Homeಕರ್ನಾಟಕಕೋಮುವಾದದ ಲೇಪನದಲ್ಲಿ ಕಡೆಗಣನೆಗೆ ಒಳಪಟ್ಟ ಬೇಗೂರು ಕೆರೆ ಅಭಿವೃದ್ಧಿ!

ಕೋಮುವಾದದ ಲೇಪನದಲ್ಲಿ ಕಡೆಗಣನೆಗೆ ಒಳಪಟ್ಟ ಬೇಗೂರು ಕೆರೆ ಅಭಿವೃದ್ಧಿ!

- Advertisement -
- Advertisement -

ಬೆಂಗಳೂರಿನ ಐತಿಹಾಸಿಕ ಬೇಗೂರು ಕೆರೆ ಈಗ ವಿವಾದದ ಸ್ಥಳವಾಗಿ ರೂಪುಗೊಂಡಿದೆ. ಕೆರೆಯ ಬಳಿ ಬಿಗಿ ಪೊಲೀಸ್ ಪಹರೆಯನ್ನು ಹಾಕಲಾಗಿದೆ. ಕಾರಣ ಈ ಕೆರೆಯ ಅಭಿವೃದ್ಧಿಗೆ ಅಂಟಿಕೊಂಡಿರುವ ಕೋಮುವಾದದ ಬಣ್ಣ ಮತ್ತು ಬಿಬಿಎಂಪಿ ಮಾಡಿದ ಎಡವಟ್ಟು.

2018 ರಲ್ಲಿ ಬೇಗೂರು ಕೆರೆ ಅಭಿವೃದ್ಧಿಗೆ ಚಾಲನೆ ನೀಡಲಾಗಿತ್ತು. ಬಿಬಿಎಂಪಿ ಕೆರೆ ಮಧ್ಯ ಕೃತಕ ದ್ವೀಪ ಮತ್ತು ಶಿವನ ಮೂರ್ತಿ ಸ್ಥಾಪಿಸಲು ಆರಂಭಿಸಿತ್ತು. ಇಂತಹ ಕೆರೆ ಅಭಿವೃದ್ಧಿಯು ಕೆರೆಯ ಸ್ವರೂಪವನ್ನು ಹಾಳು ಮಾಡುವುದಲ್ಲದೆ, ಕೆರೆಯ ವಿಸ್ತೀರ್ಣ ಮತ್ತು ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ ಎಂಬ ಆತಂಕದಿಂದ ಕೆಲ ಪರಿಸರ ಹೋರಾಟಗಾರರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ಪ್ರಕರಣವನ್ನು ಆಲಿಸಿದ ಹೈಕೋರ್ಟ್ ಕೆರೆ ಪಾತ್ರವನ್ನು ಕಡಿಮೆ ಮಾಡುವ ಹಕ್ಕು ಯಾರಿಗೂ ಇಲ್ಲವೆಂದು ಸ್ಪಷ್ಟವಾಗಿ ತಿಳಿಸಿ ಶಿವನ ವಿಗ್ರಹ ಮತ್ತು ಕೃತಕ ದ್ವೀಪ ನಿರ್ಮಾಣಕ್ಕೆ ತಡೆ ನೀಡಿತ್ತು. ಆಗ ಕೋರ್ಟ್ ಆದೇಶದ ಮೇರೆಗೆ ನಿರ್ಮಾಣ ಹಂತದಲ್ಲಿದ್ದ ಶಿವನ ವಿಗ್ರಹವನ್ನು ನೀಲಿ ಬಣ್ಣದ ಟಾರ್ಪಲ್‌ನಿಂದ ಮುಚ್ಚಲಾಗಿತ್ತು.

ಆದರೆ ಪ್ರಕರಣ ಇನ್ನು ವಿಚಾರಣಾ ಹಂತದಲ್ಲಿರುವಾಗಲೇ ಮತ್ತು ತಡೆಯಾಜ್ಞೆಯಿದ್ದರೂ ಅದನ್ನು ಲೆಕ್ಕಿಸದೇ ಕೆಲ ಹಿಂದುತ್ವ ಸಂಘಟನೆಯ ಕಾರ್ಯಕರ್ತರು ಆ ಟಾರ್ಪಲ್ ಕಿತ್ತುಹಾಕಿ ವಿಗ್ರಹ ಅನಾವರಣ ಮಾಡಿದ್ದಾರೆ. ಅಲ್ಲದೆ ಕೇಸರಿ ಬಾವುಟಗಳನ್ನು ನೆಟ್ಟಿದ್ದಾರೆ.

ಇದನ್ನೂ ಓದಿ: ಸಭೆ ಸಮಾರಂಭಗಳಲ್ಲಿ ಪುಸ್ತಕ ಉಡುಗೊರೆ ಕೊಡಲು ಆದೇಶ; ಇಲ್ಲಿವೆ ಕೆಲವು ನಿರ್ದಿಷ್ಟ ಸಲಹೆಗಳು

 

ಬುಧವಾರ (ಆಗಸ್ಟ್ 11) ವಿಚಾರಣೆ ನಡೆಸಿದ ಮುಖ್ಯ  ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ಹೈಕೋರ್ಟ್ ವಿಭಾಗಿಯ ನ್ಯಾಯಪೀಠ, ದ್ವೀಪದಲ್ಲಿ ಪ್ರತಿಮೆ ಅನಾವರಣ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲು ನಗರ ಪೊಲೀಸ್ ಆಯುಕ್ತರಿಗೆ ಆದೇಶ ನೀಡಿತ್ತು. ಜೊತೆಗೆ ಕೆರೆ ಬಳಿ ಬಿಗೆ ಪೊಲೀಸ್ ಬಂದೋಬಸ್ತ್ ಮಾಡಲು ತಿಳಿಸಿತ್ತು. ಪೊಲೀಸರ ರಕ್ಷಣೆಯಲ್ಲಿ ಮತ್ತೆ ಪ್ರತಿಮೆಯನ್ನು ಮುಚ್ಚಬೇಕು ಎಂದು ತಿಳಿಸಿದೆ.

ಕೆರೆಯ ಮಧ್ಯದಲ್ಲಿ ದ್ವೀಪ ನಿರ್ಮಿಸಲು ಅವಕಾಶವಿದೇಯೇ ಎಂದು ಅರ್ಜಿದಾರರು ಪ್ರಶ್ನಿಸಿದ್ದಾರೆ. ಇದರಲ್ಲಿ ಯಾವುದೇ ಧಾರ್ಮಿಕ ಭಿನ್ನಾಭಿಪ್ರಾಯಗಳು ಇಲ್ಲ ಎಂದು ಹೈಕೋರ್ಟ್ ವಿಭಾಗಿಯ ಪೀಠ ತಿಳಿಸಿದೆ.

ಇಷ್ಟೇಲ್ಲಾ ಆದರೂ ಕೂಡ, ಹೈಕೋರ್ಟ್ ಆದೇಶದ ಬೆನ್ನಲ್ಲೇ ರಾಷ್ಟ್ರ ರಕ್ಷಣಾ ಪಡೆಯ ಕಾರ್ಯಕರ್ತ ಎಂದು ಹೇಳಿಕೊಳ್ಳುವ ಪುನಿತ್ ಕೆರೆಹಳ್ಳಿ ನೇತೃತ್ವದಲ್ಲಿ ಕೆಲವರು ಮತ್ತೆ ಕೆರೆಗೆ ಹೋಗಿ ಪ್ರತಿಮೆಯ ಟಾರ್ಪಲ್ ತೆಗೆದು ದಾಂಧಲೆ ನಡೆಸಿದ್ದಾರೆ. ಸದ್ಯ ಕೆರೆಯ ಸುತ್ತ ಬಿಗಿ ಪೊಲೀಸ್ ಬಂದೋಬಸ್ ಹಾಕಲಾಗಿದೆ. ಜೊತೆಗೆ ಇದಕ್ಕೆ ರಾಜಕೀಯ ಕೂಡ ಸೇರ್ಪಡೆಗೊಂಡಿದ್ದು ಪ್ರಕರಣ ಎಲ್ಲಿಗೆ ಮುಟ್ಟುತ್ತದೆಯೋ ಎಂಬ ಆತಂಕ ಎದುರಾಗಿದೆ.

ಕೆರೆಗಳ ಉಳಿವಿಗಾಗಿ ದಶಕಗಳಿಂದಲೂ ಹೋರಾಡುತ್ತಿರುವ ಪರಿಸರ ಹೋರಾಟಗಾರ ಲಿಯೋ ಸಾಲ್ಡಾನಾ, “ಕೆರೆ ಉಳಿವಿಗಾಗಿ, ಕೆರೆಯಲ್ಲಿ ಏನು ನಿರ್ಮಿಸಬೇಕು, ಏನು ನಿರ್ಮಿಸಬಾರದು ಎಂಬ ನಿಯಮಗಳಿವೆ. ಇದರ ಅಡಿಯಲ್ಲಿ ನಾವು ಅರ್ಜಿ ಸಲ್ಲಿಸಿದ್ದೇವೆ. ನಾವು ಸರಿಯಾದ ದಾರಿಯಲ್ಲಿದ್ದೇವೆ ಎಂಬುದು ಹೈಕೋರ್ಟ್ ಆದೇಶದಿಂದ ತಿಳಿದು ಬಂದಿದೆ” ಎಂದಿದ್ದಾರೆ.

ಒಟ್ಟಾರೆ, ಕಳೆದ ಮೂರು ವರ್ಷಗಳಿಂದ ಅಭಿವೃದ್ಧಿ ಕಾಣದೆ ಇರುವ ಬೇಗೂರು ಕೆರೆಗೆ ಅಂಟಿಕೊಂಡಿರುವ ಕೋಮುವಾದದ ಬಣ್ಣ ತೊಲಗಿ ಆದಷ್ಟು ಬೇಗ ಅಭಿವೃದ್ಧಿ ಕಾರ್ಯ ನಡೆದು, ಐತಿಹಾಸಿಕ ಬೇಗೂರು ಕೆರೆ ಉಳಿಯಲಿ ಎಂಬುದಷ್ಟೇ ನಮ್ಮ ಆಶಯ.

ವಿಡಿಯೊ ನೋಡಿ….


ಇದನ್ನೂ ಓದಿ: ಬೇಗೂರು ಕೆರೆ ಉಳಿಸಿ ಹೋರಾಟಕ್ಕೆ ಕೋಮು ಬಣ್ಣ: ಹೈಕೋರ್ಟ್ ಆದೇಶ ಧಿಕ್ಕರಿಸಿ ಕೆರೆ ಮಧ್ಯೆ ಶಿವನ ವಿಗ್ರಹ ಅನಾವರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮ್ಮ ಕಮ್ಯೂನಿಸ್ಟ್ ರು ಯಾವಾಗಲಾದರು ಅಕ್ರಮ ವಾಗಿ ನಿರ್ಮಿಸಿರುವ ಚರ್ಚ್ ,ಮಸೀದಿಗಳ ಬಗ್ಗೆಯೂ ಮಾತನಾಡಿದ ಉದಾಹರಣೆಗಳು ಇತಿಹಾಸದಲ್ಲಿ ಇದಿಯಾ ,ನೀವು ನಿಮ್ಮ ನಿಲವು ದೇಶ ವಿರೋಧಿ ಚಟುವಟಿಕೆ ಕಡೆಗೆ ಇರುತ್ತದೆ ಬಿಡಿ ,ನಿಮ್ಮ ಪತ್ರಿಕೆಯು ಅದೇ ರೀತಿ ಕೆಲಸ ಮಾಡುತ್ತಿದೆ……

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...