Homeಕರ್ನಾಟಕಸಿನಿ ರಂಗದ ಅಪೂರ್ವ ಮಾಹಿತಿಯ ’ಚಿತ್ರಪಥ’ ಪೋರ್ಟಲ್ ಮಾರ್ಚ್ 6ಕ್ಕೆ ಲೋಕಾರ್ಪಣೆ

ಸಿನಿ ರಂಗದ ಅಪೂರ್ವ ಮಾಹಿತಿಯ ’ಚಿತ್ರಪಥ’ ಪೋರ್ಟಲ್ ಮಾರ್ಚ್ 6ಕ್ಕೆ ಲೋಕಾರ್ಪಣೆ

ಚಿತ್ರಪಥ ಪೋರ್ಟಲ್‌ನಲ್ಲಿ ಪ್ರಮುಖವಾಗಿ ಕನ್ನಡ ಸಿನಿಮಾ ಹಾಗೂ ಭಾರತದ ಇತರೆ ಪ್ರಾದೇಶಿಕ ಭಾಷಾ ಸಿನಿಮಾ ಸೇರಿದಂತೆ ಜಾಗತಿಕ ಸಿನಿಮಾ ಕುರಿತಾಗಿಯೂ ಫೋಟೋಗಳು ಮತ್ತು ಮಾಹಿತಿ ಇರಲಿದೆ.

- Advertisement -
- Advertisement -

ಸಿನಿಮಾ ಇತಿಹಾಸ, ಮಾಹಿತಿ, ಫೋಟೋಗಳನ್ನು ದಾಖಲಿಸುವುದರ ಜೊತೆಗೆ ಇಂದಿನ ಪೀಳಿಗೆಗೆ ಸಿನಿಮಾರಂಗದ ದಶಕಗಳ ಹಿಂದಿನ ಅಪೂರ್ವ ಮಾಹಿತಿ, ಫೋಟೋಗಳನ್ನು ತಲುಪಿಸುವುದು, ಸಿನಿಮಾ ಕುರಿತಾಗಿ ಉತ್ತಮ ಅಭಿರುಚಿ ರೂಪಿಸುವ ಆಶಯದೊಂದಿಗೆ ‘ಚಿತ್ರಪಥ’ ಆರ್ಕೈವ್ ಪೋರ್ಟಲ್‌ ಅನಾವರಣಗೊಳ್ಳುತ್ತಿದೆ.

ಹಿರಿಯ ಸಿನಿಮಾ ಕಲಾವಿದರು ಹಾಗೂ ತಂತ್ರಜ್ಞರನ್ನು ಸ್ಮರಿಸುವುದರ ಜೊತೆಗೆ ಅಪರೂಪದ ಫೋಟೋ, ಪತ್ರ, ಮಾಹಿತಿಗಳನ್ನು ದಾಖಲಿಸುವುದು, ಉತ್ತಮ ಬರಹ, ಲೇಖನ, ವಿಶ್ಲೇಷಣೆಗಳ ಮೂಲಕ ಸಿನಿಮಾ ಕುರಿತಾಗಿ ಒಳನೋಟಗಳನ್ನು ನೀಡುವ ನಿಟ್ಟಿನಲ್ಲಿ ‘ಚಿತ್ರಪಥ’ ಪೋರ್ಟಲ್ ಕೆಲಸ ಮಾಡಲಿದೆ.

ಮಾರ್ಚ್‌ 6ರ ಶನಿವಾರ ಬೆಂಗಳೂರಿನ ಮಲ್ಲೇಶ್ವರ 18ನೇ ಕ್ರಾಸ್‌ನ ರೇಣುಕಾಂಬ ಸ್ಟುಡಿಯೋದಲ್ಲಿ ಕನ್ನಡ ಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ‘ಚಿತ್ರಪಥ’ವನ್ನು ಅನಾವರಣಗೊಳಿಸಲಿದ್ದಾರೆ. ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್‌, ಚಿತ್ರಸಾಹಿತಿ ಕವಿರಾಜ್‌ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಹಿರಿಯ ಸ್ಥಿರಚಿತ್ರ ಛಾಯಾಗ್ರಾಹಕರಾದ ಭವಾನಿ ಲಕ್ಷ್ಮೀನಾರಾಯಣ ಮತ್ತು ಪ್ರಗತಿ ಅಶ್ವತ್ಥ ನಾರಾಯಣ ಅವರನ್ನು ಸನ್ಮಾನಿಸಲಾಗುವುದು ಎಂದು ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: ನಮ್ಮ ತನಿಖೆ ಸಚಿನ್, ಮಂಗೇಶ್ಕರ್ ವಿರುದ್ಧವಲ್ಲ, BJP ಐಟಿ ಸೆಲ್ ವಿರುದ್ಧ: ಮಹಾರಾಷ್ಟ್ರ

ಚಿತ್ರಪಥ ಪೋರ್ಟಲ್‌ನಲ್ಲಿ ಪ್ರಮುಖವಾಗಿ ಕನ್ನಡ ಸಿನಿಮಾ ಹಾಗೂ ಭಾರತದ ಇತರೆ ಪ್ರಾದೇಶಿಕ ಭಾಷಾ ಸಿನಿಮಾ ಸೇರಿದಂತೆ ಜಾಗತಿಕ ಸಿನಿಮಾ ಕುರಿತಾಗಿಯೂ ಫೋಟೋಗಳು ಮತ್ತು ಮಾಹಿತಿ ಇರಲಿದೆ. ಜಾಗತಿಕ ಸಿನಿಮಾದ ವಸ್ತು, ವಿಷಯವನ್ನು ಕನ್ನಡಿಗರಿಗೆ ತಲುಪಿಸುವ ಪುಟ್ಟ ವಾಹಕವಾಗಿಯೂ ‘ಚಿತ್ರಪಥ’ ಆರ್ಕೈವ್ ಪೋರ್ಟಲ್ ಕಾರ್ಯನಿರ್ವಹಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಚಿತ್ರರಂಗ ನಡೆದುಬಂದ ಹಾದಿಯನ್ನು ದಾಖಲಿಸುವ, ಅಲ್ಲಿನ ಶ್ರೀಮಂತಿಕೆ, ಬೆರಗು-ಹೊಳಪನ್ನು ಹೇಳುವ, ಚಿತ್ರರಂಗದ ಅಂದಿನ ಕಾರ್ಯವೈಖರಿ, ಶೂಟಿಂಗ್ ಸ್ಟುಡಿಯೋಗಳು ಹಾಗೂ ಪರಿಕರಗಳ ವಿವರಗಳನ್ನು ನೀಡುವುದು, ಶ್ರೇಷ್ಠ ತಂತ್ರಜ್ಞರು ಹಾಗೂ ಕಲಾವಿದರ ಕುರಿತ ಮಾಹಿತಿ ನೀಡುವ ನಿಟ್ಟಿನಲ್ಲಿ ಹೆಜ್ಜೆ ಇಡುವ ಒಂದು ಪ್ರಯತ್ನ. ಚಿತ್ರರಂಗದ ದಂತಕಥೆಗಳು ಎನಿಸಿದ ತಂತ್ರಜ್ಞರು ಹಾಗೂ ಕಲಾವಿದರ ಅಪರೂಪದ ಫೋಟೋಗಳೊಂದಿಗಿನ ಮಾಹಿತಿ, ಪ್ರತಿಭಾವಂತರ ಕುರಿತ ಟಿಪ್ಪಣಿಗಳು ಇಲ್ಲಿ ಇರಲಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ಅತ್ಯಾಚಾರ ಆರೋಪಿಗೆ ಸಂತ್ರಸ್ತೆಯನ್ನು ಮದುವೆಯಾಗಲು ಸಲಹೆ: ಸುಪ್ರೀಂ ನಡೆಗೆ ತೀವ್ರ ಖಂಡನೆ

‘ಚಿತ್ರಪಥ’ದಲ್ಲಿ ಪ್ರಮುಖವಾಗಿ ಕನ್ನಡ ಚಿತ್ರರಂಗದ ಬಗ್ಗೆ ಹೆಚ್ಚಿನ ಮಾಹಿತಿ ಇರಲಿದೆ. ಕನ್ನಡ ಚಿತ್ರರಂಗದ ಹಿರಿಯ ಸಿನಿಮಾ ಸ್ಥಿರಚಿತ್ರ ಛಾಯಾಗ್ರಾಹಕರಾದ ಭವಾನಿ ಲಕ್ಷ್ಮೀನಾರಾಯಣ ಮತ್ತು ಪ್ರಗತಿ ಅಶ್ವತ್ಥ ನಾರಾಯಣ ಅವರು ಸೆರೆಹಿಡಿದ ಫೋಟೋಗಳು ಪ್ರಮುಖವಾಗಿ ಪೋರ್ಟಲ್‍ನಲ್ಲಿ ಬಳಕೆಯಾಗಲಿವೆ ಎಂದು ತಿಳಿಸಲಾಗಿದೆ.

ಪೋರ್ಟಲ್‌ನಲ್ಲಿ ನಾಸ್ಟಾಲ್ಜಿಯಾ, ಚಿತ್ರ-ಕಥೆ, ಶೂಟಿಂಗ್ ಸೋಜಿಗ, ಮಾಹಿತಿ–ವಿಶೇಷ, ನೆನಪು, ಪೋಸ್ಟರ್ ಮಾಹಿತಿ, ಅತಿಥಿ ಅಕ್ಷರ ಎಂಬ ವಿಭಾಗಗಳಿರಲಿವೆ. ಫೋಟೋಗಳ ಹಿಂದಿನ ಕತೆ, ಸಂದರ್ಭಗಳನ್ನು ಸ್ವತಃ ಫೋಟೋಗಳನ್ನು ಸೆರೆಹಿಡಿದ ಸ್ಥಿರಚಿತ್ರ ಛಾಯಾಗ್ರಾಹಕರು ನಿರೂಪಿಸಿದ್ದು, ಈ ವೀಡಿಯೋಗಳನ್ನು ’ಚಿತ್ರಪಥ’ ಯೂಟ್ಯೂಬ್ ಚಾನೆಲ್‌ನಲ್ಲಿ ನೋಡಬಹುದು.

ಹದಿಮೂರು ವರ್ಷಗಳ ಕಾಲ ಕನ್ನಡಪ್ರಭ, ವಿಜಯ ಕರ್ನಾಟಕ, ದಿ ಸ್ಟೇಟ್‌ ವೆಬ್‌ ಪೋರ್ಟಲ್‌ನಲ್ಲಿ ಸಿನಿಮಾ ಪತ್ರಕರ್ತನಾಗಿ ಕೆಲಸ ಮಾಡಿರುವ ಶಶಿಧರ ಚಿತ್ರದುರ್ಗ ಈ ಪೋರ್ಟಲ್ ಆರಂಭಿಸುತ್ತಿದ್ದಾರೆ. ಇವರು ಸಿನಿಮಾಗೆ ಸಂಬಂಧಿಸಿದಂತೆ ಏಳು ಪುಸ್ತಕಗಳನ್ನು ಪ್ರಕಟಿಸಿದ್ದು, 2015ನೇ ಸಾಲಿನ ರಾಜ್ಯಸರ್ಕಾರದ ಸಿನಿಮಾ ಸಬ್ಸಿಡಿ ಕಮಿಟಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ.


ಇದನ್ನೂ ಓದಿ: 75% ಖಾಸಗಿ ಉದ್ಯೋಗಗಳು ಸ್ಥಳೀಯರಿಗೆ ಮೀಸಲು – ಹರಿಯಾಣ ಸರ್ಕಾರ ಅನುಮೋದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...