Homeಕರ್ನಾಟಕಕೋಮುವಾದದ ಲೇಪನದಲ್ಲಿ ಕಡೆಗಣನೆಗೆ ಒಳಪಟ್ಟ ಬೇಗೂರು ಕೆರೆ ಅಭಿವೃದ್ಧಿ!

ಕೋಮುವಾದದ ಲೇಪನದಲ್ಲಿ ಕಡೆಗಣನೆಗೆ ಒಳಪಟ್ಟ ಬೇಗೂರು ಕೆರೆ ಅಭಿವೃದ್ಧಿ!

- Advertisement -
- Advertisement -

ಬೆಂಗಳೂರಿನ ಐತಿಹಾಸಿಕ ಬೇಗೂರು ಕೆರೆ ಈಗ ವಿವಾದದ ಸ್ಥಳವಾಗಿ ರೂಪುಗೊಂಡಿದೆ. ಕೆರೆಯ ಬಳಿ ಬಿಗಿ ಪೊಲೀಸ್ ಪಹರೆಯನ್ನು ಹಾಕಲಾಗಿದೆ. ಕಾರಣ ಈ ಕೆರೆಯ ಅಭಿವೃದ್ಧಿಗೆ ಅಂಟಿಕೊಂಡಿರುವ ಕೋಮುವಾದದ ಬಣ್ಣ ಮತ್ತು ಬಿಬಿಎಂಪಿ ಮಾಡಿದ ಎಡವಟ್ಟು.

2018 ರಲ್ಲಿ ಬೇಗೂರು ಕೆರೆ ಅಭಿವೃದ್ಧಿಗೆ ಚಾಲನೆ ನೀಡಲಾಗಿತ್ತು. ಬಿಬಿಎಂಪಿ ಕೆರೆ ಮಧ್ಯ ಕೃತಕ ದ್ವೀಪ ಮತ್ತು ಶಿವನ ಮೂರ್ತಿ ಸ್ಥಾಪಿಸಲು ಆರಂಭಿಸಿತ್ತು. ಇಂತಹ ಕೆರೆ ಅಭಿವೃದ್ಧಿಯು ಕೆರೆಯ ಸ್ವರೂಪವನ್ನು ಹಾಳು ಮಾಡುವುದಲ್ಲದೆ, ಕೆರೆಯ ವಿಸ್ತೀರ್ಣ ಮತ್ತು ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ ಎಂಬ ಆತಂಕದಿಂದ ಕೆಲ ಪರಿಸರ ಹೋರಾಟಗಾರರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ಪ್ರಕರಣವನ್ನು ಆಲಿಸಿದ ಹೈಕೋರ್ಟ್ ಕೆರೆ ಪಾತ್ರವನ್ನು ಕಡಿಮೆ ಮಾಡುವ ಹಕ್ಕು ಯಾರಿಗೂ ಇಲ್ಲವೆಂದು ಸ್ಪಷ್ಟವಾಗಿ ತಿಳಿಸಿ ಶಿವನ ವಿಗ್ರಹ ಮತ್ತು ಕೃತಕ ದ್ವೀಪ ನಿರ್ಮಾಣಕ್ಕೆ ತಡೆ ನೀಡಿತ್ತು. ಆಗ ಕೋರ್ಟ್ ಆದೇಶದ ಮೇರೆಗೆ ನಿರ್ಮಾಣ ಹಂತದಲ್ಲಿದ್ದ ಶಿವನ ವಿಗ್ರಹವನ್ನು ನೀಲಿ ಬಣ್ಣದ ಟಾರ್ಪಲ್‌ನಿಂದ ಮುಚ್ಚಲಾಗಿತ್ತು.

ಆದರೆ ಪ್ರಕರಣ ಇನ್ನು ವಿಚಾರಣಾ ಹಂತದಲ್ಲಿರುವಾಗಲೇ ಮತ್ತು ತಡೆಯಾಜ್ಞೆಯಿದ್ದರೂ ಅದನ್ನು ಲೆಕ್ಕಿಸದೇ ಕೆಲ ಹಿಂದುತ್ವ ಸಂಘಟನೆಯ ಕಾರ್ಯಕರ್ತರು ಆ ಟಾರ್ಪಲ್ ಕಿತ್ತುಹಾಕಿ ವಿಗ್ರಹ ಅನಾವರಣ ಮಾಡಿದ್ದಾರೆ. ಅಲ್ಲದೆ ಕೇಸರಿ ಬಾವುಟಗಳನ್ನು ನೆಟ್ಟಿದ್ದಾರೆ.

ಇದನ್ನೂ ಓದಿ: ಸಭೆ ಸಮಾರಂಭಗಳಲ್ಲಿ ಪುಸ್ತಕ ಉಡುಗೊರೆ ಕೊಡಲು ಆದೇಶ; ಇಲ್ಲಿವೆ ಕೆಲವು ನಿರ್ದಿಷ್ಟ ಸಲಹೆಗಳು

 

ಬುಧವಾರ (ಆಗಸ್ಟ್ 11) ವಿಚಾರಣೆ ನಡೆಸಿದ ಮುಖ್ಯ  ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ಹೈಕೋರ್ಟ್ ವಿಭಾಗಿಯ ನ್ಯಾಯಪೀಠ, ದ್ವೀಪದಲ್ಲಿ ಪ್ರತಿಮೆ ಅನಾವರಣ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲು ನಗರ ಪೊಲೀಸ್ ಆಯುಕ್ತರಿಗೆ ಆದೇಶ ನೀಡಿತ್ತು. ಜೊತೆಗೆ ಕೆರೆ ಬಳಿ ಬಿಗೆ ಪೊಲೀಸ್ ಬಂದೋಬಸ್ತ್ ಮಾಡಲು ತಿಳಿಸಿತ್ತು. ಪೊಲೀಸರ ರಕ್ಷಣೆಯಲ್ಲಿ ಮತ್ತೆ ಪ್ರತಿಮೆಯನ್ನು ಮುಚ್ಚಬೇಕು ಎಂದು ತಿಳಿಸಿದೆ.

ಕೆರೆಯ ಮಧ್ಯದಲ್ಲಿ ದ್ವೀಪ ನಿರ್ಮಿಸಲು ಅವಕಾಶವಿದೇಯೇ ಎಂದು ಅರ್ಜಿದಾರರು ಪ್ರಶ್ನಿಸಿದ್ದಾರೆ. ಇದರಲ್ಲಿ ಯಾವುದೇ ಧಾರ್ಮಿಕ ಭಿನ್ನಾಭಿಪ್ರಾಯಗಳು ಇಲ್ಲ ಎಂದು ಹೈಕೋರ್ಟ್ ವಿಭಾಗಿಯ ಪೀಠ ತಿಳಿಸಿದೆ.

ಇಷ್ಟೇಲ್ಲಾ ಆದರೂ ಕೂಡ, ಹೈಕೋರ್ಟ್ ಆದೇಶದ ಬೆನ್ನಲ್ಲೇ ರಾಷ್ಟ್ರ ರಕ್ಷಣಾ ಪಡೆಯ ಕಾರ್ಯಕರ್ತ ಎಂದು ಹೇಳಿಕೊಳ್ಳುವ ಪುನಿತ್ ಕೆರೆಹಳ್ಳಿ ನೇತೃತ್ವದಲ್ಲಿ ಕೆಲವರು ಮತ್ತೆ ಕೆರೆಗೆ ಹೋಗಿ ಪ್ರತಿಮೆಯ ಟಾರ್ಪಲ್ ತೆಗೆದು ದಾಂಧಲೆ ನಡೆಸಿದ್ದಾರೆ. ಸದ್ಯ ಕೆರೆಯ ಸುತ್ತ ಬಿಗಿ ಪೊಲೀಸ್ ಬಂದೋಬಸ್ ಹಾಕಲಾಗಿದೆ. ಜೊತೆಗೆ ಇದಕ್ಕೆ ರಾಜಕೀಯ ಕೂಡ ಸೇರ್ಪಡೆಗೊಂಡಿದ್ದು ಪ್ರಕರಣ ಎಲ್ಲಿಗೆ ಮುಟ್ಟುತ್ತದೆಯೋ ಎಂಬ ಆತಂಕ ಎದುರಾಗಿದೆ.

ಕೆರೆಗಳ ಉಳಿವಿಗಾಗಿ ದಶಕಗಳಿಂದಲೂ ಹೋರಾಡುತ್ತಿರುವ ಪರಿಸರ ಹೋರಾಟಗಾರ ಲಿಯೋ ಸಾಲ್ಡಾನಾ, “ಕೆರೆ ಉಳಿವಿಗಾಗಿ, ಕೆರೆಯಲ್ಲಿ ಏನು ನಿರ್ಮಿಸಬೇಕು, ಏನು ನಿರ್ಮಿಸಬಾರದು ಎಂಬ ನಿಯಮಗಳಿವೆ. ಇದರ ಅಡಿಯಲ್ಲಿ ನಾವು ಅರ್ಜಿ ಸಲ್ಲಿಸಿದ್ದೇವೆ. ನಾವು ಸರಿಯಾದ ದಾರಿಯಲ್ಲಿದ್ದೇವೆ ಎಂಬುದು ಹೈಕೋರ್ಟ್ ಆದೇಶದಿಂದ ತಿಳಿದು ಬಂದಿದೆ” ಎಂದಿದ್ದಾರೆ.

ಒಟ್ಟಾರೆ, ಕಳೆದ ಮೂರು ವರ್ಷಗಳಿಂದ ಅಭಿವೃದ್ಧಿ ಕಾಣದೆ ಇರುವ ಬೇಗೂರು ಕೆರೆಗೆ ಅಂಟಿಕೊಂಡಿರುವ ಕೋಮುವಾದದ ಬಣ್ಣ ತೊಲಗಿ ಆದಷ್ಟು ಬೇಗ ಅಭಿವೃದ್ಧಿ ಕಾರ್ಯ ನಡೆದು, ಐತಿಹಾಸಿಕ ಬೇಗೂರು ಕೆರೆ ಉಳಿಯಲಿ ಎಂಬುದಷ್ಟೇ ನಮ್ಮ ಆಶಯ.

ವಿಡಿಯೊ ನೋಡಿ….


ಇದನ್ನೂ ಓದಿ: ಬೇಗೂರು ಕೆರೆ ಉಳಿಸಿ ಹೋರಾಟಕ್ಕೆ ಕೋಮು ಬಣ್ಣ: ಹೈಕೋರ್ಟ್ ಆದೇಶ ಧಿಕ್ಕರಿಸಿ ಕೆರೆ ಮಧ್ಯೆ ಶಿವನ ವಿಗ್ರಹ ಅನಾವರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮ್ಮ ಕಮ್ಯೂನಿಸ್ಟ್ ರು ಯಾವಾಗಲಾದರು ಅಕ್ರಮ ವಾಗಿ ನಿರ್ಮಿಸಿರುವ ಚರ್ಚ್ ,ಮಸೀದಿಗಳ ಬಗ್ಗೆಯೂ ಮಾತನಾಡಿದ ಉದಾಹರಣೆಗಳು ಇತಿಹಾಸದಲ್ಲಿ ಇದಿಯಾ ,ನೀವು ನಿಮ್ಮ ನಿಲವು ದೇಶ ವಿರೋಧಿ ಚಟುವಟಿಕೆ ಕಡೆಗೆ ಇರುತ್ತದೆ ಬಿಡಿ ,ನಿಮ್ಮ ಪತ್ರಿಕೆಯು ಅದೇ ರೀತಿ ಕೆಲಸ ಮಾಡುತ್ತಿದೆ……

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....