Homeಕರ್ನಾಟಕಭೂಮಿ-ವಸತಿ ಹಕ್ಕಿಗಾಗಿ 'ಬೆಂಗಳೂರು ಚಲೋ'; ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ

ಭೂಮಿ-ವಸತಿ ಹಕ್ಕಿಗಾಗಿ ‘ಬೆಂಗಳೂರು ಚಲೋ’; ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ

- Advertisement -
- Advertisement -

ಭೂಮಿ ಹಕ್ಕು, ನಿವೇಶನ ಹಾಗೂ ವಸತಿಗಾಗಿ ರಾಜ್ಯದಲ್ಲಿ ಲಕ್ಷಾಂತರ ಜನರು ಅರ್ಜಿ ಸಲ್ಲಿಸಿದ್ದು, ನೆನೆಗುದಿಗೆ ಬಿದ್ದಿರುವ ಭೂ ವಿವಾದವನ್ನು ಪರಿಹರಿಸಿ ಬಡವರಿಗೆ ಹಕ್ಕುಪತ್ರ ನೀಡಬೇಕು ಎಂದು “ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ” ನೇತೃತ್ವದಲ್ಲಿ ಇಂದು ಬೆಂಗಳೂರು ಚಲೋ ಸಮಾವೇಶ ನಡೆಯಿತು.

ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಜನ ಅರ್ಜಿದಾರರು ಹಾಗೂ ಭೂಮಿ ಹೋರಾಟಗಾರರು ಭಾಗಹಿಸಿದ್ದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಮುಖಂಡರಾದ ಕುಮಾರ್ ಸಮತಳ, “ವಸತಿ ಮತ್ತು ಭೂಮಿ ಹಕ್ಕಿಗಾಗಿ ನಾವು 2016ರಿಂದ ಹಲವು ಸುತ್ತಿನ ಹೋರಾಟ ಮಾಡಿದ್ದೇವೆ; ಭೂಮಿ ಹಕ್ಕಿಗಾಗಿ ರಾಜ್ಯದಲ್ಲಿ 34 ಲಕ್ಷ ಅರ್ಜಿ ಹಾಕಿದ್ದು, ಸರ್ಕಾರಿ ಕಚೇರಿಗಳಿಗೆ ಜನ ಅಲೆದಾಡಿ ಬಸವಳಿದಿದ್ದಾರೆ. ಬಡವರು ಸ್ವತಂತ್ರವಾಗಿ ಬದುಕಬೇಕು ಎಂಬ ಕಾಳಜಿ ಸರ್ಕಾರಕ್ಕೆ ಇಲ್ಲವಾಗಿದೆ. ಆದ್ದರಿಂದ, ನಾವೆಲ್ಲಾ ಸಮಾನ ಮನಸ್ಕ ಸಂಘಟನೆ ಸೇರಿಕೊಂಡು ಭೂಮಿ ಹಕ್ಕಿಗಾಗಿ ಹೋರಾಟ ಮಾಡುತ್ತಿದ್ದೇವೆ” ಎಂದು ಹೇಳಿದರು.

“ಭೂಮಿ ಹಾಗೂ ವಸತಿಗಾಗಿ ರಾಜ್ಯದಲ್ಲಿ 57 ಲಕ್ಷ ಅರ್ಜಿ ಸಲ್ಲಿಕೆಯಾಗಿದೆ; ಕೋಟ್ಯಾಂತರ ಜನ ಹಕ್ಕುಪತ್ರಕ್ಕಾಗಿ ಕಾಯುತ್ತಿದ್ದು, ಅವರಿಗೆ ಈಗ ಭೂಮಿ ಸಿಗುವ ಭರವಸೆ ಸಿಕ್ಕಿದೆ. ಆದರೆ, 10 ವರ್ಷಗಳ ಹಿಂದೆ ಈ ಭರವಸೆ ಇರಲಿಲ್ಲ. ಅರ್ಜಿದಾರರಲ್ಲಿ ಭರವಸೆ ಹುಟ್ಟಿಸುವ ಕೆಲಸವನ್ನು ಕಳೆದ ಎಂಟು ವರ್ಷದಿಂದ ನಮ್ಮ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಮಾಡಿದೆ” ಎಂದರು.

“ಫಾರ್ಮ್‌ 53, 57 ರಲ್ಲಿ ಹಲವರು ಅರ್ಜಿ ಹಾಕಿದ್ದಾರೆ. ಆದರೆ, ತಹಶೀಲ್ದಾರ್ ಹಾಗೂ ಶಾಸಕರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶೇ.95 ರಷ್ಟು ಅರ್ಜಿಗಳು ತಿರಸ್ಕೃತಗೊಂಡಿವೆ. ಸರ್ಕಾರ ಭೂಮಿ ಕೊಡಲ್ಲ ಎಂದು ಹೇಳಿದರೆ ನಾವು ಸುಮ್ಮನಾಗಬೇಕಾ? ಇದಕ್ಕೆ ಪರಿಹಾರ ಏನು ಎಂದು ನಾವು ಸರ್ಕಾರಕ್ಕೆ ಹೇಳಿದ್ದೇವೆ. ಹೇಗೆ ಭೂಮಿ ಹಂಚಿಕೆ ಮಾಡಬೇಕು ಎಂಬದನ್ನೂ ನಾವು ಹೇಳುತ್ತಿದ್ದೇವೆ. ಮುಖ್ಯವಾಗಿ, ನಮ್ಮ ಜನರು ಸಾಗುವಳಿ ಮಾಡುತ್ತಿರುವ ಜಮೀನುಗಳನ್ನು ಅವರ ಹೆಸರಿಗೆ ಪರಭಾರೆ ಮಾಡಿ. ಅಲ್ಲಿ ಜನ ಉಳುಮೆ ಮಾಡುತ್ತಿದ್ದಾರೆ, ಅದಕ್ಕೆ ನಮ್ಮ ಬಳಿ ಸಾಕ್ಷಿ ಇದೆ” ಎಂದು ಹೇಳಿದರು.

“ಭೂಮಿ ಕೊಡುವುದಕ್ಕೆ ಹಲವಾರು ಕಾನೂನುಗಳು ಅಡ್ಡಿ ಬರುತ್ತಿವೆ ಎಂದು ಸರ್ಕಾರ ಹೇಳುತ್ತಿದೆ. ಆದರೆ, ಕಾನೂನನ್ನು ಬದಲಾವಣೆ ಮಾಡಿ ಜನರಿಗೆ ಭೂಮಿ ಕೊಡಿ ಎಂದು ಒತ್ತಾಯಿಸುತ್ತೇವೆ. ಅರ್ಜಿ ಸಲ್ಲಿಸಿರುವವರಿಗೆ ‘ಒನ್‌ ಟೈಮ್‌ ಸೆಟಲ್‌ಮೆಂಟ್’ ಮಾಡಿ, ನಂತರ ಕಾನೂನು ಪಾಲನೆ ಮಾಡಿ. ಬೇರೆಯವರಿಂದ ಭೂಮಿ ಖರೀದಿಸಿ ಎಂದು ನಾವು ಹೇಳುತ್ತಿಲ್ಲ; ಬಂಡವಾಳಶಾಹಿಗಳಿಗೆ ಮತ್ತು ಬಹುರಾಷ್ಟ್ರೀಯ ಕಂಪನಿಗಳಿಗೆ ಸರ್ಕಾರ ಸಾವಿರಾರು ಎಕರೆ ಭೂಮಿ ನೀಡುತ್ತಿದೆ. ಅದಕ್ಕಾಗಿ ಕಾನೂನನ್ನೂ ಬದಲಿಸಿದೆ. ಎಲ್ಲ ಜಾತಿಯ ಭೂರಹಿತರಿಗೆ ಭೂಮಿ ನೀಡಿ ಸಾಮಾಜಿಕ ನ್ಯಾಯ ಪಾಲಿಸಬೇಕು” ಎಂದು ಕುಮಾರ್ ಒತ್ತಾಯಿಸಿದರು.

ಜನಶಕ್ತಿ ಸಂಘಟನೆ ಅಧ್ಯಕ್ಷರಾದ ಸಿರಿಮನೆ ನಾಗರಾಜ್ ಮಾತನಾಡಿ, “ರಾಜ್ಯದಾದ್ಯಂತ 37 ಲಕ್ಷ ಜನ ಬಗರ್ ಹುಕುಂ ಅಡಿ ಅರ್ಜಿ ಹಾಕಿದ್ದಾರೆ; ವಸತಿಗಾಗಿ 27 ಲಕ್ಷ ಜನ ಅರ್ಜಿ ಹಾಕಿದ್ದಾರೆ. ಇವರ ಕುಟುಂಬದವರೆಲ್ಲಾ ಸೇರಿದರೆ ಕನಿಷ್ಠ ಮೂರು ಕೋಟಿ ಜನ ತಮ್ಮ ಹಕ್ಕಿಗಾಗಿ ಕಾಯುತ್ತಿದ್ದಾರೆ. ಸರ್ಕಾರ ಒಂದಲ್ಲ ಒಂದು ದಿನ ಹಕ್ಕುಪತ್ರ ನೀಡುತ್ತದೆ ಎಂದು ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ರಾಜ್ಯದ ಮೂಲೆಮೂಲೆಯಿಂದ ಹೋರಾಟಕ್ಕೆ ಜನ ಬಂದಿದ್ದಾರೆ; ಸರ್ಕಾರ ಇದನ್ನು ಅರ್ಥಮಾಡಿಕೊಳ್ಳಬೇಕು. ವರ್ಷದಲ್ಲಿ ಮೂರು ಭಾರಿ ರಾಜಧಾನಿ ಬೆಂಗಳೂರಿಗೆ ಬಂದು ಹೋರಾಟ ಮಾಡುತ್ತಿದ್ದಾರೆ” ಎಂದರು.

“ಕಟ್ಟಕಡೆಯ ಮನುಷ್ಯನಿಗೂ ಭೂಮಿ ಮತ್ತು ವಸತಿ ಸಿಗಬೇಕು, ಬಡತನದಿಂದ ಜನರು ಹೊರಬರಬೇಕು ಎಂಬ ಮಹಾತ್ಮ ಗಾಂಧಿ ಮಾತನ್ನು ಎಚ್‌.ಎಸ್‌. ದೊರೆಸ್ವಾಮಿ ಹೇಳುತ್ತಿದ್ದರು. ಅವರು ಸಾಯುವ ಹಿಂದಿನ ದಿನ ಕೂಡ ಈ ಬಗ್ಗೆ ಮಾತನಾಡಿ, ಹೋರಾಟ ಮುಂದುವರಿಸುವಂತೆ ಹೇಳಿದ್ದರು. ಕೊಡಗಿನ ಕುಶಾಲನಗರದಲ್ಲಿ ನಾವು ನಡೆಸಿದ ದಿಡ್ಡಹಳ್ಳಿ ಹೋರಾಟದಿಂದ 600 ಮನೆಗಳು ನಿರ್ಮಾಣ ಆಗಿವೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿರಂತರ ಹೋರಾಟ ನಡೆಯುತ್ತಿದೆ; ಹಲವಾರು ಕಡೆ ಅಲೆಮಾರಿಗಳಿಗೆ ವಸತಿ ಸಿಕ್ಕಿದೆ” ಎಂದು ಹೇಳಿದರು.

“ಸರ್ಕಾರಿ ಭೂಮಿಯನ್ನು ಬಲಾಢ್ಯರು ಒತ್ತುವರಿ ಮಾಡಿಕೊಂಡಿದ್ದಾರೆ. ಆದ್ದರಿಂದ, ಬಡ ಜನರಿಗೆ ಭೂಮಿ ಸಿಗುತ್ತಿಲ್ಲ. ಶ್ರೀಮಂತರಿಗೆ ಗುತ್ತಿಗೆ ನೀಡುವುದಕ್ಕೆ ಮಾತ್ರ ಸರ್ಕಾರ ಕಾನೂನು ಬದಲಾವಣೆ ಮಾಡುತ್ತೆ; ಬಳ್ಳಾರಿಯಲ್ಲಿ 3 ಸಾವಿರ ಎಕರೆ ಭೂಮಿ ಗುತ್ತಿಗೆ ನೀಡಲು ಕಾನೂನೂನಿಗೆ ತಿದ್ದುಪಡಿ ಮಾಡಲಾಗಿದೆ. ಆದರೆ, ಬಡವರಿಗೆ ಮನೆ ಕೊಡಲು ಕಾನೂನು ತಿದ್ದುಪಡಿ ಮಾಡಲು ಸಾಧ್ಯವಿಲ್ಲವಾ? 40 ಸಾವಿರ ಎಕರೆ ಭೂಮಿಯನ್ನು ಬೆಂಗಳೂರಿನ ಸುತ್ತಮುತ್ತ ಬಲಾಢ್ಯರು ಒತ್ತುವರಿ ಮಾಡಿಕೊಂಡಿದ್ದಾರೆ. ಸರ್ಕಾರ ಇದರ ಬಗ್ಗೆ ಕ್ರಮ ತೆಗೆದುಕೊಂಡಿಲ್ಲ; ಬಡವರಿಗೆ ಭೂಮಿ ಮತ್ತು ಮನೆ ಕೊಡುವುದಕ್ಕೆ ಕಾನೂನು ಅಡ್ಡಿ ಎನ್ನುತ್ತಾರೆ. ಕಾನೂನಿಗೆ ತಿದ್ದುಪಡಿ ಮಾಡಬೇಕು, ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಮಾಡಬೇಕು” ಎಂದು ಅವರು ಒತ್ತಾಯಿಸಿದರು.

ಮಡಿಕೇರಿಯ ರೈತಸಂಘ ಮುಖಂಡರಾದ ನಿರ್ವಾಣಪ್ಪ ಮಾತನಾಡಿ, “ಭೂಮಿ ಮತ್ತು ವಸತಿಗಾಗಿ ನಾವು ಹಲವು ಸುತ್ತಿನ ಹೋರಾಟ ಮಾಡಿದ್ದೇವೆ. ಗ್ಯಾರಂಟಿ ಯೋಜನೆ ಎಂದು ಹೇಳುತ್ತಿರುವ ಸರ್ಕಾರ ಅದನ್ನು ಎಲ್ಲರಿಗೂ ತಲುಪಿಸುತ್ತಿಲ್ಲ. ಗ್ಯಾರಂಟಿ ಶಾಶ್ವತವಲ್ಲ ಎಂಬುದು ನಮಗೆಲ್ಲಾ ಗೊತ್ತಿದೆ, ಸಿದ್ದರಾಮಯ್ಯ ಅವರು ಅಧಿಕಾರದಿಂದ ಇಳಿದ ಕೂಡಲೇ ಎಲ್ಲವೂ ಬದಲಾಗುತ್ತದೆ. ಅವರನ್ನು ಬಿಟ್ಟರೆ ಬೇರೆ ಯಾರಿಗೂ ಬಡವರ ಪರ ಕಾಳಜಿ ಇಲ್ಲ. ನಮಗೆ ಶಾಶ್ವತ ಪರಿಹಾರವಾಗಿ ಮನೆ, ಭೂಮಿ, ಉದ್ಯೋಗ ಹಾಗೂ ಆರೋಗ್ಯದ ರಕ್ಷಣೆ ಬೇಕು” ಎಂದು ಆಗ್ರಹಿಸಿದರು.

“ಕಾಂಗ್ರೆಸ್ ಸರ್ಕಾರ ಬಡವರಿಗೆ ಭೂಮಿ ಕೊಡಬೇಕು; ಭೂಮಿ ವಿಷಯದಲ್ಲಿ ಶ್ರೀಮಂತರಿಗೆ ಒಂದು ನ್ಯಾಯ, ಬಡವರಿಗೆ ಮತ್ತೊಂದು ನ್ಯಾಯವಿದೆ. ಹಲವು ಹಳ್ಳಿಗಳಲ್ಲಿ ಜನರು ಸತ್ತರೆ ಹೆಣ ಹೂಳಲು ಜಾಗವಿಲ್ಲ. ಕೊಡಗಿನ ಹಲವು ಆದಿವಾಸಿಗಳು ಪ್ಲಾಸ್ಟಿಕ್ ಶೆಡ್‌ನಲ್ಲಿ ವಾಸ ಮಾಡುತ್ತಿದ್ದಾರೆ; ಅಲ್ಲಿ ಬಡತನ ಹೆಚ್ಚಾಗಿದೆ. ಆದಿವಾಸಿ, ಬಡವರು ಹಾಗೂ ದಲಿತರನ್ನು ಎಲ್ಲ ಪಕ್ಷದ ನಾಯಕರು ಒಟ್ಟಾಗಿ ಶೋಷಣೆ ಮಾಡುತ್ತಿದ್ದಾರೆ. ಎಲ್ಲರೂ ಒಟ್ಟಾಗಿ ಕೂತು ಚರ್ಚೆ ಮಾಡಿ, ಬಡವರಿಗೆ ಎಷ್ಟು ಕೂಲಿ ಕೊಡಬೇಕು ಎಂದು ನಿರ್ಧರಿಸುತ್ತಾರೆ” ಎಂದರು.

ಒಳಮೀಸಲಾತಿ ಹೋರಾಟಗಾರ ಅಂಬಣ್ಣ ಅರೋಲಿಕರ್ ಮಾತನಾಡಿ, “78 ವರ್ಷಗಳ ಸ್ವಾತಂತ್ರ್ಯ ಭಾರತದಲ್ಲಿ ಈಗಲೂ ವಸತಿ ಬೇಕು ಎಂದು ಕೇಳುತ್ತಿರುವುದು ನಾಚಿಕೆಗೇಡಿನ ವಿಚಾರ. ಪ್ರಾಕೃತಿಕವಾಗಿ ಬಂದಿರುವ ಭೂಮಿಯುನ್ನು ಬಡವರಿಗೆ ಯಾಕೆ ಕೊಡುತ್ತಿಲ್ಲ? ಇಷ್ಟು ವರ್ಷ ನಾವು ವೋಟ್ ಹಾಕಿದ್ದು ಇದಕ್ಕಾಗಿಯೇ? ಯಾವಾಗಲೂ ನಾವು ಬೀದಿಯಲ್ಲೇ ಇರಬೇಕಾ” ಎಂದು ಅವರು ಆಕ್ರೋಶ ಹೊರಹಾಕಿದರು.

“ರಾಜಕಾರಣಿಗಳ ಇಡೀ ಕುಟುಂಬ ಉದ್ದಾರ ಆಗಲಿ ಎಂಬ ಕಾರಣಕ್ಕೆ ನಾವು ವೋಟ್ ಹಾಕಿದ್ದಾ? ನಾವೇನು ನೂರಾರು ಎಕರೆ ಕೇಳುತ್ತಿಲ್ಲ; ಒಂದು ಮನೆ ಕೇಳುತ್ತಿದ್ದೇವೆ. ನಮಗೆ ಭೂಮಿ ಕೊಟ್ಟರೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ಕೊಡುವ ಅಗತ್ಯವಿಲ್ಲ. ಸಂವಿಧಾನವೇ ಪ್ರತಿಯೊಂದು ಕುಟುಂಬಕ್ಕೆ ಭೂಮಿ ಇರಬೇಕು ಎಂದು ಹೇಳುತ್ತದೆ. ಆದರೆ, 78 ವರ್ಷ ಕಳೆದರೂ ಈವರೆಗೆ ಭೂಮಿ ಸಿಕ್ಕಿಲ್ಲ, ಸರ್ಕಾರದ ಭೂಮಿಯನ್ನು ಸುಗ್ರೀವಾಜ್ಞೆ ಮೂಲಕ ಬಡವರಿಗೆ ಹಂಚಿಕೆ ಮಾಡಬೇಕು” ಎಂದು ಅಂಬಣ್ಣ ಆಗ್ರಹಿಸಿದರು.

ಜನಶಕ್ತಿ ಮುಖಂಡರಾದ ನೂರ್ ಶ್ರೀಧರ್ ಮಾತನಾಡಿ, “ಭೂಮಿ ಮತ್ತು ವಸತಿ ಹಕ್ಕು ಸಮಿತಿ ಅಡಿಯಲ್ಲಿ ಎಂಟು ವರ್ಷಗಳ ಹೋರಾಟದ ಪ್ರತಿಫಲವಾಗಿ ದೊಡ್ಡಮಟ್ಟದ ವಿಜಯ ಕೊನೆಯ ಹಂತಕ್ಕೆ ಬಂದಿದೆ. ಸುಮಾರು ಮೂರು ಲಕ್ಷ ಕುಟುಂಬಕ್ಕೆ ಹಕ್ಕು ಪತ್ರ ಸಿಗುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ದೇಶದ ಯಾವುದೇ ರಾಜ್ಯದಲ್ಲಿ ಈ ಬೆಳವಣಿಗೆ ನಡೆದಿಲ್ಲ” ಎಂದರು.

“ಎಚ್‌.ಎಸ್‌. ದೊರೆಸ್ವಾಮಿ ಅವರು ಭೂಮಿ ಹೋರಾಟ ಮಾಡುವಂತೆ ನಮ್ಮನ್ನು ಜಾಗೃತಗೊಳಿಸಿದರು. ಆದ್ದರಿಂದ, ಅವರಿಗೆ ಇದರ ಶ್ರೇಯಸ್ಸು ಸಲ್ಲಬೇಕು. ನಮ್ಮ ಹೋರಾಟ ಇಂದು ನಿರ್ಣಾಯಕ ಘಟ್ಟಕ್ಕೆ ತಲುಪಿದ್ದು, 2018 ರಿಂದ ಸತತ ಹೋರಾಟ ಮಾಡಿದ ಸಮಿತಿಯ ಎಲ್ಲ ನಾಯಕರೂ ಈ ಹಂತದವರೆಗೆ ಶ್ರಮಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರಾದ ಕೃಷ್ಣ ಬೈರೇಗೌಡ ಅವರಿಗೂ ಇದರ ಶ್ರೇಯಸ್ಸು ಸಿಗಬೇಕು” ಎಂದು ಹೇಳಿದರು.

“ನಮ್ಮ ಹೋರಾಟದ ಅರಿವಿರುವ ಇಬ್ಬರೂ ನಾಯಕರು ಅರ್ಜಿಗಳ ವಿಲೇವಾರಿಗೆ ಒಪ್ಪಿಕೊಂಡಿದ್ದಾರೆ. ಅರ್ಹ ಫಲಾನುಭವಿಗಳಿಗೆ ಭೂಮಿ ಮಂಜೂರು ಮಾಡುತ್ತೇವೆ ಎಂದು ಕೃಷ್ಣ ಬೈರೇಗೌಡರು ಹೇಳಿದ್ದಾರೆ. ಅವರು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದು, ಮೂರು ಲಕ್ಷ ಜನರಿಗೆ ಈಗ ಹಕ್ಕುಪತ್ರ ಸಿಗುತ್ತಿದೆ. ಆದರೆ, 12 ಲಕ್ಷ ಅರ್ಜಿಗಳು ತಿರಸ್ಕಾರದ ಪಟ್ಟಿಯಲ್ಲಿವೆ; ಇಲ್ಲಿರುವ ಬಹುಪಾಲು ಜನ ಇದೇ ಪಟ್ಟಿಯಲ್ಲಿ ಇದ್ದಾರೆ. ಈಗ ನಾವು ಹೋರಾಟ ಮಾಡದೇ ಇದ್ದರೆ, ಮುಂದೆ ಭೂಮಿ ಹಕ್ಕು ಪಡೆದುಕೊಳ್ಳಲು ಸಾಧ್ಯವಿಲ್ಲ! ಈ ಡಿಸೆಂಬರ್ ಒಳಗೆ ಆಗದೇ ಇದ್ದರೆ.. ನಮಗೆ ಮುಂದೆ ಭೂಮಿ ಸಿಗುವುದಿಲ್ಲ. ಆದ್ದರಿಂದ, ಡಿಸೆಂಬರ್‌ವರೆಗೂ ನಿರಂತರ ಹೋರಾಟ ನಡೆಯಬೇಕು” ಎಂದರು.

ಸರ್ಕಾರದ ಪರವಾಗಿ ಆಗಮಿಸಿ ಮಾತನಾಡಿದ ಯೋಜನಾ ಆಯೋಗದ ಉಪಾಧ್ಯಕ್ಷರಾದ ಬಿ.ಆರ್. ಪಾಟೀಲ್, “ಸುಮಾರು ವರ್ಷಗಳಿಂದ ಭೂಮಿ ವಿವಾದ ಇದೆ, ಕಾಗೋಡು ತಿಮ್ಮಪ್ಪನವರು ಹಲವು ಭಾರಿ ಸದನದಲ್ಲಿ ಮಾತನಾಡಿದ್ದಾರೆ. ಆದರೆ, ಸುಪ್ರೀಂ ಕೋರ್ಟ್ ನಿರ್ದೇಶನ ಕ್ರಮ ತೆಗೆದುಕೊಳ್ಳಲು ಅಡ್ಡಬರುತ್ತಿದೆ. ಅರಣ್ಯ ಒತ್ತುವರಿ ಮಾಡಬಾರದು ಎಂದು ಕೋರ್ಟ್‌ ಹೇಳಿದೆ. ಭೂಮಿ ಹಂಚಿಕೆ ಕೇವಲ ಸಾಮಾಜಿಕ ನ್ಯಾಯವಲ್ಲ, ಮಾನವೀಯ ಹಕ್ಕು. ಆದ್ದರಿಂದ, ಕಾನೂನು ಬದಲಾಗಬೇಕು. ಮುಖ್ಯಮಂತ್ರಿಗಳ ಮೇಲೆ ನನಗೆ ನಂಬಿಕೆ ಇದೆ.. ಅವರ ಜೊತೆಗೆ ಚರ್ಚೆ ಮಾಡಿ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುತ್ತೇನೆ” ಎಂದು ಅವರು ಭರವಸೆ ನೀಡಿದರು.

ಕೆಂಪು ಮೆಣಸಿನಕಾಯಿ ಬೆಲೆ ಕುಸಿತ | ಮಧ್ಯಪ್ರವೇಶಿಸುವಂತೆ ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...