Homeಕರ್ನಾಟಕಬೆಂಗಳೂರಿನಲ್ಲಿ ಅಗ್ನಿ ಅವಘಡ: ಜನರ ಕಣ್ಣ ಮುಂದೆ ಸಜೀವ ದಹನವಾದ ತಾಯಿ-ಮಗಳು

ಬೆಂಗಳೂರಿನಲ್ಲಿ ಅಗ್ನಿ ಅವಘಡ: ಜನರ ಕಣ್ಣ ಮುಂದೆ ಸಜೀವ ದಹನವಾದ ತಾಯಿ-ಮಗಳು

- Advertisement -
- Advertisement -

ಬೆಂಗಳೂರಿನ ದೇವರಚಿಕ್ಕನಹಳ್ಳಿ ಅಪಾರ್ಟ್ಮೆಂಟ್‌ನಲ್ಲಿ ನಡೆದ ಅಗ್ನಿದುರಂತದಲ್ಲಿ ಜನರ ಮುಂದೆಯೇ ತಾಯಿ ಮಗಳಿಬ್ಬರು ಸಜೀವ ದಹನವಾಗಿರುವ ದುರಂತ ಘಟನೆ ನಡೆದಿದೆ. ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದೆ.

ನಿನ್ನೆ ಸಂಜೆ ಬೆಂಗಳೂರು ನಗರದ ದೇವರಚಿಕ್ಕನಹಳ್ಳಿಯ ಆಶ್ರಿತ್ ಅಪಾರ್ಟ್ಮೆಂಟ್​ನಲ್ಲಿ ನಡೆದ ಅಗ್ನಿ ಅವಘಡಕ್ಕೆ ಸಿಲಿಂಡರ್ ಸ್ಫೋಟ ಕಾರಣ ಎನ್ನಲಾಗಿದೆ. ಅಗ್ನಿ ಅವಘಡ ದುರಂತದಲ್ಲಿ ಇಬ್ಬರು ಸಜೀವದಹನವಾಗಿದ್ದಾರೆ. ಫ್ಲ್ಯಾಟ್‌ನಲ್ಲಿದ್ದ ಮೂವರು ಹೊರಗೆ ಓಡಿ ಬಂದು ಅಪಾಯದಿಂದ ಪಾರಾಗಿದ್ದಾರೆ.

ದುರಂತದಲ್ಲಿ ಸಾವನ್ನಪ್ಪಿದ ತಾಯಿ ಲಕ್ಷ್ಮೀದೇವಿ (82 ವರ್ಷ), ಮಗಳು ಭಾಗ್ಯ ರೇಖಾ (59 ವರ್ಷ) ಅವರು ನಿನ್ನೆಯಷ್ಟೇ ಅಮೆರಿಕದಿಂದ ಬೆಂಗಳೂರಿಗೆ ಆಗಮಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಈ ಕುಟುಂಬವು ಫ್ಲ್ಯಾಟ್‌ ನಂಬರ್ 210ರಲ್ಲಿ ವಾಸವಿತ್ತು. ಬಾಲ್ಕನಿಯಲ್ಲಿ ರಕ್ಷಣೆಗಾಗಿ ಕಬ್ಬಿಣದ ಗ್ರಿಲ್‌ ಅಳವಡಿಸಲಾಗಿತ್ತು. ಬೆಂಕಿ ಅವಘಡ ಸಂಭವಿಸಿದಾಗ, ಗ್ರಿಲ್‌ನಿಂದಾಗಿ ಹೊರಗೆ ಬರಲು ಸಾಧ್ಯವಾಗದೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ವೇಶ್ಯಾವಾಟಿಕೆ ಸಂಘಟಿತ ಅಪರಾಧ, ಇದನ್ನು ತಡೆಯಲು ಮುಂದಾಗಬೇಕು- ಸ್ಟ್ಯಾನ್ಲಿ

ಈ ಭೀಕರ ದುರಂತಕ್ಕೆ ಅಪಾರ್ಟ್ಮೆಂಟ್‌ನ ನಿರ್ಲಕ್ಷವೇ ಕಾರಣವಾಯಿತಾ ಎಂಬ ಪ್ರಶ್ನೆ ಮೂಡಿದೆ. ಈ ಅಪಾರ್ಟ್ಮೆಂಟ್‌ನಲ್ಲಿ ಯಾವುದೇ ಮುಂಜಾಗ್ರತ ಕ್ರಮ ತೆಗೆದುಕೊಂಡಿರಲಿಲ್ಲ. ಬಿಬಿಎಂಪಿ ಹಾಗೂ ಅಪಾರ್ಟ್ಮೆಂಟ್ ಮಾಲೀಕರ ನಿರ್ಲಕ್ಷವೇ ಕಾರಣ ಎಂದು ಹೇಳಲಾಗುತ್ತಿದೆ. ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಅಪಾರ್ಟ್ಮೆಂಟ್‌ನಲ್ಲಿ ಯಾವುದೇ ವಾಟರ್ ಲೈನ್ ವ್ಯವಸ್ಥೆ, ಆಕ್ಸಿಜನ್ ಸಿಲಿಂಡರ್ ವ್ಯವಸ್ಥೆ ಇರಲಿಲ್ಲ. ಬೆಂಕಿ ಕಾಣಿಸಿಕೊಂಡರೆ ಕೂಗುವ ಸೈರನ್ ವ್ಯವಸ್ಥೆಯೂ ಇರಲಿಲ್ಲ ಎಂದು ಆರೋಪಿಸಲಾಗಿದೆ. ಇದೆ ಕಾರಣಕ್ಕೆ ಎರಡು ಅಮಾಯಕ ಜೀವಗಳು ಬಲಿಯಾಗಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಆಶ್ರಿತ್​​ ಅಪಾರ್ಟ್ಮೆಂಟ್‌ನಲ್ಲಿ ಒಟ್ಟು ನಾಲ್ಕು ಅಂತಸ್ತುಗಳಿದ್ದು, ಒಟ್ಟು 72 ಫ್ಲ್ಯಾಟ್‌ಗಳನ್ನು ನಿರ್ಮಿಸಲಾಗಿದೆ. ಆಶ್ರಿತ್ ಶೆಲ್ಟರ್ಸ್ ಪ್ರೈವೆಟ್‌ ಲಿ. ಒಡೆತನದ ಅಪಾರ್ಟ್ಮೆಂಟ್ ಇದಾಗಿದೆ. ದುರಂತದ ಬಳಿಕ 60ಕ್ಕೂ ಹೆಚ್ಚು ನಿವಾಸಿಗಳಿಗೆ ಸಮೀಪದ ಅಪಾರ್ಟ್ಮೆಂಟ್ ಕ್ಲಬ್ ಹೌಸ್‌ನಲ್ಲಿ ಆಶ್ರಯದ ವ್ಯವಸ್ಥೆ ಮಾಡಲಾಗಿದೆ. ಇಂದು ಎರಡು ತನಿಖಾ ತಂಡಗಳು ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದು ಪರಿಶೀಲನೆ ನಡೆಸಲಿವೆ.


ಇದನ್ನೂ ಓದಿ: ಗಾಂಧಿ ಕೊಂದವರು ನಾವು ಎಂದು ಸಿಎಂಗೆ ಕೊಲೆ ಬೆದರಿಕೆ: ಮತ್ತೆ ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...