Homeಕರ್ನಾಟಕಸಿನಿ ರಂಗದ ಅಪೂರ್ವ ಮಾಹಿತಿಯ ’ಚಿತ್ರಪಥ’ ಪೋರ್ಟಲ್ ಮಾರ್ಚ್ 6ಕ್ಕೆ ಲೋಕಾರ್ಪಣೆ

ಸಿನಿ ರಂಗದ ಅಪೂರ್ವ ಮಾಹಿತಿಯ ’ಚಿತ್ರಪಥ’ ಪೋರ್ಟಲ್ ಮಾರ್ಚ್ 6ಕ್ಕೆ ಲೋಕಾರ್ಪಣೆ

ಚಿತ್ರಪಥ ಪೋರ್ಟಲ್‌ನಲ್ಲಿ ಪ್ರಮುಖವಾಗಿ ಕನ್ನಡ ಸಿನಿಮಾ ಹಾಗೂ ಭಾರತದ ಇತರೆ ಪ್ರಾದೇಶಿಕ ಭಾಷಾ ಸಿನಿಮಾ ಸೇರಿದಂತೆ ಜಾಗತಿಕ ಸಿನಿಮಾ ಕುರಿತಾಗಿಯೂ ಫೋಟೋಗಳು ಮತ್ತು ಮಾಹಿತಿ ಇರಲಿದೆ.

- Advertisement -
- Advertisement -

ಸಿನಿಮಾ ಇತಿಹಾಸ, ಮಾಹಿತಿ, ಫೋಟೋಗಳನ್ನು ದಾಖಲಿಸುವುದರ ಜೊತೆಗೆ ಇಂದಿನ ಪೀಳಿಗೆಗೆ ಸಿನಿಮಾರಂಗದ ದಶಕಗಳ ಹಿಂದಿನ ಅಪೂರ್ವ ಮಾಹಿತಿ, ಫೋಟೋಗಳನ್ನು ತಲುಪಿಸುವುದು, ಸಿನಿಮಾ ಕುರಿತಾಗಿ ಉತ್ತಮ ಅಭಿರುಚಿ ರೂಪಿಸುವ ಆಶಯದೊಂದಿಗೆ ‘ಚಿತ್ರಪಥ’ ಆರ್ಕೈವ್ ಪೋರ್ಟಲ್‌ ಅನಾವರಣಗೊಳ್ಳುತ್ತಿದೆ.

ಹಿರಿಯ ಸಿನಿಮಾ ಕಲಾವಿದರು ಹಾಗೂ ತಂತ್ರಜ್ಞರನ್ನು ಸ್ಮರಿಸುವುದರ ಜೊತೆಗೆ ಅಪರೂಪದ ಫೋಟೋ, ಪತ್ರ, ಮಾಹಿತಿಗಳನ್ನು ದಾಖಲಿಸುವುದು, ಉತ್ತಮ ಬರಹ, ಲೇಖನ, ವಿಶ್ಲೇಷಣೆಗಳ ಮೂಲಕ ಸಿನಿಮಾ ಕುರಿತಾಗಿ ಒಳನೋಟಗಳನ್ನು ನೀಡುವ ನಿಟ್ಟಿನಲ್ಲಿ ‘ಚಿತ್ರಪಥ’ ಪೋರ್ಟಲ್ ಕೆಲಸ ಮಾಡಲಿದೆ.

ಮಾರ್ಚ್‌ 6ರ ಶನಿವಾರ ಬೆಂಗಳೂರಿನ ಮಲ್ಲೇಶ್ವರ 18ನೇ ಕ್ರಾಸ್‌ನ ರೇಣುಕಾಂಬ ಸ್ಟುಡಿಯೋದಲ್ಲಿ ಕನ್ನಡ ಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ‘ಚಿತ್ರಪಥ’ವನ್ನು ಅನಾವರಣಗೊಳಿಸಲಿದ್ದಾರೆ. ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್‌, ಚಿತ್ರಸಾಹಿತಿ ಕವಿರಾಜ್‌ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಹಿರಿಯ ಸ್ಥಿರಚಿತ್ರ ಛಾಯಾಗ್ರಾಹಕರಾದ ಭವಾನಿ ಲಕ್ಷ್ಮೀನಾರಾಯಣ ಮತ್ತು ಪ್ರಗತಿ ಅಶ್ವತ್ಥ ನಾರಾಯಣ ಅವರನ್ನು ಸನ್ಮಾನಿಸಲಾಗುವುದು ಎಂದು ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: ನಮ್ಮ ತನಿಖೆ ಸಚಿನ್, ಮಂಗೇಶ್ಕರ್ ವಿರುದ್ಧವಲ್ಲ, BJP ಐಟಿ ಸೆಲ್ ವಿರುದ್ಧ: ಮಹಾರಾಷ್ಟ್ರ

ಚಿತ್ರಪಥ ಪೋರ್ಟಲ್‌ನಲ್ಲಿ ಪ್ರಮುಖವಾಗಿ ಕನ್ನಡ ಸಿನಿಮಾ ಹಾಗೂ ಭಾರತದ ಇತರೆ ಪ್ರಾದೇಶಿಕ ಭಾಷಾ ಸಿನಿಮಾ ಸೇರಿದಂತೆ ಜಾಗತಿಕ ಸಿನಿಮಾ ಕುರಿತಾಗಿಯೂ ಫೋಟೋಗಳು ಮತ್ತು ಮಾಹಿತಿ ಇರಲಿದೆ. ಜಾಗತಿಕ ಸಿನಿಮಾದ ವಸ್ತು, ವಿಷಯವನ್ನು ಕನ್ನಡಿಗರಿಗೆ ತಲುಪಿಸುವ ಪುಟ್ಟ ವಾಹಕವಾಗಿಯೂ ‘ಚಿತ್ರಪಥ’ ಆರ್ಕೈವ್ ಪೋರ್ಟಲ್ ಕಾರ್ಯನಿರ್ವಹಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಚಿತ್ರರಂಗ ನಡೆದುಬಂದ ಹಾದಿಯನ್ನು ದಾಖಲಿಸುವ, ಅಲ್ಲಿನ ಶ್ರೀಮಂತಿಕೆ, ಬೆರಗು-ಹೊಳಪನ್ನು ಹೇಳುವ, ಚಿತ್ರರಂಗದ ಅಂದಿನ ಕಾರ್ಯವೈಖರಿ, ಶೂಟಿಂಗ್ ಸ್ಟುಡಿಯೋಗಳು ಹಾಗೂ ಪರಿಕರಗಳ ವಿವರಗಳನ್ನು ನೀಡುವುದು, ಶ್ರೇಷ್ಠ ತಂತ್ರಜ್ಞರು ಹಾಗೂ ಕಲಾವಿದರ ಕುರಿತ ಮಾಹಿತಿ ನೀಡುವ ನಿಟ್ಟಿನಲ್ಲಿ ಹೆಜ್ಜೆ ಇಡುವ ಒಂದು ಪ್ರಯತ್ನ. ಚಿತ್ರರಂಗದ ದಂತಕಥೆಗಳು ಎನಿಸಿದ ತಂತ್ರಜ್ಞರು ಹಾಗೂ ಕಲಾವಿದರ ಅಪರೂಪದ ಫೋಟೋಗಳೊಂದಿಗಿನ ಮಾಹಿತಿ, ಪ್ರತಿಭಾವಂತರ ಕುರಿತ ಟಿಪ್ಪಣಿಗಳು ಇಲ್ಲಿ ಇರಲಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ಅತ್ಯಾಚಾರ ಆರೋಪಿಗೆ ಸಂತ್ರಸ್ತೆಯನ್ನು ಮದುವೆಯಾಗಲು ಸಲಹೆ: ಸುಪ್ರೀಂ ನಡೆಗೆ ತೀವ್ರ ಖಂಡನೆ

‘ಚಿತ್ರಪಥ’ದಲ್ಲಿ ಪ್ರಮುಖವಾಗಿ ಕನ್ನಡ ಚಿತ್ರರಂಗದ ಬಗ್ಗೆ ಹೆಚ್ಚಿನ ಮಾಹಿತಿ ಇರಲಿದೆ. ಕನ್ನಡ ಚಿತ್ರರಂಗದ ಹಿರಿಯ ಸಿನಿಮಾ ಸ್ಥಿರಚಿತ್ರ ಛಾಯಾಗ್ರಾಹಕರಾದ ಭವಾನಿ ಲಕ್ಷ್ಮೀನಾರಾಯಣ ಮತ್ತು ಪ್ರಗತಿ ಅಶ್ವತ್ಥ ನಾರಾಯಣ ಅವರು ಸೆರೆಹಿಡಿದ ಫೋಟೋಗಳು ಪ್ರಮುಖವಾಗಿ ಪೋರ್ಟಲ್‍ನಲ್ಲಿ ಬಳಕೆಯಾಗಲಿವೆ ಎಂದು ತಿಳಿಸಲಾಗಿದೆ.

ಪೋರ್ಟಲ್‌ನಲ್ಲಿ ನಾಸ್ಟಾಲ್ಜಿಯಾ, ಚಿತ್ರ-ಕಥೆ, ಶೂಟಿಂಗ್ ಸೋಜಿಗ, ಮಾಹಿತಿ–ವಿಶೇಷ, ನೆನಪು, ಪೋಸ್ಟರ್ ಮಾಹಿತಿ, ಅತಿಥಿ ಅಕ್ಷರ ಎಂಬ ವಿಭಾಗಗಳಿರಲಿವೆ. ಫೋಟೋಗಳ ಹಿಂದಿನ ಕತೆ, ಸಂದರ್ಭಗಳನ್ನು ಸ್ವತಃ ಫೋಟೋಗಳನ್ನು ಸೆರೆಹಿಡಿದ ಸ್ಥಿರಚಿತ್ರ ಛಾಯಾಗ್ರಾಹಕರು ನಿರೂಪಿಸಿದ್ದು, ಈ ವೀಡಿಯೋಗಳನ್ನು ’ಚಿತ್ರಪಥ’ ಯೂಟ್ಯೂಬ್ ಚಾನೆಲ್‌ನಲ್ಲಿ ನೋಡಬಹುದು.

ಹದಿಮೂರು ವರ್ಷಗಳ ಕಾಲ ಕನ್ನಡಪ್ರಭ, ವಿಜಯ ಕರ್ನಾಟಕ, ದಿ ಸ್ಟೇಟ್‌ ವೆಬ್‌ ಪೋರ್ಟಲ್‌ನಲ್ಲಿ ಸಿನಿಮಾ ಪತ್ರಕರ್ತನಾಗಿ ಕೆಲಸ ಮಾಡಿರುವ ಶಶಿಧರ ಚಿತ್ರದುರ್ಗ ಈ ಪೋರ್ಟಲ್ ಆರಂಭಿಸುತ್ತಿದ್ದಾರೆ. ಇವರು ಸಿನಿಮಾಗೆ ಸಂಬಂಧಿಸಿದಂತೆ ಏಳು ಪುಸ್ತಕಗಳನ್ನು ಪ್ರಕಟಿಸಿದ್ದು, 2015ನೇ ಸಾಲಿನ ರಾಜ್ಯಸರ್ಕಾರದ ಸಿನಿಮಾ ಸಬ್ಸಿಡಿ ಕಮಿಟಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ.


ಇದನ್ನೂ ಓದಿ: 75% ಖಾಸಗಿ ಉದ್ಯೋಗಗಳು ಸ್ಥಳೀಯರಿಗೆ ಮೀಸಲು – ಹರಿಯಾಣ ಸರ್ಕಾರ ಅನುಮೋದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...