Homeಕರ್ನಾಟಕಕೋಮುವಾದದ ಲೇಪನದಲ್ಲಿ ಕಡೆಗಣನೆಗೆ ಒಳಪಟ್ಟ ಬೇಗೂರು ಕೆರೆ ಅಭಿವೃದ್ಧಿ!

ಕೋಮುವಾದದ ಲೇಪನದಲ್ಲಿ ಕಡೆಗಣನೆಗೆ ಒಳಪಟ್ಟ ಬೇಗೂರು ಕೆರೆ ಅಭಿವೃದ್ಧಿ!

- Advertisement -
- Advertisement -

ಬೆಂಗಳೂರಿನ ಐತಿಹಾಸಿಕ ಬೇಗೂರು ಕೆರೆ ಈಗ ವಿವಾದದ ಸ್ಥಳವಾಗಿ ರೂಪುಗೊಂಡಿದೆ. ಕೆರೆಯ ಬಳಿ ಬಿಗಿ ಪೊಲೀಸ್ ಪಹರೆಯನ್ನು ಹಾಕಲಾಗಿದೆ. ಕಾರಣ ಈ ಕೆರೆಯ ಅಭಿವೃದ್ಧಿಗೆ ಅಂಟಿಕೊಂಡಿರುವ ಕೋಮುವಾದದ ಬಣ್ಣ ಮತ್ತು ಬಿಬಿಎಂಪಿ ಮಾಡಿದ ಎಡವಟ್ಟು.

2018 ರಲ್ಲಿ ಬೇಗೂರು ಕೆರೆ ಅಭಿವೃದ್ಧಿಗೆ ಚಾಲನೆ ನೀಡಲಾಗಿತ್ತು. ಬಿಬಿಎಂಪಿ ಕೆರೆ ಮಧ್ಯ ಕೃತಕ ದ್ವೀಪ ಮತ್ತು ಶಿವನ ಮೂರ್ತಿ ಸ್ಥಾಪಿಸಲು ಆರಂಭಿಸಿತ್ತು. ಇಂತಹ ಕೆರೆ ಅಭಿವೃದ್ಧಿಯು ಕೆರೆಯ ಸ್ವರೂಪವನ್ನು ಹಾಳು ಮಾಡುವುದಲ್ಲದೆ, ಕೆರೆಯ ವಿಸ್ತೀರ್ಣ ಮತ್ತು ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ ಎಂಬ ಆತಂಕದಿಂದ ಕೆಲ ಪರಿಸರ ಹೋರಾಟಗಾರರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ಪ್ರಕರಣವನ್ನು ಆಲಿಸಿದ ಹೈಕೋರ್ಟ್ ಕೆರೆ ಪಾತ್ರವನ್ನು ಕಡಿಮೆ ಮಾಡುವ ಹಕ್ಕು ಯಾರಿಗೂ ಇಲ್ಲವೆಂದು ಸ್ಪಷ್ಟವಾಗಿ ತಿಳಿಸಿ ಶಿವನ ವಿಗ್ರಹ ಮತ್ತು ಕೃತಕ ದ್ವೀಪ ನಿರ್ಮಾಣಕ್ಕೆ ತಡೆ ನೀಡಿತ್ತು. ಆಗ ಕೋರ್ಟ್ ಆದೇಶದ ಮೇರೆಗೆ ನಿರ್ಮಾಣ ಹಂತದಲ್ಲಿದ್ದ ಶಿವನ ವಿಗ್ರಹವನ್ನು ನೀಲಿ ಬಣ್ಣದ ಟಾರ್ಪಲ್‌ನಿಂದ ಮುಚ್ಚಲಾಗಿತ್ತು.

ಆದರೆ ಪ್ರಕರಣ ಇನ್ನು ವಿಚಾರಣಾ ಹಂತದಲ್ಲಿರುವಾಗಲೇ ಮತ್ತು ತಡೆಯಾಜ್ಞೆಯಿದ್ದರೂ ಅದನ್ನು ಲೆಕ್ಕಿಸದೇ ಕೆಲ ಹಿಂದುತ್ವ ಸಂಘಟನೆಯ ಕಾರ್ಯಕರ್ತರು ಆ ಟಾರ್ಪಲ್ ಕಿತ್ತುಹಾಕಿ ವಿಗ್ರಹ ಅನಾವರಣ ಮಾಡಿದ್ದಾರೆ. ಅಲ್ಲದೆ ಕೇಸರಿ ಬಾವುಟಗಳನ್ನು ನೆಟ್ಟಿದ್ದಾರೆ.

ಇದನ್ನೂ ಓದಿ: ಸಭೆ ಸಮಾರಂಭಗಳಲ್ಲಿ ಪುಸ್ತಕ ಉಡುಗೊರೆ ಕೊಡಲು ಆದೇಶ; ಇಲ್ಲಿವೆ ಕೆಲವು ನಿರ್ದಿಷ್ಟ ಸಲಹೆಗಳು

 

ಬುಧವಾರ (ಆಗಸ್ಟ್ 11) ವಿಚಾರಣೆ ನಡೆಸಿದ ಮುಖ್ಯ  ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ಹೈಕೋರ್ಟ್ ವಿಭಾಗಿಯ ನ್ಯಾಯಪೀಠ, ದ್ವೀಪದಲ್ಲಿ ಪ್ರತಿಮೆ ಅನಾವರಣ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲು ನಗರ ಪೊಲೀಸ್ ಆಯುಕ್ತರಿಗೆ ಆದೇಶ ನೀಡಿತ್ತು. ಜೊತೆಗೆ ಕೆರೆ ಬಳಿ ಬಿಗೆ ಪೊಲೀಸ್ ಬಂದೋಬಸ್ತ್ ಮಾಡಲು ತಿಳಿಸಿತ್ತು. ಪೊಲೀಸರ ರಕ್ಷಣೆಯಲ್ಲಿ ಮತ್ತೆ ಪ್ರತಿಮೆಯನ್ನು ಮುಚ್ಚಬೇಕು ಎಂದು ತಿಳಿಸಿದೆ.

ಕೆರೆಯ ಮಧ್ಯದಲ್ಲಿ ದ್ವೀಪ ನಿರ್ಮಿಸಲು ಅವಕಾಶವಿದೇಯೇ ಎಂದು ಅರ್ಜಿದಾರರು ಪ್ರಶ್ನಿಸಿದ್ದಾರೆ. ಇದರಲ್ಲಿ ಯಾವುದೇ ಧಾರ್ಮಿಕ ಭಿನ್ನಾಭಿಪ್ರಾಯಗಳು ಇಲ್ಲ ಎಂದು ಹೈಕೋರ್ಟ್ ವಿಭಾಗಿಯ ಪೀಠ ತಿಳಿಸಿದೆ.

ಇಷ್ಟೇಲ್ಲಾ ಆದರೂ ಕೂಡ, ಹೈಕೋರ್ಟ್ ಆದೇಶದ ಬೆನ್ನಲ್ಲೇ ರಾಷ್ಟ್ರ ರಕ್ಷಣಾ ಪಡೆಯ ಕಾರ್ಯಕರ್ತ ಎಂದು ಹೇಳಿಕೊಳ್ಳುವ ಪುನಿತ್ ಕೆರೆಹಳ್ಳಿ ನೇತೃತ್ವದಲ್ಲಿ ಕೆಲವರು ಮತ್ತೆ ಕೆರೆಗೆ ಹೋಗಿ ಪ್ರತಿಮೆಯ ಟಾರ್ಪಲ್ ತೆಗೆದು ದಾಂಧಲೆ ನಡೆಸಿದ್ದಾರೆ. ಸದ್ಯ ಕೆರೆಯ ಸುತ್ತ ಬಿಗಿ ಪೊಲೀಸ್ ಬಂದೋಬಸ್ ಹಾಕಲಾಗಿದೆ. ಜೊತೆಗೆ ಇದಕ್ಕೆ ರಾಜಕೀಯ ಕೂಡ ಸೇರ್ಪಡೆಗೊಂಡಿದ್ದು ಪ್ರಕರಣ ಎಲ್ಲಿಗೆ ಮುಟ್ಟುತ್ತದೆಯೋ ಎಂಬ ಆತಂಕ ಎದುರಾಗಿದೆ.

ಕೆರೆಗಳ ಉಳಿವಿಗಾಗಿ ದಶಕಗಳಿಂದಲೂ ಹೋರಾಡುತ್ತಿರುವ ಪರಿಸರ ಹೋರಾಟಗಾರ ಲಿಯೋ ಸಾಲ್ಡಾನಾ, “ಕೆರೆ ಉಳಿವಿಗಾಗಿ, ಕೆರೆಯಲ್ಲಿ ಏನು ನಿರ್ಮಿಸಬೇಕು, ಏನು ನಿರ್ಮಿಸಬಾರದು ಎಂಬ ನಿಯಮಗಳಿವೆ. ಇದರ ಅಡಿಯಲ್ಲಿ ನಾವು ಅರ್ಜಿ ಸಲ್ಲಿಸಿದ್ದೇವೆ. ನಾವು ಸರಿಯಾದ ದಾರಿಯಲ್ಲಿದ್ದೇವೆ ಎಂಬುದು ಹೈಕೋರ್ಟ್ ಆದೇಶದಿಂದ ತಿಳಿದು ಬಂದಿದೆ” ಎಂದಿದ್ದಾರೆ.

ಒಟ್ಟಾರೆ, ಕಳೆದ ಮೂರು ವರ್ಷಗಳಿಂದ ಅಭಿವೃದ್ಧಿ ಕಾಣದೆ ಇರುವ ಬೇಗೂರು ಕೆರೆಗೆ ಅಂಟಿಕೊಂಡಿರುವ ಕೋಮುವಾದದ ಬಣ್ಣ ತೊಲಗಿ ಆದಷ್ಟು ಬೇಗ ಅಭಿವೃದ್ಧಿ ಕಾರ್ಯ ನಡೆದು, ಐತಿಹಾಸಿಕ ಬೇಗೂರು ಕೆರೆ ಉಳಿಯಲಿ ಎಂಬುದಷ್ಟೇ ನಮ್ಮ ಆಶಯ.

ವಿಡಿಯೊ ನೋಡಿ….


ಇದನ್ನೂ ಓದಿ: ಬೇಗೂರು ಕೆರೆ ಉಳಿಸಿ ಹೋರಾಟಕ್ಕೆ ಕೋಮು ಬಣ್ಣ: ಹೈಕೋರ್ಟ್ ಆದೇಶ ಧಿಕ್ಕರಿಸಿ ಕೆರೆ ಮಧ್ಯೆ ಶಿವನ ವಿಗ್ರಹ ಅನಾವರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮ್ಮ ಕಮ್ಯೂನಿಸ್ಟ್ ರು ಯಾವಾಗಲಾದರು ಅಕ್ರಮ ವಾಗಿ ನಿರ್ಮಿಸಿರುವ ಚರ್ಚ್ ,ಮಸೀದಿಗಳ ಬಗ್ಗೆಯೂ ಮಾತನಾಡಿದ ಉದಾಹರಣೆಗಳು ಇತಿಹಾಸದಲ್ಲಿ ಇದಿಯಾ ,ನೀವು ನಿಮ್ಮ ನಿಲವು ದೇಶ ವಿರೋಧಿ ಚಟುವಟಿಕೆ ಕಡೆಗೆ ಇರುತ್ತದೆ ಬಿಡಿ ,ನಿಮ್ಮ ಪತ್ರಿಕೆಯು ಅದೇ ರೀತಿ ಕೆಲಸ ಮಾಡುತ್ತಿದೆ……

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...