Homeಕರ್ನಾಟಕಬೆಂಗಳೂರಿನಲ್ಲಿ ಅಗ್ನಿ ಅವಘಡ: ಜನರ ಕಣ್ಣ ಮುಂದೆ ಸಜೀವ ದಹನವಾದ ತಾಯಿ-ಮಗಳು

ಬೆಂಗಳೂರಿನಲ್ಲಿ ಅಗ್ನಿ ಅವಘಡ: ಜನರ ಕಣ್ಣ ಮುಂದೆ ಸಜೀವ ದಹನವಾದ ತಾಯಿ-ಮಗಳು

- Advertisement -
- Advertisement -

ಬೆಂಗಳೂರಿನ ದೇವರಚಿಕ್ಕನಹಳ್ಳಿ ಅಪಾರ್ಟ್ಮೆಂಟ್‌ನಲ್ಲಿ ನಡೆದ ಅಗ್ನಿದುರಂತದಲ್ಲಿ ಜನರ ಮುಂದೆಯೇ ತಾಯಿ ಮಗಳಿಬ್ಬರು ಸಜೀವ ದಹನವಾಗಿರುವ ದುರಂತ ಘಟನೆ ನಡೆದಿದೆ. ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದೆ.

ನಿನ್ನೆ ಸಂಜೆ ಬೆಂಗಳೂರು ನಗರದ ದೇವರಚಿಕ್ಕನಹಳ್ಳಿಯ ಆಶ್ರಿತ್ ಅಪಾರ್ಟ್ಮೆಂಟ್​ನಲ್ಲಿ ನಡೆದ ಅಗ್ನಿ ಅವಘಡಕ್ಕೆ ಸಿಲಿಂಡರ್ ಸ್ಫೋಟ ಕಾರಣ ಎನ್ನಲಾಗಿದೆ. ಅಗ್ನಿ ಅವಘಡ ದುರಂತದಲ್ಲಿ ಇಬ್ಬರು ಸಜೀವದಹನವಾಗಿದ್ದಾರೆ. ಫ್ಲ್ಯಾಟ್‌ನಲ್ಲಿದ್ದ ಮೂವರು ಹೊರಗೆ ಓಡಿ ಬಂದು ಅಪಾಯದಿಂದ ಪಾರಾಗಿದ್ದಾರೆ.

ದುರಂತದಲ್ಲಿ ಸಾವನ್ನಪ್ಪಿದ ತಾಯಿ ಲಕ್ಷ್ಮೀದೇವಿ (82 ವರ್ಷ), ಮಗಳು ಭಾಗ್ಯ ರೇಖಾ (59 ವರ್ಷ) ಅವರು ನಿನ್ನೆಯಷ್ಟೇ ಅಮೆರಿಕದಿಂದ ಬೆಂಗಳೂರಿಗೆ ಆಗಮಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಈ ಕುಟುಂಬವು ಫ್ಲ್ಯಾಟ್‌ ನಂಬರ್ 210ರಲ್ಲಿ ವಾಸವಿತ್ತು. ಬಾಲ್ಕನಿಯಲ್ಲಿ ರಕ್ಷಣೆಗಾಗಿ ಕಬ್ಬಿಣದ ಗ್ರಿಲ್‌ ಅಳವಡಿಸಲಾಗಿತ್ತು. ಬೆಂಕಿ ಅವಘಡ ಸಂಭವಿಸಿದಾಗ, ಗ್ರಿಲ್‌ನಿಂದಾಗಿ ಹೊರಗೆ ಬರಲು ಸಾಧ್ಯವಾಗದೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ವೇಶ್ಯಾವಾಟಿಕೆ ಸಂಘಟಿತ ಅಪರಾಧ, ಇದನ್ನು ತಡೆಯಲು ಮುಂದಾಗಬೇಕು- ಸ್ಟ್ಯಾನ್ಲಿ

ಈ ಭೀಕರ ದುರಂತಕ್ಕೆ ಅಪಾರ್ಟ್ಮೆಂಟ್‌ನ ನಿರ್ಲಕ್ಷವೇ ಕಾರಣವಾಯಿತಾ ಎಂಬ ಪ್ರಶ್ನೆ ಮೂಡಿದೆ. ಈ ಅಪಾರ್ಟ್ಮೆಂಟ್‌ನಲ್ಲಿ ಯಾವುದೇ ಮುಂಜಾಗ್ರತ ಕ್ರಮ ತೆಗೆದುಕೊಂಡಿರಲಿಲ್ಲ. ಬಿಬಿಎಂಪಿ ಹಾಗೂ ಅಪಾರ್ಟ್ಮೆಂಟ್ ಮಾಲೀಕರ ನಿರ್ಲಕ್ಷವೇ ಕಾರಣ ಎಂದು ಹೇಳಲಾಗುತ್ತಿದೆ. ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಅಪಾರ್ಟ್ಮೆಂಟ್‌ನಲ್ಲಿ ಯಾವುದೇ ವಾಟರ್ ಲೈನ್ ವ್ಯವಸ್ಥೆ, ಆಕ್ಸಿಜನ್ ಸಿಲಿಂಡರ್ ವ್ಯವಸ್ಥೆ ಇರಲಿಲ್ಲ. ಬೆಂಕಿ ಕಾಣಿಸಿಕೊಂಡರೆ ಕೂಗುವ ಸೈರನ್ ವ್ಯವಸ್ಥೆಯೂ ಇರಲಿಲ್ಲ ಎಂದು ಆರೋಪಿಸಲಾಗಿದೆ. ಇದೆ ಕಾರಣಕ್ಕೆ ಎರಡು ಅಮಾಯಕ ಜೀವಗಳು ಬಲಿಯಾಗಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಆಶ್ರಿತ್​​ ಅಪಾರ್ಟ್ಮೆಂಟ್‌ನಲ್ಲಿ ಒಟ್ಟು ನಾಲ್ಕು ಅಂತಸ್ತುಗಳಿದ್ದು, ಒಟ್ಟು 72 ಫ್ಲ್ಯಾಟ್‌ಗಳನ್ನು ನಿರ್ಮಿಸಲಾಗಿದೆ. ಆಶ್ರಿತ್ ಶೆಲ್ಟರ್ಸ್ ಪ್ರೈವೆಟ್‌ ಲಿ. ಒಡೆತನದ ಅಪಾರ್ಟ್ಮೆಂಟ್ ಇದಾಗಿದೆ. ದುರಂತದ ಬಳಿಕ 60ಕ್ಕೂ ಹೆಚ್ಚು ನಿವಾಸಿಗಳಿಗೆ ಸಮೀಪದ ಅಪಾರ್ಟ್ಮೆಂಟ್ ಕ್ಲಬ್ ಹೌಸ್‌ನಲ್ಲಿ ಆಶ್ರಯದ ವ್ಯವಸ್ಥೆ ಮಾಡಲಾಗಿದೆ. ಇಂದು ಎರಡು ತನಿಖಾ ತಂಡಗಳು ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದು ಪರಿಶೀಲನೆ ನಡೆಸಲಿವೆ.


ಇದನ್ನೂ ಓದಿ: ಗಾಂಧಿ ಕೊಂದವರು ನಾವು ಎಂದು ಸಿಎಂಗೆ ಕೊಲೆ ಬೆದರಿಕೆ: ಮತ್ತೆ ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...