Homeಕರ್ನಾಟಕಸಿನಿ ರಂಗದ ಅಪೂರ್ವ ಮಾಹಿತಿಯ ’ಚಿತ್ರಪಥ’ ಪೋರ್ಟಲ್ ಮಾರ್ಚ್ 6ಕ್ಕೆ ಲೋಕಾರ್ಪಣೆ

ಸಿನಿ ರಂಗದ ಅಪೂರ್ವ ಮಾಹಿತಿಯ ’ಚಿತ್ರಪಥ’ ಪೋರ್ಟಲ್ ಮಾರ್ಚ್ 6ಕ್ಕೆ ಲೋಕಾರ್ಪಣೆ

ಚಿತ್ರಪಥ ಪೋರ್ಟಲ್‌ನಲ್ಲಿ ಪ್ರಮುಖವಾಗಿ ಕನ್ನಡ ಸಿನಿಮಾ ಹಾಗೂ ಭಾರತದ ಇತರೆ ಪ್ರಾದೇಶಿಕ ಭಾಷಾ ಸಿನಿಮಾ ಸೇರಿದಂತೆ ಜಾಗತಿಕ ಸಿನಿಮಾ ಕುರಿತಾಗಿಯೂ ಫೋಟೋಗಳು ಮತ್ತು ಮಾಹಿತಿ ಇರಲಿದೆ.

- Advertisement -
- Advertisement -

ಸಿನಿಮಾ ಇತಿಹಾಸ, ಮಾಹಿತಿ, ಫೋಟೋಗಳನ್ನು ದಾಖಲಿಸುವುದರ ಜೊತೆಗೆ ಇಂದಿನ ಪೀಳಿಗೆಗೆ ಸಿನಿಮಾರಂಗದ ದಶಕಗಳ ಹಿಂದಿನ ಅಪೂರ್ವ ಮಾಹಿತಿ, ಫೋಟೋಗಳನ್ನು ತಲುಪಿಸುವುದು, ಸಿನಿಮಾ ಕುರಿತಾಗಿ ಉತ್ತಮ ಅಭಿರುಚಿ ರೂಪಿಸುವ ಆಶಯದೊಂದಿಗೆ ‘ಚಿತ್ರಪಥ’ ಆರ್ಕೈವ್ ಪೋರ್ಟಲ್‌ ಅನಾವರಣಗೊಳ್ಳುತ್ತಿದೆ.

ಹಿರಿಯ ಸಿನಿಮಾ ಕಲಾವಿದರು ಹಾಗೂ ತಂತ್ರಜ್ಞರನ್ನು ಸ್ಮರಿಸುವುದರ ಜೊತೆಗೆ ಅಪರೂಪದ ಫೋಟೋ, ಪತ್ರ, ಮಾಹಿತಿಗಳನ್ನು ದಾಖಲಿಸುವುದು, ಉತ್ತಮ ಬರಹ, ಲೇಖನ, ವಿಶ್ಲೇಷಣೆಗಳ ಮೂಲಕ ಸಿನಿಮಾ ಕುರಿತಾಗಿ ಒಳನೋಟಗಳನ್ನು ನೀಡುವ ನಿಟ್ಟಿನಲ್ಲಿ ‘ಚಿತ್ರಪಥ’ ಪೋರ್ಟಲ್ ಕೆಲಸ ಮಾಡಲಿದೆ.

ಮಾರ್ಚ್‌ 6ರ ಶನಿವಾರ ಬೆಂಗಳೂರಿನ ಮಲ್ಲೇಶ್ವರ 18ನೇ ಕ್ರಾಸ್‌ನ ರೇಣುಕಾಂಬ ಸ್ಟುಡಿಯೋದಲ್ಲಿ ಕನ್ನಡ ಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ‘ಚಿತ್ರಪಥ’ವನ್ನು ಅನಾವರಣಗೊಳಿಸಲಿದ್ದಾರೆ. ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್‌, ಚಿತ್ರಸಾಹಿತಿ ಕವಿರಾಜ್‌ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಹಿರಿಯ ಸ್ಥಿರಚಿತ್ರ ಛಾಯಾಗ್ರಾಹಕರಾದ ಭವಾನಿ ಲಕ್ಷ್ಮೀನಾರಾಯಣ ಮತ್ತು ಪ್ರಗತಿ ಅಶ್ವತ್ಥ ನಾರಾಯಣ ಅವರನ್ನು ಸನ್ಮಾನಿಸಲಾಗುವುದು ಎಂದು ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: ನಮ್ಮ ತನಿಖೆ ಸಚಿನ್, ಮಂಗೇಶ್ಕರ್ ವಿರುದ್ಧವಲ್ಲ, BJP ಐಟಿ ಸೆಲ್ ವಿರುದ್ಧ: ಮಹಾರಾಷ್ಟ್ರ

ಚಿತ್ರಪಥ ಪೋರ್ಟಲ್‌ನಲ್ಲಿ ಪ್ರಮುಖವಾಗಿ ಕನ್ನಡ ಸಿನಿಮಾ ಹಾಗೂ ಭಾರತದ ಇತರೆ ಪ್ರಾದೇಶಿಕ ಭಾಷಾ ಸಿನಿಮಾ ಸೇರಿದಂತೆ ಜಾಗತಿಕ ಸಿನಿಮಾ ಕುರಿತಾಗಿಯೂ ಫೋಟೋಗಳು ಮತ್ತು ಮಾಹಿತಿ ಇರಲಿದೆ. ಜಾಗತಿಕ ಸಿನಿಮಾದ ವಸ್ತು, ವಿಷಯವನ್ನು ಕನ್ನಡಿಗರಿಗೆ ತಲುಪಿಸುವ ಪುಟ್ಟ ವಾಹಕವಾಗಿಯೂ ‘ಚಿತ್ರಪಥ’ ಆರ್ಕೈವ್ ಪೋರ್ಟಲ್ ಕಾರ್ಯನಿರ್ವಹಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಚಿತ್ರರಂಗ ನಡೆದುಬಂದ ಹಾದಿಯನ್ನು ದಾಖಲಿಸುವ, ಅಲ್ಲಿನ ಶ್ರೀಮಂತಿಕೆ, ಬೆರಗು-ಹೊಳಪನ್ನು ಹೇಳುವ, ಚಿತ್ರರಂಗದ ಅಂದಿನ ಕಾರ್ಯವೈಖರಿ, ಶೂಟಿಂಗ್ ಸ್ಟುಡಿಯೋಗಳು ಹಾಗೂ ಪರಿಕರಗಳ ವಿವರಗಳನ್ನು ನೀಡುವುದು, ಶ್ರೇಷ್ಠ ತಂತ್ರಜ್ಞರು ಹಾಗೂ ಕಲಾವಿದರ ಕುರಿತ ಮಾಹಿತಿ ನೀಡುವ ನಿಟ್ಟಿನಲ್ಲಿ ಹೆಜ್ಜೆ ಇಡುವ ಒಂದು ಪ್ರಯತ್ನ. ಚಿತ್ರರಂಗದ ದಂತಕಥೆಗಳು ಎನಿಸಿದ ತಂತ್ರಜ್ಞರು ಹಾಗೂ ಕಲಾವಿದರ ಅಪರೂಪದ ಫೋಟೋಗಳೊಂದಿಗಿನ ಮಾಹಿತಿ, ಪ್ರತಿಭಾವಂತರ ಕುರಿತ ಟಿಪ್ಪಣಿಗಳು ಇಲ್ಲಿ ಇರಲಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ಅತ್ಯಾಚಾರ ಆರೋಪಿಗೆ ಸಂತ್ರಸ್ತೆಯನ್ನು ಮದುವೆಯಾಗಲು ಸಲಹೆ: ಸುಪ್ರೀಂ ನಡೆಗೆ ತೀವ್ರ ಖಂಡನೆ

‘ಚಿತ್ರಪಥ’ದಲ್ಲಿ ಪ್ರಮುಖವಾಗಿ ಕನ್ನಡ ಚಿತ್ರರಂಗದ ಬಗ್ಗೆ ಹೆಚ್ಚಿನ ಮಾಹಿತಿ ಇರಲಿದೆ. ಕನ್ನಡ ಚಿತ್ರರಂಗದ ಹಿರಿಯ ಸಿನಿಮಾ ಸ್ಥಿರಚಿತ್ರ ಛಾಯಾಗ್ರಾಹಕರಾದ ಭವಾನಿ ಲಕ್ಷ್ಮೀನಾರಾಯಣ ಮತ್ತು ಪ್ರಗತಿ ಅಶ್ವತ್ಥ ನಾರಾಯಣ ಅವರು ಸೆರೆಹಿಡಿದ ಫೋಟೋಗಳು ಪ್ರಮುಖವಾಗಿ ಪೋರ್ಟಲ್‍ನಲ್ಲಿ ಬಳಕೆಯಾಗಲಿವೆ ಎಂದು ತಿಳಿಸಲಾಗಿದೆ.

ಪೋರ್ಟಲ್‌ನಲ್ಲಿ ನಾಸ್ಟಾಲ್ಜಿಯಾ, ಚಿತ್ರ-ಕಥೆ, ಶೂಟಿಂಗ್ ಸೋಜಿಗ, ಮಾಹಿತಿ–ವಿಶೇಷ, ನೆನಪು, ಪೋಸ್ಟರ್ ಮಾಹಿತಿ, ಅತಿಥಿ ಅಕ್ಷರ ಎಂಬ ವಿಭಾಗಗಳಿರಲಿವೆ. ಫೋಟೋಗಳ ಹಿಂದಿನ ಕತೆ, ಸಂದರ್ಭಗಳನ್ನು ಸ್ವತಃ ಫೋಟೋಗಳನ್ನು ಸೆರೆಹಿಡಿದ ಸ್ಥಿರಚಿತ್ರ ಛಾಯಾಗ್ರಾಹಕರು ನಿರೂಪಿಸಿದ್ದು, ಈ ವೀಡಿಯೋಗಳನ್ನು ’ಚಿತ್ರಪಥ’ ಯೂಟ್ಯೂಬ್ ಚಾನೆಲ್‌ನಲ್ಲಿ ನೋಡಬಹುದು.

ಹದಿಮೂರು ವರ್ಷಗಳ ಕಾಲ ಕನ್ನಡಪ್ರಭ, ವಿಜಯ ಕರ್ನಾಟಕ, ದಿ ಸ್ಟೇಟ್‌ ವೆಬ್‌ ಪೋರ್ಟಲ್‌ನಲ್ಲಿ ಸಿನಿಮಾ ಪತ್ರಕರ್ತನಾಗಿ ಕೆಲಸ ಮಾಡಿರುವ ಶಶಿಧರ ಚಿತ್ರದುರ್ಗ ಈ ಪೋರ್ಟಲ್ ಆರಂಭಿಸುತ್ತಿದ್ದಾರೆ. ಇವರು ಸಿನಿಮಾಗೆ ಸಂಬಂಧಿಸಿದಂತೆ ಏಳು ಪುಸ್ತಕಗಳನ್ನು ಪ್ರಕಟಿಸಿದ್ದು, 2015ನೇ ಸಾಲಿನ ರಾಜ್ಯಸರ್ಕಾರದ ಸಿನಿಮಾ ಸಬ್ಸಿಡಿ ಕಮಿಟಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ.


ಇದನ್ನೂ ಓದಿ: 75% ಖಾಸಗಿ ಉದ್ಯೋಗಗಳು ಸ್ಥಳೀಯರಿಗೆ ಮೀಸಲು – ಹರಿಯಾಣ ಸರ್ಕಾರ ಅನುಮೋದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...