Homeಕರ್ನಾಟಕಸಿನಿ ರಂಗದ ಅಪೂರ್ವ ಮಾಹಿತಿಯ ’ಚಿತ್ರಪಥ’ ಪೋರ್ಟಲ್ ಮಾರ್ಚ್ 6ಕ್ಕೆ ಲೋಕಾರ್ಪಣೆ

ಸಿನಿ ರಂಗದ ಅಪೂರ್ವ ಮಾಹಿತಿಯ ’ಚಿತ್ರಪಥ’ ಪೋರ್ಟಲ್ ಮಾರ್ಚ್ 6ಕ್ಕೆ ಲೋಕಾರ್ಪಣೆ

ಚಿತ್ರಪಥ ಪೋರ್ಟಲ್‌ನಲ್ಲಿ ಪ್ರಮುಖವಾಗಿ ಕನ್ನಡ ಸಿನಿಮಾ ಹಾಗೂ ಭಾರತದ ಇತರೆ ಪ್ರಾದೇಶಿಕ ಭಾಷಾ ಸಿನಿಮಾ ಸೇರಿದಂತೆ ಜಾಗತಿಕ ಸಿನಿಮಾ ಕುರಿತಾಗಿಯೂ ಫೋಟೋಗಳು ಮತ್ತು ಮಾಹಿತಿ ಇರಲಿದೆ.

- Advertisement -
- Advertisement -

ಸಿನಿಮಾ ಇತಿಹಾಸ, ಮಾಹಿತಿ, ಫೋಟೋಗಳನ್ನು ದಾಖಲಿಸುವುದರ ಜೊತೆಗೆ ಇಂದಿನ ಪೀಳಿಗೆಗೆ ಸಿನಿಮಾರಂಗದ ದಶಕಗಳ ಹಿಂದಿನ ಅಪೂರ್ವ ಮಾಹಿತಿ, ಫೋಟೋಗಳನ್ನು ತಲುಪಿಸುವುದು, ಸಿನಿಮಾ ಕುರಿತಾಗಿ ಉತ್ತಮ ಅಭಿರುಚಿ ರೂಪಿಸುವ ಆಶಯದೊಂದಿಗೆ ‘ಚಿತ್ರಪಥ’ ಆರ್ಕೈವ್ ಪೋರ್ಟಲ್‌ ಅನಾವರಣಗೊಳ್ಳುತ್ತಿದೆ.

ಹಿರಿಯ ಸಿನಿಮಾ ಕಲಾವಿದರು ಹಾಗೂ ತಂತ್ರಜ್ಞರನ್ನು ಸ್ಮರಿಸುವುದರ ಜೊತೆಗೆ ಅಪರೂಪದ ಫೋಟೋ, ಪತ್ರ, ಮಾಹಿತಿಗಳನ್ನು ದಾಖಲಿಸುವುದು, ಉತ್ತಮ ಬರಹ, ಲೇಖನ, ವಿಶ್ಲೇಷಣೆಗಳ ಮೂಲಕ ಸಿನಿಮಾ ಕುರಿತಾಗಿ ಒಳನೋಟಗಳನ್ನು ನೀಡುವ ನಿಟ್ಟಿನಲ್ಲಿ ‘ಚಿತ್ರಪಥ’ ಪೋರ್ಟಲ್ ಕೆಲಸ ಮಾಡಲಿದೆ.

ಮಾರ್ಚ್‌ 6ರ ಶನಿವಾರ ಬೆಂಗಳೂರಿನ ಮಲ್ಲೇಶ್ವರ 18ನೇ ಕ್ರಾಸ್‌ನ ರೇಣುಕಾಂಬ ಸ್ಟುಡಿಯೋದಲ್ಲಿ ಕನ್ನಡ ಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ‘ಚಿತ್ರಪಥ’ವನ್ನು ಅನಾವರಣಗೊಳಿಸಲಿದ್ದಾರೆ. ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್‌, ಚಿತ್ರಸಾಹಿತಿ ಕವಿರಾಜ್‌ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಹಿರಿಯ ಸ್ಥಿರಚಿತ್ರ ಛಾಯಾಗ್ರಾಹಕರಾದ ಭವಾನಿ ಲಕ್ಷ್ಮೀನಾರಾಯಣ ಮತ್ತು ಪ್ರಗತಿ ಅಶ್ವತ್ಥ ನಾರಾಯಣ ಅವರನ್ನು ಸನ್ಮಾನಿಸಲಾಗುವುದು ಎಂದು ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: ನಮ್ಮ ತನಿಖೆ ಸಚಿನ್, ಮಂಗೇಶ್ಕರ್ ವಿರುದ್ಧವಲ್ಲ, BJP ಐಟಿ ಸೆಲ್ ವಿರುದ್ಧ: ಮಹಾರಾಷ್ಟ್ರ

ಚಿತ್ರಪಥ ಪೋರ್ಟಲ್‌ನಲ್ಲಿ ಪ್ರಮುಖವಾಗಿ ಕನ್ನಡ ಸಿನಿಮಾ ಹಾಗೂ ಭಾರತದ ಇತರೆ ಪ್ರಾದೇಶಿಕ ಭಾಷಾ ಸಿನಿಮಾ ಸೇರಿದಂತೆ ಜಾಗತಿಕ ಸಿನಿಮಾ ಕುರಿತಾಗಿಯೂ ಫೋಟೋಗಳು ಮತ್ತು ಮಾಹಿತಿ ಇರಲಿದೆ. ಜಾಗತಿಕ ಸಿನಿಮಾದ ವಸ್ತು, ವಿಷಯವನ್ನು ಕನ್ನಡಿಗರಿಗೆ ತಲುಪಿಸುವ ಪುಟ್ಟ ವಾಹಕವಾಗಿಯೂ ‘ಚಿತ್ರಪಥ’ ಆರ್ಕೈವ್ ಪೋರ್ಟಲ್ ಕಾರ್ಯನಿರ್ವಹಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಚಿತ್ರರಂಗ ನಡೆದುಬಂದ ಹಾದಿಯನ್ನು ದಾಖಲಿಸುವ, ಅಲ್ಲಿನ ಶ್ರೀಮಂತಿಕೆ, ಬೆರಗು-ಹೊಳಪನ್ನು ಹೇಳುವ, ಚಿತ್ರರಂಗದ ಅಂದಿನ ಕಾರ್ಯವೈಖರಿ, ಶೂಟಿಂಗ್ ಸ್ಟುಡಿಯೋಗಳು ಹಾಗೂ ಪರಿಕರಗಳ ವಿವರಗಳನ್ನು ನೀಡುವುದು, ಶ್ರೇಷ್ಠ ತಂತ್ರಜ್ಞರು ಹಾಗೂ ಕಲಾವಿದರ ಕುರಿತ ಮಾಹಿತಿ ನೀಡುವ ನಿಟ್ಟಿನಲ್ಲಿ ಹೆಜ್ಜೆ ಇಡುವ ಒಂದು ಪ್ರಯತ್ನ. ಚಿತ್ರರಂಗದ ದಂತಕಥೆಗಳು ಎನಿಸಿದ ತಂತ್ರಜ್ಞರು ಹಾಗೂ ಕಲಾವಿದರ ಅಪರೂಪದ ಫೋಟೋಗಳೊಂದಿಗಿನ ಮಾಹಿತಿ, ಪ್ರತಿಭಾವಂತರ ಕುರಿತ ಟಿಪ್ಪಣಿಗಳು ಇಲ್ಲಿ ಇರಲಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ಅತ್ಯಾಚಾರ ಆರೋಪಿಗೆ ಸಂತ್ರಸ್ತೆಯನ್ನು ಮದುವೆಯಾಗಲು ಸಲಹೆ: ಸುಪ್ರೀಂ ನಡೆಗೆ ತೀವ್ರ ಖಂಡನೆ

‘ಚಿತ್ರಪಥ’ದಲ್ಲಿ ಪ್ರಮುಖವಾಗಿ ಕನ್ನಡ ಚಿತ್ರರಂಗದ ಬಗ್ಗೆ ಹೆಚ್ಚಿನ ಮಾಹಿತಿ ಇರಲಿದೆ. ಕನ್ನಡ ಚಿತ್ರರಂಗದ ಹಿರಿಯ ಸಿನಿಮಾ ಸ್ಥಿರಚಿತ್ರ ಛಾಯಾಗ್ರಾಹಕರಾದ ಭವಾನಿ ಲಕ್ಷ್ಮೀನಾರಾಯಣ ಮತ್ತು ಪ್ರಗತಿ ಅಶ್ವತ್ಥ ನಾರಾಯಣ ಅವರು ಸೆರೆಹಿಡಿದ ಫೋಟೋಗಳು ಪ್ರಮುಖವಾಗಿ ಪೋರ್ಟಲ್‍ನಲ್ಲಿ ಬಳಕೆಯಾಗಲಿವೆ ಎಂದು ತಿಳಿಸಲಾಗಿದೆ.

ಪೋರ್ಟಲ್‌ನಲ್ಲಿ ನಾಸ್ಟಾಲ್ಜಿಯಾ, ಚಿತ್ರ-ಕಥೆ, ಶೂಟಿಂಗ್ ಸೋಜಿಗ, ಮಾಹಿತಿ–ವಿಶೇಷ, ನೆನಪು, ಪೋಸ್ಟರ್ ಮಾಹಿತಿ, ಅತಿಥಿ ಅಕ್ಷರ ಎಂಬ ವಿಭಾಗಗಳಿರಲಿವೆ. ಫೋಟೋಗಳ ಹಿಂದಿನ ಕತೆ, ಸಂದರ್ಭಗಳನ್ನು ಸ್ವತಃ ಫೋಟೋಗಳನ್ನು ಸೆರೆಹಿಡಿದ ಸ್ಥಿರಚಿತ್ರ ಛಾಯಾಗ್ರಾಹಕರು ನಿರೂಪಿಸಿದ್ದು, ಈ ವೀಡಿಯೋಗಳನ್ನು ’ಚಿತ್ರಪಥ’ ಯೂಟ್ಯೂಬ್ ಚಾನೆಲ್‌ನಲ್ಲಿ ನೋಡಬಹುದು.

ಹದಿಮೂರು ವರ್ಷಗಳ ಕಾಲ ಕನ್ನಡಪ್ರಭ, ವಿಜಯ ಕರ್ನಾಟಕ, ದಿ ಸ್ಟೇಟ್‌ ವೆಬ್‌ ಪೋರ್ಟಲ್‌ನಲ್ಲಿ ಸಿನಿಮಾ ಪತ್ರಕರ್ತನಾಗಿ ಕೆಲಸ ಮಾಡಿರುವ ಶಶಿಧರ ಚಿತ್ರದುರ್ಗ ಈ ಪೋರ್ಟಲ್ ಆರಂಭಿಸುತ್ತಿದ್ದಾರೆ. ಇವರು ಸಿನಿಮಾಗೆ ಸಂಬಂಧಿಸಿದಂತೆ ಏಳು ಪುಸ್ತಕಗಳನ್ನು ಪ್ರಕಟಿಸಿದ್ದು, 2015ನೇ ಸಾಲಿನ ರಾಜ್ಯಸರ್ಕಾರದ ಸಿನಿಮಾ ಸಬ್ಸಿಡಿ ಕಮಿಟಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ.


ಇದನ್ನೂ ಓದಿ: 75% ಖಾಸಗಿ ಉದ್ಯೋಗಗಳು ಸ್ಥಳೀಯರಿಗೆ ಮೀಸಲು – ಹರಿಯಾಣ ಸರ್ಕಾರ ಅನುಮೋದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...