Homeಕರ್ನಾಟಕಗ್ರಂಥಾಲಯ, ಶೌಚಾಲಯ, ನೀರಿನ ವ್ಯವಸ್ಥೆಯಿಲ್ಲದ ಬೆಂಗಳೂರು ನಗರ ವಿವಿ: ವಿದ್ಯಾರ್ಥಿಗಳಿಂದ ಪ್ರತಿಭಟನೆ

ಗ್ರಂಥಾಲಯ, ಶೌಚಾಲಯ, ನೀರಿನ ವ್ಯವಸ್ಥೆಯಿಲ್ಲದ ಬೆಂಗಳೂರು ನಗರ ವಿವಿ: ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮರು-ಮೌಲ್ಯಮಾಪನ ಮಾಡಲು ಒಂದು ವಿಷಯಕ್ಕೆ 3 ಸಾವಿರ ರೂಗಳನ್ನು ಪಾವತಿ ಮಾಡಬೇಕಾಗುತ್ತದೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ

- Advertisement -
- Advertisement -

ಬೆಂಗಳೂರು ನಗರ ವಿಶ್ವವಿದ್ಯಾಲಯ ಪ್ರಾರಂಭವಾಗಿ ಐದು ವರ್ಷಗಳು ಕಳೆದರೂ ಸರಿಯಾದ ಶೌಚಾಲಯ, ಗ್ರಂಥಾಲಯ, ನೀರಿನ ವ್ಯವಸ್ಥೆ ಇಲ್ಲದ ಕಾಲೇಜಿನ ಅವ್ಯವಸ್ಥೆಯಿಂದ ಬೇಸತ್ತ ನೂರಾರು ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಆವರಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರು ನಗರ ವಿಶ್ವವಿದ್ಯಾಲಯದ ಹಳೆಯ ಕಟ್ಟಡವನ್ನು ಒಂದೇ ಬಾರಿಗೆ ನವೀಕರಣ ಮಾಡುತ್ತಿದ್ದು, ಇದರಿಂದಾಗಿ ಸರಿಯಾದ ತರಗತಿಗಳು ನಡೆಯುತ್ತಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಅಷ್ಟೆ ಅಲ್ಲದೆ ಸುಮಾರು 800 ವಿದ್ಯಾರ್ಥಿಗಳಿರುವ ಕ್ಯಾಂಪಸ್‌ನಲ್ಲಿ ಸರಿಯಾದ ಶೌಚಾಲಯಗಳು ಕೂಡಾ ಇಲ್ಲ, ವಿದ್ಯಾರ್ಥಿನಿಯರು ಶೌಚಾಲಯಕ್ಕಾಗಿ ಮೆಟ್ರೋ ಸ್ಟೇಷನ್‌ವರೆಗೂ ಹೋಗಬೇಕಾಗಿದೆ ಎಂದು ಪ್ರತಿಭಟನೆ ವೇಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಶ್ವವಿದ್ಯಾಲಯವು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಚಟುವಟಿಕೆ ಎಂದು ಎಂದು ಹಣ ಪಡೆದುಕೊಂಡು ಯಾವುದೆ ಕಾರ್ಯಕ್ರಮಗಳನ್ನು ಕೂಡಾ ನಡೆಸುತ್ತಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಜೊತೆಗೆ ಆಟದ ಸಾಮಾಗ್ರಿಗಳು, ಪ್ರಯೋಗಾಲಯದ ಫೀಸ್‌ಗಳನ್ನು ಕಟ್ಟಿಸಿಕೊಂಡಿದ್ದರೂ ಅವುಗಳನ್ನು ಕೂಡಾ ನೀಡುತ್ತಿಲ್ಲ ಎಂದು ಪ್ರತಿಭಟನಾ ವಿದ್ಯಾರ್ಥಿಗಳು ಹೇಳಿದ್ದಾರೆ.

ಗ್ರಂಥಾಲಯವಿದ ಫೀಸ್‌ ಕಟ್ಟಿಸಿಕೊಂಡರೂ ತಮ್ಮ ಅಧ್ಯಯನಕ್ಕೆ ಬೇಕಾದ ಪುಸ್ತಕಗಳು ಗ್ರಂಥಾಲಯದಲ್ಲಿ ಲಭ್ಯವಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದು, ಸೆಮಿಸ್ಟರ್‌‌ಗಳು ಮುಗಿದು ತುಂಬಾ ಸಮಯವಾದರೂ ಫಲಿತಾಂಶ ಪ್ರಕಟವಾಗಿಲ್ಲ ಎಂದು ಹೇಳಿದ್ದಾರೆ. ಇಷ್ಟೆ ಅಲ್ಲದೆ, ಪ್ರತಿ ವರ್ಷ ಐಡಿ ಕಾಡ್‌ಗಳಿಗೆ ಹಣ ಪಡೆದು ಮೊದಲನೇ ವರ್ಷದ ಐಡಿ ಕಾರ್ಡ್‌ಗಳನ್ನೇ ಉಪಯೋಗಿಸಲು ಹೇಳುತ್ತಿದ್ದಾರೆ. ಹೊಸದಾಗಿ ಐಡಿ ಕಾರ್ಡ್‌ಗಳನ್ನು ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ದಲಿತ ವಿದ್ಯಾರ್ಥಿ ಪರಿಷತ್‌ ನಾಯಕ ವೇಣುಗೋಪಾಲ್ ಮೌರ್ಯ,“ವಿದ್ಯಾರ್ಥಿಗಳು ಒಂದು ವಿಷಯದ ಪತ್ರಿಕೆಯನ್ನು ಮರು-ಮೌಲ್ಯಮಾಪನಕ್ಕೆ ಅರ್ಜಿ ಹಾಕಬೇಕು ಅಂದರೆ 3 ಸಾವಿರ ರೂಗಳನ್ನು ಪಾವತಿ ಮಾಡಬೇಕಾಗುತ್ತದೆ. ಬೇರೆ ವಿಶ್ವವಿದ್ಯಾಲಯದಲ್ಲಿ ಸಾವಿರ ರೂಗಳಷ್ಟೆ ಇರುತ್ತದೆ. ಬಡ-ಮಧ್ಯಮ ವರ್ಗದ ವಿದ್ಯಾರ್ಥಿಗಳು ಅವುಗಳನ್ನು ಪಾವತಿ ಮಾಡಲು ಹೇಗೆ ಸಾಧ್ಯ? ಇವರೇನು ದಂಧೆ ನಡೆಸುತ್ತಿದ್ದಾರೆಯೆ” ಎಂದು ಪ್ರಶ್ನಿಸಿದ್ದಾರೆ.

“ಕೋಟ್ಯಾಂತರ ರೂಗಳನ್ನು ಖರ್ಚು ಮಾಡಿಸಿ ಕಾಲೇಜಿಗೆ ಸುಣ್ಣ ಬಣ್ಣ ಬಳಿಯುತ್ತಾರೆ. ಆದರೆ ವಿದ್ಯಾರ್ಥಿಗಳಿಗೆ ಕುಡಿಯಲು ನೀರು ಇಲ್ಲ. ಸರಿಯಾದ ಶೌಚಾಲಯವಿಲ್ಲ. ಇಡೀ ಕಟ್ಟಡಗಳನ್ನು ಒಂದೇ ಬಾರಿಗೆ ನವೀಕರಣ ಮಾಡುತ್ತಿರುವುದರಿಂದ ತರಗತಿ ನಡೆಸಲು ಸರಿಯಾದ ಕೋಣೆಗಳಿಲ್ಲದೆ, ದೂರದ ಹಳ್ಳಿಗಳ ಕಡೆಯಿಂದ ಬಂದ ವಿದ್ಯಾರ್ಥಿಗಳ ಸಂಜೆವೆರೆಗೆ ಕುಳಿತು ವಾಪಾಸು ಮನೆಗೆ ತೆರಳುತ್ತಿದ್ದಾರೆ. ಇದು ಸುಮಾರು ಆರು ತಿಂಗಳಿನಿಂದ ನಡೆಯುತ್ತಿದೆ” ಎಂದು ವೇಣುಗೋಪಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇತ್ತೀಚೆಗೆ ಬಂದ ಫಲಿತಾಂಶದಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳನ್ನು ಫೇಲ್ ಮಾಡಿದ್ದಾರೆ. ಪರೀಕ್ಷೆಯ ಮೌಲ್ಯಮಾಪನವನ್ನು ಕಳಪೆ ಮಟ್ಟದಲ್ಲಿ ಮಾಡಿದ್ದಲ್ಲದೆ, ಪೇಪರ್‌ಗಳ ಫೋಟೋ ಕಾಪಿ ಕೇಳಿದರೆ ಅವುಗಳನ್ನು ಕೂಡಾ ನೀಡುತ್ತಿಲ್ಲ. ಪತ್ರಿಕೆಗಳ ಫೋಟೋ ಕಾಪಿ ವಿದ್ಯಾರ್ಥಿಗಳ ಹಕ್ಕಾಗಿದ್ದು, ಅದನ್ನು ನೀಡಬೇಕು ಎಂದು ನ್ಯಾಯಾಲಯದ ಆದೇಶವೇ ಇದೆ. ಆದರೆ ಬೆಂಗಳೂರು ನಗರ ವಿಶ್ವವಿದ್ಯಾಲಯ ಅವುಗಳನ್ನು ನೀಡದೆ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ. ಒಟ್ಟಾರೆಯಾಗಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ ವಾತಾವರಣ ನೀಡುವುದು ಬಿಟ್ಟು ವಿಶ್ವವಿದ್ಯಾಲಯದ ದುಡ್ಡನ್ನು ಉಪ ಕುಲಪತಿ ಮತ್ತು ರಿಜಿಸ್ಟ್ರಾರ್‌‌ ಕಬಳಿಕೆ ಮಾಡುತ್ತಿದ್ದಾರೆ” ಎಂದು ವೇಣುಗೋಪಾಲ್ ಅವರು ಆರೋಪಿಸಿದ್ದಾರೆ.

ವಿದ್ಯಾರ್ಥಿಗಳ ಆರೋಪಗಳಿಗೆ ಪ್ರತಿಕ್ರಿಯಿಸಿದ ಬೆಂಗಳೂರು ನಗರ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌‌ ಶ್ರೀಧರ್‌ ಸಿ.ಎನ್‌., ಕೆಲವೊಂದು ಸಣ್ಣ ಪುಟ್ಟ ಸಮಸ್ಯೆಗಳು ಬಿಟ್ಟರೆ ಯಾವುದೆ ಸಮಸ್ಯೆ ವಿಶ್ವವಿದ್ಯಾಲಯದಲ್ಲಿ ಇಲ್ಲ. ಪ್ರತಿಭಟನೆಗಳು ಹೊರಗಿನ ವ್ಯಕ್ತಿಗಳ ಕುಮ್ಮಕ್ಕಿನಿಂದ ನಡೆಯುತ್ತಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಶ್ರೀಧರ್‌ ಅವರು,“ಸುಮಾರು 160 ವರ್ಷಗಳಷ್ಟು ಹಳೆಯ ಕಟ್ಟಡಗಳು ಆಗಿರುವುದರಿಂದ ವಿಶ್ವವಿದ್ಯಾಲಯದ ನವೀಕರಣ ಕೆಲಸ ನಡೆಯುತ್ತಿದೆ. ಗಣಿತ ಮತ್ತು ವಾಣಿಜ್ಯ ವಿಭಾಗಗಳಲ್ಲಿ ಎಲ್ಲವೂ ಸರಿಯಾಗಿದ್ದು, ಈಗ ಕನ್ನಡ, ಇತಿಹಾಸ ಮತ್ತು ಭೌತಶಾಸ್ತ್ರ ವಿಭಾಗಗಳನ್ನು ನವೀಕರಣಕ್ಕೆ ತೆಗೆದುಕೊಂಡಿದ್ದಾರೆ. ಇದೀಗ ಒಟ್ಟು ಆರು ತರಗತಿಗಳು ಮತ್ತು ಎರಡು ಶೌಚಾಲಯದಗಳಲ್ಲಿ ಕೆಲಸ ನಡೆಯುತ್ತಿದೆ. ಹೀಗಾಗಿ ಎರಡು ಮೂರು ಕ್ಲಾಸ್ ಮತ್ತು ಎರಡು ಶೌಚಾಲಯಗಳಷ್ಟೆ ಕೊರತೆಯಾಗಿದೆ. ವಿಶ್ವವಿದ್ಯಾಲಯದಲ್ಲಿ ಒಟ್ಟು 34 ಶೌಚಾಲಯ ಕೋಣೆಗಳಿವೆ. ಎಲ್ಲವೂ ಹೊಸದಾಗಿ ನಿರ್ಮಾಣ ಮಾಡಿರುವಂತದ್ದು” ಎಂದು ಹೇಳಿದ್ದಾರೆ.

“ಸಾಂಸ್ಕೃತಿಕ ಚಟುವಟಿಕೆಗಳು ಪರೀಕ್ಷೆಗಳು ಮುಗಿದ ನಂತರ ಪ್ರಾರಂಭವಾಗುತ್ತದೆ. ಅವರು ಹೇಳಿದ ಹಾಗೆ ಪರೀಕ್ಷೆಗಳು ಇರಬೇಕಾದ್ರೆ ಚಟುವಟಿಕೆಗಳನ್ನು ನಡೆಸಲು ಆಗುವುದಿಲ್ಲ. ಪ್ರಯೋಗಾಲಯಗಳ ಸಾಮಾಗ್ರಿಗಳು ಮೊದಲನೇ ವರ್ಷದ ವಿದ್ಯಾರ್ಥಿಗಳಿಗೆ ಈಗಾಗಲೆ ಬಂದಿದೆ. ಕ್ರಿಕೆಟ್‌ ಸ್ಟೇಡಿಯಂ ಇರುವ ಜಾಗದಲ್ಲಿ ಕಾಂಪ್ಲೆಕ್ಸ್‌ ನಿರ್ಮಾಣವಾಗುತ್ತಿದೆ ಹೀಗಾಗಿ ಕ್ರೀಡಾ ಸಾಮಾಗ್ರಿಗಳನ್ನು ಖರೀದಿಸಿಲ್ಲ. ಅಲ್ಲದೆ ವಿದ್ಯಾರ್ಥಿಗಳಿಗೆ ಬೇಕಾಗಿರುವ ಗ್ರಂಥಾಲಯದಲ್ಲಿ ಸುಮಾರು 40 ಸಾವಿರ ಪುಸ್ತಕಗಳಿವೆ” ಎಂದು ಅವರು ಹೇಳಿದ್ದಾರೆ.

“ಪತ್ರಿಕೆಗಳ ಮರು ಮೌಲ್ಯ ಮಾಪನದ ವಿಚಾರವಾಗಿ ಸಮಿತಿ ಮಾಡಿ 3 ಸಾವಿರದಿಂದ 1,500 ರೂ.ಗಳಿಗೆ ಇಳಿಸಿದ್ದೇವೆ. ಅದರ ಬಗ್ಗೆ ಇನ್ನಷ್ಟೆ ಅಧಿಸೂಚನೆ ಹೊರಡಿಸಬೇಕಿದೆ. ಉಳಿದಂತೆ ಪತ್ರಿಕೆಗಳ ಫೋಟೊ ಕಾಪಿ ನೀಡುವ ಬಗ್ಗೆ ನಮ್ಮ ವಿಶ್ವವಿದ್ಯಾಲಯದ ನಿಯಮಗಳಲ್ಲಿ ಅದಕ್ಕೆ ಅವಕಾಶವಿಲ್ಲ. ಜೊತೆಗೆ ಒಂದು ಪತ್ರಿಕೆ ಕೊಡಬೇಕು ಅಂದರೆ, ಒಂದು ಶೀಟ್‌ನಲ್ಲಿ 12 ಜನರ ಅಂಕಗಳು ಇರುತ್ತವೆ, ಹಾಗಾಗಿ ಅದನ್ನು ನೀಡಲು ಸಾಧ್ಯವಿಲ್ಲ” ಎಂದು ಶ್ರೀಧರ್‌ ಅವರು ಹೇಳಿದ್ದಾರೆ.

ಇದನ್ನೂ ಓದಿ: ಕಾರವಾರ ಮೆಡಿಕಲ್ ಕಾಲೇಜು; ಆತಂಕದಲ್ಲಿ ದಲಿತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...