Homeಕರ್ನಾಟಕಸಿನಿ ರಂಗದ ಅಪೂರ್ವ ಮಾಹಿತಿಯ ’ಚಿತ್ರಪಥ’ ಪೋರ್ಟಲ್ ಮಾರ್ಚ್ 6ಕ್ಕೆ ಲೋಕಾರ್ಪಣೆ

ಸಿನಿ ರಂಗದ ಅಪೂರ್ವ ಮಾಹಿತಿಯ ’ಚಿತ್ರಪಥ’ ಪೋರ್ಟಲ್ ಮಾರ್ಚ್ 6ಕ್ಕೆ ಲೋಕಾರ್ಪಣೆ

ಚಿತ್ರಪಥ ಪೋರ್ಟಲ್‌ನಲ್ಲಿ ಪ್ರಮುಖವಾಗಿ ಕನ್ನಡ ಸಿನಿಮಾ ಹಾಗೂ ಭಾರತದ ಇತರೆ ಪ್ರಾದೇಶಿಕ ಭಾಷಾ ಸಿನಿಮಾ ಸೇರಿದಂತೆ ಜಾಗತಿಕ ಸಿನಿಮಾ ಕುರಿತಾಗಿಯೂ ಫೋಟೋಗಳು ಮತ್ತು ಮಾಹಿತಿ ಇರಲಿದೆ.

- Advertisement -
- Advertisement -

ಸಿನಿಮಾ ಇತಿಹಾಸ, ಮಾಹಿತಿ, ಫೋಟೋಗಳನ್ನು ದಾಖಲಿಸುವುದರ ಜೊತೆಗೆ ಇಂದಿನ ಪೀಳಿಗೆಗೆ ಸಿನಿಮಾರಂಗದ ದಶಕಗಳ ಹಿಂದಿನ ಅಪೂರ್ವ ಮಾಹಿತಿ, ಫೋಟೋಗಳನ್ನು ತಲುಪಿಸುವುದು, ಸಿನಿಮಾ ಕುರಿತಾಗಿ ಉತ್ತಮ ಅಭಿರುಚಿ ರೂಪಿಸುವ ಆಶಯದೊಂದಿಗೆ ‘ಚಿತ್ರಪಥ’ ಆರ್ಕೈವ್ ಪೋರ್ಟಲ್‌ ಅನಾವರಣಗೊಳ್ಳುತ್ತಿದೆ.

ಹಿರಿಯ ಸಿನಿಮಾ ಕಲಾವಿದರು ಹಾಗೂ ತಂತ್ರಜ್ಞರನ್ನು ಸ್ಮರಿಸುವುದರ ಜೊತೆಗೆ ಅಪರೂಪದ ಫೋಟೋ, ಪತ್ರ, ಮಾಹಿತಿಗಳನ್ನು ದಾಖಲಿಸುವುದು, ಉತ್ತಮ ಬರಹ, ಲೇಖನ, ವಿಶ್ಲೇಷಣೆಗಳ ಮೂಲಕ ಸಿನಿಮಾ ಕುರಿತಾಗಿ ಒಳನೋಟಗಳನ್ನು ನೀಡುವ ನಿಟ್ಟಿನಲ್ಲಿ ‘ಚಿತ್ರಪಥ’ ಪೋರ್ಟಲ್ ಕೆಲಸ ಮಾಡಲಿದೆ.

ಮಾರ್ಚ್‌ 6ರ ಶನಿವಾರ ಬೆಂಗಳೂರಿನ ಮಲ್ಲೇಶ್ವರ 18ನೇ ಕ್ರಾಸ್‌ನ ರೇಣುಕಾಂಬ ಸ್ಟುಡಿಯೋದಲ್ಲಿ ಕನ್ನಡ ಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ‘ಚಿತ್ರಪಥ’ವನ್ನು ಅನಾವರಣಗೊಳಿಸಲಿದ್ದಾರೆ. ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್‌, ಚಿತ್ರಸಾಹಿತಿ ಕವಿರಾಜ್‌ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಹಿರಿಯ ಸ್ಥಿರಚಿತ್ರ ಛಾಯಾಗ್ರಾಹಕರಾದ ಭವಾನಿ ಲಕ್ಷ್ಮೀನಾರಾಯಣ ಮತ್ತು ಪ್ರಗತಿ ಅಶ್ವತ್ಥ ನಾರಾಯಣ ಅವರನ್ನು ಸನ್ಮಾನಿಸಲಾಗುವುದು ಎಂದು ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: ನಮ್ಮ ತನಿಖೆ ಸಚಿನ್, ಮಂಗೇಶ್ಕರ್ ವಿರುದ್ಧವಲ್ಲ, BJP ಐಟಿ ಸೆಲ್ ವಿರುದ್ಧ: ಮಹಾರಾಷ್ಟ್ರ

ಚಿತ್ರಪಥ ಪೋರ್ಟಲ್‌ನಲ್ಲಿ ಪ್ರಮುಖವಾಗಿ ಕನ್ನಡ ಸಿನಿಮಾ ಹಾಗೂ ಭಾರತದ ಇತರೆ ಪ್ರಾದೇಶಿಕ ಭಾಷಾ ಸಿನಿಮಾ ಸೇರಿದಂತೆ ಜಾಗತಿಕ ಸಿನಿಮಾ ಕುರಿತಾಗಿಯೂ ಫೋಟೋಗಳು ಮತ್ತು ಮಾಹಿತಿ ಇರಲಿದೆ. ಜಾಗತಿಕ ಸಿನಿಮಾದ ವಸ್ತು, ವಿಷಯವನ್ನು ಕನ್ನಡಿಗರಿಗೆ ತಲುಪಿಸುವ ಪುಟ್ಟ ವಾಹಕವಾಗಿಯೂ ‘ಚಿತ್ರಪಥ’ ಆರ್ಕೈವ್ ಪೋರ್ಟಲ್ ಕಾರ್ಯನಿರ್ವಹಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಚಿತ್ರರಂಗ ನಡೆದುಬಂದ ಹಾದಿಯನ್ನು ದಾಖಲಿಸುವ, ಅಲ್ಲಿನ ಶ್ರೀಮಂತಿಕೆ, ಬೆರಗು-ಹೊಳಪನ್ನು ಹೇಳುವ, ಚಿತ್ರರಂಗದ ಅಂದಿನ ಕಾರ್ಯವೈಖರಿ, ಶೂಟಿಂಗ್ ಸ್ಟುಡಿಯೋಗಳು ಹಾಗೂ ಪರಿಕರಗಳ ವಿವರಗಳನ್ನು ನೀಡುವುದು, ಶ್ರೇಷ್ಠ ತಂತ್ರಜ್ಞರು ಹಾಗೂ ಕಲಾವಿದರ ಕುರಿತ ಮಾಹಿತಿ ನೀಡುವ ನಿಟ್ಟಿನಲ್ಲಿ ಹೆಜ್ಜೆ ಇಡುವ ಒಂದು ಪ್ರಯತ್ನ. ಚಿತ್ರರಂಗದ ದಂತಕಥೆಗಳು ಎನಿಸಿದ ತಂತ್ರಜ್ಞರು ಹಾಗೂ ಕಲಾವಿದರ ಅಪರೂಪದ ಫೋಟೋಗಳೊಂದಿಗಿನ ಮಾಹಿತಿ, ಪ್ರತಿಭಾವಂತರ ಕುರಿತ ಟಿಪ್ಪಣಿಗಳು ಇಲ್ಲಿ ಇರಲಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ಅತ್ಯಾಚಾರ ಆರೋಪಿಗೆ ಸಂತ್ರಸ್ತೆಯನ್ನು ಮದುವೆಯಾಗಲು ಸಲಹೆ: ಸುಪ್ರೀಂ ನಡೆಗೆ ತೀವ್ರ ಖಂಡನೆ

‘ಚಿತ್ರಪಥ’ದಲ್ಲಿ ಪ್ರಮುಖವಾಗಿ ಕನ್ನಡ ಚಿತ್ರರಂಗದ ಬಗ್ಗೆ ಹೆಚ್ಚಿನ ಮಾಹಿತಿ ಇರಲಿದೆ. ಕನ್ನಡ ಚಿತ್ರರಂಗದ ಹಿರಿಯ ಸಿನಿಮಾ ಸ್ಥಿರಚಿತ್ರ ಛಾಯಾಗ್ರಾಹಕರಾದ ಭವಾನಿ ಲಕ್ಷ್ಮೀನಾರಾಯಣ ಮತ್ತು ಪ್ರಗತಿ ಅಶ್ವತ್ಥ ನಾರಾಯಣ ಅವರು ಸೆರೆಹಿಡಿದ ಫೋಟೋಗಳು ಪ್ರಮುಖವಾಗಿ ಪೋರ್ಟಲ್‍ನಲ್ಲಿ ಬಳಕೆಯಾಗಲಿವೆ ಎಂದು ತಿಳಿಸಲಾಗಿದೆ.

ಪೋರ್ಟಲ್‌ನಲ್ಲಿ ನಾಸ್ಟಾಲ್ಜಿಯಾ, ಚಿತ್ರ-ಕಥೆ, ಶೂಟಿಂಗ್ ಸೋಜಿಗ, ಮಾಹಿತಿ–ವಿಶೇಷ, ನೆನಪು, ಪೋಸ್ಟರ್ ಮಾಹಿತಿ, ಅತಿಥಿ ಅಕ್ಷರ ಎಂಬ ವಿಭಾಗಗಳಿರಲಿವೆ. ಫೋಟೋಗಳ ಹಿಂದಿನ ಕತೆ, ಸಂದರ್ಭಗಳನ್ನು ಸ್ವತಃ ಫೋಟೋಗಳನ್ನು ಸೆರೆಹಿಡಿದ ಸ್ಥಿರಚಿತ್ರ ಛಾಯಾಗ್ರಾಹಕರು ನಿರೂಪಿಸಿದ್ದು, ಈ ವೀಡಿಯೋಗಳನ್ನು ’ಚಿತ್ರಪಥ’ ಯೂಟ್ಯೂಬ್ ಚಾನೆಲ್‌ನಲ್ಲಿ ನೋಡಬಹುದು.

ಹದಿಮೂರು ವರ್ಷಗಳ ಕಾಲ ಕನ್ನಡಪ್ರಭ, ವಿಜಯ ಕರ್ನಾಟಕ, ದಿ ಸ್ಟೇಟ್‌ ವೆಬ್‌ ಪೋರ್ಟಲ್‌ನಲ್ಲಿ ಸಿನಿಮಾ ಪತ್ರಕರ್ತನಾಗಿ ಕೆಲಸ ಮಾಡಿರುವ ಶಶಿಧರ ಚಿತ್ರದುರ್ಗ ಈ ಪೋರ್ಟಲ್ ಆರಂಭಿಸುತ್ತಿದ್ದಾರೆ. ಇವರು ಸಿನಿಮಾಗೆ ಸಂಬಂಧಿಸಿದಂತೆ ಏಳು ಪುಸ್ತಕಗಳನ್ನು ಪ್ರಕಟಿಸಿದ್ದು, 2015ನೇ ಸಾಲಿನ ರಾಜ್ಯಸರ್ಕಾರದ ಸಿನಿಮಾ ಸಬ್ಸಿಡಿ ಕಮಿಟಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ.


ಇದನ್ನೂ ಓದಿ: 75% ಖಾಸಗಿ ಉದ್ಯೋಗಗಳು ಸ್ಥಳೀಯರಿಗೆ ಮೀಸಲು – ಹರಿಯಾಣ ಸರ್ಕಾರ ಅನುಮೋದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...