Homeಕರ್ನಾಟಕಬೆಂಗಳೂರಿನಲ್ಲಿ ಅಗ್ನಿ ಅವಘಡ: ಜನರ ಕಣ್ಣ ಮುಂದೆ ಸಜೀವ ದಹನವಾದ ತಾಯಿ-ಮಗಳು

ಬೆಂಗಳೂರಿನಲ್ಲಿ ಅಗ್ನಿ ಅವಘಡ: ಜನರ ಕಣ್ಣ ಮುಂದೆ ಸಜೀವ ದಹನವಾದ ತಾಯಿ-ಮಗಳು

- Advertisement -
- Advertisement -

ಬೆಂಗಳೂರಿನ ದೇವರಚಿಕ್ಕನಹಳ್ಳಿ ಅಪಾರ್ಟ್ಮೆಂಟ್‌ನಲ್ಲಿ ನಡೆದ ಅಗ್ನಿದುರಂತದಲ್ಲಿ ಜನರ ಮುಂದೆಯೇ ತಾಯಿ ಮಗಳಿಬ್ಬರು ಸಜೀವ ದಹನವಾಗಿರುವ ದುರಂತ ಘಟನೆ ನಡೆದಿದೆ. ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದೆ.

ನಿನ್ನೆ ಸಂಜೆ ಬೆಂಗಳೂರು ನಗರದ ದೇವರಚಿಕ್ಕನಹಳ್ಳಿಯ ಆಶ್ರಿತ್ ಅಪಾರ್ಟ್ಮೆಂಟ್​ನಲ್ಲಿ ನಡೆದ ಅಗ್ನಿ ಅವಘಡಕ್ಕೆ ಸಿಲಿಂಡರ್ ಸ್ಫೋಟ ಕಾರಣ ಎನ್ನಲಾಗಿದೆ. ಅಗ್ನಿ ಅವಘಡ ದುರಂತದಲ್ಲಿ ಇಬ್ಬರು ಸಜೀವದಹನವಾಗಿದ್ದಾರೆ. ಫ್ಲ್ಯಾಟ್‌ನಲ್ಲಿದ್ದ ಮೂವರು ಹೊರಗೆ ಓಡಿ ಬಂದು ಅಪಾಯದಿಂದ ಪಾರಾಗಿದ್ದಾರೆ.

ದುರಂತದಲ್ಲಿ ಸಾವನ್ನಪ್ಪಿದ ತಾಯಿ ಲಕ್ಷ್ಮೀದೇವಿ (82 ವರ್ಷ), ಮಗಳು ಭಾಗ್ಯ ರೇಖಾ (59 ವರ್ಷ) ಅವರು ನಿನ್ನೆಯಷ್ಟೇ ಅಮೆರಿಕದಿಂದ ಬೆಂಗಳೂರಿಗೆ ಆಗಮಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಈ ಕುಟುಂಬವು ಫ್ಲ್ಯಾಟ್‌ ನಂಬರ್ 210ರಲ್ಲಿ ವಾಸವಿತ್ತು. ಬಾಲ್ಕನಿಯಲ್ಲಿ ರಕ್ಷಣೆಗಾಗಿ ಕಬ್ಬಿಣದ ಗ್ರಿಲ್‌ ಅಳವಡಿಸಲಾಗಿತ್ತು. ಬೆಂಕಿ ಅವಘಡ ಸಂಭವಿಸಿದಾಗ, ಗ್ರಿಲ್‌ನಿಂದಾಗಿ ಹೊರಗೆ ಬರಲು ಸಾಧ್ಯವಾಗದೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ವೇಶ್ಯಾವಾಟಿಕೆ ಸಂಘಟಿತ ಅಪರಾಧ, ಇದನ್ನು ತಡೆಯಲು ಮುಂದಾಗಬೇಕು- ಸ್ಟ್ಯಾನ್ಲಿ

ಈ ಭೀಕರ ದುರಂತಕ್ಕೆ ಅಪಾರ್ಟ್ಮೆಂಟ್‌ನ ನಿರ್ಲಕ್ಷವೇ ಕಾರಣವಾಯಿತಾ ಎಂಬ ಪ್ರಶ್ನೆ ಮೂಡಿದೆ. ಈ ಅಪಾರ್ಟ್ಮೆಂಟ್‌ನಲ್ಲಿ ಯಾವುದೇ ಮುಂಜಾಗ್ರತ ಕ್ರಮ ತೆಗೆದುಕೊಂಡಿರಲಿಲ್ಲ. ಬಿಬಿಎಂಪಿ ಹಾಗೂ ಅಪಾರ್ಟ್ಮೆಂಟ್ ಮಾಲೀಕರ ನಿರ್ಲಕ್ಷವೇ ಕಾರಣ ಎಂದು ಹೇಳಲಾಗುತ್ತಿದೆ. ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಅಪಾರ್ಟ್ಮೆಂಟ್‌ನಲ್ಲಿ ಯಾವುದೇ ವಾಟರ್ ಲೈನ್ ವ್ಯವಸ್ಥೆ, ಆಕ್ಸಿಜನ್ ಸಿಲಿಂಡರ್ ವ್ಯವಸ್ಥೆ ಇರಲಿಲ್ಲ. ಬೆಂಕಿ ಕಾಣಿಸಿಕೊಂಡರೆ ಕೂಗುವ ಸೈರನ್ ವ್ಯವಸ್ಥೆಯೂ ಇರಲಿಲ್ಲ ಎಂದು ಆರೋಪಿಸಲಾಗಿದೆ. ಇದೆ ಕಾರಣಕ್ಕೆ ಎರಡು ಅಮಾಯಕ ಜೀವಗಳು ಬಲಿಯಾಗಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಆಶ್ರಿತ್​​ ಅಪಾರ್ಟ್ಮೆಂಟ್‌ನಲ್ಲಿ ಒಟ್ಟು ನಾಲ್ಕು ಅಂತಸ್ತುಗಳಿದ್ದು, ಒಟ್ಟು 72 ಫ್ಲ್ಯಾಟ್‌ಗಳನ್ನು ನಿರ್ಮಿಸಲಾಗಿದೆ. ಆಶ್ರಿತ್ ಶೆಲ್ಟರ್ಸ್ ಪ್ರೈವೆಟ್‌ ಲಿ. ಒಡೆತನದ ಅಪಾರ್ಟ್ಮೆಂಟ್ ಇದಾಗಿದೆ. ದುರಂತದ ಬಳಿಕ 60ಕ್ಕೂ ಹೆಚ್ಚು ನಿವಾಸಿಗಳಿಗೆ ಸಮೀಪದ ಅಪಾರ್ಟ್ಮೆಂಟ್ ಕ್ಲಬ್ ಹೌಸ್‌ನಲ್ಲಿ ಆಶ್ರಯದ ವ್ಯವಸ್ಥೆ ಮಾಡಲಾಗಿದೆ. ಇಂದು ಎರಡು ತನಿಖಾ ತಂಡಗಳು ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದು ಪರಿಶೀಲನೆ ನಡೆಸಲಿವೆ.


ಇದನ್ನೂ ಓದಿ: ಗಾಂಧಿ ಕೊಂದವರು ನಾವು ಎಂದು ಸಿಎಂಗೆ ಕೊಲೆ ಬೆದರಿಕೆ: ಮತ್ತೆ ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...