Homeಕರ್ನಾಟಕಗ್ರಂಥಾಲಯ, ಶೌಚಾಲಯ, ನೀರಿನ ವ್ಯವಸ್ಥೆಯಿಲ್ಲದ ಬೆಂಗಳೂರು ನಗರ ವಿವಿ: ವಿದ್ಯಾರ್ಥಿಗಳಿಂದ ಪ್ರತಿಭಟನೆ

ಗ್ರಂಥಾಲಯ, ಶೌಚಾಲಯ, ನೀರಿನ ವ್ಯವಸ್ಥೆಯಿಲ್ಲದ ಬೆಂಗಳೂರು ನಗರ ವಿವಿ: ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮರು-ಮೌಲ್ಯಮಾಪನ ಮಾಡಲು ಒಂದು ವಿಷಯಕ್ಕೆ 3 ಸಾವಿರ ರೂಗಳನ್ನು ಪಾವತಿ ಮಾಡಬೇಕಾಗುತ್ತದೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ

- Advertisement -
- Advertisement -

ಬೆಂಗಳೂರು ನಗರ ವಿಶ್ವವಿದ್ಯಾಲಯ ಪ್ರಾರಂಭವಾಗಿ ಐದು ವರ್ಷಗಳು ಕಳೆದರೂ ಸರಿಯಾದ ಶೌಚಾಲಯ, ಗ್ರಂಥಾಲಯ, ನೀರಿನ ವ್ಯವಸ್ಥೆ ಇಲ್ಲದ ಕಾಲೇಜಿನ ಅವ್ಯವಸ್ಥೆಯಿಂದ ಬೇಸತ್ತ ನೂರಾರು ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಆವರಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರು ನಗರ ವಿಶ್ವವಿದ್ಯಾಲಯದ ಹಳೆಯ ಕಟ್ಟಡವನ್ನು ಒಂದೇ ಬಾರಿಗೆ ನವೀಕರಣ ಮಾಡುತ್ತಿದ್ದು, ಇದರಿಂದಾಗಿ ಸರಿಯಾದ ತರಗತಿಗಳು ನಡೆಯುತ್ತಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಅಷ್ಟೆ ಅಲ್ಲದೆ ಸುಮಾರು 800 ವಿದ್ಯಾರ್ಥಿಗಳಿರುವ ಕ್ಯಾಂಪಸ್‌ನಲ್ಲಿ ಸರಿಯಾದ ಶೌಚಾಲಯಗಳು ಕೂಡಾ ಇಲ್ಲ, ವಿದ್ಯಾರ್ಥಿನಿಯರು ಶೌಚಾಲಯಕ್ಕಾಗಿ ಮೆಟ್ರೋ ಸ್ಟೇಷನ್‌ವರೆಗೂ ಹೋಗಬೇಕಾಗಿದೆ ಎಂದು ಪ್ರತಿಭಟನೆ ವೇಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಶ್ವವಿದ್ಯಾಲಯವು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಚಟುವಟಿಕೆ ಎಂದು ಎಂದು ಹಣ ಪಡೆದುಕೊಂಡು ಯಾವುದೆ ಕಾರ್ಯಕ್ರಮಗಳನ್ನು ಕೂಡಾ ನಡೆಸುತ್ತಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಜೊತೆಗೆ ಆಟದ ಸಾಮಾಗ್ರಿಗಳು, ಪ್ರಯೋಗಾಲಯದ ಫೀಸ್‌ಗಳನ್ನು ಕಟ್ಟಿಸಿಕೊಂಡಿದ್ದರೂ ಅವುಗಳನ್ನು ಕೂಡಾ ನೀಡುತ್ತಿಲ್ಲ ಎಂದು ಪ್ರತಿಭಟನಾ ವಿದ್ಯಾರ್ಥಿಗಳು ಹೇಳಿದ್ದಾರೆ.

ಗ್ರಂಥಾಲಯವಿದ ಫೀಸ್‌ ಕಟ್ಟಿಸಿಕೊಂಡರೂ ತಮ್ಮ ಅಧ್ಯಯನಕ್ಕೆ ಬೇಕಾದ ಪುಸ್ತಕಗಳು ಗ್ರಂಥಾಲಯದಲ್ಲಿ ಲಭ್ಯವಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದು, ಸೆಮಿಸ್ಟರ್‌‌ಗಳು ಮುಗಿದು ತುಂಬಾ ಸಮಯವಾದರೂ ಫಲಿತಾಂಶ ಪ್ರಕಟವಾಗಿಲ್ಲ ಎಂದು ಹೇಳಿದ್ದಾರೆ. ಇಷ್ಟೆ ಅಲ್ಲದೆ, ಪ್ರತಿ ವರ್ಷ ಐಡಿ ಕಾಡ್‌ಗಳಿಗೆ ಹಣ ಪಡೆದು ಮೊದಲನೇ ವರ್ಷದ ಐಡಿ ಕಾರ್ಡ್‌ಗಳನ್ನೇ ಉಪಯೋಗಿಸಲು ಹೇಳುತ್ತಿದ್ದಾರೆ. ಹೊಸದಾಗಿ ಐಡಿ ಕಾರ್ಡ್‌ಗಳನ್ನು ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ದಲಿತ ವಿದ್ಯಾರ್ಥಿ ಪರಿಷತ್‌ ನಾಯಕ ವೇಣುಗೋಪಾಲ್ ಮೌರ್ಯ,“ವಿದ್ಯಾರ್ಥಿಗಳು ಒಂದು ವಿಷಯದ ಪತ್ರಿಕೆಯನ್ನು ಮರು-ಮೌಲ್ಯಮಾಪನಕ್ಕೆ ಅರ್ಜಿ ಹಾಕಬೇಕು ಅಂದರೆ 3 ಸಾವಿರ ರೂಗಳನ್ನು ಪಾವತಿ ಮಾಡಬೇಕಾಗುತ್ತದೆ. ಬೇರೆ ವಿಶ್ವವಿದ್ಯಾಲಯದಲ್ಲಿ ಸಾವಿರ ರೂಗಳಷ್ಟೆ ಇರುತ್ತದೆ. ಬಡ-ಮಧ್ಯಮ ವರ್ಗದ ವಿದ್ಯಾರ್ಥಿಗಳು ಅವುಗಳನ್ನು ಪಾವತಿ ಮಾಡಲು ಹೇಗೆ ಸಾಧ್ಯ? ಇವರೇನು ದಂಧೆ ನಡೆಸುತ್ತಿದ್ದಾರೆಯೆ” ಎಂದು ಪ್ರಶ್ನಿಸಿದ್ದಾರೆ.

“ಕೋಟ್ಯಾಂತರ ರೂಗಳನ್ನು ಖರ್ಚು ಮಾಡಿಸಿ ಕಾಲೇಜಿಗೆ ಸುಣ್ಣ ಬಣ್ಣ ಬಳಿಯುತ್ತಾರೆ. ಆದರೆ ವಿದ್ಯಾರ್ಥಿಗಳಿಗೆ ಕುಡಿಯಲು ನೀರು ಇಲ್ಲ. ಸರಿಯಾದ ಶೌಚಾಲಯವಿಲ್ಲ. ಇಡೀ ಕಟ್ಟಡಗಳನ್ನು ಒಂದೇ ಬಾರಿಗೆ ನವೀಕರಣ ಮಾಡುತ್ತಿರುವುದರಿಂದ ತರಗತಿ ನಡೆಸಲು ಸರಿಯಾದ ಕೋಣೆಗಳಿಲ್ಲದೆ, ದೂರದ ಹಳ್ಳಿಗಳ ಕಡೆಯಿಂದ ಬಂದ ವಿದ್ಯಾರ್ಥಿಗಳ ಸಂಜೆವೆರೆಗೆ ಕುಳಿತು ವಾಪಾಸು ಮನೆಗೆ ತೆರಳುತ್ತಿದ್ದಾರೆ. ಇದು ಸುಮಾರು ಆರು ತಿಂಗಳಿನಿಂದ ನಡೆಯುತ್ತಿದೆ” ಎಂದು ವೇಣುಗೋಪಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇತ್ತೀಚೆಗೆ ಬಂದ ಫಲಿತಾಂಶದಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳನ್ನು ಫೇಲ್ ಮಾಡಿದ್ದಾರೆ. ಪರೀಕ್ಷೆಯ ಮೌಲ್ಯಮಾಪನವನ್ನು ಕಳಪೆ ಮಟ್ಟದಲ್ಲಿ ಮಾಡಿದ್ದಲ್ಲದೆ, ಪೇಪರ್‌ಗಳ ಫೋಟೋ ಕಾಪಿ ಕೇಳಿದರೆ ಅವುಗಳನ್ನು ಕೂಡಾ ನೀಡುತ್ತಿಲ್ಲ. ಪತ್ರಿಕೆಗಳ ಫೋಟೋ ಕಾಪಿ ವಿದ್ಯಾರ್ಥಿಗಳ ಹಕ್ಕಾಗಿದ್ದು, ಅದನ್ನು ನೀಡಬೇಕು ಎಂದು ನ್ಯಾಯಾಲಯದ ಆದೇಶವೇ ಇದೆ. ಆದರೆ ಬೆಂಗಳೂರು ನಗರ ವಿಶ್ವವಿದ್ಯಾಲಯ ಅವುಗಳನ್ನು ನೀಡದೆ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ. ಒಟ್ಟಾರೆಯಾಗಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ ವಾತಾವರಣ ನೀಡುವುದು ಬಿಟ್ಟು ವಿಶ್ವವಿದ್ಯಾಲಯದ ದುಡ್ಡನ್ನು ಉಪ ಕುಲಪತಿ ಮತ್ತು ರಿಜಿಸ್ಟ್ರಾರ್‌‌ ಕಬಳಿಕೆ ಮಾಡುತ್ತಿದ್ದಾರೆ” ಎಂದು ವೇಣುಗೋಪಾಲ್ ಅವರು ಆರೋಪಿಸಿದ್ದಾರೆ.

ವಿದ್ಯಾರ್ಥಿಗಳ ಆರೋಪಗಳಿಗೆ ಪ್ರತಿಕ್ರಿಯಿಸಿದ ಬೆಂಗಳೂರು ನಗರ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌‌ ಶ್ರೀಧರ್‌ ಸಿ.ಎನ್‌., ಕೆಲವೊಂದು ಸಣ್ಣ ಪುಟ್ಟ ಸಮಸ್ಯೆಗಳು ಬಿಟ್ಟರೆ ಯಾವುದೆ ಸಮಸ್ಯೆ ವಿಶ್ವವಿದ್ಯಾಲಯದಲ್ಲಿ ಇಲ್ಲ. ಪ್ರತಿಭಟನೆಗಳು ಹೊರಗಿನ ವ್ಯಕ್ತಿಗಳ ಕುಮ್ಮಕ್ಕಿನಿಂದ ನಡೆಯುತ್ತಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಶ್ರೀಧರ್‌ ಅವರು,“ಸುಮಾರು 160 ವರ್ಷಗಳಷ್ಟು ಹಳೆಯ ಕಟ್ಟಡಗಳು ಆಗಿರುವುದರಿಂದ ವಿಶ್ವವಿದ್ಯಾಲಯದ ನವೀಕರಣ ಕೆಲಸ ನಡೆಯುತ್ತಿದೆ. ಗಣಿತ ಮತ್ತು ವಾಣಿಜ್ಯ ವಿಭಾಗಗಳಲ್ಲಿ ಎಲ್ಲವೂ ಸರಿಯಾಗಿದ್ದು, ಈಗ ಕನ್ನಡ, ಇತಿಹಾಸ ಮತ್ತು ಭೌತಶಾಸ್ತ್ರ ವಿಭಾಗಗಳನ್ನು ನವೀಕರಣಕ್ಕೆ ತೆಗೆದುಕೊಂಡಿದ್ದಾರೆ. ಇದೀಗ ಒಟ್ಟು ಆರು ತರಗತಿಗಳು ಮತ್ತು ಎರಡು ಶೌಚಾಲಯದಗಳಲ್ಲಿ ಕೆಲಸ ನಡೆಯುತ್ತಿದೆ. ಹೀಗಾಗಿ ಎರಡು ಮೂರು ಕ್ಲಾಸ್ ಮತ್ತು ಎರಡು ಶೌಚಾಲಯಗಳಷ್ಟೆ ಕೊರತೆಯಾಗಿದೆ. ವಿಶ್ವವಿದ್ಯಾಲಯದಲ್ಲಿ ಒಟ್ಟು 34 ಶೌಚಾಲಯ ಕೋಣೆಗಳಿವೆ. ಎಲ್ಲವೂ ಹೊಸದಾಗಿ ನಿರ್ಮಾಣ ಮಾಡಿರುವಂತದ್ದು” ಎಂದು ಹೇಳಿದ್ದಾರೆ.

“ಸಾಂಸ್ಕೃತಿಕ ಚಟುವಟಿಕೆಗಳು ಪರೀಕ್ಷೆಗಳು ಮುಗಿದ ನಂತರ ಪ್ರಾರಂಭವಾಗುತ್ತದೆ. ಅವರು ಹೇಳಿದ ಹಾಗೆ ಪರೀಕ್ಷೆಗಳು ಇರಬೇಕಾದ್ರೆ ಚಟುವಟಿಕೆಗಳನ್ನು ನಡೆಸಲು ಆಗುವುದಿಲ್ಲ. ಪ್ರಯೋಗಾಲಯಗಳ ಸಾಮಾಗ್ರಿಗಳು ಮೊದಲನೇ ವರ್ಷದ ವಿದ್ಯಾರ್ಥಿಗಳಿಗೆ ಈಗಾಗಲೆ ಬಂದಿದೆ. ಕ್ರಿಕೆಟ್‌ ಸ್ಟೇಡಿಯಂ ಇರುವ ಜಾಗದಲ್ಲಿ ಕಾಂಪ್ಲೆಕ್ಸ್‌ ನಿರ್ಮಾಣವಾಗುತ್ತಿದೆ ಹೀಗಾಗಿ ಕ್ರೀಡಾ ಸಾಮಾಗ್ರಿಗಳನ್ನು ಖರೀದಿಸಿಲ್ಲ. ಅಲ್ಲದೆ ವಿದ್ಯಾರ್ಥಿಗಳಿಗೆ ಬೇಕಾಗಿರುವ ಗ್ರಂಥಾಲಯದಲ್ಲಿ ಸುಮಾರು 40 ಸಾವಿರ ಪುಸ್ತಕಗಳಿವೆ” ಎಂದು ಅವರು ಹೇಳಿದ್ದಾರೆ.

“ಪತ್ರಿಕೆಗಳ ಮರು ಮೌಲ್ಯ ಮಾಪನದ ವಿಚಾರವಾಗಿ ಸಮಿತಿ ಮಾಡಿ 3 ಸಾವಿರದಿಂದ 1,500 ರೂ.ಗಳಿಗೆ ಇಳಿಸಿದ್ದೇವೆ. ಅದರ ಬಗ್ಗೆ ಇನ್ನಷ್ಟೆ ಅಧಿಸೂಚನೆ ಹೊರಡಿಸಬೇಕಿದೆ. ಉಳಿದಂತೆ ಪತ್ರಿಕೆಗಳ ಫೋಟೊ ಕಾಪಿ ನೀಡುವ ಬಗ್ಗೆ ನಮ್ಮ ವಿಶ್ವವಿದ್ಯಾಲಯದ ನಿಯಮಗಳಲ್ಲಿ ಅದಕ್ಕೆ ಅವಕಾಶವಿಲ್ಲ. ಜೊತೆಗೆ ಒಂದು ಪತ್ರಿಕೆ ಕೊಡಬೇಕು ಅಂದರೆ, ಒಂದು ಶೀಟ್‌ನಲ್ಲಿ 12 ಜನರ ಅಂಕಗಳು ಇರುತ್ತವೆ, ಹಾಗಾಗಿ ಅದನ್ನು ನೀಡಲು ಸಾಧ್ಯವಿಲ್ಲ” ಎಂದು ಶ್ರೀಧರ್‌ ಅವರು ಹೇಳಿದ್ದಾರೆ.

ಇದನ್ನೂ ಓದಿ: ಕಾರವಾರ ಮೆಡಿಕಲ್ ಕಾಲೇಜು; ಆತಂಕದಲ್ಲಿ ದಲಿತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...