Homeಕರ್ನಾಟಕಬೆಂಗಳೂರು: ‘ಕಾಂಗ್ರೆಸ್‌’, ‘ಭಾರತ್‌ ಜೋಡೋ’ ಖಾತೆ ತಾತ್ಕಾಲಿಕವಾಗಿ ರದ್ದು ಮಾಡುವಂತೆ ಟ್ವಿಟರ್‌ಗೆ ಸಿವಿಲ್‌ ಕೋರ್ಟ್ ಆದೇಶ

ಬೆಂಗಳೂರು: ‘ಕಾಂಗ್ರೆಸ್‌’, ‘ಭಾರತ್‌ ಜೋಡೋ’ ಖಾತೆ ತಾತ್ಕಾಲಿಕವಾಗಿ ರದ್ದು ಮಾಡುವಂತೆ ಟ್ವಿಟರ್‌ಗೆ ಸಿವಿಲ್‌ ಕೋರ್ಟ್ ಆದೇಶ

- Advertisement -
- Advertisement -

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಮತ್ತು ಭಾರತ್ ಜೋಡೋ ಟ್ವಿಟರ್‌ ಖಾತೆಗಳನ್ನು ತಾತ್ಕಾಲಿಕವಾಗಿ ಟ್ವಿಟರ್‌ ಸಂಸ್ಥೆ ನಿರ್ಬಂಧಿಸಬೇಕು ಎಂದು ಬೆಂಗಳೂರಿನ ಸಿವಿಲ್ ನ್ಯಾಯಾಲಯ ಸೋಮವಾರ ಆದೇಶಿಸಿದೆ.

‘ಕೆಜಿಎಫ್‌‌ ಚಾಪ್ಟರ್‌-2’ ಸಿನಿಮಾದ ಸಂಗೀತವನ್ನು ಕಾಂಗ್ರೆಸ್ ಕಾನೂನುಬಾಹಿರವಾಗಿ ತನ್ನ ವೀಡಿಯೊಗಳಲ್ಲಿ ಬಳಸಿಕೊಂಡು ಹಕ್ಕುಸ್ವಾಮ್ಯವನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ಎಂಆರ್‌ಟಿ ಸಂಗೀತ ಸಂಸ್ಥೆಯು ಪ್ರಕರಣ ದಾಖಲಿಸಿತ್ತು. ವಿಚಾರಣೆಯನ್ನು ಕೈಗೆತ್ತಿಕೊಂಡ ಕೋರ್ಟ್ ಈ ಆದೇಶ ಹೊರಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾಂಗ್ರೆಸ್ ಪಕ್ಷದ ಖಾತೆಯಾದ @INCIndiaಯಿಂದ ಮಾಡಲಾದ ಮೂರು ಟ್ವೀಟ್‌ಗಳನ್ನು ತೆಗೆದುಹಾಕಬೇಕು ಎಂದು ಕೋರ್ಟ್ ಸೂಚಿಸಿದೆ. ಹೆಚ್ಚುವರಿಯಾಗಿ ಮುಂದಿನ ವಿಚಾರಣೆಯ ದಿನಾಂಕದವರೆಗೆ @INCIndia ಮತ್ತು @BharatJodo ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿಷೇಧಿಸಬೇಕು ಎಂದು ಟ್ವಿಟರ್‌‌ ಸಂಸ್ಥೆಗೆ ಆದೇಶಿಸಲಾಗಿದೆ.

ಕೆಜಿಎಫ್- 2ರ ಸಂಗೀತವನ್ನು ಬಳಸಿದ್ದಕ್ಕಾಗಿ ರಾಹುಲ್ ಗಾಂಧಿ, ಜೈರಾಮ್ ರಮೇಶ್ ಮತ್ತು ಸುಪ್ರಿಯಾ ಶ್ರಿನೇಟ್ ವಿರುದ್ಧ ಕೃತಿಸ್ವಾಮ್ಯ ಕಾಯ್ದೆ, ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ನವೆಂಬರ್ 4 ರಂದು ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಎಂಆರ್‌ಟಿ ಮ್ಯೂಸಿಕ್ ಸಂಸ್ಥೆಯ ಎಂ.ನವೀನ್ ಕುಮಾರ್ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್‌ ಮಾಡಿದ್ದರು.

ಭಾರತ್ ಜೋಡೋ ಯಾತ್ರೆಯು ಕರ್ನಾಟಕದಲ್ಲಿ ಸಾಗುವಾಗ ಪ್ಲೇ ಮಾಡಲಾಗಿರುವ ಕೆಜಿಎಫ್‌-2ರ ಹಿಂದಿ ಅವತರಣಿಕೆಯ ‘ಸುಲ್ತಾನ್’ ಹಾಡಿನ ಕುರಿತು ಆಕ್ಷೇಪ ಎತ್ತಲಾಗಿದೆ. ರಾಹುಲ್ ಅವರ ಪಾದಯಾತ್ರೆ ಮತ್ತು ಸಾರ್ವಜನಿಕರೊಂದಿಗೆ ಸಂವಹನ ನಡೆಸುವುದನ್ನು ತೋರಿಸುವ ವೀಡಿಯೊದಲ್ಲಿ ಹಾಡು ಬಳಸಲಾಗಿದೆ ಎಂದು ದೂರು ನೀಡಲಾಗಿದೆ.

ಜೈರಾಮ್ ರಮೇಶ್ ಅವರು ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಭಾರತ್‌ ಜೋಡೋ ಯಾತ್ರೆಯ ಎರಡು ವೀಡಿಯೊಗಳನ್ನು ಪೋಸ್ಟ್ ಮಾಡಿದ್ದಾರೆ. ಇದರಲ್ಲಿ ಕೆಜಿಎಫ್ 2ರ ಚಿತ್ರದ ಜನಪ್ರಿಯ ಹಾಡುಗಳನ್ನು ಅನುಮತಿಯಿಲ್ಲದೆ ಬಳಸಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ.

“ವೀಡಿಯೊಗಳನ್ನು ನೋಡಿದಾಗ ಆರೋಪಿಗಳು ಮೋಸದಿಂದ, ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಅನಧಿಕೃತವಾಗಿ ಮತ್ತು ಕಾನೂನುಬಾಹಿರವಾಗಿ ದೂರುದಾರನ ಮಾಲೀಕತ್ವದ ಧ್ವನಿಮುದ್ರಿಕೆಯನ್ನು ಬಳಸಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಭಾರತ್‌ ಜೋಡೋ ಯಾತ್ರೆಯು ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಪ್ರಾರಂಭವಾಯಿತು. ಜನವರಿ 30, 2023ರಂದು ಜಮ್ಮುವನ್ನು ತಲುಪುವ ಗುರಿಯನ್ನು ಹೊಂದಿದೆ. ಈ ಯಾತ್ರೆಯು ಇದುವರೆಗೆ ಕೇರಳ, ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಮೂಲಕ ಹಾದುಹೋಗಿದೆ.

ಇದನ್ನೂ ಓದಿರಿ: ನಾವೇಕೆ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಕಾಣಲು ಹೋದೆವು?

ಹಕ್ಕುಸ್ವಾಮ್ಯದ ಆರೋಪಗಳು ಇತ್ತೀಚೆಗೆ ಸದ್ದು ಮಾಡುತ್ತಿವೆ. ‘ಕಾಂತಾರ’ ಚಿತ್ರದ ‘ವರಾಹ ರೂಪಂ’ ಹಾಡಿನ ವಿರುದ್ಧ ಕೇರಳ ಮೂಲದ ಜನಪ್ರಿಯ ಸಂಗೀತ ಬ್ಯಾಂಡ್ ಥೈಕ್ಕುಡಂ ಬ್ರಿಡ್ಜ್ ಇತ್ತೀಚೆಗೆ ಪ್ರಕರಣ ದಾಖಲಿಸಿತ್ತು. ಹಕ್ಕುಸ್ವಾಮ್ಯ ಉಲ್ಲಂಘನೆಯ ಮೊಕದ್ದಮೆ ವಿಚಾರಣೆ ನಡೆಸಿದ ನ್ಯಾಯಾಲಯ ಹಾಡನ್ನು ಪ್ಲೇ ಮಾಡದಂತೆ ಸ್ಟ್ರೀಮಿಂಗ್ ಫ್ಲಾಟ್‌ಫಾರ್ಮ್‌ಗಳಿಗೆ ತಡೆಯಾಜ್ಞೆ ನೀಡಿತ್ತು.

ಕಾಂತಾರ ಚಿತ್ರದ ವರಾಹ ರೂಪಂ ಹಾಡು ಮತ್ತು 2015 ರಲ್ಲಿ ಬಿಡುಗಡೆಯಾದ ಥಕ್ಕುಡಂ ಬ್ರಿಡ್ಜ್‌‌ನ ‘ನವರಸಂ’ ಗೀತೆ ನಡುವೆ ‘ಸಾಮ್ಯತೆ’ ಇದೆ ಎಂದು ದೂರಲಾಗಿದೆ.

ನಿರ್ಮಾಪಕ, ನಿರ್ದೇಶಕ, ಸಂಗೀತ ಸಂಯೋಜಕರು, ಅಮೇಜಾನ್, ಯೂಟ್ಯೂಬ್‌, ಸ್ಪೋಟಿಫೈ, ವಿಂಕ್ ಮ್ಯೂಸಿಕ್, ಜಿಯೋಸಾವನ್ ಮತ್ತು ಇತರರು ಕಾಂತಾರ ಚಿತ್ರದ ವರಾಹ ರೂಪಂ ಹಾಡನ್ನು ಥೈಕ್ಕುಡಂ ಬ್ರಿಡ್ಜ್‌ನ ಅನುಮತಿಯಿಲ್ಲದೆ ಬಳಸುವಂತಿಲ್ಲ ಎಂದು ಕೋರ್ಟ್ ತಡೆಯಾಜ್ಞೆ ನೀಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...