Homeಕರ್ನಾಟಕಕೋಮುವಾದದ ಲೇಪನದಲ್ಲಿ ಕಡೆಗಣನೆಗೆ ಒಳಪಟ್ಟ ಬೇಗೂರು ಕೆರೆ ಅಭಿವೃದ್ಧಿ!

ಕೋಮುವಾದದ ಲೇಪನದಲ್ಲಿ ಕಡೆಗಣನೆಗೆ ಒಳಪಟ್ಟ ಬೇಗೂರು ಕೆರೆ ಅಭಿವೃದ್ಧಿ!

- Advertisement -
- Advertisement -

ಬೆಂಗಳೂರಿನ ಐತಿಹಾಸಿಕ ಬೇಗೂರು ಕೆರೆ ಈಗ ವಿವಾದದ ಸ್ಥಳವಾಗಿ ರೂಪುಗೊಂಡಿದೆ. ಕೆರೆಯ ಬಳಿ ಬಿಗಿ ಪೊಲೀಸ್ ಪಹರೆಯನ್ನು ಹಾಕಲಾಗಿದೆ. ಕಾರಣ ಈ ಕೆರೆಯ ಅಭಿವೃದ್ಧಿಗೆ ಅಂಟಿಕೊಂಡಿರುವ ಕೋಮುವಾದದ ಬಣ್ಣ ಮತ್ತು ಬಿಬಿಎಂಪಿ ಮಾಡಿದ ಎಡವಟ್ಟು.

2018 ರಲ್ಲಿ ಬೇಗೂರು ಕೆರೆ ಅಭಿವೃದ್ಧಿಗೆ ಚಾಲನೆ ನೀಡಲಾಗಿತ್ತು. ಬಿಬಿಎಂಪಿ ಕೆರೆ ಮಧ್ಯ ಕೃತಕ ದ್ವೀಪ ಮತ್ತು ಶಿವನ ಮೂರ್ತಿ ಸ್ಥಾಪಿಸಲು ಆರಂಭಿಸಿತ್ತು. ಇಂತಹ ಕೆರೆ ಅಭಿವೃದ್ಧಿಯು ಕೆರೆಯ ಸ್ವರೂಪವನ್ನು ಹಾಳು ಮಾಡುವುದಲ್ಲದೆ, ಕೆರೆಯ ವಿಸ್ತೀರ್ಣ ಮತ್ತು ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ ಎಂಬ ಆತಂಕದಿಂದ ಕೆಲ ಪರಿಸರ ಹೋರಾಟಗಾರರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ಪ್ರಕರಣವನ್ನು ಆಲಿಸಿದ ಹೈಕೋರ್ಟ್ ಕೆರೆ ಪಾತ್ರವನ್ನು ಕಡಿಮೆ ಮಾಡುವ ಹಕ್ಕು ಯಾರಿಗೂ ಇಲ್ಲವೆಂದು ಸ್ಪಷ್ಟವಾಗಿ ತಿಳಿಸಿ ಶಿವನ ವಿಗ್ರಹ ಮತ್ತು ಕೃತಕ ದ್ವೀಪ ನಿರ್ಮಾಣಕ್ಕೆ ತಡೆ ನೀಡಿತ್ತು. ಆಗ ಕೋರ್ಟ್ ಆದೇಶದ ಮೇರೆಗೆ ನಿರ್ಮಾಣ ಹಂತದಲ್ಲಿದ್ದ ಶಿವನ ವಿಗ್ರಹವನ್ನು ನೀಲಿ ಬಣ್ಣದ ಟಾರ್ಪಲ್‌ನಿಂದ ಮುಚ್ಚಲಾಗಿತ್ತು.

ಆದರೆ ಪ್ರಕರಣ ಇನ್ನು ವಿಚಾರಣಾ ಹಂತದಲ್ಲಿರುವಾಗಲೇ ಮತ್ತು ತಡೆಯಾಜ್ಞೆಯಿದ್ದರೂ ಅದನ್ನು ಲೆಕ್ಕಿಸದೇ ಕೆಲ ಹಿಂದುತ್ವ ಸಂಘಟನೆಯ ಕಾರ್ಯಕರ್ತರು ಆ ಟಾರ್ಪಲ್ ಕಿತ್ತುಹಾಕಿ ವಿಗ್ರಹ ಅನಾವರಣ ಮಾಡಿದ್ದಾರೆ. ಅಲ್ಲದೆ ಕೇಸರಿ ಬಾವುಟಗಳನ್ನು ನೆಟ್ಟಿದ್ದಾರೆ.

ಇದನ್ನೂ ಓದಿ: ಸಭೆ ಸಮಾರಂಭಗಳಲ್ಲಿ ಪುಸ್ತಕ ಉಡುಗೊರೆ ಕೊಡಲು ಆದೇಶ; ಇಲ್ಲಿವೆ ಕೆಲವು ನಿರ್ದಿಷ್ಟ ಸಲಹೆಗಳು

 

ಬುಧವಾರ (ಆಗಸ್ಟ್ 11) ವಿಚಾರಣೆ ನಡೆಸಿದ ಮುಖ್ಯ  ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ಹೈಕೋರ್ಟ್ ವಿಭಾಗಿಯ ನ್ಯಾಯಪೀಠ, ದ್ವೀಪದಲ್ಲಿ ಪ್ರತಿಮೆ ಅನಾವರಣ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲು ನಗರ ಪೊಲೀಸ್ ಆಯುಕ್ತರಿಗೆ ಆದೇಶ ನೀಡಿತ್ತು. ಜೊತೆಗೆ ಕೆರೆ ಬಳಿ ಬಿಗೆ ಪೊಲೀಸ್ ಬಂದೋಬಸ್ತ್ ಮಾಡಲು ತಿಳಿಸಿತ್ತು. ಪೊಲೀಸರ ರಕ್ಷಣೆಯಲ್ಲಿ ಮತ್ತೆ ಪ್ರತಿಮೆಯನ್ನು ಮುಚ್ಚಬೇಕು ಎಂದು ತಿಳಿಸಿದೆ.

ಕೆರೆಯ ಮಧ್ಯದಲ್ಲಿ ದ್ವೀಪ ನಿರ್ಮಿಸಲು ಅವಕಾಶವಿದೇಯೇ ಎಂದು ಅರ್ಜಿದಾರರು ಪ್ರಶ್ನಿಸಿದ್ದಾರೆ. ಇದರಲ್ಲಿ ಯಾವುದೇ ಧಾರ್ಮಿಕ ಭಿನ್ನಾಭಿಪ್ರಾಯಗಳು ಇಲ್ಲ ಎಂದು ಹೈಕೋರ್ಟ್ ವಿಭಾಗಿಯ ಪೀಠ ತಿಳಿಸಿದೆ.

ಇಷ್ಟೇಲ್ಲಾ ಆದರೂ ಕೂಡ, ಹೈಕೋರ್ಟ್ ಆದೇಶದ ಬೆನ್ನಲ್ಲೇ ರಾಷ್ಟ್ರ ರಕ್ಷಣಾ ಪಡೆಯ ಕಾರ್ಯಕರ್ತ ಎಂದು ಹೇಳಿಕೊಳ್ಳುವ ಪುನಿತ್ ಕೆರೆಹಳ್ಳಿ ನೇತೃತ್ವದಲ್ಲಿ ಕೆಲವರು ಮತ್ತೆ ಕೆರೆಗೆ ಹೋಗಿ ಪ್ರತಿಮೆಯ ಟಾರ್ಪಲ್ ತೆಗೆದು ದಾಂಧಲೆ ನಡೆಸಿದ್ದಾರೆ. ಸದ್ಯ ಕೆರೆಯ ಸುತ್ತ ಬಿಗಿ ಪೊಲೀಸ್ ಬಂದೋಬಸ್ ಹಾಕಲಾಗಿದೆ. ಜೊತೆಗೆ ಇದಕ್ಕೆ ರಾಜಕೀಯ ಕೂಡ ಸೇರ್ಪಡೆಗೊಂಡಿದ್ದು ಪ್ರಕರಣ ಎಲ್ಲಿಗೆ ಮುಟ್ಟುತ್ತದೆಯೋ ಎಂಬ ಆತಂಕ ಎದುರಾಗಿದೆ.

ಕೆರೆಗಳ ಉಳಿವಿಗಾಗಿ ದಶಕಗಳಿಂದಲೂ ಹೋರಾಡುತ್ತಿರುವ ಪರಿಸರ ಹೋರಾಟಗಾರ ಲಿಯೋ ಸಾಲ್ಡಾನಾ, “ಕೆರೆ ಉಳಿವಿಗಾಗಿ, ಕೆರೆಯಲ್ಲಿ ಏನು ನಿರ್ಮಿಸಬೇಕು, ಏನು ನಿರ್ಮಿಸಬಾರದು ಎಂಬ ನಿಯಮಗಳಿವೆ. ಇದರ ಅಡಿಯಲ್ಲಿ ನಾವು ಅರ್ಜಿ ಸಲ್ಲಿಸಿದ್ದೇವೆ. ನಾವು ಸರಿಯಾದ ದಾರಿಯಲ್ಲಿದ್ದೇವೆ ಎಂಬುದು ಹೈಕೋರ್ಟ್ ಆದೇಶದಿಂದ ತಿಳಿದು ಬಂದಿದೆ” ಎಂದಿದ್ದಾರೆ.

ಒಟ್ಟಾರೆ, ಕಳೆದ ಮೂರು ವರ್ಷಗಳಿಂದ ಅಭಿವೃದ್ಧಿ ಕಾಣದೆ ಇರುವ ಬೇಗೂರು ಕೆರೆಗೆ ಅಂಟಿಕೊಂಡಿರುವ ಕೋಮುವಾದದ ಬಣ್ಣ ತೊಲಗಿ ಆದಷ್ಟು ಬೇಗ ಅಭಿವೃದ್ಧಿ ಕಾರ್ಯ ನಡೆದು, ಐತಿಹಾಸಿಕ ಬೇಗೂರು ಕೆರೆ ಉಳಿಯಲಿ ಎಂಬುದಷ್ಟೇ ನಮ್ಮ ಆಶಯ.

ವಿಡಿಯೊ ನೋಡಿ….


ಇದನ್ನೂ ಓದಿ: ಬೇಗೂರು ಕೆರೆ ಉಳಿಸಿ ಹೋರಾಟಕ್ಕೆ ಕೋಮು ಬಣ್ಣ: ಹೈಕೋರ್ಟ್ ಆದೇಶ ಧಿಕ್ಕರಿಸಿ ಕೆರೆ ಮಧ್ಯೆ ಶಿವನ ವಿಗ್ರಹ ಅನಾವರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮ್ಮ ಕಮ್ಯೂನಿಸ್ಟ್ ರು ಯಾವಾಗಲಾದರು ಅಕ್ರಮ ವಾಗಿ ನಿರ್ಮಿಸಿರುವ ಚರ್ಚ್ ,ಮಸೀದಿಗಳ ಬಗ್ಗೆಯೂ ಮಾತನಾಡಿದ ಉದಾಹರಣೆಗಳು ಇತಿಹಾಸದಲ್ಲಿ ಇದಿಯಾ ,ನೀವು ನಿಮ್ಮ ನಿಲವು ದೇಶ ವಿರೋಧಿ ಚಟುವಟಿಕೆ ಕಡೆಗೆ ಇರುತ್ತದೆ ಬಿಡಿ ,ನಿಮ್ಮ ಪತ್ರಿಕೆಯು ಅದೇ ರೀತಿ ಕೆಲಸ ಮಾಡುತ್ತಿದೆ……

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...