Homeಕರ್ನಾಟಕಕೋಮುವಾದದ ಲೇಪನದಲ್ಲಿ ಕಡೆಗಣನೆಗೆ ಒಳಪಟ್ಟ ಬೇಗೂರು ಕೆರೆ ಅಭಿವೃದ್ಧಿ!

ಕೋಮುವಾದದ ಲೇಪನದಲ್ಲಿ ಕಡೆಗಣನೆಗೆ ಒಳಪಟ್ಟ ಬೇಗೂರು ಕೆರೆ ಅಭಿವೃದ್ಧಿ!

- Advertisement -
- Advertisement -

ಬೆಂಗಳೂರಿನ ಐತಿಹಾಸಿಕ ಬೇಗೂರು ಕೆರೆ ಈಗ ವಿವಾದದ ಸ್ಥಳವಾಗಿ ರೂಪುಗೊಂಡಿದೆ. ಕೆರೆಯ ಬಳಿ ಬಿಗಿ ಪೊಲೀಸ್ ಪಹರೆಯನ್ನು ಹಾಕಲಾಗಿದೆ. ಕಾರಣ ಈ ಕೆರೆಯ ಅಭಿವೃದ್ಧಿಗೆ ಅಂಟಿಕೊಂಡಿರುವ ಕೋಮುವಾದದ ಬಣ್ಣ ಮತ್ತು ಬಿಬಿಎಂಪಿ ಮಾಡಿದ ಎಡವಟ್ಟು.

2018 ರಲ್ಲಿ ಬೇಗೂರು ಕೆರೆ ಅಭಿವೃದ್ಧಿಗೆ ಚಾಲನೆ ನೀಡಲಾಗಿತ್ತು. ಬಿಬಿಎಂಪಿ ಕೆರೆ ಮಧ್ಯ ಕೃತಕ ದ್ವೀಪ ಮತ್ತು ಶಿವನ ಮೂರ್ತಿ ಸ್ಥಾಪಿಸಲು ಆರಂಭಿಸಿತ್ತು. ಇಂತಹ ಕೆರೆ ಅಭಿವೃದ್ಧಿಯು ಕೆರೆಯ ಸ್ವರೂಪವನ್ನು ಹಾಳು ಮಾಡುವುದಲ್ಲದೆ, ಕೆರೆಯ ವಿಸ್ತೀರ್ಣ ಮತ್ತು ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ ಎಂಬ ಆತಂಕದಿಂದ ಕೆಲ ಪರಿಸರ ಹೋರಾಟಗಾರರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ಪ್ರಕರಣವನ್ನು ಆಲಿಸಿದ ಹೈಕೋರ್ಟ್ ಕೆರೆ ಪಾತ್ರವನ್ನು ಕಡಿಮೆ ಮಾಡುವ ಹಕ್ಕು ಯಾರಿಗೂ ಇಲ್ಲವೆಂದು ಸ್ಪಷ್ಟವಾಗಿ ತಿಳಿಸಿ ಶಿವನ ವಿಗ್ರಹ ಮತ್ತು ಕೃತಕ ದ್ವೀಪ ನಿರ್ಮಾಣಕ್ಕೆ ತಡೆ ನೀಡಿತ್ತು. ಆಗ ಕೋರ್ಟ್ ಆದೇಶದ ಮೇರೆಗೆ ನಿರ್ಮಾಣ ಹಂತದಲ್ಲಿದ್ದ ಶಿವನ ವಿಗ್ರಹವನ್ನು ನೀಲಿ ಬಣ್ಣದ ಟಾರ್ಪಲ್‌ನಿಂದ ಮುಚ್ಚಲಾಗಿತ್ತು.

ಆದರೆ ಪ್ರಕರಣ ಇನ್ನು ವಿಚಾರಣಾ ಹಂತದಲ್ಲಿರುವಾಗಲೇ ಮತ್ತು ತಡೆಯಾಜ್ಞೆಯಿದ್ದರೂ ಅದನ್ನು ಲೆಕ್ಕಿಸದೇ ಕೆಲ ಹಿಂದುತ್ವ ಸಂಘಟನೆಯ ಕಾರ್ಯಕರ್ತರು ಆ ಟಾರ್ಪಲ್ ಕಿತ್ತುಹಾಕಿ ವಿಗ್ರಹ ಅನಾವರಣ ಮಾಡಿದ್ದಾರೆ. ಅಲ್ಲದೆ ಕೇಸರಿ ಬಾವುಟಗಳನ್ನು ನೆಟ್ಟಿದ್ದಾರೆ.

ಇದನ್ನೂ ಓದಿ: ಸಭೆ ಸಮಾರಂಭಗಳಲ್ಲಿ ಪುಸ್ತಕ ಉಡುಗೊರೆ ಕೊಡಲು ಆದೇಶ; ಇಲ್ಲಿವೆ ಕೆಲವು ನಿರ್ದಿಷ್ಟ ಸಲಹೆಗಳು

 

ಬುಧವಾರ (ಆಗಸ್ಟ್ 11) ವಿಚಾರಣೆ ನಡೆಸಿದ ಮುಖ್ಯ  ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ಹೈಕೋರ್ಟ್ ವಿಭಾಗಿಯ ನ್ಯಾಯಪೀಠ, ದ್ವೀಪದಲ್ಲಿ ಪ್ರತಿಮೆ ಅನಾವರಣ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲು ನಗರ ಪೊಲೀಸ್ ಆಯುಕ್ತರಿಗೆ ಆದೇಶ ನೀಡಿತ್ತು. ಜೊತೆಗೆ ಕೆರೆ ಬಳಿ ಬಿಗೆ ಪೊಲೀಸ್ ಬಂದೋಬಸ್ತ್ ಮಾಡಲು ತಿಳಿಸಿತ್ತು. ಪೊಲೀಸರ ರಕ್ಷಣೆಯಲ್ಲಿ ಮತ್ತೆ ಪ್ರತಿಮೆಯನ್ನು ಮುಚ್ಚಬೇಕು ಎಂದು ತಿಳಿಸಿದೆ.

ಕೆರೆಯ ಮಧ್ಯದಲ್ಲಿ ದ್ವೀಪ ನಿರ್ಮಿಸಲು ಅವಕಾಶವಿದೇಯೇ ಎಂದು ಅರ್ಜಿದಾರರು ಪ್ರಶ್ನಿಸಿದ್ದಾರೆ. ಇದರಲ್ಲಿ ಯಾವುದೇ ಧಾರ್ಮಿಕ ಭಿನ್ನಾಭಿಪ್ರಾಯಗಳು ಇಲ್ಲ ಎಂದು ಹೈಕೋರ್ಟ್ ವಿಭಾಗಿಯ ಪೀಠ ತಿಳಿಸಿದೆ.

ಇಷ್ಟೇಲ್ಲಾ ಆದರೂ ಕೂಡ, ಹೈಕೋರ್ಟ್ ಆದೇಶದ ಬೆನ್ನಲ್ಲೇ ರಾಷ್ಟ್ರ ರಕ್ಷಣಾ ಪಡೆಯ ಕಾರ್ಯಕರ್ತ ಎಂದು ಹೇಳಿಕೊಳ್ಳುವ ಪುನಿತ್ ಕೆರೆಹಳ್ಳಿ ನೇತೃತ್ವದಲ್ಲಿ ಕೆಲವರು ಮತ್ತೆ ಕೆರೆಗೆ ಹೋಗಿ ಪ್ರತಿಮೆಯ ಟಾರ್ಪಲ್ ತೆಗೆದು ದಾಂಧಲೆ ನಡೆಸಿದ್ದಾರೆ. ಸದ್ಯ ಕೆರೆಯ ಸುತ್ತ ಬಿಗಿ ಪೊಲೀಸ್ ಬಂದೋಬಸ್ ಹಾಕಲಾಗಿದೆ. ಜೊತೆಗೆ ಇದಕ್ಕೆ ರಾಜಕೀಯ ಕೂಡ ಸೇರ್ಪಡೆಗೊಂಡಿದ್ದು ಪ್ರಕರಣ ಎಲ್ಲಿಗೆ ಮುಟ್ಟುತ್ತದೆಯೋ ಎಂಬ ಆತಂಕ ಎದುರಾಗಿದೆ.

ಕೆರೆಗಳ ಉಳಿವಿಗಾಗಿ ದಶಕಗಳಿಂದಲೂ ಹೋರಾಡುತ್ತಿರುವ ಪರಿಸರ ಹೋರಾಟಗಾರ ಲಿಯೋ ಸಾಲ್ಡಾನಾ, “ಕೆರೆ ಉಳಿವಿಗಾಗಿ, ಕೆರೆಯಲ್ಲಿ ಏನು ನಿರ್ಮಿಸಬೇಕು, ಏನು ನಿರ್ಮಿಸಬಾರದು ಎಂಬ ನಿಯಮಗಳಿವೆ. ಇದರ ಅಡಿಯಲ್ಲಿ ನಾವು ಅರ್ಜಿ ಸಲ್ಲಿಸಿದ್ದೇವೆ. ನಾವು ಸರಿಯಾದ ದಾರಿಯಲ್ಲಿದ್ದೇವೆ ಎಂಬುದು ಹೈಕೋರ್ಟ್ ಆದೇಶದಿಂದ ತಿಳಿದು ಬಂದಿದೆ” ಎಂದಿದ್ದಾರೆ.

ಒಟ್ಟಾರೆ, ಕಳೆದ ಮೂರು ವರ್ಷಗಳಿಂದ ಅಭಿವೃದ್ಧಿ ಕಾಣದೆ ಇರುವ ಬೇಗೂರು ಕೆರೆಗೆ ಅಂಟಿಕೊಂಡಿರುವ ಕೋಮುವಾದದ ಬಣ್ಣ ತೊಲಗಿ ಆದಷ್ಟು ಬೇಗ ಅಭಿವೃದ್ಧಿ ಕಾರ್ಯ ನಡೆದು, ಐತಿಹಾಸಿಕ ಬೇಗೂರು ಕೆರೆ ಉಳಿಯಲಿ ಎಂಬುದಷ್ಟೇ ನಮ್ಮ ಆಶಯ.

ವಿಡಿಯೊ ನೋಡಿ….


ಇದನ್ನೂ ಓದಿ: ಬೇಗೂರು ಕೆರೆ ಉಳಿಸಿ ಹೋರಾಟಕ್ಕೆ ಕೋಮು ಬಣ್ಣ: ಹೈಕೋರ್ಟ್ ಆದೇಶ ಧಿಕ್ಕರಿಸಿ ಕೆರೆ ಮಧ್ಯೆ ಶಿವನ ವಿಗ್ರಹ ಅನಾವರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮ್ಮ ಕಮ್ಯೂನಿಸ್ಟ್ ರು ಯಾವಾಗಲಾದರು ಅಕ್ರಮ ವಾಗಿ ನಿರ್ಮಿಸಿರುವ ಚರ್ಚ್ ,ಮಸೀದಿಗಳ ಬಗ್ಗೆಯೂ ಮಾತನಾಡಿದ ಉದಾಹರಣೆಗಳು ಇತಿಹಾಸದಲ್ಲಿ ಇದಿಯಾ ,ನೀವು ನಿಮ್ಮ ನಿಲವು ದೇಶ ವಿರೋಧಿ ಚಟುವಟಿಕೆ ಕಡೆಗೆ ಇರುತ್ತದೆ ಬಿಡಿ ,ನಿಮ್ಮ ಪತ್ರಿಕೆಯು ಅದೇ ರೀತಿ ಕೆಲಸ ಮಾಡುತ್ತಿದೆ……

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...