಟ ಮಾಡಿರುವ ಲಕ್ಷಣ ಕಂಡು ಬಂದಿಲ್ಲ. ಮಗುವನ್ನು ಕೊಲೆ ಮಾಡುವ ಮೊದಲು ಅದಕ್ಕೆ ಓವರ್‌ ಡೋಸ್‌ ನೀಡಿರುವ ಸಾಧ್ಯತೆ ಇದೆ ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಅಪಾರ್ಟ್‌ಮೆಂಟ್ ಸಿಬ್ಬಂದಿಯನ್ನು ವಿಚಾರಣೆ ನಡೆಸಿದಾಗ ಮಹಿಳೆ ತನಗೆ ಕೆಮ್ಮು ಇದೆ ಎಂದು ಹೇಳಿಕೊಂಡು ಕೆಮ್ಮಿನ ಸಿರಪ್‌ನ ಸಣ್ಣ ಬಾಟಲಿಯನ್ನು ತರುವಂತೆ ಹೇಳಿದ್ದಳು. ಆದರೆ ದೊಡ್ಡ ಬಾಟಲಿಯನ್ನು ಅವಳೇ ಕೊಂಡೊಯ್ದಿರಬಹುದು ಎಂದು ಹೇಳಿದ್ದಾರೆ. ಇದನ್ನು ಗಮನಿಸಿದಾಗ ಪೂರ್ವ ನಿಯೋಜಿತ ಕೃತ್ಯದಂತೆ ತೋರುತ್ತದೆ ಎಂದು ಪೊಲೀಸ್‌ ಅಧಿಕಾರಿ ಹೇಳಿದ್ದಾರೆ.

ಆರೋಪಿತ ಸುಚನಾ ಸೇಠ್ ವಿಚಾರಣೆಯ ಸಮಯದಲ್ಲಿ ತಾನು ಕೊಲೆ ಮಾಡಿರುವುದನ್ನು ನಿರಾಕರಿಸಿದ್ದು,  ಮಗು ನಿದ್ರೆಯಿಂದ ಎದ್ದಾಗ ಮೃತಪಟ್ಟಿತ್ತು ಎಂದು ಹೇಳಿದ್ದಾಳೆ. ನಾವು ಅವಳ ವಾದವನ್ನು ಒಪ್ಪುವುದಿಲ್ಲ. ಈ ಕುರಿತ ಹೆಚ್ಚಿನ ತನಿಖೆಯು ಮಗುವಿನ ಕೊಲೆಯ ಹಿಂದಿನ ಉದ್ದೇಶವನ್ನು ಬಹಿರಂಗಪಡಿಸುತ್ತದೆ. ಆರೋಪಿ ಮಹಿಳೆ ಮತ್ತು ಅವಳ ಪತಿ ದೂರವಾಗಿದ್ದರು. ಅದಕ್ಕಾಗಿಯೇ ಅವಳು ಇದನ್ನು ಮಾಡಿರಬಹುದು ಎಂದು ನಮಗೆ ತೋರುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಗುವನ್ನು ಕತ್ತು ಹಿಸುಕಿ ಅಥವಾ ಅದನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ. ಬಟ್ಟೆ ಅಥವಾ ದಿಂಬನ್ನು ಬಳಸಲಾಗಿದೆ. ಮಗುವನ್ನು ಕೈಯಿಂದ ಕತ್ತು ಹಿಸುಕಿದಂತೆ ಕಾಣುತ್ತಿಲ್ಲ. ಇದು ದಿಂಬು ಅಥವಾ ಇತರ ವಸ್ತುವಿನಂತೆ ಕಾಣುತ್ತದೆ ಎಂದು ಹಿರಿಯೂರು ತಾಲೂಕು ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಕುಮಾರ್ ನಾಯ್ಕ್ ಸುದ್ದಿಗಾರರಿಗೆ ತಿಳಿಸಿದ್ದರು.

ಸುಚನಾ ಸೇಠ್ ಜನವರಿ 6 ರಂದು ತನ್ನ ಮಗನೊಂದಿಗೆ ಉತ್ತರ ಗೋವಾದ ಸಿಂಕ್ವೆರಿಮ್‌ನಲ್ಲಿರುವ ಹೋಟೆಲ್‌ಗೆ ತೆರಳಿದ್ದರು (ಚೆಕ್‌ ಇನ್ ಮಾಡಿದ್ದರು). ಆದರೆ ಆಕೆ ವಾಪಸ್‌ ಬರುವಾಗ (ಚೆಕ್‌ ಔಟ್ ಮಾಡುವಾಗ) ಒಬ್ಬರೇ ಬಂದಿದ್ದರು. ಇದರಿಂದ ಹೋಟೆಲ್‌ ಸಿಬ್ಬಂದಿಗೆ ಅನುಮಾನ ಕಾಡಿತ್ತು.

ಸುಚನಾ ಹೋಟೆಲ್ ತೊರೆದ ಬಳಿಕ, ಅಲ್ಲಿನ ನೌಕರರು ಕೊಠಡಿ ಸ್ವಚ್ಚಗೊಳಿಸಲು ತೆರಳಿದ್ದರು. ಈ ವೇಳೆ ಕೊಠಡಿಯಲ್ಲಿ ರಕ್ತದ ಕಲೆಗಳನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದರು.

ಬಳಿಕ ಪೊಲೀಸರು ಸುಚನಾರನ್ನು ಕರೆದುಕೊಂಡು ಬಂದಿದ್ದ ಕಾರು ಚಾಲಕನನ್ನು ಸಂಪರ್ಕಿಸಿ ಮಹಿಳೆಯಲ್ಲಿ ಮಗುವಿನ ಕುರಿತು ವಿಚಾರಿಸಿದ್ದರು. ಚಾಲಕ ವಿಚಾರಿಸಿದಾಗ, ಮಗ ಗೆಳತಿಯೊಂದಿಗೆ ತೆರಳಿದ್ದಾಗಿ ಆಕೆ ಸುಳ್ಳು ಹೇಳಿದ್ದರು. ಪೊಲೀಸರು ಮತ್ತೆ ಕಾರು ಚಾಲಕನಿಗೆ ಕರೆ ಮಾಡಿ ಸುಚನಾ ಅವರಿಗೆ ಕೊಂಕಣಿ ತಿಳಿದಿಲ್ಲದೆ ಇರುವುದರಿಂದ ಕೊಂಕಣಿಯಲ್ಲಿ ಮಾತನಾಡಿ ಕಾರನ್ನು ಹತ್ತಿರದ ಚಿತ್ರದುರ್ಗದ ಐಮಂಗಲ ಠಾಣೆಗೆ ತೆಗೆದುಕೊಂಡು ಹೋಗುವಂತೆ ಸೂಚಿಸಿದ್ದರು. ಕಾರು ಚಾಲಕ ಹಾಗೆಯೆ ಮಾಡಿದ್ದ. ನಂತರ ಪೊಲೀಸರು ಆಕೆಯನ್ನು ಬಂಧಿಸಿದಾಗ ಆಕೆಯ ಜೊತೆಗಿನ ಬ್ಯಾಗಿನಲ್ಲಿ ಮಗನ ಮೃತದೇಹ ಪತ್ತೆಯಾಗಿತ್ತು.

ಇದನ್ನು ಓದಿ: ‘ಭಾರತ ಜೋಡೋ ನ್ಯಾಯ ಯಾತ್ರೆ’ಗೆ ಮಣಿಪುರ ಹಿಂಸಾಚಾರದ ಕರಿ ನೆರಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...