Homeಕರ್ನಾಟಕಗ್ರಂಥಾಲಯ, ಶೌಚಾಲಯ, ನೀರಿನ ವ್ಯವಸ್ಥೆಯಿಲ್ಲದ ಬೆಂಗಳೂರು ನಗರ ವಿವಿ: ವಿದ್ಯಾರ್ಥಿಗಳಿಂದ ಪ್ರತಿಭಟನೆ

ಗ್ರಂಥಾಲಯ, ಶೌಚಾಲಯ, ನೀರಿನ ವ್ಯವಸ್ಥೆಯಿಲ್ಲದ ಬೆಂಗಳೂರು ನಗರ ವಿವಿ: ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮರು-ಮೌಲ್ಯಮಾಪನ ಮಾಡಲು ಒಂದು ವಿಷಯಕ್ಕೆ 3 ಸಾವಿರ ರೂಗಳನ್ನು ಪಾವತಿ ಮಾಡಬೇಕಾಗುತ್ತದೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ

- Advertisement -
- Advertisement -

ಬೆಂಗಳೂರು ನಗರ ವಿಶ್ವವಿದ್ಯಾಲಯ ಪ್ರಾರಂಭವಾಗಿ ಐದು ವರ್ಷಗಳು ಕಳೆದರೂ ಸರಿಯಾದ ಶೌಚಾಲಯ, ಗ್ರಂಥಾಲಯ, ನೀರಿನ ವ್ಯವಸ್ಥೆ ಇಲ್ಲದ ಕಾಲೇಜಿನ ಅವ್ಯವಸ್ಥೆಯಿಂದ ಬೇಸತ್ತ ನೂರಾರು ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಆವರಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರು ನಗರ ವಿಶ್ವವಿದ್ಯಾಲಯದ ಹಳೆಯ ಕಟ್ಟಡವನ್ನು ಒಂದೇ ಬಾರಿಗೆ ನವೀಕರಣ ಮಾಡುತ್ತಿದ್ದು, ಇದರಿಂದಾಗಿ ಸರಿಯಾದ ತರಗತಿಗಳು ನಡೆಯುತ್ತಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಅಷ್ಟೆ ಅಲ್ಲದೆ ಸುಮಾರು 800 ವಿದ್ಯಾರ್ಥಿಗಳಿರುವ ಕ್ಯಾಂಪಸ್‌ನಲ್ಲಿ ಸರಿಯಾದ ಶೌಚಾಲಯಗಳು ಕೂಡಾ ಇಲ್ಲ, ವಿದ್ಯಾರ್ಥಿನಿಯರು ಶೌಚಾಲಯಕ್ಕಾಗಿ ಮೆಟ್ರೋ ಸ್ಟೇಷನ್‌ವರೆಗೂ ಹೋಗಬೇಕಾಗಿದೆ ಎಂದು ಪ್ರತಿಭಟನೆ ವೇಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಶ್ವವಿದ್ಯಾಲಯವು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಚಟುವಟಿಕೆ ಎಂದು ಎಂದು ಹಣ ಪಡೆದುಕೊಂಡು ಯಾವುದೆ ಕಾರ್ಯಕ್ರಮಗಳನ್ನು ಕೂಡಾ ನಡೆಸುತ್ತಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಜೊತೆಗೆ ಆಟದ ಸಾಮಾಗ್ರಿಗಳು, ಪ್ರಯೋಗಾಲಯದ ಫೀಸ್‌ಗಳನ್ನು ಕಟ್ಟಿಸಿಕೊಂಡಿದ್ದರೂ ಅವುಗಳನ್ನು ಕೂಡಾ ನೀಡುತ್ತಿಲ್ಲ ಎಂದು ಪ್ರತಿಭಟನಾ ವಿದ್ಯಾರ್ಥಿಗಳು ಹೇಳಿದ್ದಾರೆ.

ಗ್ರಂಥಾಲಯವಿದ ಫೀಸ್‌ ಕಟ್ಟಿಸಿಕೊಂಡರೂ ತಮ್ಮ ಅಧ್ಯಯನಕ್ಕೆ ಬೇಕಾದ ಪುಸ್ತಕಗಳು ಗ್ರಂಥಾಲಯದಲ್ಲಿ ಲಭ್ಯವಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದು, ಸೆಮಿಸ್ಟರ್‌‌ಗಳು ಮುಗಿದು ತುಂಬಾ ಸಮಯವಾದರೂ ಫಲಿತಾಂಶ ಪ್ರಕಟವಾಗಿಲ್ಲ ಎಂದು ಹೇಳಿದ್ದಾರೆ. ಇಷ್ಟೆ ಅಲ್ಲದೆ, ಪ್ರತಿ ವರ್ಷ ಐಡಿ ಕಾಡ್‌ಗಳಿಗೆ ಹಣ ಪಡೆದು ಮೊದಲನೇ ವರ್ಷದ ಐಡಿ ಕಾರ್ಡ್‌ಗಳನ್ನೇ ಉಪಯೋಗಿಸಲು ಹೇಳುತ್ತಿದ್ದಾರೆ. ಹೊಸದಾಗಿ ಐಡಿ ಕಾರ್ಡ್‌ಗಳನ್ನು ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ದಲಿತ ವಿದ್ಯಾರ್ಥಿ ಪರಿಷತ್‌ ನಾಯಕ ವೇಣುಗೋಪಾಲ್ ಮೌರ್ಯ,“ವಿದ್ಯಾರ್ಥಿಗಳು ಒಂದು ವಿಷಯದ ಪತ್ರಿಕೆಯನ್ನು ಮರು-ಮೌಲ್ಯಮಾಪನಕ್ಕೆ ಅರ್ಜಿ ಹಾಕಬೇಕು ಅಂದರೆ 3 ಸಾವಿರ ರೂಗಳನ್ನು ಪಾವತಿ ಮಾಡಬೇಕಾಗುತ್ತದೆ. ಬೇರೆ ವಿಶ್ವವಿದ್ಯಾಲಯದಲ್ಲಿ ಸಾವಿರ ರೂಗಳಷ್ಟೆ ಇರುತ್ತದೆ. ಬಡ-ಮಧ್ಯಮ ವರ್ಗದ ವಿದ್ಯಾರ್ಥಿಗಳು ಅವುಗಳನ್ನು ಪಾವತಿ ಮಾಡಲು ಹೇಗೆ ಸಾಧ್ಯ? ಇವರೇನು ದಂಧೆ ನಡೆಸುತ್ತಿದ್ದಾರೆಯೆ” ಎಂದು ಪ್ರಶ್ನಿಸಿದ್ದಾರೆ.

“ಕೋಟ್ಯಾಂತರ ರೂಗಳನ್ನು ಖರ್ಚು ಮಾಡಿಸಿ ಕಾಲೇಜಿಗೆ ಸುಣ್ಣ ಬಣ್ಣ ಬಳಿಯುತ್ತಾರೆ. ಆದರೆ ವಿದ್ಯಾರ್ಥಿಗಳಿಗೆ ಕುಡಿಯಲು ನೀರು ಇಲ್ಲ. ಸರಿಯಾದ ಶೌಚಾಲಯವಿಲ್ಲ. ಇಡೀ ಕಟ್ಟಡಗಳನ್ನು ಒಂದೇ ಬಾರಿಗೆ ನವೀಕರಣ ಮಾಡುತ್ತಿರುವುದರಿಂದ ತರಗತಿ ನಡೆಸಲು ಸರಿಯಾದ ಕೋಣೆಗಳಿಲ್ಲದೆ, ದೂರದ ಹಳ್ಳಿಗಳ ಕಡೆಯಿಂದ ಬಂದ ವಿದ್ಯಾರ್ಥಿಗಳ ಸಂಜೆವೆರೆಗೆ ಕುಳಿತು ವಾಪಾಸು ಮನೆಗೆ ತೆರಳುತ್ತಿದ್ದಾರೆ. ಇದು ಸುಮಾರು ಆರು ತಿಂಗಳಿನಿಂದ ನಡೆಯುತ್ತಿದೆ” ಎಂದು ವೇಣುಗೋಪಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇತ್ತೀಚೆಗೆ ಬಂದ ಫಲಿತಾಂಶದಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳನ್ನು ಫೇಲ್ ಮಾಡಿದ್ದಾರೆ. ಪರೀಕ್ಷೆಯ ಮೌಲ್ಯಮಾಪನವನ್ನು ಕಳಪೆ ಮಟ್ಟದಲ್ಲಿ ಮಾಡಿದ್ದಲ್ಲದೆ, ಪೇಪರ್‌ಗಳ ಫೋಟೋ ಕಾಪಿ ಕೇಳಿದರೆ ಅವುಗಳನ್ನು ಕೂಡಾ ನೀಡುತ್ತಿಲ್ಲ. ಪತ್ರಿಕೆಗಳ ಫೋಟೋ ಕಾಪಿ ವಿದ್ಯಾರ್ಥಿಗಳ ಹಕ್ಕಾಗಿದ್ದು, ಅದನ್ನು ನೀಡಬೇಕು ಎಂದು ನ್ಯಾಯಾಲಯದ ಆದೇಶವೇ ಇದೆ. ಆದರೆ ಬೆಂಗಳೂರು ನಗರ ವಿಶ್ವವಿದ್ಯಾಲಯ ಅವುಗಳನ್ನು ನೀಡದೆ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ. ಒಟ್ಟಾರೆಯಾಗಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ ವಾತಾವರಣ ನೀಡುವುದು ಬಿಟ್ಟು ವಿಶ್ವವಿದ್ಯಾಲಯದ ದುಡ್ಡನ್ನು ಉಪ ಕುಲಪತಿ ಮತ್ತು ರಿಜಿಸ್ಟ್ರಾರ್‌‌ ಕಬಳಿಕೆ ಮಾಡುತ್ತಿದ್ದಾರೆ” ಎಂದು ವೇಣುಗೋಪಾಲ್ ಅವರು ಆರೋಪಿಸಿದ್ದಾರೆ.

ವಿದ್ಯಾರ್ಥಿಗಳ ಆರೋಪಗಳಿಗೆ ಪ್ರತಿಕ್ರಿಯಿಸಿದ ಬೆಂಗಳೂರು ನಗರ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌‌ ಶ್ರೀಧರ್‌ ಸಿ.ಎನ್‌., ಕೆಲವೊಂದು ಸಣ್ಣ ಪುಟ್ಟ ಸಮಸ್ಯೆಗಳು ಬಿಟ್ಟರೆ ಯಾವುದೆ ಸಮಸ್ಯೆ ವಿಶ್ವವಿದ್ಯಾಲಯದಲ್ಲಿ ಇಲ್ಲ. ಪ್ರತಿಭಟನೆಗಳು ಹೊರಗಿನ ವ್ಯಕ್ತಿಗಳ ಕುಮ್ಮಕ್ಕಿನಿಂದ ನಡೆಯುತ್ತಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಶ್ರೀಧರ್‌ ಅವರು,“ಸುಮಾರು 160 ವರ್ಷಗಳಷ್ಟು ಹಳೆಯ ಕಟ್ಟಡಗಳು ಆಗಿರುವುದರಿಂದ ವಿಶ್ವವಿದ್ಯಾಲಯದ ನವೀಕರಣ ಕೆಲಸ ನಡೆಯುತ್ತಿದೆ. ಗಣಿತ ಮತ್ತು ವಾಣಿಜ್ಯ ವಿಭಾಗಗಳಲ್ಲಿ ಎಲ್ಲವೂ ಸರಿಯಾಗಿದ್ದು, ಈಗ ಕನ್ನಡ, ಇತಿಹಾಸ ಮತ್ತು ಭೌತಶಾಸ್ತ್ರ ವಿಭಾಗಗಳನ್ನು ನವೀಕರಣಕ್ಕೆ ತೆಗೆದುಕೊಂಡಿದ್ದಾರೆ. ಇದೀಗ ಒಟ್ಟು ಆರು ತರಗತಿಗಳು ಮತ್ತು ಎರಡು ಶೌಚಾಲಯದಗಳಲ್ಲಿ ಕೆಲಸ ನಡೆಯುತ್ತಿದೆ. ಹೀಗಾಗಿ ಎರಡು ಮೂರು ಕ್ಲಾಸ್ ಮತ್ತು ಎರಡು ಶೌಚಾಲಯಗಳಷ್ಟೆ ಕೊರತೆಯಾಗಿದೆ. ವಿಶ್ವವಿದ್ಯಾಲಯದಲ್ಲಿ ಒಟ್ಟು 34 ಶೌಚಾಲಯ ಕೋಣೆಗಳಿವೆ. ಎಲ್ಲವೂ ಹೊಸದಾಗಿ ನಿರ್ಮಾಣ ಮಾಡಿರುವಂತದ್ದು” ಎಂದು ಹೇಳಿದ್ದಾರೆ.

“ಸಾಂಸ್ಕೃತಿಕ ಚಟುವಟಿಕೆಗಳು ಪರೀಕ್ಷೆಗಳು ಮುಗಿದ ನಂತರ ಪ್ರಾರಂಭವಾಗುತ್ತದೆ. ಅವರು ಹೇಳಿದ ಹಾಗೆ ಪರೀಕ್ಷೆಗಳು ಇರಬೇಕಾದ್ರೆ ಚಟುವಟಿಕೆಗಳನ್ನು ನಡೆಸಲು ಆಗುವುದಿಲ್ಲ. ಪ್ರಯೋಗಾಲಯಗಳ ಸಾಮಾಗ್ರಿಗಳು ಮೊದಲನೇ ವರ್ಷದ ವಿದ್ಯಾರ್ಥಿಗಳಿಗೆ ಈಗಾಗಲೆ ಬಂದಿದೆ. ಕ್ರಿಕೆಟ್‌ ಸ್ಟೇಡಿಯಂ ಇರುವ ಜಾಗದಲ್ಲಿ ಕಾಂಪ್ಲೆಕ್ಸ್‌ ನಿರ್ಮಾಣವಾಗುತ್ತಿದೆ ಹೀಗಾಗಿ ಕ್ರೀಡಾ ಸಾಮಾಗ್ರಿಗಳನ್ನು ಖರೀದಿಸಿಲ್ಲ. ಅಲ್ಲದೆ ವಿದ್ಯಾರ್ಥಿಗಳಿಗೆ ಬೇಕಾಗಿರುವ ಗ್ರಂಥಾಲಯದಲ್ಲಿ ಸುಮಾರು 40 ಸಾವಿರ ಪುಸ್ತಕಗಳಿವೆ” ಎಂದು ಅವರು ಹೇಳಿದ್ದಾರೆ.

“ಪತ್ರಿಕೆಗಳ ಮರು ಮೌಲ್ಯ ಮಾಪನದ ವಿಚಾರವಾಗಿ ಸಮಿತಿ ಮಾಡಿ 3 ಸಾವಿರದಿಂದ 1,500 ರೂ.ಗಳಿಗೆ ಇಳಿಸಿದ್ದೇವೆ. ಅದರ ಬಗ್ಗೆ ಇನ್ನಷ್ಟೆ ಅಧಿಸೂಚನೆ ಹೊರಡಿಸಬೇಕಿದೆ. ಉಳಿದಂತೆ ಪತ್ರಿಕೆಗಳ ಫೋಟೊ ಕಾಪಿ ನೀಡುವ ಬಗ್ಗೆ ನಮ್ಮ ವಿಶ್ವವಿದ್ಯಾಲಯದ ನಿಯಮಗಳಲ್ಲಿ ಅದಕ್ಕೆ ಅವಕಾಶವಿಲ್ಲ. ಜೊತೆಗೆ ಒಂದು ಪತ್ರಿಕೆ ಕೊಡಬೇಕು ಅಂದರೆ, ಒಂದು ಶೀಟ್‌ನಲ್ಲಿ 12 ಜನರ ಅಂಕಗಳು ಇರುತ್ತವೆ, ಹಾಗಾಗಿ ಅದನ್ನು ನೀಡಲು ಸಾಧ್ಯವಿಲ್ಲ” ಎಂದು ಶ್ರೀಧರ್‌ ಅವರು ಹೇಳಿದ್ದಾರೆ.

ಇದನ್ನೂ ಓದಿ: ಕಾರವಾರ ಮೆಡಿಕಲ್ ಕಾಲೇಜು; ಆತಂಕದಲ್ಲಿ ದಲಿತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...